Author: News Desk Benkiyabale

 ತುಮಕೂರು:       ಭಾರತೀಯ ಪರಂಪರೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ರೂಢಿಯಲ್ಲಿದ್ದ ಗುರುಕುಲಗಳ ಮಾದರಿಯಲ್ಲಿಯೇ ಇಂದೂಸಹ ಸಮಾಜದ ನಿರ್ಗತಿಕ ಮಕ್ಕಳಿಗೆ ಶಿಕ್ಷಣ-ಸಂಸ್ಕಾರಗಳನ್ನು ನೀಡಲು ಆಶ್ರಮ ಶಾಲೆಯನ್ನು ತೆರೆದು ಮುನ್ನೆಡೆಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದುಜಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಭರತ್ ಕುಮಾರ್ ಕೆ.ಎಸ್. ತಿಳಿಸಿದರು.       ಅವರು ಮೈದಾಳದ ಶ್ರೀ ಶಿವ ಶೈಕ್ಷಣಿಕ ಸೇವಾ ಆಶ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಆಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳ ಪಾಲನಾ ಸಂಸ್ಥೆಯಲ್ಲಿನ ಮಕ್ಕಳಿಗೆ ‘ಮಕ್ಕಳ ಹಕ್ಕುಗಳು’ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಸಂಸ್ಕಾರಗಳಿಗೆ ಗುರುಕುಲ ಮಾದರಿಯ ಇಂತಹ ಆಶ್ರಮ ಶಾಲೆಗಳು ಅತ್ಯಗತ್ಯ ನಾನೂ ಕೂಡ ಶ್ರೀ ಸಾಯಿನಾಥ ಆಶ್ರಮದ ಶಾಲೆಯಲ್ಲಿ ಓದಿದವನು.ಹಾಗಾಗಿ ಆಶ್ರಮಶಾಲೆಗಳಲ್ಲಿ ಓದಿದವರು ಉತ್ತಮ ಶಿಕ್ಷಣ,ಸಂಸ್ಕಾರಗಳಿಂದ ಒಳ್ಳೆಯ ವಿದ್ಯಾರ್ಥಿಗಳಾಗಿ ರೂಪುಗೊಂಡು ತಮ್ಮ ಜೀವನದಲ್ಲಿ ಗುರಿ ಮುಟ್ಟಿ ಉನ್ನತ ಸ್ಥಾನಕ್ಕೇರುತ್ತಾರೆ. ಇಂದು ಈ ಆಶ್ರಮ ನೋಡಿ ನನ್ನ ಮನಸ್ಸಿಗೆ ತುಂಬಾ ಸಂತೋಷವಾಯಿತು…

Read More

ಬೆಂಗಳೂರು :       ದೋಸ್ತಿ ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದು, ಇನ್ಮುಂದೆ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡಲು ಮುಂದಾಗಿದೆ.       ಈ ಕುರಿತು ರಾಜ್ಯದ ಎಲ್ಲ ಕಾಲೇಜುಗಳಿಗೆ ಸೂಚನೆ ನೀಡಲಾಗಿದ್ದು, ಸುತ್ತೋಲೆ ಹೊರಡಿಸಲಾಗಿದೆ. ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಲ್ಯಾಪ್ ಟಾಪ್ ಕೂಡಾ ಕೊಂಡೊಯ್ಯುವಂತಿಲ್ಲವೆಂದು ತಿಳಿಸಲಾಗಿದೆ.       ಕಾಲೇಜು ಅವಧಿಯಲ್ಲಿ ಇನ್ಮುಂದೆ ಮೊಬೈಲ್ ಫೋನ್ ಮತ್ತು ಲ್ಯಾಪ್ ಟಾಪ್ ಬಳಸುವ ಹಾಗಿಲ್ಲ ಎಂದು ಪಿಯುಸಿ ಬೋರ್ಡ್ ಮಹತ್ವದ ಆದೇಶವನ್ನು ಹೊರಡಿಸಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬ್ಯಾನ್ ಮಾಡಲಾಗಿದೆ.       ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಪಿಯುಸಿ ಬೋರ್ಡ್ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಬ್ಬರಿಗೂ ಮೊಬೈಲ್ ಹಾಗೂ ಲ್ಯಾಪ್ ಟ್ಯಾಪ್ ಬ್ಯಾನ್ ಮಾಡಿದೆ. ಈಗಾಗಲೇ ಪಿಯುಸಿ ಬೋರ್ಡ್ ಆದೇಶ ಜಾರಿಗೆ ತರುವಂತೆ ಎಲ್ಲ ಉಪನಿರ್ದೇಶಕರಿಗೆ ಸುತ್ತೋಲೆ…

