Author: News Desk Benkiyabale

ತುಮಕೂರು ಸ್ಮಾರ್ಟ್ಸಿಟಿ ಯೋಜನೆಯಡಿ ನವೀ ಕೃತಗೊಂಡಿರುವ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ನಿರ್ವಹಣೆಯ ಹೊಣೆಯನ್ನು ವಹಿಸಿ ಕೊಳ್ಳುವಂತೆ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಇಂದಿಲ್ಲಿ ತಿಳಿಸಿದರು. ಸ್ಮಾರ್ಟ್ಸಿಟಿ ಯೋಜನೆಯಡಿ ಕೋಟ್ಯಂತರ ರೂ. ವೆಚ್ಚದಲ್ಲಿ ನವೀಕೃತ ಗೊಂಡಿರುವ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣ ನಿರ್ವಹಣೆ ಇಲ್ಲದೆ ಸೊರಗುವ ಹಂತಕ್ಕೆ ತಲುಪಿತ್ತು. ಕ್ರೀಡಾಂಗಣದ ನಿರ್ವಹಣೆಯ ಜವಾಬ್ದಾರಿ ಹೊರಲು ಯಾವ ಇಲಾಖೆಯು ಮುಂದೆ ಬರದ ಕಾರಣ ಕ್ರೀಡಾಪಟುಗಳು, ಕ್ರೀಡಾ ತರಬೇತುದಾರರು ಕ್ರೀಡಾಂಗಣ ಸಮರ್ಪಕ ನಿರ್ವಹಣೆಗೆ ಜಿಲ್ಲಾಡಳಿತ ಸೇರಿದಂತೆ ಶಾಸಕರು, ಸಚಿವರುಗಳನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು, ಕ್ರೀಡಾಂಗಣ ಹಾಗೂ ಜಿಮ್ ಕೇಂದ್ರ ನಿರ್ವಹಣೆ ಕುರಿತಂತೆ ಸೈಟ್ ಮ್ಯಾನೇಜರ್ ಗುರು ಅವರಿಂದ ಮಾಹಿತಿ ಪಡೆದು, ಶೀಘ್ರವೇ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸುಪರ್ದಿಗೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದರು.…

Read More

ತುಮಕೂರು ಹಸಿದವರಿಗೆ ಅನ್ನ, ಬಾಯಾರಿದವರಿಗೆ ನೀರು ನೀಡುವುದು ಭಾರತೀಯ ಸನಾತನ ಧರ್ಮದ ಪ್ರಮುಖ ದ್ಯೇಯ ಎಂದು ಪಾವಗಡದ ರಾಮಕೃಷ್ಣ ಆಶ್ರಮದ ಡಾ.ಜಪಾನಂದ ಜೀ ತಿಳಿಸಿದ್ದಾರೆ. ನಗರದ ತುಮಕೂರು ವಿವಿ ಕಲಾ ಕಾಲೇಜಿನಲ್ಲಿ ಶಾಸಕ ಜಿ.ಬಿ.ಜೋತಿಗಣೇಶ್ ಅವರ ಸ್ಥಳೀಯ ಪ್ರದೇಶಾಭಿವೃದ್ದಿ ನಧಿಯಿಂದ ಸುಮಾರು ೮ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭÀದ ದಿವ್ಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದ ಅವರು,ಇಡೀ ದೇಶದಲ್ಲಿಯೇ ವಿಶ್ವವಿದ್ಯಾಲಯವೊಂದು ತನ್ನಲ್ಲಿ ಕಲಿಯುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿರುವುದು ತುಮಕೂರು ವಿಶ್ವವಿದ್ಯಾಲಯ ಮಾತ್ರ. ಇತ್ತೀಚಗೆ ಲಂಡನ್ ವಿಶ್ವವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿರುವ ಭಾರತೀಯ ಮಕ್ಕಳಿಗಾಗಿ ಇಸ್ಕಾನ್ ಸಂಸ್ಥೆ ಮದ್ಯಾಹ್ನದ ಬಿಸಿಯೂಟ ಆರಂಭಿಸಿದ್ದು,ಇದು ಕೂಡ ಭಾರತೀಯ ಸನಾತನ ಧರ್ಮದ ದ್ಯೋತಕವಾಗಿದೆ ಎಂದರು. ತುಮಕೂರು ಜಿಲ್ಲೆಯಲ್ಲಿ ಬರ ಆರಂಭಗೊAಡಿದೆ.ನಗರದ ಎಂಪ್ರೆಸ್ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಗ್ರಾಮೀಣ ಭಾಗದಿಂದ ಸಾವಿರಾರು ಮಕ್ಕಳು ಬರುತ್ತಾರೆ.ಅವರಿಗೂ ಸಹ ಸಾರ್ವಜನಿಕರು ಮತ್ತು ದಾನಿಗಳ ಸಹಾಯದಿಂದ ಮದ್ಯಾಹ್ನದ ಬಿಸಿಯೂಟ ನೀಡಲು ಅಗತ್ಯ ತಯಾರಿಯನ್ನು…

