BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
  • ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
  • ೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಾವಗಡ :18-19 ನೇ ಶತಮಾನದ ನಾಣ್ಯಗಳು ಪತ್ತೆ!!
Trending

ಪಾವಗಡ :18-19 ನೇ ಶತಮಾನದ ನಾಣ್ಯಗಳು ಪತ್ತೆ!!

By News Desk BenkiyabaleUpdated:July 23, 2020 7:25 pm

ಪಾವಗಡ:

      ತಾಲ್ಲೂಕಿನ ನಿಡಗಲ್ ಹೋಬಳಿ ಗುಜ್ಜನಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಟಿ.ಎನ್.ಬೆಟ್ಟ ಗ್ರಾಮದ ತಿಮ್ಮಪ್ಪನ ಬೆಟ್ಟದ ತಪ್ಪಲಿನಲ್ಲಿರುವ ಸನಾತನ ಪುಷ್ಕರಣಿಯನ್ನು ಕಳೆದ ಒಂದು ವಾದದಿಂದ ಸ್ವಚ್ಛಮಾಡಲಾಗುತ್ತಿದೆ. ಇದರಲ್ಲಿ 18 ಮತ್ತು19 ನೇ ಶತಮಾನದ ನಾಣ್ಯಗಳು ದೊರೆತಿವೆ. ಈ ಅಪರೂಪದ ನಾಣ್ಯಗಳು ದೊರೆತಿರುವುದನ್ನು ಪೆಮ್ಮನಹಳ್ಳಿಯ ಗ್ರಾಮಸ್ಥರು ತಾಲ್ಲೂಕು ಆಡಳಿತದ ಗಮನಕ್ಕೆ ತಂದ ಕಾರಣ ಗುರುವಾರ ತಹಸಿಲ್ದರ್ ವರದರಾಜ್ ಅವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.

      ನಂತರ ಮಾತನಾಡುತ್ತಾ ಪುರಾತನ ಪುಷ್ಕರಣಿಯನ್ನು ಸ್ವಚ್ಛಗೊಳಿಸುವ ವೇಳೆ ಈ ಅಪರೂಪದ ನಾಣ್ಯಗಳು ದೊರೆತಿವೆ ಇವುಗಳನ್ನು ಗ್ರಾಮಸ್ಥರು ಸಂಗ್ರಹಿಸಿ ಶ್ರೀರಾಮನ ದೇವಸ್ಥಾನದಲ್ಲಿ ಇಟ್ಟಿದ್ದರು. ನಂತರ ಈ ಸಂಂಬಂಧ ಮೇಲಾಧಿಕಾರಿಗಳ ಗಮನಕ್ಕೆ ತಂದು ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.

     ಈ ದೇವಸ್ಥಾನದ ಹತ್ತಿರ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಎಲ್ಲಾ ರೀತಿಯ ಸಮಸ್ಯೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

     ಪೆಮ್ಮನಹಳ್ಳಿಯ ವೀರಕ್ಯಾತಯನವರು ಮಾತನಾಡುತ್ತಾ, ಬೆಟ್ಟದಲ್ಲಿ ತಿಮ್ಮಪ್ಪನ ದೇಗುಲವಿದೆ. ಇದಕ್ಕೆ ಎರಡನೇ ತಿರುಪತಿ ಎಂಬ ಪ್ರತೀತಿಯು ಇದೆ. ಶ್ರಾವಣ ಮಾಸದಲ್ಲಿ ದೂರದೂರುಗಳಿಂದ ಸಾವಿರಾರು ಭಕ್ತರು ಇಲ್ಲಿನ ತಿಮ್ಮಪ್ಪನ ದರ್ಶನ ಪಡೆಯಲು ಬರುತ್ತಾರೆ. ಆ ವೇಳೆ ಇಲ್ಲಿನ ಪುರಾತನ ಕಾಲದ ಪುಷ್ಕರಣಿಯಲ್ಲಿ ಭಕ್ತರು ಹರಕೆ ಮಾಡಿಕೊಂಡು ನಾಣ್ಯಗಳನ್ನು ಭಕ್ತಿಯಿಂದ ಹಾಕಿದರೆ ತಮ್ಮ ಹರಕೆಗಳು ಈಡೇರುತ್ತವೆ ಎನ್ನುವ ಅಪಾರ ನಂಬಿಕೆ ಇಲ್ಲಿಗೆ ಬರುವ ಭಕ್ತರದ್ದಾಗಿದೆ.

