ಹುಳಿಯಾರು:

     ಕೇಂದ್ರ ಸರ್ಕಾರ ವಿದ್ಯುತ್ ವಲಯ ವನ್ನು ಖಾಸಗಿಕರಣ ಮಾಡುತ್ತಿ ರುವುದನ್ನು ವಿರೋಧಿಸಿ ಹುಳಿಯಾರು ಪಟ್ಟಣದ ಬೆಸ್ಕಾಂ ನೌಕರರು ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

     ಅಸರ್ಕಾರ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀ ಕರಣಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದು ಇದರಿಂದ ಸಾಕಷ್ಟು ಸಮಸ್ಯೆಯಾಗಲಿದೆ ಎಂದು ದೂರಲಾಯಿತು.

      ಖಾಸಗಿಕರಣದಿಂದ ರೈತರು ಮತ್ತು ಬಡವರ ಮೇಲೆ ದುಷ್ಪರಿಣಾಮ ಬೀರಲಿದೆ. ಅಲ್ಲದೇ ಖಾಸಗೀಕರಣದ ನೀತಿ ಕಾರ್ಮಿಕರಿಗೆ ಮರಣ ಶಾಸನವಾಗಲಿದೆ. ವಿದ್ಯುತ್ ಇಲಾಖೆ ಲಾಭದಲ್ಲಿ ನಡೆಯುತ್ತಿದ್ದರೂ ಸಹ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವ ಕ್ರಮ ಸರಿಯಲ್ಲ. ಸರ್ಕಾರ ಕೂಡಲೇ ಈ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಲಾಯಿತು.

     ಸೆಕ್ಷನ್ ಆಫೀಸರ್ ಉಮೇಶ್ ನಾಯಕ್, ಮೂರ್ತಪ್ಪ ಸೇರಿದಂತೆ 50 ಕ್ಕೂ ಹೆಚ್ಚು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆ ನಂತರ ಕಪ್ಪುಪಟ್ಟಿ ಧರಿಸಿ ಕೆಲಸ ಮುಂದುವರಿಸಿದರು.

(Visited 13 times, 1 visits today)