BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
  • ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ
  • ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
  • ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕ್ಷೀರಧಾರೆಗೆ ಮುನ್ನುಡಿ ಬರೆದ ಕೊರೊನಾ : ಕೃಷಿ-ಹೈನುಗಾರಿಕೆಯತ್ತ ಯುವಕರ ಚಿತ್ತ..!
Trending

ಕ್ಷೀರಧಾರೆಗೆ ಮುನ್ನುಡಿ ಬರೆದ ಕೊರೊನಾ : ಕೃಷಿ-ಹೈನುಗಾರಿಕೆಯತ್ತ ಯುವಕರ ಚಿತ್ತ..!

By News Desk BenkiyabaleUpdated:August 18, 2020 6:33 pm

ಮಧುಗಿರಿ:

      ಜೀವನ ನಿರ್ವಹಣೆಗೆ ಉದ್ಯೋಗ ಅರಸಿ ಪಟ್ಟಣಗಳಿಗೆ ವಲಸೆ ಹೋಗಿದ್ದ ಯುವ ಜನತೆ ಕೊರೊನಾ ಎಫೆಕ್ಟ್‍ನಿಂದಾಗಿ ಮತ್ತೆ ತಮ್ಮ ಸ್ವಗ್ರಾಮಗಳಿಗೆ ವಾಪಾಸ್ಸಾಗಿದ್ದು, ಕೃಷಿ ಮತ್ತು ಹೈನುಗಾರಿಕೆಯಲ್ಲಿ ತಮ್ಮ ಜೀವನ ರೂಪಿಸಿಕೊಳ್ಳತೊಡಗಿದ್ದಾರೆ.

      ವಾಪಾಸ್ಸಾಗಲು ಹಿಂದೇಟು: ಮಾರ್ಚ್‍ನಲ್ಲಿ ಲಾಕ್‍ಡೌನ್ ಘೋಷಣೆಯಾದ ನಂತರ ಪಟ್ಟಣದಲ್ಲಿ ಉದ್ಯೋಗ ಮಾಡುತ್ತಿದ್ದ ಬಹುತೇಕ ಯುವಕರೆಲ್ಲರೂ ಮತ್ತೆ ತಮ್ಮ ಸ್ವಗ್ರಾಮಗಳಿಗೆ ವಾಪಾಸ್ಸಾಗಿದ್ದು, ಪಟ್ಟಣಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಉದ್ಯೋಗಕ್ಕಾಗಿ ಮತ್ತೆ ಪಟ್ಟಣಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದು, ಗ್ರಾಮಗಳಲ್ಲೇ ಸ್ವಯಂ ಉದ್ಯೋಗ ಆಶ್ರಯಿಸಿದ್ದಾರೆ.

       ಹಾಲಿನ ಹೊಳೆ:

       ಕೊರೊನಾ ಎಫೆಕ್ಟ್‍ನಿಂದಾಗಿ ಉದ್ಯೋಗ ಕಳೆದುಕೊಂಡ ಯುವಜನತೆ ಕುಟುಂಬ ನಿರ್ವಹಣೆಗಾಗಿ ಕೃಷಿ ಮತ್ತು ಹೈನುಗಾರಿಕೆಯತ್ತ ಹೊರಳಿದ್ದು, ಇದರಿಂದಾಗಿ ತಾಲೂಕಿನಲ್ಲಿ ಕ್ಷೀರಧಾರೆಯೇ ಹರಿಯುತ್ತಿದೆ. ಫೆಬ್ರವರಿ ಮಾಹೆಯಲ್ಲಿ ಲಾಕ್‍ಡೌನ್‍ಗೂ ಮುಂಚೆ ತಾಲೂಕಿನ 153 ಸಂಘಗಳಲ್ಲಿ ಒಟ್ಟು 8409 ಹಾಲು ಉತ್ಪಾದಕ ಸದಸ್ಯರಿದ್ದು, ಪ್ರತೀ ದಿನ 55450 ಲೀಟರ್ ಹಾಲು ಶೇಖರಣೆಯಾಗುತ್ತಿತ್ತು. ಲಾಕ್‍ಡೌನ್ ನಂತರದ ದಿನಗಳಲ್ಲಿ ಜೂನ್ 2020 ರ ಅಂತ್ಯಕ್ಕೆ ಹಾಲು ಉತ್ಪಾದಕ ಸದಸ್ಯರ ಸಂಖ್ಯೆ 9129 ಕ್ಕೆ ಏರಿಕೆಯಾಗಿದ್ದು, ಕೊಡಿಗೇನಹಳ್ಳಿ ಮತ್ತು ಪುರವರ ಹೋಬಳಿಯ ವ್ಯಾಪ್ತಿಯ ಡೈರಿಗಳಲ್ಲಿ 26500 ಲೀ, ದೊಡ್ಡೇರಿ ಹೋಬಳಿಯಲ್ಲಿ 16500 ಲೀ, ಕಸಬಾ ಹೋಬಳಿಯಲ್ಲಿ 13900 ಲೀ, ಮಿಡಿಗೇಶಿ ಮತ್ತು ಐ.ಡಿ.ಹಳ್ಳಿ ಹೋಬಳಿಯ ಡೈರಿಗಳಲ್ಲಿ 23100 ಲೀ, ಹಾಲು ಸರಬರಾಜಾಗುತ್ತಿದ್ದು, ತಾಲೂಕಿನಾದ್ಯಂತ ಒಟ್ಟು ಪ್ರತಿ ನಿತ್ಯ 85500 ಲೀಟರ್ ಹಾಲು ಶೇಖರಣೆಯಾಗುತ್ತಿದ್ದು, ಕಳೆದ 4 ತಿಂಗಳಲ್ಲಿ ಸುಮಾರು 25050 ಲೀಟರ್ ಹಾಲು ಏರಿಕೆಯಾಗಿದೆ ಸುಮಾರು 5 ಸಾವಿರ ಲೀಟರ್ ಸ್ಥಳೀಯ ಡೈರಿಗಳಲ್ಲೇ ಮಾರಾಟವಾಗುತ್ತಿದ್ದು, 80500 ಲೀಟರ್ ಹಾಲು ತುಮುಲ್ ಒಕ್ಕೂಟಕ್ಕೆ ಸರಬರಾಜಾಗುತ್ತಿದೆ. ಸಂಘಗಳಲ್ಲಿ ಪ್ರತೀ 15 ದಿನಗಳಿಗೊಮ್ಮೆ ಸಮರ್ಪಕವಾಗಿ ಬಟವಾಡಿಯಾಗುತ್ತಿರುವುದೂ ಯುವಜನತೆ ಹೈನುಗಾರಿಕೆಯತ್ತ ಮುಖ ಮಾಡಲು ಪ್ರಮುಖ ಕಾರಣವಾಗಿದ್ದು, ಕೊರೊನಾ ಸಂಕಷ್ಟದಲ್ಲೂ ಹೈನುಗಾರಿಕೆ ರೈತರ ಕೈಹಿಡಿದಿದೆ.