Read More

ತುಮಕೂರು ನಗರ ದಸರಾ ಸಮಿತಿವತಿಯಿಂದ ೩೩ನೇ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ ೨೧ ರಿಂದ ೨೪ರವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸರಾ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಡಾ.ಪರಮೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ನಾಡಹಬ್ಬವಾಗಿರುವ ದಸರಾ ವರ್ಷದಿಂದ ವರ್ಷಕ್ಕೆ ಹೆಚ್ಚು ಜನಪ್ರಿಯಗೊಳ್ಳುತ್ತಿದ್ದು,ಜಿಲ್ಲೆಯ ಸಮಸ್ತ ನಾಗರಿಕರು ಇದರಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಕೋರಿದರು. ಅಕ್ಟೋಬರ್ ೨೧ರ ಶನಿವಾರದಂದು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ ೪ ಕಲ್ಯಾಣೋತ್ಸವದೊಂದಿಗೆ ೨೦೨೩ನೇ ಸಾಲಿನ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದು,ಬೆAಗಳೂರಿನ ಶ್ರೀವಾನಿ ಫೌಂಡೇಶನ್ ವತಿಯಿಂದ ‘ಶ್ರೀ ಶ್ರೀನಿವಾಸ ಕಲಶೋತ್ಸವ ವನ್ನು ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದ ಪೂರ್ವದಲ್ಲಿ ಕೊಸಗಿ ಗುರುರಾಜ್ ಮತ್ತು ತಂಡದವರಿAದ ನಾದೋಪಾಸನೆಯ ಅಂಗವಾಗಿ ಶ್ರೀವಾರಿ ಕೀರ್ತನೆಗಳನ್ನು ಸಮರ್ಪಿಸುತ್ತಿದ್ದಾರೆ. ಕಲ್ಯಾಣೋತ್ಸವದ ನಂತರ ಸ್ವಾಮಿಯ ಪ್ರಸಾದ ವಿತರಣೆ ವ್ಯವಸ್ಥೆ ಇರುತ್ತದೆ. ಅಕ್ಟೋಬರ್ ೨೨ರ ಭಾನುವಾರದಂದು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ ೧೦ ಗಂಟೆಗೆ ಯೋಗ ದಸರಾ ಕಾರ್ಯಕ್ರಮ ನಡೆಯಲಿದ್ದು, ಶ್ರೀವಚನಾನಂದ ಶ್ರೀಗಳು ನಡೆಸಿಕೊಡಲಿದ್ದಾರೆ. ಸಂಜೆ…