Read More

ತಿಪಟೂರು:       ನಗರದ ಬ್ಯಾಂಕ್ ನಲ್ಲಿ ಆಗತಾನೆ ಹಣ ಡ್ರಾ ಮಾಡಿಕೊಂಡು ಬಂದ ವ್ಯಕ್ತಿ ಹಣವನ್ನು ತನ್ನ ಬೈಕ್‍ನ ಡಿಕ್ಕಿಯಲ್ಲಿರಿಸಿ, ಮೆಡಿಕಲ್ ಸ್ಟೋರ್ ಗೆ ಹೋಗಿ ಬರುವಷ್ಟರಲ್ಲಿ ಕಳ್ಳರು ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.        ಆಗ್ರೋ ಇಂಡಸ್ಟ್ರಿ ಮಾಲಿಕ ಪಾರ್ಥಸಾರಥಿ ಎಂಬುವರೇ ಹಣ ಕಳೆದುಕೊಂಡವರು. ಇವರು ಆಗತಾನೆ ವಿಜಯ ಬ್ಯಾಂಕ್ ನಲ್ಲಿ 5.30 ಲಕ್ಷ ಹಣ ಡ್ರಾ ಮಾಡಿ, ಬ್ಯಾಂಕ್ ಎದುರು ತಮ್ಮ ಆಕ್ಟಿವಾ ಹೊಂಡ ಬೈಕ್ ನಿಲ್ಲಿಸಿ, ಡಿಕ್ಕಿಯಲ್ಲಿ ಹಣ ಇಟ್ಟಿದ್ದರು. ಮೆಡಿಕಲ್ ಸ್ಟೋರ್ ಗೆ ಹೋಗಿ ಔಷಧಿ ಸಾಮಗ್ರಿ ತೆಗೆದುಕೊಂಡು ಬರುವಷ್ಟರಲ್ಲಿ, ಪಲ್ಸರ್ ಬೈಕ್ ನಲ್ಲಿ ಬಂದ ಮುಸುಕುದಾರಿ ಕಳ್ಳರು, ಆಕ್ಟಿವಾ ಹೊಂಡ ಡಿಕ್ಕಿ ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:        ನಾನು ಇನ್ನು ಮುಂದೆ ಮಾಧ್ಯಮಗಳ ಜತೆ ಮಾತನಾಡುವುದೇ ಇಲ್ಲ. ನಾನು ವೇದಿಕೆ ಮೇಲೆ ಏನು ಮಾತನಾಡುತ್ತೇನೋ ಅಷ್ಟೆ. ಬೇಕಾದರೆ, ಬರೆದುಕೊಳ್ಳಿ, ಇಲ್ಲದಿದ್ದರೆ ಬಿಡಿ, ಇನ್ಮುಂದೆ ಮಾಧ್ಯಮಗಳ ಜತೆ ಪ್ರತ್ಯೇಕವಾಗಿ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.       ಗುರುವಾರ ಬಡವರ ಬಂಧು ಯೋಜನೆಯನ್ನು ಉದ್ಘಾಟಿಸಿದ ನಂತರ ಮಾತನಾಡಿ, ನಾನು ಏನು ಮಾತನಾಡಿದರೂ ತಪ್ಪಾಗಿ ಭಾವಿಸುತ್ತಾರೆ. ನಾನು ಏನು ಮಾತನಾಡಬೇಕೆಂದು ಮಾಧ್ಯಮಗಳ ನೇತೃತ್ವದಲ್ಲಿ ಒಂದು ಸಮಿತಿ ಮಾಡಿ ಅವರಿಂದ ಸಲಹೆ ಪಡೆದು ಮಾತನಾಡಬೇಕಿದೆ ಎಂದು ವ್ಯಂಗ್ಯವಾಡಿದ್ದಾರೆ.       ಬೀದಿಬದಿ ವ್ಯಾಪಾರಿಗಳಿಗಾಗಿ ಬಡವರ ಬಂಧು ಯೋಜನೆಯನ್ನು ಜಾರಿಗೊಳಿಸಲಾಗಿದೆ. ಬಡ್ಡಿ ಇಲ್ಲದೆ ಸಾಲ ಕೊಟ್ಟರೆ ಮರುಪಾವತಿ ಮಾಡಲ್ಲ. ಶೇ.4 ರಷ್ಟಾದರೂ ಬಡ್ಡಿ ವಿಧಿಸಿ ಎಂದು ಅಧಿಕಾರಿಗಳು ಸಲಹೆ ಕೊಟ್ಟಿದ್ದರು. ಆದರೆ, ನಾನು ಒಪ್ಪಲಿಲ್ಲ. ನನಗೆ ನಿಮ್ಮ ಮೇಲೆ ಸಂಪೂರ್ಣ ನಂಬಿಕೆಯಿದೆ. ಬಡ್ಡಿ ಇಲ್ಲದೆ ನೀಡುವ ಸಾಲವನ್ನು ಸದುಪಯೋಗ ಪಡಿಸಿಕೊಳ್ಳಿ, ಸರಿಯಾಗಿ ಮರುಪಾವತಿ ಮಾಡಿದರೆ…

