BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಡಶೆಟ್ಟಿಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ: ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ
Trending

ಕಾಡಶೆಟ್ಟಿಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ: ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

By News Desk BenkiyabaleUpdated:March 25, 2021 6:36 pm

 ತುಮಕೂರು  : 

      ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಕಾಡಶೆಟ್ಟಿಹಳ್ಳಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಗ್ರಾಮ ವಾಸ್ತವ್ಯ ಮಾಡಿದರು.

      ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಗಿಡ ನೆಟ್ಟು, ನಂತರ ಗ್ರಾಮದಲ್ಲಿನ ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಪೂಜೆ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

       ಬಳಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ಇಲಾಖೆಗಳಿಂದ ಆಯೋಜಿಸಲಾಗಿದ್ದ ಪ್ರಾತ್ಯಕ್ಷತೆಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ನಂತರ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಆಗಮಿಸಿ ಗ್ರಾಮದ ಜನರ ಸಮಸ್ಯೆ ಆಲಿಸಿದರು.

      ಅನಂತರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಎಲ್ಲಾ ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾಮಾನ್ಯ ಜನರ ಸಮಸ್ಯೆ ಆಲಿಸಿ, ಸಮಸ್ಯೆ ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.
ನ್ಯಾಯಾಲಯಕ್ಕೆ ಮತ್ತು ವೈಯಕ್ತಿಕ ಸಮಸ್ಯೆ ಹೊರತುಪಡಿಸಿ, ಸ್ಥಳದಲ್ಲೇ ಇತ್ಯರ್ಥಪಡಿಸುವ ಸಮಸ್ಯೆಗಳನ್ನು ಬಗೆಹರಿಸಿ ಉಳಿದ ಸಮಸ್ಯೆಗಳನ್ನು ಪರಿಶೀಲಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಅರ್ಹರಿಗೆ ಸೌಲಭ್ಯ ಸಿಗಬೇಕು. ಅನರ್ಹರು ಸೌಲಭ್ಯ ಪಡೆದಿದ್ದ ಮಾಹಿತಿ ಕೊಟ್ಟರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

       ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಇಂದು ಒಟ್ಟು 52 ಅರ್ಜಿಗಳು ಬಂದಿವೆ. ಅದರಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಆಗಿದ್ದು, ಬಗೆಹರಿಸುವ ಅರ್ಜಿಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗಿದೆ. ಉಳಿದವುಗಳಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, 7 ಸಾಮಾಜಿಕ ಭದ್ರತಾ ಯೋಜನೆಯಡಿಯ ಸೌಲಭ್ಯ, 2 ಸಾಗುವಳಿ ಚೀಟಿ, ಕಣ್ಣಿನ ತಪಾಸಣೆ ನಡೆಸಿ 25 ಕನ್ನಡಕಗಳನ್ನು ನೀಡಲಾಗಿದೆ. 16 ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಲಾಗಿದೆ. 9 ಪಹಣಿ ತಿದ್ದುಪಡಿ, 84 ಪೆÇೀಡಿ ಸಮಸ್ಯೆ , 7 ಪೌತಿ ಖಾತೆ ಸರಿಪಡಿಸಲಾಗಿದೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಘನತ್ಯಾಜ್ಯ ನಿರ್ವಹಣೆಗಾಗಿ ಜಾಗ ನೀಡಲಾಗಿದೆ. ಗ್ರಾಮಕ್ಕೆ ಸ್ಮಶಾನ ಜಾಗ ಮೀಸಲಿಡಲಾಗಿದೆ ಎಂದು ಹೇಳಿದರು.
ಸರಕಾರಿ ಜಾಗ ಒತ್ತುವರಿ ಮಾಡಿಕೊಂಡು ಓಡಾಡುವ ದಾರಿಗೆ ಸಮಸ್ಯೆಯಾಗಿದೆ. ಕೆರೆಗೆ ನೀರು ಬರುವ ಮಾರ್ಗ ಮಧ್ಯೆ ಜಮೀನು ಅಭಿವೃದ್ಧಿ ಪಡಿಸಿ ನೀರು ಹೋಗದಂತೆ ತಡೆಹಿಡಿಯಲಾಗಿದೆ ಎಂಬುದು ಸೇರಿದಂತೆ
ಬೆಸ್ಕಾಂಗೆ ಸಂಬಂಧಿಸಿದ ದೂರುಗಳು ಬಂದಿವೆ. ಈ ದೂರುಗಳನ್ನು ಪರಶೀಲಿಸಿ ತುರ್ತಾಗಿ ಇತ್ಯರ್ಥಪಡಿಸುವ ಕ್ರಮಕೈಗೊಳ್ಳಲಾಗುವುದು ಎಂದರು.
ತಾಲೂಕಿನ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆಯೂ ದೂರು ಬಂದಿದ್ದು, ಈ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವುದು ಮತ್ತು ಗ್ರಾಮದ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಡಿ ಗ್ರಾಮದ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರಗೊಳ್ಳುವ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲಾಗಿದೆ. ಉಳಿದ ಸಮಸ್ಯೆಗಳನ್ನು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

      ವಿವಿಧ ಇಲಾಖೆಗಳು ತಮ್ಮದೇ ಯೋಜನೆಗಳ ಸೌಲಭ್ಯ ಕುರಿತು ಮಳಿಗೆ ಪ್ರದರ್ಶನದ ಮೂಲಕ ಅರಿವು ಮೂಡಿಸಿದ್ದಾರೆ. ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಸ್ಥಳದಲ್ಲಿಯೇ ದೃಷ್ಠಿದೋಷವುಳ್ಳವರಿಗೆ ಕನ್ನಡಕ ವಿತರಿಸಲಾಗಿದೆ ಎಂದರು.

      ಎಸ್‍ಪಿ ಡಾ.ಕೆ. ವಂಶಿಕೃಷ್ಣ ಮಾತನಾಡಿ, ಪೆÇಲೀಸ್ ಇಲಾಖೆಯೂ ಜನಸ್ನೇಹಿಯುತವಾಗಿ ಕೆಲಸ ಮಾಡುತ್ತಿದೆ. ಜನರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಸಲುವಾಗಿ 112 ಸೇವೆ ಪ್ರಾರಂಭಿಸಲಾಗಿದೆ. ಸಮಸ್ಯೆ ಇದ್ದವರು 112ಗೆ ಕರೆ ಮಾಡಿ ಮಾಹಿತಿ ನೀಡಿದರೆ 15 ನಿಮಿಷದಲ್ಲಿ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

ಈ ವೇಳೆ ಉಪವಿಭಾಗಧಿಕಾರಿ ಅಜಯ್, ತೋಟಗಾರಿಕ ಇಲಾಖೆ ಉಪನಿರ್ದೇಶಕ ರಘು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ರಮೇಶ್, ತಹಸೀಲ್ದಾರ್ ಪ್ರದೀಪ್ ಕುಮಾರ್ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಾಡಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಸದಸ್ಯ ಸತೀಶ್, ಕಡಬ ಗ್ರಾಮಪಂಚಾಯಿತಿ ಅದ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

(Visited 34 times, 1 visits today)
Previous Articleಬೀದಿ ನಾಯಿಗಳ ಹಾವಳಿಯಿಂದ ಗಾಯಗೊಂಡ ಬಾಲಕಿ
Next Article ತುಮಕೂರು : ಕೊರೋನಾ ತಡೆಯಲು ಜಾತ್ರೆ/ಸಭೆ/ಸಮಾರಂಭಗಳಿಗೆ ನಿಷೇಧ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.