Read More

ತುಮಕೂರು: ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಉಜ್ವಲ ಭವಿಷ್ಯವಿದ್ದು,ಸೋಲು,ಗೆಲುವಿನ ಜೊತೆಗೆ ತಮ್ಮ ಕೆರಿಯರ್ ಗಟ್ಟಿ ಮಾಡಿಕೊಳ್ಳುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಕ್ರೀಡಾಪಟುಗಳಿಗೆ ಸಲಹೆ ನೀಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿರುವ ಸರ್ವೋದಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಹಾಗೂ ಸರ್ವೋದಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಬೆಂಗಳೂರು ವಿಭಾಗೀಯ ಮಟ್ಟದ ೧೪ ಮತ್ತು ೧೭ನೇ ವರ್ಷದೊಳಗಿನ ಶಾಲಾ ಮಕ್ಕಳ ಖೋ-ಖೋ ಕ್ರೀಡಾಕೂಟವನ್ನು ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ತಮ್ಮ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲರೂ ಶಕ್ತಿ ಮೀರಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕೆಂದರು. ಇAತಹ ಕ್ರೀಡಾಕೂಟವನ್ನು ಸರಕಾರ ನಡೆಸುವುದು ಕಷ್ಟ. ಹಾಗಾಗಿ ಶಿಕ್ಷಕರೇ ಕಟ್ಟಿದ ಸರ್ವೋದಯ ಶಿಕ್ಷಣ ಸಂಸ್ಥೆ, ಈ ರೀತಿಯ ಕ್ರೀಡಾಕೂಟಗಳನ್ನು ಆಯೋಜಿಸಿ ಅನುಭವ ಇರುವ ಕಾರಣವ,ಅವರ ಸಹಯೋಗ ಪಡೆಯಲಾಗಿದೆ. ರಾಷ್ಟçಮಟ್ಟದ ಕ್ರೀಡಾಕೂಟಗಳನ್ನು ನಡೆಸಿ ಅನುಭವ ಇರುವ ಸರ್ವೋದಯ ಶಿಕ್ಷಣ ಸಂಸ್ಥೆ,ಈ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಿರ್ವಹಿಸುತ್ತದೆ ಎಂಬ ನಂಬಿಕೆ ನಮ್ಮದು.ಎಲ್ಲರಿಗೂ ಒಳ್ಳೆಯದಾಗಲಿ…

Read More

ಪಾವಗಡ  ದೀಪದ ಕೆಳಗೆ ಕತ್ತಲು ಎಂಬ೦ತೆ ಪಾವಗಡ ರೈತರು ವಿದ್ಯುತ್ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಏಷ್ಯಾದ ೨ನೆ ಅತೀ ದೊಡ್ಡ ಸೋಲಾರ್ ಪಾರ್ಕ್ ಇದ್ದರೂ ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಜೆಡಿಎಸ್ ಪಕ್ಷದಿಂದ ಬೆಸ್ಕಾಂ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಸೋಮವಾರ ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷರು ಆರ್.ಸಿ.ಅಂಜಿನಪ್ಪ, ಪಾವಗಡ ತಾಲ್ಲೂಕಿನಲ್ಲಿ ೨೩೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು ಆದರೆ, ತಾಲ್ಲೂಕಿನ ಸಮರ್ಪಕವಾಗಿ ವಿದ್ಯುತ್ ಪೂರೈಸದ ಕಾರಣ ಬೆಸ್ಕಾಂ ಇಲಾಖೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮುತ್ತಿಗೆ ಹಾಕಿದ್ದೇವೆ. ರೈತರಿಗೆ ಬೇಕಾಗುವ ಸುಮಾರು ೨೦೦ ಮೆಗಾ ವ್ಯಾಟ್ ವಿದ್ಯುತ್ ನ್ನು ಮೊದಲು ತಾಲ್ಲೂಕಿಗೆ ಬಳಸಿಕೊಂಡು ಉಳಿದ ವಿದ್ಯುತ್ ನ್ನು ಬೇರೆ ಕಡೆ ಪೂರೈಸಬೇಕೆಂದು ಒತ್ತಾಯಿಸಿದರು. ಬೆಳಗಿನ ಸಮಯದಲ್ಲಿ ವಿದ್ಯುತ್ ನೀಡಬೇಕೆಂದು ಈ ಹಿಂದೆ ೭ ಗಂಟೆಗಳ ಕಾಲ ವಿದ್ಯುತ್ ನೀಡುತ್ತಿದ್ದರು ಈಗ ಬೆಳಿಗ್ಗೆ ೨ ತಾಸು ಮತ್ತು ಉಳಿಕೆ ವಿದ್ಯುತ್‌ನ್ನು…