Read More

ಆಸ್ಟ್ರೇಲಿಯಾ:      ಮೂರು ದಿನಗಳ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಎರಡನೇ ದಿನವಾದ ಗುರುವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣಗೊಳಿಸಿದ್ದಾರೆ.       ಆಸ್ಟ್ರೇಲಿಯಾದ ಪರ್ರಮಟ್ಟ ನಗರದ ಜ್ಯುಬಿಲಿ ಪಾರ್ಕ್​ನಲ್ಲಿ ಗಾಂಧೀಜಿ ಅವರ ಪ್ರತಿಮೆ ಇರಿಸಲಾಗಿದೆ. ಭಾರತ ಸರ್ಕಾರ ಈ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದೆ. ಶಿಲ್ಪಿಗಳಾದ ರಾಮ್​ ಮತ್ತು ಅನಿಲ್​ ಸುತಾರ್​ ಅವರು ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಪ್ರತಿಮೆ ಅನಾವರಣಾ ಸಮಾರಂಭದಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಸ್ಕೋಟ್​ ಮೋರ್ರಿಸೋನ್​ ಮತ್ತು ಪರ್ರಮಟ್ಟ ನಗರದ ಮೇಯರ್​ ಆ್ಯಂಡ್ರ್ಯೂ ವಿಲ್ಸನ್​ ಮತ್ತು ರಾಷ್ಟ್ರಪತಿಯವರ ಪತ್ನಿ ಹಾಜರಿದ್ದರು.

