ತುಮಕೂರು:


ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ತುಮಕೂರು ನಗರದ ವಿದ್ಯಾವಾಹಿನಿ ಸ್ವತಂತ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಸಹನ ಜಿಲ್ಲೆಗೆ ಟಾಪರ್ ಆಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 600ಕ್ಕೆ 595 ಅಂಕಗಳನ್ನು ಪಡೆದಿರುವ ಸಹನ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ಆರನೇ ರ್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ.
ಈಕೆಯು ತುಮಕೂರಿನ ಕುವೆಂಪು ನಗರದ ರಮೇಶ್ ಮತ್ತು ಶಶಿಲಕಾ ದಂಪತಿಗಳ ಪುತ್ರಿಯಾಗಿದ್ದು, ಇವರ ಸಾಧನೆಗೆ ನಗರ ಶಾಸಕ ಜ್ಯೋತಿಗಣೇಶ್ ಅಭಿನಂದನೆ ತಿಳಿಸಿದ್ದಾರೆ.

(Visited 16 times, 1 visits today)