Read More

ತುಮಕೂರು ಅಮೆರಿಕದ ಸ್ಟಾö್ಯನ್‌ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿರುವ ವಿಶ್ವದ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ಇಬ್ಬರು ಪ್ರಾಧ್ಯಾಪಕರು ಗುರುತಿಸಿಕೊಂಡಿದ್ದಾರೆ. ಭೌತಶಾಸ್ತç ವಿಭಾಗದ ಪ್ರಾಧ್ಯಾಪಕ ಡಾ. ಎಚ್. ನಾಗಭೂಷಣ ಮತ್ತು ರಸಾಯನಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುರೇಶ್ ಡಿ. ಈ ಹಿರಿಮೆಗೆ ಪಾತ್ರರಾಗಿರುವವರು. ಅಂತರಾಷ್ಟಿçÃಯವಾಗಿ ಪ್ರಕಟವಾದ ಸಂಶೋಧನ ಪ್ರಕಟಣೆಗಳು, ಉಲ್ಲೇಖಗಳು, ಸಹ-ಲೇಖಕ ಸಂಶೋಧನ ಪ್ರಕಟಣೆಗಳು ಮತ್ತು ಎಚ್-ಇಂಡೆಕ್ಸ್ಗಳನ್ನು ಪರಿಶೀಲಿಸಿದ ನಂತರ ವಿಶ್ವದ ಶೇ. ೨ ಅಗ್ರ ವಿಜ್ಞಾನಿಗಳ ಪಟ್ಟಿಯನ್ನು ಸ್ಟಾö್ಯನ್‌ಫೋರ್ಡ್ ವಿಶ್ವವಿದ್ಯಾಲಯವು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ತುಮಕೂರು ವಿವಿಯ ಇಬ್ಬರು ಪ್ರಾಧ್ಯಾಪಕರು ಸೇರಿರುವುದು ವಿಶೇಷವಾಗಿದೆ. ಜಾಗತಿಕ ಮಟ್ಟದಲ್ಲಿ ಸಿದ್ಧಪಡಿಸಲಾದ ಸ್ಟಾö್ಯನ್‌ಫೋರ್ಡ್ ವಿಶ್ವವಿದ್ಯಾನಿಲಯದ ಪಟ್ಟಿಯು ವಿಜ್ಞಾನಿಗಳನ್ನು ೨೨ ವೈಜ್ಞಾನಿಕ ಕ್ಷೇತ್ರಗಳು ಮತ್ತು ೧೭೪ ಉಪಕ್ಷೇತ್ರಗಳಾಗಿ ವರ್ಗೀಕರಿಸುತ್ತದೆ. ವಿಶ್ವದ ವಿವಿಧ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ತಮ್ಮ ಸಂಶೋಧನ ಸಾಧನೆಗಳ ಆಧಾರದಲ್ಲಿ ಇದರಲ್ಲಿ ಗುರುತಿಸಿಕೊಳ್ಳುತ್ತಾರೆ. ಇದರೊಂದಿಗೆ, ಎಡಿ ಸೈಂಟಿಫಿಕ್ ಇಂಡೆಕ್ಸ್ ಬಿಡುಗಡೆ ಮಾಡಿರುವ ವಿಜ್ಞಾನಿಗಳ ರ‍್ಯಾಂಕಿAಗ್ ಪಟ್ಟಿಯಲ್ಲಿಯೂ ತುಮಕೂರು ವಿವಿಯ ಹಲವು ಪ್ರಾಧ್ಯಾಪಕರು…