Read More

ತಿಪಟೂರು:      ತಿಪಟೂರಿನಿಂದ ಹಾಲ್ಕುರಿಕೆ ಮಾರ್ಗವಾಗಿ ಹುಳಿಯಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಗುಂಡಿ ಗೊಟರುಗಳಿಂದ ಕೂಡಿದ್ದು, ಸಂಬಂಧಪಟ್ಟ ಇಲಾಖೆ ಇತ್ತ ಗಮನಹರಿಸಿ ರಸ್ತೆಯನ್ನು ಸರಿಪಡಿಸಬೇಕೆಂದು ಈ ಭಾಗದ ಹಳ್ಳಿಗಳ ಸಾರ್ವಜನಿಕರು ಹಾಗೂ ವಾಹನ ಸವಾರರು ಲೋಕಪಯೋಗಿ ಇಲಾಖೆ ಹಾಗೂ ಶಾಸಕರನ್ನು ಒತ್ತಾಯಿಸಿದ್ದಾರೆ.       ಈ ರಸ್ತೆಯ ಮೂಲಕ ಟಿ.ಎಂ. ಮಂಜುನಾಥನಗರ, ಬೈರನಾಯ್ಕನಹಳ್ಳಿ, ಗೆದ್ಲೇಹಳ್ಳಿ ಗೊಲ್ಲರಹಟ್ಟಿ, ಆಲೂರು, ಬೈರಾಪುರ ಗೇಟ್, ಹರಿಸಮುದ್ರ, ಹಾಲ್ಕುರಿಕೆ, ಮತ್ತಿಘಟ್ಟ ಮತ್ತಿತರ ಗ್ರಾಮಗಳಿಗೆ ಹೋಗಬೇಕಾದರೆ ಇದೇ ರಸ್ತೆ ಮುಖ್ಯವಾಗಿದೆ. ಆದರೆ ರಸ್ತೆ ಬಹಳಷ್ಟು ಕಡೆಗಳಲ್ಲಿ ಹಾಳಾಗಿದ್ದು, ಉದ್ದುದ್ದ ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರು ಹರಸಾಹಸ ಮಾಡಿಕೊಂಡು ವಾಹನಗಳನ್ನು ಚಲಾಯಿಸಬೇಕಾಗಿದೆ. ನೂರಾರು ಲಘು ಹಾಗೂ ಭಾರಿ ವಾಹನಗಳು ಇಲ್ಲಿ ಸಂಚರಿಸುತ್ತಿರುವುದರಿಂದ ಪ್ರತಿನಿತ್ಯ ಒಂದಲ್ಲೊಂದು ಅವಘಡ, ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆಯಲ್ಲಿ ಸಂಚರಿಸುವುದೇ ಕಷ್ಟವಾಗುತ್ತಿದೆ. ಇದೂ ಸಾಲದೆಂದು ರಸ್ತೆಯ ಎರಡೂ ಬದಿಗಳಲ್ಲಿ ಗಿಡ-ಗೆಂಟೆಗಳಿಂದ ಕೂಡಿದ ಬೇಲಿಗಳು ಬೆಳೆದಿದ್ದು, ತಿರುವುಗಳಲ್ಲಿ ಬರುವ ವಾಹನಗಳೇ ಕಾಣಿಸುವುದಿಲ್ಲ. ದಿನನಿತ್ಯ ನೂರಾರು ಬಸ್‍ಗಳು, ಸಾಕಷ್ಟು…

