BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾಧಕರು, ಸೋತವರ ಮಾರ್ಗದರ್ಶನ ಪಡೆಯಲಿ
  • ಜ.10, 11: 26ನೇ ವರ್ಷದ ದುರ್ಗಪೂಜೆ
  • ಅಧ್ಯಯನದಿಂದ ಯಶಸ್ಸು ಸಾಧ್ಯ
  • ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು
  • ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ
  • 41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ
  • ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ
  • ೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ದಲಿತರ ಹಣಕ್ಕೆ ಕತ್ತರಿ ಹಾಕಿರುವುದು ದುರದೃಷ್ಟಕರ
ಇತರೆ ಸುದ್ಧಿಗಳು

ತುಮಕೂರು : ದಲಿತರ ಹಣಕ್ಕೆ ಕತ್ತರಿ ಹಾಕಿರುವುದು ದುರದೃಷ್ಟಕರ

By News Desk BenkiyabaleUpdated:March 10, 2021 6:04 pm

ತುಮಕೂರು:

      ದಲಿತರ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತರ ಹಣಕ್ಕೆ ಕತ್ತರಿ ಹಾಕಿರುವುದು ದುರದೃಷ್ಟಕರ ಎಂದು ತಾಲ್ಲೂಕು ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಬೆಳಗುಂಬ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದರು.

      ತಾಲ್ಲೂಕಿನ ಗೂಳೂರಿನಲ್ಲಿ ಬಜೆಟ್‍ನಲ್ಲಿ ಪರಿಶಿಷ್ಟರ ಅಭಿವೃದ್ಧಿ ಅನುದಾನವನ್ನು ಕಡಿತಗೊಳಿಸಿರುವುದಕ್ಕೆ ವಿರೋಧಿಸಿ ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

      ಒಳ ಮೀಸಲಾತಿ ಸೇರಿದಂತೆ ದಲಿತರ ಅಭಿವೃದ್ಧಿಗೆ ಭರಪೂರ ಭರವಸೆಗಳನ್ನು ನೀಡಿದ್ದ ಬಿಜೆಪಿ ಇಂದು ಅನುದಾನವನ್ನು ನಿಗದಿಪಡಿಸುವುದರಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಮುಂದುವರೆದ ಜಾತಿಗಳಿಗೆ ಒಂದು ಸಾವಿರ ಕೋಟಿ ಅನುದಾನ ನೀಡಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳಿಗೆ ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ಬಿಎಸ್‍ವೈ ದಲಿತರಿಗೆ ಅನ್ಯಾಯವನ್ನು ಮಾಡಿದ್ದಾರೆ ಎಂದು ದೂರಿದರು.
ಈ ಹಿಂದೆ ಇದ್ದ ಸಮ್ಮಿಶ್ರವಾಗಲಿ, ಕಾಂಗ್ರೆಸ್ ಸರ್ಕಾರವಾಗಲಿ ದಲಿತರ ಅಭಿವೃದ್ಧಿಗೆ ಅನುದಾನವನ್ನು ನೀಡುವುದರಲ್ಲಿ ಹಿಂದೆ ಬಿದ್ದಿರಲಿಲ್ಲ, ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಬಹುಸಂಖ್ಯಾತ ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ಅಲ್ಪಸಂಖ್ಯಾತರಿಗೆ ಕನಿಷ್ಠ ಅನುದಾನವನ್ನು ನೀಡುವ ಮೂಲಕ ಮಾಡಿರುವ ಅನ್ಯಾಯವನ್ನು ಸರಿಪಡಿಸಿಕೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ತಕ್ಕ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.
ಬಿಜೆಪಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಸಕರು, ಪರಿಶಿಷ್ಟ ಅನುದಾನವನ್ನು ಕಡಿತಗೊಳಿಸಿರುವುದಕ್ಕೆ ಚಕಾರ ಎತ್ತದೇ, ಮೌನವಹಿಸಿರುವುದನ್ನು ನೋಡಿದರೆ, ಬಿಜೆಪಿಯ ಪರಿಶಿಷ್ಟ ಜಾತಿ, ಪಂಗಡದ ಶಾಸಕರು, ಸಚಿವರು ಅಸಹಾ ಯಕರಾಗಿದ್ದಾರೆ, ಸಮುದಾಯದ ಅಭಿವೃದ್ಧಿಯ ಅನುದಾನ ಕಡಿತಗೊಳಿಸಿದರು ತೆಪ್ಪಗಿರುವ ಪರಿಶಿಷ್ಟರ ಹೆಸರಿನಲ್ಲಿ ಶಾಸಕರು, ಸಚಿವರಾಗಿರುವರು, ತಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸಲು ಆಗದೇ ಇದ್ದರೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.