Read More

ಪಾವಗಡ ಪಟ್ಟಣದ ಹಳೇ ಸಂತೆ ಮೈಧಾನದಲ್ಲಿ ಅಕ್ರಮವಾಗಿ ಮೆಕಾನಿಕ್ ಷಾಪ್ ಕಳೆದ ೧ ತಿಂಗಳ ಹಿಂದೆ ತಲೆ ಎತ್ತಿದ್ದು ಅಕ್ರಮವಾಗಿ ಈ ಪೆಟ್ಟಿಗೆ ಅಂಗಡಿಯನ್ನು ಇಟ್ಟುಕೊಂಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಮಾದ್ಯಮಗಳಲ್ಲಿ ವರದಿಯಾದರೂ ಸಹ ಈ ಬಗ್ಗೆ ಪುರಸಭೆ ಅಧಿಕಾರಿಗಳು ಈ ಶೇಡ್ ನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲಾ ಇದರಿಂದ ಪಟ್ಟಣದ ಪುರಜನರು ಪುರಸಭೆಯ ವಿರುದ್ದ ತಮ್ಮ ತೀವ್ರತರಹದ ಆಕ್ರೋಶ ಹೊರಹಾಕುತ್ತಿದ್ದಾರೆ. ಹಳೇ ಸಂತೆ ಮೈಧಾನ ಸುಮಾರು ಎರಡು ಎಕರೆ ಜಾಗ ಇದ್ದು, ಪಟ್ಟಣದ ಬಳ್ಳಾರಿ ರಸ್ತೆಯ ಮಾರ್ಗದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಕಳೆದ ೧೦ ವರ್ಷಗಳ ಹಿಂದೆ ಸ್ಥಳಾಂತರವಾಗಿದ್ದು, ಅಂದಿನಿAದ ಇಲ್ಲಿಯವರೆಗೂ ಈ ಸ್ಥಳ ಖಾಲಿ ಇದೆ, ಅದರೆ ಪುರಸಭೆ ಈ ಸ್ಥಳವನ್ನು ಅಭಿವೃದ್ದಿ ಮಾಡುವಲ್ಲಿ ವಿಫಲವಾಗಿದ್ದು, ಇದೆ ಸಂತೆ ಮೈಧಾನದಲ್ಲಿ ೧೦ ರಿಂದ ೨೦ ತರಕಾರಿ ಅಂಗಡಿಗಳನ್ನು ಪುರಸಭೆಯಿಂದ ಬಾಡಿಗೆಗೆ ನೀಡಲಾಗಿದೆ, ಉಳಿದ ಸ್ಥಳ ಖಾಲಿ ಇದ್ದು ಈ ಸ್ಥಳವನ್ನು ಸಾರ್ವಜನೀಕರು ಬೇಕಾಬಿಟ್ಟಿ ಉಪಯೋಗಿಸಿಕೊಳ್ಳುತ್ತಿದ್ದಾರೆ, ಸಂಜೆ ಹೊತ್ತು ಕುಡುಕರ…

Read More

ತುಮಕೂರು ಸಾಮಾಜಿಕ ಕಳಕಳಿಯ ಬದ್ಧತೆಯನ್ನು ಹೊತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷ ಜನಾಗ್ರಹ ಚಳಿವಳಿ ಅ. ೭ ರಂದು ಪ್ರತಿಭಟನೆ ಮತ್ತು ಮೆರವಣಿಗೆಯನ್ನು ನಡೆಸಲಿದೆ ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಲು ಅಕ್ಟೋಬರ್ ೭ರಂದು ಬೆಳಗ್ಗೆ ೧೧:೦೦ ಟೌನ್ ಹಾಲ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಗಳ ವರೆಗೆ ಮೆರವಣಿಗೆಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಿಂದಿನ ೪೦% ಪರ್ಸೆಂಟ್ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತು. ಬದಲಾವಣೆ ಬಯಸಿ ಕಾಂಗ್ರೆಸ್ ಸರ್ಕಾರವನ್ನು ಆಡಳಿತಕ್ಕೆ ತಂದಿದ್ದಾರೆ. ಬಹುಮತದಿಂದ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೊಳಿಸುವ ಬರದಲ್ಲಿ ಬೆಲೆ ಏರಿಕೆ ಮತ್ತು ತೆರಿಗೆ ಹೊರೆ ಮಾಡಿ ಜನರಿಗೆ ಬೇಸರ ತಂದಿದೆ. ಸಿದ್ದರಾಮಯ್ಯ ಮತ್ತು ಡಿ ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ಆರು ಗ್ಯಾರಂಟಿಗಳನ್ನು ಕೊಟ್ಟಿದ್ದು ಅವುಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಆದರೆ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ತಾತ್ಕಾಲಿಕವಾದ…

