ತುಮಕೂರು:
ಬಿಜೆಪಿ ತುಮಕೂರು ಸಂಘಟನಾತ್ಮಕ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಹೆಚ್.ಎಸ್. ರವಿಶಂಕರ್ ರವರ ಅಧಿಕಾರ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭವು ತುಮಕೂರಿನ ಶಿರಾ ರಸ್ತೆಯಲ್ಲಿರುವ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ದಿನಾಂಕ 24.05.2022ರ ಮಂಗಳವಾರ ಬೆಳೆಗ್ಗೆ 10.30ಕ್ಕೆ ಆರಂಭಗೊಳಲಿದೆ.
ಈ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯರು ಮತ್ತು ದಾವಣಗೆರೆ ವಿಭಾಗದ ಪ್ರಭಾರಿ ಶ್ರೀ ಕೆ.ಎಸ್.ನವೀನ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಂ.ಬಿ.ನಂದೀಶ್, ರಾಜ್ಯ ಕಾರ್ಯದರ್ಶಿ ಶ್ರೀ ವಿನಯ್ ಬಿದರೆ, ರಾಜ್ಯ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಎಸ್.ಶಿವಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ, ಸಚಿವರಾದ ಶ್ರೀ ಬಿ.ಸಿ.ನಾಗೇಶ್ ಮತ್ತು ಶ್ರೀ ಜೆ.ಸಿ.ಮಾಧುಸ್ವಾಮಿ, ಸಂಸದರಾದ ಶ್ರೀ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಚಿದಾನಂದ.ಎಂ.ಗೌಡ, ಸಿ.ನಾರಾಯಣಸ್ವಾಮಿ, ಮಾಜಿವಿಧಾನ ಪರಿಷತ್ ಸದಸ್ಯ ಡಾ|| ಎಂ.ಆರ್.ಹುಲಿನಾಯ್ಕ್‍ರ್, ಶಾಸಕರಾದ ಶ್ರೀ ಜಿ.ಬಿ.ಜ್ಯೋತಿಗಣೇಶ್, ಶ್ರೀ ಮಸಾಲೇ ಜಯರಾಮ್, ಶ್ರೀ ಡಾ|| ರಾಜೇಶ್‍ಗೌಡ, ಮಾಜಿ ಸಚಿವರಾದ ಶ್ರೀ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಶ್ರೀ ಬಿ.ಸುರೇಶ್ ಗೌಡ, ಶ್ರೀ ಕಿರಣ್ ಕುಮಾರ್, ಶ್ರೀ ಗಂಗಹನುಮಯ್ಯ, ರಾಜ್ಯ, ಜಿಲ್ಲೆ, ನಗರಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪ್ರಮುಖರು ಹಾಜರಿರುತ್ತಾರೆ.

(Visited 1 times, 1 visits today)