BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಉತ್ತಮ ಅದ್ಯಯನದಿಂದ ಉತ್ತಮ ಭವಿಷ್ಯ: ಶಾಸಕ ಸುರೇಶ್ಬಾಬು
  • ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ
  • ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ
  • ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ
  • ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ
  • ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು
  • ನಾವೆಲ್ಲರೂ ಹಿಂದು ನಾವೆಲ್ಲ ಒಂದು
  • ಸೌಹಾರ್ದ ಸಂಕ್ರಾ0ತಿ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯದ ಸಿಎಂ, ಕೇಂದ್ರ ಗೃಹಸಚಿವರನ್ನು ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನೆ
Trending

ರಾಜ್ಯದ ಸಿಎಂ, ಕೇಂದ್ರ ಗೃಹಸಚಿವರನ್ನು ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನೆ

By News Desk BenkiyabaleUpdated:November 05, 2019 7:09 pm

ತುಮಕೂರು:

      ರಾಜ್ಯ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

      ಜಿಲ್ಲಾಧ್ಯಕ್ಷ ರಾಮಕೃಷ್ಣ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆ ತಯಾರಿಗೆಂದು ಬಿಜೆಪಿ ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ, ಸಮ್ಮಿಶ್ರ ಸರ್ಕಾರವನ್ನು ಕೆಡವಲು ಬಿಜೆಪಿ ಅನುಸರಿಸಿದ ವಾಮಮಾರ್ಗದ ಬಗ್ಗೆ ಯಡಿಯೂರಪ್ಪ ಅವರೇ ಹೇಳಿಕೊಂಡಿದ್ದು, ಅಸಂವಿಧಾನಿಕವಾಗಿ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

        ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂಬ ಏಕೈಕ ಉದ್ದೇಶದಿಂದ ೧೭ ಮಂದಿ ಶಾಸಕರಿಗೆ ಪ್ರಲೋಭನೆ ತೋರಿ, ಮುಂಬೈ ಹಾಗೂ ಚೆನ್ನೆ ನಲ್ಲಿ ಇಟ್ಟ ವಿಚಾರವನ್ನು ಯಡಿಯೂರಪ್ಪ ಹೇಳಿದ್ದಾರೆ, ಇದಕ್ಕೆಲ್ಲ ಬಿಜೆಪಿ ರಾಷ್ಟ್ರೀ ಅಧ್ಯಕ್ಷರು ಹಾಗೂ ಗೃಹ ಸಚಿವರಾಗಿರುವ ಅಮಿತ್ ಶಾ ಅವರ ಕೈವಾಡ ಇರುವುದು ಸತ್ಯವಾಗಿದೆ. ಸರ್ಕಾರವನ್ನು ಬಿಳಿಸಬೇಕೆಂಬ ಉದ್ದೇಶದಿಂದಲೇ ಅನರ್ಹಗೊಂಡಿರುವ ಶಾಸಕರು ಬಿಜೆಪಿಯೊಂದಿಗೆ ಕೈ ಜೋಡಿಸಿರುವುದು ಬಹಿರಂಗಗೊಂಡಿರುವ ವಿಡಿಯೋದಲ್ಲಿ ಬಯಲಾಗಿದೆ ಎಂದರು.

      ಬಿಜೆಪಿ ೧೭ ಮಂದಿ ಶಾಸಕರನ್ನು ಮುಂಬೈನಲ್ಲಿ ಒತ್ತೆಯಾಳಾಗಿ ಎರಡು ಮೂರು ತಿಂಗಳು ಇಟ್ಟುಕೊಂಡು, ಸಮ್ಮಿಶ್ರ ಸರ್ಕಾರವನ್ನು ಬಿಳಿಸಿ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಅನರ್ಹಗೊಂಡಿರುವ ಶಾಸಕರು ತ್ಯಾಗ ಮಾಡಿದ್ದಾರೆ, ಇದೆಲ್ಲ ವಿಚಾರವೂ ರಾಷ್ಟ್ರೀಯ ಅಧ್ಯಕ್ಷರಿಗೆ ಗೊತ್ತಿತ್ತು ಎಂದು ಹೇಳಿರುವ ಯಡಿಯೂರಪ್ಪ ಅವರು ಸುಪ್ರೀಂ ಪ್ರಕರಣ ಇತ್ಯರ್ಥಗೊಂಡ ನಂತರ ಅನರ್ಹರನ್ನು ಮಂತ್ರಿಗಳಾಗನ್ನಾಗಿಸಲಿದೆ ಎಂದು ಅವರು ಆರೋಪಿಸಿದರು.

      ಮಾಜಿ ಶಾಸಕ ರಫೀಕ್ ಅಹ್ಮದ್ ಅವರು ಮಾತನಾಡಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ತ್ಯಾಗ ಮಾಡಿರುವ ಅನರ್ಹ ಶಾಸಕರ ಬಗ್ಗೆ ಬಿಜೆಪಿ ಮುಖಂಡರು ಮಾತನಾಡಬಾರದು ಎಂದು ತಾಕೀತು ಮಾಡಿರುವ ಸಿಎಂ ಯಡಿಯೂರಪ್ಪ ಅವರು, 17 ಸಚಿವ ಸ್ಥಾನಗಳನ್ನು ಇವರಿಗಾಗಿ ಮೀಸಲಿಟ್ಟಿದ್ದಾರೆ, ಬಿಜೆಪಿಯ ಕೇಂದ್ರ ನಾಯಕತ್ವ ಹಾಗೂ ಅನರ್ಹ ಶಾಸಕರು ಸಂವಿಧಾನದ ಕಲಂ 190 ಹಾಗೂ 10ನೇ ಪರಿಚ್ಛೇದವನ್ನು ಉಲ್ಲಂಘಿಸಿದ್ದಾರೆ ಎಂದು ದೂರಿದರು.