      ಉದ್ಯೋಗ ಅರಸಿ ನಗರಕ್ಕೆ ವಲಸೆ ಹೋಗಿದ್ದು, ಕೊರೊನಾ ಎಫೆಕ್ಟ್‍ನಿಂದಾಗಿ ಉದ್ಯೋಗ ಕಳೆದುಕೊಂಡು ಹಳ್ಳಿ ಸೇರಬೇಕಾಯಿತು. ನಂತರ ಮುಂದೇನು ಎಂಬ ಚಿಂತೆಯಲ್ಲಿದ್ದ ನನಗೆ ಒಕ್ಕೂಟ ಕೈ ಹಿಡಿದಿದ್ದು, ಪ್ರತಿ ನಿತ್ಯ ತಾಲೂಕಿನ ಸಂಘಗಳ ಡೈರಿಗಳಲ್ಲಿ ಶೇಖರಣೆಯಾದ ಹಾಲನ್ನು ಸ್ವಂತ ವಾಹನದಲ್ಲಿ ಶೀಥಲೀಕರಣ ಘಟಕಕ್ಕೆ ಸರಬರಾಜು ಮಾಡುತ್ತಿದ್ದು, ಖರ್ಚು ಕಳೆದು ತಿಂಗಳಿಗೆ ಸುಮಾರು 15 ಸಾವಿರ ಉಳಿಯುತ್ತಿದೆ. ಇದರಿಂದ ನನ್ನ ಜೀವನ ಸಾಗುತ್ತಿದೆ.


ಉತ್ತಮ ಮುಂಗಾರು:

      ತಾಲೂಕು ನಿರಂತರ ಬರಪೀಡಿತ ಪ್ರದೇಶವಾಗಿದ್ದು, ಈ ಬಾರಿ ಮುಂಗಾರು ಕೈ ಹಿಡಿದಿರುವುದರಿಂದ ಹೊಲಗಳಲ್ಲಿ ಜಾನುವಾರುಗಳಿಗೆ ಸಮರ್ಪಕ ಮೇವು ದೊರೆಯುತ್ತಿರುವುದೂ ರೈತರಿಗೆ ಹೈನುಗಾರಿಕೆ ವರದಾನವಾಗಿದೆ. ಅಲ್ಲದೇ ತುಮುಲ್ ವತಿಯಿಂದ ಮೇವು ಬೆಳೆಯಲು 300 ಕ್ವಿಂಟಲ್ ಜೋಳ ಮತ್ತು 50 ಕ್ವಿಂಟಾಲ್ ಅಲಸಂದೆಯನ್ನು ನೀಡಲಾಗಿದೆ.

(Visited 9 times, 1 visits today)
Previous Articleಮುಚ್ಚಿರುವ ರಸ್ತೆ ತೆರವುಗೊಳಿಸಲು ತಹಶೀಲ್ದಾರ್‍ಗೆ ಮನವಿ!!
Next Article ತುಮಕೂರು : 108 ಮಂದಿಗೆ ಕೋವಿಡ್-19 ಸೋಂಕು ದೃಢ!!
News Desk Benkiyabale

Related Posts

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm news
ತಾಜಾ ಸುದ್ಧಿಗಳು
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm
news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm
news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm
news

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
Our Youtube Channel
Our Picks

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

By News Desk BenkiyabaleAugust 11, 2026 4:46 pm

ತುರುವೇಕೆರೆ: ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು ಹಾಗೂ ತಾಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ತಾಲೂಕು ಜೆಡಿಎಸ್…

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.