     ಈ ಕಲ್ಯಾಣಿಯ ನೀರು ಸ್ವಚ್ಛತೆ ಕಾಣದೆ ಇರುವುದರಿಂದ ಮಲೀನಗೊಂಡು ವಾಸನೆ ಬರುತಿತ್ತು. ಇದನ್ನು ಮನಗೊಂಡು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದಾಗ 18 ಮತ್ತು 19ನೇ ಶತಮಾನದ ನಾಣ್ಯಗಳು ದೊರೆತಿವೆ. ವಿಜಯನಗರ ಅರಸರು ಮತ್ತು ಮೈಸೂರು ಅರಸರ ಹಾಗೂ ಬ್ರಿಟಿಷರ ಕಾಲದ ನಾಣ್ಯಗಳು ಇದಾಗಿವೆ. ಇವೆಲ್ಲವೂ 18 ಮತ್ತು 19 ನೇ ಶತಮಾನದಲ್ಲಿ ಟಂಕಿಸಲಾದ ನಾಣ್ಯಗಳು ಎಂದು ತಿಳಿಸಿದರು.
ದೇವಸ್ಥಾನದ ಅರ್ಚಕರಾದ ರಾಜಕುಮಾರ್ ಮಾತನಾಡುತ್ತಾ, ತಿಮ್ಮಳನಾಯಕನ ಆಳ್ವಿಕಾವಧಿಯಲ್ಲಿ ತಿಮ್ಮಪ್ಪನ ಜಾತ್ರೋತ್ಸವ ತುಂಬಾ ಅದ್ಧೂರಿಯಾಗಿ ನಡೆಯುತಿತ್ತು. ಅಂದಿನಿಂದ ಇಂದಿನವರೆಗೂ ಪ್ರತಿ ಶನಿವಾರ ವಿಶೇಷ ಪೂಜಾ ಕೈಂಕರ್ಯಗಳು ಶ್ರಧ್ಥೆ, ಭಕ್ತಿ, ಮಾಡಲಾಗುತ್ತದೆ.

      ಜೊತೆಗೆ ಇಲ್ಲಿರುವ ಕೆರೆ -ಕಟ್ಟೆಗಳು ಹಾಗೂ ಭಕ್ತರಿಗೆ ಕುಡಿಯುವ ನೀರಿಗಾಗಿ ಈ ಪುಷ್ಕರಣಿಯನ್ನ ತಿಮ್ಮಳನಾಯಕನ ಕಾಲದಲ್ಲಿಯೇ ನಿರ್ಮಾಣ ಮಾಡಿರಬಹುದು ಎಂದು ಇತಿಹಾಸಕಾರರ ಅಭಿಪ್ರಾಯ. ಒಟ್ಟಾರೆ ಇತಿಹಾಸದ ಸಾರವನ್ನ ತನ್ನ ಒಡಲಲ್ಲಿಟ್ಟುಕೊಂಡಿರುವ ಈ ತಿಮ್ಮಪ್ಪನ ಬೆಟ್ಟವನ್ನು ಪುರಾತತ್ವ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಮನಹರಿಸಿ ರಕ್ಷಿಸಿ ಇಲ್ಲಿನ ಇತಿಹಾಸವನ್ನ ಸಂರಕ್ಷಿಸಬೇಕಿದೆ ಎಂದು ತಿಳಿಸಿದರು.

     ಈ ಸಂದರ್ಭದಲ್ಲಿ ಉಪತಹಶೀಲ್ದಾರರು ತಿಪ್ಪೇಸ್ವಾಮಿ, ಪಿ ಡಿ ಓ ರವಿ ಜಾಮಗೊಂಡ, ವಿ.ಎ.ರಾಜೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪದ್ಮಾವತಿ ಓಬಳೇಶ್ , ಸದಸ್ಯರಾದ ರಂಗಸ್ವಾಮಿ , ಗ್ರಾಮಸ್ಥರಾದ ಹನುಮಂತರಾಯಪ್ಪ, ಶಿಲ್ಪಾ ಚಾರಿ, ಧನಂಜಯ, ಚಂದ್ರಶೇಖರ್, ನಾಗಣ್ಣ, ಮಂಜುನಾಥ್, ವಿನಾಯಕ ಗೆಳೆಯರ ಬಳಗದ ಸದಸ್ಯರು ಹಾಗೂ ಅನೇಕ ಗ್ರಾಮಸ್ಥರು ಪಾಲ್ಗೊಂಡಿದ್ದರು.

(Visited 36 times, 1 visits today)
Previous Articleತಳ ಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು : ಬಿ.ಸುರೇಶ್ ಗೌಡ
Next Article ತುಮಕೂರು : 67 ಮಂದಿಗೆ ಕೋವಿಡ್-19 ಸೋಂಕು!!
News Desk Benkiyabale

Related Posts

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm news

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm news

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm news
ತಾಜಾ ಸುದ್ಧಿಗಳು

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm
Our Youtube Channel
Our Picks

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

By News Desk BenkiyabaleJuly 14, 2026 4:07 pm

ಹುಳಿಯಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಳಿಯಾರಿನಲ್ಲಿ ಹಮ್ಮಿಕೊಂಡಿರುವ ಈ ಮಧ್ಯವರ್ಜನ ಶಿಬಿರವು ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು ನೀಡುವ ಒಂದು…

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.