ಹುಬ್ಬಳ್ಳಿ : RSS ಚಡ್ಡಿ ಸುಡುತ್ತೇವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, RSS ಕಳೆದ 75 ವರ್ಷಗಳಿಂದ ಜನರ ಸೇವೆ ಮಾಡಿಕೊಂಡು ಬರುತ್ತಿದೆ. ಜನರು ಸಂಕಷ್ಟದಲ್ಲಿದ್ದಾಗ RSS ಸಹಾಯ ಮಾಡಿದೆ. ಹೀಗಾಗಿ ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯಲು ಯತ್ನಿಸುತ್ತಿದೆ. ಸಿದ್ದರಾಮಯ್ಯ ಆರ್ ಎಸ್ಎಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಹೀಗೇ ಮಾಡಿಯೇ ಕಾಂಗ್ರೆಸ್ ಎಲ್ಲೆಡೆ ಅಧಿಕಾರ ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಪಠ್ಯ ಕೇಸರೀಕರಣ ವಿರೋಧಿಸಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮನೆ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಕ್ಕೆ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪ್ರತಿಭಟನೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಆರ್ ಎಸ್ಎಸ್ ಚಡ್ಡಿ ಸುಡುವ ಅಭಿಯಾನ ಕೈಗೊಳ್ಳಲಾಗುವುದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

 

(Visited 14 times, 1 visits today)