ಜೈಪುರ: 

 

      ಈ ದೇಶಕ್ಕಿಂತಲೂ ಮುಖ್ಯವಾದದ್ದು ನನಗೆ ಬೇರೇನೂ ಇಲ್ಲ. ಈ ಮಣ್ಣಿನ ಆಣೆ ನಾನು ದೇಶವನ್ನು ತಲೆಬಾಗಲು ಬಿಡುವುದಿಲ್ಲ ದೇಶದ ಸುರಕ್ಷತೆ ದೃಷ್ಟಿಯಿಂದ ಉಗ್ರ ನಿಗ್ರಹಕ್ಕೆ ಬದ್ಧ ಎಂದು  ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.

     ರಾಜಸ್ಥಾನದ ಚುರುವಿನಲ್ಲಿ ಸಮಾವೇಶದಲ್ಲಿ ಮಾತನಾಡಿದ ಅವರು, ವೈಮಾನಿಕ ದಾಳಿಯ ನಂತರ ಮೊದಲ ಬಾರಿಗೆ ಆ ಬಗ್ಗೆ ಪ್ರತಿಕ್ರಿಯಿಸಿದರು.  ಭಾರತ ಅತ್ಯಂತ ಸುರಕ್ಷಿತ ಕೈಗಳಲ್ಲಿದೆ ಎಂದು ದೇಶಕ್ಕೆ ಮತ್ತೊಮ್ಮೆ ಭರವಸೆ ನೀಡಲು ಬಯಸುತ್ತೇನೆ. ಪಾಕಿಸ್ತಾನದ ಬಾಳಾಕೋಟ್​ ಮೇಲಿನ ವೈಮಾನಿಕ ದಾಳಿ ನಡೆಸಿ, ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ ಧೀರ ಯೋಧರೆಲ್ಲರನ್ನೂ ಅಭಿನಂದಿಸಲು ಬಯಸುತ್ತೇನೆ ಎಂದು ಹೇಳಿದರು.

      ಯಾವುದೇ ಕಾರಣಕ್ಕೂ ದೇಶದ ಗೌರವಕ್ಕೆ ಧಕ್ಕೆ ಒದಗದಂತೆ ನೋಡಿಕೊಳ್ಳುತ್ತೇನೆ. 2014ರಲ್ಲಿ ನಾನು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವಾಗ ಈ ಕುರಿತು ಹೇಳಿದ ಮಾತಿಗೆ ನಾನು ಈಗಲೂ ಬದ್ಧ ಎಂದರು.

       ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನೊಬ್ಬನ ದಾಳಿಯಲ್ಲಿ ಸಿಆರ್​ಪಿಎಫ್​ನ 40 ಯೋಧರು ಹುತಾತ್ಮರಾಗಿದ್ದರು. ಇದರ ಪ್ರತೀಕಾರವಾಗಿ ಸೋಮವಾರ ತಡರಾತ್ರಿ 3.30ಕ್ಕೆ ಪಾಕಿಸ್ತಾನದ ಬಾಳಾಕೋಟ್​ ಮೇಲೆ ವೈಮಾನಿಕ ದಾಳಿ ನಡೆಸಿದ ವಾಯುಪಡೆ ಯೋಧರು, ಜೈಷ್​ನ ಪ್ರಮುಖ ನೆಲೆಯನ್ನು ಧ್ವಂಸಗೊಳಿಸಿದರು. ಅಂದಾಜು 300 ಜನ ಉಗ್ರರು ಹತರಾಗಿರುವುದಾಗಿ ಹೇಳಲಾಗುತ್ತಿದೆ.

 

(Visited 37 times, 1 visits today)