Read More

ತುಮಕೂರು ಊರಿನ ಅನುಕೂಲಕ್ಕಾಗಿ ರಾಜಮಹಾರಾಜರು, ಗ್ರಾಮಸ್ಥರು ಆಗ ಕಟ್ಟಿದ್ದ ಕೆರೆಗಳನ್ನು ಸಂರಕ್ಷಣಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಕೆರೆಯಲ್ಲಿ ಮಳೆ ನೀರು ಸಂಗ್ರಹವಾಗಿ ಅಂತರ್ಜಲ ಮಟ್ಟ ಕಾಪಾಡಲು ಕೆರೆಗಳ ಉಳಿವು ಅತ್ಯಗತ್ಯ ಎಂದು ಗೃಹ ಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ಉಪ್ಪಾರಹಳ್ಳಿ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ನಗರದ ಉಪ್ಪಾರಹಳ್ಳಿ ಕೆರೆ ಆವರಣದಲ್ಲಿ ಬುಧವಾರ ನಡೆದ ನಮ್ಮೂರ ನಮ್ಮ ಕೆರೆ ಎಂಬ ಕೆರೆ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ತಮ್ಮೂರಿನ ಕೆರೆ ಉಳಿಸಬೇಕೆಂದು ಜನರಲ್ಲಿ ಜಾಗೃತಿ ಮೂಡಿಸಿ ಅವರ ಸಹಭಾಗವಹಿಸುವಿಕೆಯೊಂದಿಗೆ ಕೆರೆಗಳ ಪುನಶ್ಚೇತನ ಮಾಡಿ ಸಂರಕ್ಷಣೆ ಮಾಡುವ ಧರ್ಮಸ್ಥಳ ಸಂಸ್ಥೆಯ ಸೇವೆ ಶ್ಲಾಘನೀಯ ಎಂದರು. ಮಹಿಳೆಯರಿಗೆ ºಣಕಾಸಿನ ಸಾಲ ನೀಡುವುದು, ಅವರಲ್ಲಿ ಉಳಿತಾಯ ಮನೋಭಾವ ಬೆಳೆಸುವುದು, ಸ್ವಯಂ ಉದ್ಯೋಗ ಆರಂಭಿಸಿ ಹೆಣ್ಣುಮಕ್ಕಳನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವುದು, ಸಂಸಾರದ ನೆಮ್ಮದಿ ಕೆಡಿಸುವ ಕುಡಿತದ ಚಟ ಬಿಡಿಸಲು ಅನೇಕ ಮದ್ಯವ್ಯಸನ ಶಿಬಿರ…

Read More

ತುಮಕೂರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತಿçà ಅವರ ತತ್ತಾ÷್ವದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಸೋಮವಾರ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತಿçà ಅವರ ಜನ್ಮದಿನಾಚರಣೆ ಮತ್ತು ತುಮಕೂರು ರಿಸರ್ಚ್ ಫೌಂಡೇಶನ್ ಉದ್ಘಾಟಿಸಿ ಮಾತನಾಡಿದರು. ಲಾಲ್ ಬಹದ್ದೂರ್ ಶಾಸ್ತಿçà ಅವರ ಬದುಕು ಸರಳತೆಗೆ ಕನ್ನಡಿಯಾಗಿತ್ತು. ತಮ್ಮ ಕರ್ತವ್ಯ ನಿಷ್ಠೆಗೆ ಹೆಸರಾಗಿ ದೇಶದ ಏಳ್ಗೆಗಾಗಿ ಹಗಲಿರುಳು ದುಡಿದ ಸಜ್ಜನ ಪ್ರಧಾನಿ ಶಾಸ್ತಿçà ಅವರು ಎಂದು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಮಾತನಾಡಿ, ಲಾಲ್ ಬಹದ್ದೂರ್ ಶಾಸ್ತಿçà ಅವರು ದೇಶ ಕಂಡAತಹ ಶ್ರೇಷ್ಠ ಅಪ್ರತಿಮ ನಾಯಕ. ಸ್ವಾತಂತ್ರö್ಯ ಹೋರಾಟದಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ, ದೇಶದ ಪ್ರಧಾನಿಯಾಗಿ ಕಡಿಮೆ ಸಮಯದಲ್ಲಿ ಹೆಚ್ಚು ಕೆಲಸ ಮಾಡಿದ ಕೀರ್ತಿ ಲಾಲ್ ಬಹದ್ದೂರ್ ಶಾಸ್ತಿçà ಅವರಿಗೆ ಸಲ್ಲಬೇಕು ಎಂದರು. ಪ್ರತಿಯೊಬ್ಬರೂ ಮಹಾತ್ಮಾಗಾಂಧಿ ಮತ್ತು ಲಾಲ್…

Read More