Read More

ತಿಪಟೂರು :       ಕಲ್ಪತರು ನಾಡಿನ ರೈತರು ಮಳೆ ಇಲ್ಲದೆ ದಿನವೂ ಬೆಂಕಿಯಂತಹ ಉರಿಬಿಸಿಲು ಕಾರುತ್ತಿರುವ ಆಕಾಶದೆಡೆಗೆ ಹತಾಶಾಭಾವದಿಂದ ನೋಡುತ್ತಾ ಮಳೆರಾಯ ಕೃಪೆ ತೋರುವನೋ ಇಲ್ಲವೋ ಎಂಬ ಚಿಂತೆಯ ಚಿತೆಗೆ ಬಿದ್ದು ಕಾಲ ಕಳೆಯುವಂತಾಗಿದೆ.       ಇತ್ತೀಚಿನ ಹಲವಾರು ವರ್ಷಗಳಲ್ಲಿ ತಾಲ್ಲೂಕಿಗೆ ಸುರಿದಿರುವ ಮಳೆ ಪ್ರಮಾಣ ಲೆಕ್ಕ ಹಾಕಿ ನೋಡಿದರೆ ವರ್ಷ ವರ್ಷವೂ ಇಳಿಕೆಯಾಗುವ ಮೂಲಕ ನಿರಂತರವಾಗಿ ಭೀಕರ ಬರಗಾಲ ಎದುರಾಗುತ್ತಿರುವುದು ಆತಂಕಕ್ಕೆ ಎಡೆಮಾಡಿದೆ. ತಾಲ್ಲೂಕಿನಾದ್ಯಂತ ಭಯಾನಕ ಬರಗಾಲ ಸೃಷ್ಠಿಯಾಗಿದೆ. ಈ ವರ್ಷ ಮೇ, ಜೂನ್ ತಿಂಗಳಲ್ಲಿ ಬಂದ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ರೈತರ ಪಾಲಿಗೆ ನಿರಾಶಾದಾಯಕವಾಗಿತ್ತು. ನಂತರ ಈ ಹಿಂಗಾರಿನವರೆಗೂ ಮಳೆರಾಯ ಸಂಪೂರ್ಣ ಮುನಿಸಿಕೊಂಡಿದ್ದು, ಮಳೆಯನ್ನೇ ನೆಚ್ಚಿ ಬದುಕುತ್ತಿರುವ ತಾಲ್ಲೂಕಿನ ರೈತರು ಕಂಗಾಲಾಗುವಂತೆ ಮಾಡಿದೆ. ಅಲ್ಪಸ್ವಲ್ಪ ಬಿದ್ದಿದ್ದ ಮಳೆಗೆ ರೈತರು ಸಾಲಶೂಲ ಮಾಡಿಕೊಂಡು ರಾಗಿ ಮತ್ತಿತರೆ ಬೆಳೆಗಳನ್ನು ಬಿತ್ತಿದ್ದರು. ಆದರೆ ಮಳೆರಾಯ ಸಂಪೂರ್ಣ ಕೈಕೊಟ್ಟ ಪರಿಣಾಮ ಪೂರ್ವಮುಂಗಾರು, ಮುಂಗಾರು ಜೊತೆಗೆ ಹಿಂಗಾರು…

Read More

ಮಧುಗಿರಿ :       ಪಟ್ಟಣದ ಎಪಿಎಂಸಿ ಆವರಣದಲ್ಲಿ ಜಿ.ಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಉಪನಿರ್ದೇಶಕರ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಚೆಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟಕ್ಕೆ ಡಿಸಿಎಂ, ತುಮಕೂರು ಜಿಲ್ಲೆಯ ಇಬ್ಬರು ಸಚಿವರು, ಇಬ್ಬರು ಸಂಸದರು, ಸ್ಥಳೀಯ ಶಾಸಕರು, ಜಿಲ್ಲೆಯ ಶಾಸಕರುಗಳು, ಎಂ.ಎಲ್.ಸಿ ಗಳು ಜಿ.ಪಂ.ಸದಸ್ಯರುಗಳು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಒ, ಮಧುಗಿರಿ ಉಪವಿಭಾಗಾಧಿಕಾರಿ ಹಾಗೂ ಜನ ಪ್ರತಿನಿಧಿಗಳ ಹೆಸರುಗಳು ಆಹ್ವಾನ ಪತ್ರಿಕೆಯಲ್ಲಿ ಪ್ರೋಟೋ ಕಾಲ್ ಅಡಿಯಲ್ಲಿ ಮುದ್ರಿಸಿದ್ದರು ಯಾರೊಬ್ಬರು ಕಾರ್ಯಕ್ರಮಕ್ಕೆ ಹಾಜರಾಗದೆ ಅಚ್ಚರಿ ಮೂಡಿಸಿದರು. ಈ ಕಾರ್ಯಕ್ರಮವು ಹೋಬಳಿ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಂತೆ ಬಾಸವಾಗುತ್ತಿತ್ತು.       ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಬಿಜಿಯಾಗಿರುವ ರಾಜ್ಯ ಮಟ್ಟದ ರಾಜಕಾರಣಿಗಳಿಗೆ ರಾಜ್ಯ ಮಟ್ಟದ ಚೆಸ್ ಕ್ರೀಡಾಕೂಟಕ್ಕೆ ಭಾಗವಹಿಸದೆ ಅಪಮಾನ ಮಾಡಿದ್ದಾರೆಂದು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಮತ್ತು ನಿವೃತ್ತ ದೈಹಿಕ ಶಿಕ್ಷಕರೊಬ್ಬರ ಆರೋಪವಾಗಿದೆ.…