      ಸಿಂಡಿಕೇಟ್ ಮಾಜಿ ಸದಸ್ಯ ಹೆತ್ತೇನಹಳ್ಳಿ ಮಂಜುನಾಥ್ ಮಾತನಾಡಿ ಸಂವಿಧಾನ ಜಾರಿಯಾದ ನಂತರ ಬಂದ ಲಜ್ಜೆಗೇಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತ್ರ, ಜನರ ಕಲ್ಯಾಣಕ್ಕಾಗಿ ಮಂಡಿಸುವ ಬಜೆಟ್‍ನಲ್ಲಿ ಸಾಮಾಜಿಕ ನ್ಯಾಯವನ್ನು ಕಾಪಾಡಲು ವಿಫಲವಾಗಿದ್ದು, ಅಹಿಂದ ವರ್ಗಗಳಿಗೆ ನೇಣು ಹಾಕುವಂತೆ ಆಡಳಿತವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

      ಸಮಾಜದಲ್ಲಿ ಯಾವುದೇ ಉನ್ನತ ಹುದ್ದೆಯನ್ನು ಪಡೆದರು ಕೊನೆಗೆ ಜಾತಿ ದಲಿತರಿಗೆ ಅಂಟುಕೊಂಡಿದೆ, ದಲಿತರು ಆರ್ಥಿಕವಾಗಿ ಸಬಲವಾಗಬೇಕಾದರೆ, ಆರ್ಥಿಕ ಸಮಾನತೆಯ ಬಜೆಟ್ ಮಂಡಿಸಬೇಕು ಆದರೆ ಬಿಎಸ್‍ವೈ ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳಿಗೆ ವಿರೋಧವಾಗಿ ಆಡಳಿತ ನಡೆಸುತ್ತಿದ್ದಾರೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಯಾವ ಪುರುಷಾರ್ಥಕ್ಕಾಗಿ ಅಧಿಕಾರದಲ್ಲಿದ್ದಾರೋ ಗೊತ್ತಿಲ್ಲ, ಸ್ವಾಭಿಮಾನವಿಲ್ಲದ ದಲಿತ, ಹಿಂದುಳಿದ ಶಾಸಕ ಮೌನವಹಿಸಿದ್ದಾರೆ. ಅಹಿಂದ ವರ್ಗಕ್ಕೆ ಜಾತಿ ಸಂಖ್ಯೆ ಆಧಾರದ ಮೇಲಾದರೂ ಅನುದಾನ ನೀಡದ ಬಜೆಟ್ ದಲಿತರಿಗೆ ಮಾರಕವಾಗಿದೆ ಎಂದರು.
ಅಂಬೇಡ್ಕರ್ ಅವರು ಹೇಳಿದಂತೆ ಸ್ವಾಭಿಮಾನವಿಲ್ಲದೇ ಬದುಕಬಾರದು, ಹೋರಾಟದ ಹಕ್ಕು, ಮತದಾನದ ಹಕ್ಕು ನೀಡಿದ್ದಾರೆ, ಅನುದಾನ ನೀಡದೇ ಇರುವುದರ ವಿರುದ್ಧ ಹೋರಾಟ ಮಾಡಬೇಕಾಗಿದೆ, ಸಂವಿಧಾನಾತ್ಮಕವಾಗಿ ನೀಡಿರುವ ಮತದಾನದ ಹಕ್ಕನ್ನು ಅಚ್ಛೇದಿನ್ ನೋಡಿ ಹಾಕಿರುವ ದಲಿತರು, ಭ್ರಷ್ಟಾಚಾರಿ, ದಲಿತ ವಿರೋಧಿ ಸರ್ಕಾರದ ವಿರುದ್ಧ ಚಲಾಯಿಸಲಿದ್ದಾರೆ ಎಂದು ಹೇಳಿದರು.

      ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ ಅಹಿಂದ ವರ್ಗವನ್ನು ಬಜೆಟ್‍ನಲ್ಲಿ ಕಡೆಗಣಿಸಿರುವುದನ್ನು ವಿರೋಧಿಸಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡುವ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ, ಸಾಮಾಜಿಕ ನ್ಯಾಯಕ್ಕೆ ವಿರೋಧಿಯಾಗಿರುವ ಈ ಬಜೆಟ್‍ನಲ್ಲಿ ಕೆಲ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡಿರುವುದು ಸ್ವಾಗಾತಾರ್ಹ ಆದರೆ ಅಹಿಂದ ವರ್ಗವನ್ನು ಕಡೆಗಣಿಸಿರುವುದು ಏಕೆ ಎಂದು ಪ್ರಶ್ನಿಸಿದರು.

      ಪ್ರತಿಭಟನೆಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ನರುಗನಹಳ್ಳಿ ವಿಜಯಕುಮಾರ್, ಜಹೀರ್ ಅಬ್ಬಾಸ್, ಗೂಳೂರು ಗ್ರಾ.ಪಂ.ಅಧ್ಯಕ್ಷ ಕೃಷ್ಣೇಗೌಡ, ಕೆಂಪಹನುಮಣ್ಣ, ಕರೆ ರಂಗಪ್ಪ, ಚಲುವಣ್ಣ ಸೇರಿದಂತೆ ಇತರರಿದ್ದರು.

 

(Visited 3 times, 1 visits today)
Previous Articleಎಡೆಯೂರು ಜಾತ್ರಾ ಮಹೋತ್ಸವ ಯಶಸ್ವಿಗೊಳಿಸಲು ಡಿಸಿ ಸೂಚನೆ
Next Article ‘ಗರ್ಭಿಣಿ ಬಾಲಕಿಯರ ಪುನರ್ವಸತಿಗಾಗಿ ಪ್ರತ್ಯೇಕ ಸಂಸ್ಥೆಗಳ ಪ್ರಾರಂಭಿಸಿ’ – ಡೀಸಿ
News Desk Benkiyabale

Related Posts

ಸಾಧಕರು, ಸೋತವರ ಮಾರ್ಗದರ್ಶನ ಪಡೆಯಲಿ

January 05, 2026 3:47 pm ಇತರೆ ಸುದ್ಧಿಗಳು

ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ

January 05, 2026 3:36 pm ಇತರೆ ಸುದ್ಧಿಗಳು

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

ಸಾಧಕರು, ಸೋತವರ ಮಾರ್ಗದರ್ಶನ ಪಡೆಯಲಿ

January 05, 2026 3:47 pm
ತುಮಕೂರು

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm
ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm
ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm
ಇತರೆ ಸುದ್ಧಿಗಳು

ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ

January 05, 2026 3:36 pm
ಇತರೆ ಸುದ್ಧಿಗಳು

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm
Our Youtube Channel
Our Picks

ಸಾಧಕರು, ಸೋತವರ ಮಾರ್ಗದರ್ಶನ ಪಡೆಯಲಿ

January 05, 2026 3:47 pm

ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ

January 05, 2026 3:36 pm

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಸಾಧಕರು, ಸೋತವರ ಮಾರ್ಗದರ್ಶನ ಪಡೆಯಲಿ

By News Desk BenkiyabaleJanuary 05, 2026 3:47 pm

ಮಧುಗಿರಿ: ಸ್ಪರ್ಧಾಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸುವಾಗ ಒಬ್ಬ ಉತ್ತಮ ಸಾಧಕ ಹಾಗೂ ಪ್ರಯತ್ನ ನಡೆಸಿ ಸೋತವರ ಮಾರ್ಗದರ್ಶನ ಪಡೆದರೆ ಉತ್ತಮ.…

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.