      ಸಂವಿಧಾನದ ಉಲ್ಲಂಘಿಸಿ, ಜನರ ಆಯ್ಕೆಗೆ ವಿರುದ್ಧವಾಗಿ ಸರಕಾರವನ್ನು ರಚಿಸುವ ಮೂಲಕ ಪ್ರಜಾ ಪ್ರಭುತ್ವದ ಕಗ್ಗೂಲೆ ಮಾಡಿರುವ ಬಿಜೆಪಿ ಮುಖಂಡರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂವಿಧಾನದ ನಿಯಮವನ್ನು ಮೀರಿದ್ದಾರೆ. ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

      ಅನೈತಿಕವಾಗಿ, ಅಸಂವಿಧಾನಿಕವಾಗಿ, ಪ್ರಜಾಪ್ರಭುತ್ವ ವಿರೋಧಿಯಾಗಿ ಅಧಿಕಾರಕ್ಕೆ ಬಂದಿರುವ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರನ್ನು ತಕ್ಷಣದಿಂದ ವಜಾಗೊಳಿಸಿ, ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಒತ್ತಾಯಿಸಿದರು.

      ಪ್ರತಿಭಟನೆಯಲ್ಲಿ ಮಾಜಿ ಶಾಸಕ ಶಫೀ ಅಹ್ಮದ್, ಆರ್.ನಾರಾಯಣ್, ಉಪಮೇಯರ್ ರೂಪಶ್ರೀ ಶೆಟ್ಟಾಳಯ್ಯ, ಟೂಡಾ ಮಾಜಿ ಅಧ್ಯಕ್ಷ ಶಿವಮೂರ್ತಿ, ರೆಡ್ಡಿಚಿನ್ನಯಲ್ಲಪ್ಪ, ನಾರಾಯಣಮೂರ್ತಿ, ವಾಲೆಚಂದ್ರು, ಹೆಚ್.ಸಿ.ಹನುಮಂತಯ್ಯ, ಆಟೋರಾಜು, ಪುಟ್ಟರಾಜು, ಸುಜಾತ, ಇನಾಯತ್, ಶಕೀಲ್ ಇತರರಿದ್ದರು.

(Visited 36 times, 1 visits today)
Previous Articleಬಸ್ ಅಪಘಾತ:ಮೃತಪಟ್ಟ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ!!
Next Article ತುಮಕೂರು : ಕಸ ಸ್ಥಳಾಂತರಿಸಲು ಪಾಲಿಕೆ ಅಧಿಕಾರಿಗಳಿಗೆ ಮನವಿ!
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು

ಉತ್ತಮ ಅದ್ಯಯನದಿಂದ ಉತ್ತಮ ಭವಿಷ್ಯ: ಶಾಸಕ ಸುರೇಶ್ಬಾಬು

January 19, 2026 3:21 pm
ಇತರೆ ಸುದ್ಧಿಗಳು

ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

January 19, 2026 3:19 pm
ಇತರೆ ಸುದ್ಧಿಗಳು

ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

January 19, 2026 2:26 pm
ಇತರೆ ಸುದ್ಧಿಗಳು

ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ

January 19, 2026 2:25 pm
ಇತರೆ ಸುದ್ಧಿಗಳು

ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ

January 19, 2026 2:24 pm
ಇತರೆ ಸುದ್ಧಿಗಳು

ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು

January 19, 2026 2:20 pm
Our Youtube Channel
Our Picks

ಉತ್ತಮ ಅದ್ಯಯನದಿಂದ ಉತ್ತಮ ಭವಿಷ್ಯ: ಶಾಸಕ ಸುರೇಶ್ಬಾಬು

January 19, 2026 3:21 pm

ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

January 19, 2026 3:19 pm

ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

January 19, 2026 2:26 pm

ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ

January 19, 2026 2:25 pm

ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ

January 19, 2026 2:24 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಉತ್ತಮ ಅದ್ಯಯನದಿಂದ ಉತ್ತಮ ಭವಿಷ್ಯ: ಶಾಸಕ ಸುರೇಶ್ಬಾಬು

By News Desk BenkiyabaleJanuary 19, 2026 3:21 pm

ಚಿಕ್ಕನಾಯಕನಹಳ್ಳಿ: ಚಂಚಲ ಮನಸ್ಸಿನ ಭಾವನೆಗೆ ಕಡಿವಾಣ ಹಾಕುವ ಮೂಲಕ ನೀವು ಅದ್ಯಯನ ಮಾಡಿದರೆ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ ಅದ್ದರಿಂದ ನಿಮ್ಮ…

ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

January 19, 2026 3:19 pm

ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

January 19, 2026 2:26 pm

ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ

January 19, 2026 2:25 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.