Read More

 ತುಮಕೂರು :       ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019ಕ್ಕೆ ಸಂಬಂಧಿಸಿದಂತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 23 ರಿಂದ 25ರವರೆಗೆ 3 ದಿನಗಳ ಕಾಲ “ವಿಶೇಷ ನೋಂದಣಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.       ಈ ಕಾರ್ಯಕ್ರಮದಡಿ ನವೆಂಬರ್ 23 ರಿಂದ 25ರವರೆಗಿನ ಎಲ್ಲಾ ದಿನಗಳಂದು ಅರ್ಹ ಮತದಾರರು ಭರ್ತಿ ಮಾಡಿದ ನಮೂನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸುವ ಮೂಲಕ ಭಾವಚಿತ್ರವುಳ್ಳ ಮತದಾರರ ಪಟ್ಟಿಯ ತಯಾರಿಕೆಗೆ ಸಹಕರಿಸಬೇಕು. ತುಮಕೂರು ನಗರದ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

Read More

ಚಿಕ್ಕನಾಯಕನಹಳ್ಳಿ:       ನರಭಕ್ಷಕ ಚಿರತೆಯನ್ನು ಹಿಡಿದು ಜನ ಹಾಗೂ ಜಾನುವಾರಗಳ ಜೀವ ಉಳಿಸದಿದ್ದರೆ ಅರಣ್ಯ ಇಲಾಖೆಯ ಕಛೇರಿ ಮುಂದೆ ತೀವ್ರ ಸ್ವರೂಪದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ತಾ.ಪಂ.ಸದಸ್ಯ ಸಿಂಗದಹಳ್ಳಿ ರಾಜ್‍ಕುಮಾರ್ ಎಚ್ಚರಿಕೆ ನೀಡಿದ್ದಾರೆ.       ತಾಲೂಕಿನ ಮದಲಿಂಗನ ಕಣಿವೆ ಭಾಗದಲ್ಲಿ ನರಭಕ್ಷಕ ಚಿರತೆಯೊಂದು ಗ್ರಾಮಗಳಿಗೆ ನುಗ್ಗಿ ಮನುಷ್ಯರ ಮೇಲೆ ದಾಳಿ ಮಾಡುವುದು, ಕುರಿ-ಮೇಕೆ, ಜಾನುವಾರಗಳನ್ನು ತಿನ್ನುವುದು ಸೇರಿದಂತೆ ಆ ಭಾಗದ ಗ್ರಾಮಸ್ಥರ ನೆಮ್ಮದಿಗೆ ಭಂಗ ತಂದಿದ್ದು, ಜನರು ಸಂಜೆ ಮೇಲೆ ಹೊಲ ತೋಟಗಳಿಗೆ ಹೋಗುವುದಕ್ಕೆ ಹೆದರುವಂತಾಗಿದೆ.       ಇದೇ ತಿಂಗಳ 2ರಂದು ಆಶ್ರೀಹಾಲ್‍ನ ಮೂರ್ತಿ ಎಂಬುವವರ ಮೇಲೆ ದಾಳಿ ಮಾಡಿದೆ, ಅವರಿನ್ನೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇದಕ್ಕೂ ಹದಿನೈದು ದಿನಗಳ ಮುಂಚೆ ಆ ಭಾಗದಲ್ಲೇ ಮಹಿಳೆಯೊಬ್ಬರ ಮೇಲೆ ದಾಳಿಮಾಡಿದೆ, ಕಳೆದ ಮೂರು ತಿಂಗಳ ಈಚೆಗೆ ಸುಮಾರು ನಾಲ್ಕೈದು ಜನರನ್ನು ಘಾಸಿಗೊಳಿಸಿದೆ, ಅಲ್ಲದೆ ದಿನಂಪ್ರತಿ ಗುಡ್ಡಕ್ಕೆ ಮೇಯಲು ಹೋದ ಕುರಿ, ಮೇಕೆ, ದನಗಳನ್ನು…

Read More