BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • 41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ
  • ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ
  • ೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ
  • ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್
  • ಉತ್ತಮ ಆಡಳಿತ ವಾರ ಕಾರ್ಯಕ್ರಮ
  • ರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಉದ್ಘಾಟನೆ
  • ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ
  • ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೆಸಾರ್ಟ್ ರಾಜಕೀಯ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಗಮನ ಕೊಡಿ
ತುಮಕೂರು ಜಿಲ್ಲಾ ಸುದ್ಧಿಗಳು

ರೆಸಾರ್ಟ್ ರಾಜಕೀಯ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಗಮನ ಕೊಡಿ

By News Desk BenkiyabaleUpdated:January 19, 2019 4:46 pm

ತುಮಕೂರು:

       ರಾಜ್ಯದ 156 ತಾಲೂಕುಗಳಲ್ಲಿ ಬರಗಾಲವಿದ್ದು ಜನ-ಜಾನುವಾರುಗಳು ಕುಡಿಯುವ ನೀರಿಲ್ಲದೆ ನರಳುವಂತಾಗಿದ್ದು ಮೇವಿಲ್ಲದೆ ಜಾನುವಾರುಗಳು ಪರಿತಪಿಸುತ್ತಿವೆ. ಹೀಗಾಗಿ ಕೂಡಲೇ ಗೋಶಾಲೆಗಳನ್ನು ತೆರೆದು ಮೂಕಪ್ರಾಣಿಗಳ ನೆರವಿಗೆ ಬರಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯÀ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದರು. ಜಿಲ್ಲೆಯ ಪಾಲಿನ ಹೇಮಾವತಿ ನಾಲೆಯ 25 ಟಿಎಂಸಿ ನೀರಿನ ಪಾಲಿನಲ್ಲಿ 15 ಟಿಎಂಸಿ ನೀರು ಹರಿಯುತ್ತಿದ್ದು ಲೆಕ್ಕದಲ್ಲಿ ಮಾತ್ರ ತೋರಿಸಲಾಗುತ್ತಿದೆ. ಜಿಲ್ಲೆಯ ಜನಪ್ರತಿನಿಧಿಗಳು ಇಚ್ಛಾಶಕ್ತಿ ತೋರಿ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಮುಂದಾಗಬೇಕೆಂದರು.

      ಬರ ಪರಿಹಾರ ಕಾಮಗಾರಿ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ತುಮಕೂರು ಜಿಲ್ಲೆಯ 10 ತಾಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ರಾಜ್ಯದ ಪರಿಸ್ಥಿತಿಯೂ ಬೇರೆಯಾಗಿಲ್ಲ. ಹೀಗಿದ್ದರೂ ರಾಜಕಾರಣಿಗಳು ರೆಸಾರ್ಟ್ ರಾಜಕೀಯದಲ್ಲಿ ತೊಡಗಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಆರೋಪಿಸಿದರು.

     ಕೃಷಿ ಮತ್ತು ಕೃಷಿಕರು ಬಿಕ್ಕಟ್ಟು ಎದುರಿಸುತ್ತಿದ್ದಾರೆ. ರೈತರು ಕೃಷಿಗಾಗಿ ಹೂಡಿದ ಬಂಡವಾಳವೂ ಬಾರದೆ ಸಮಸ್ಯೆಗಳ ಸುಳಿಯಲ್ಲಿ ಸಿಕ್ಕಿದ್ದಾರೆ. ಐದು ಆರು ವರ್ಷಗಳಿಂದ ಮಳೆ ಬಾರದೆ ಬೆಳೆಯೂ ಸರಿಯಾಗಿ ಕೈಗೆ ಬರುತ್ತಿಲ್ಲ.
ಬೆಳೆಗಳ ಸಂರಕ್ಷಣೆಗಾಗಿ 1500 ಅಡಿ ಬೋರ್‍ವೆಲ್ ಕೊರೆದರೂ ನೀರು ಸಿಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ದೇಶದಲ್ಲಿ 3.5 ಲಕ್ಷ ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕರ್ನಾಟಕದಲ್ಲಿ 19 ಸಾವಿರ ಮಂದಿ ತುಮಕೂರು ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

       ಕೃಷಿ ಮತ್ತು ರೈತರು ಉಳಿಯಲು ಸ್ವಾಮಿನಾಥನ್ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಬೇಕು. ಬಿಜೆಪಿ ಸರ್ಕಾರ ಚುನಾವಣೆಗೂ ಮೊದಲು ತಾವು ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ತರುವುದಾಗಿ ಭರವಸೆ ನೀಡಿತ್ತು. ಆದರೆ ಈಗ ಇದು ಸಾಧ್ಯವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್‍ನಲ್ಲಿ ಮನವಿ ಸಲ್ಲಿಸಿದೆ. ಹಾಗೆಯೇ ರಾಜ್ಯದಲ್ಲಿ ಪ್ರಕಾಶ್ ಕಮ್ಮರಡಿ ವರದಿ ಅನುಷ್ಠಾನ ಮಾಡಿಲ್ಲ. ರಸ್ತೆ ಅಗಲೀಕರಣಕ್ಕಾಗಿ ವಶಪಡಿಸಿಕೊಂಡು ಭೂಮಿಗೆ ವೈಜ್ಞಾನಿಕ ಬೆಲೆ ನೀಡುತ್ತಿಲ್ಲ ಎಂದು ಆರೋಪಿಸಿದರು.

     ಸ್ವರಾಜ್ ಅಭಿಯಾನ ಮತ್ತು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ಸಿ.ಯತಿರಾಜ್ ಮಾತನಾಡಿ ನೀರಾವರಿ, ಹೆದ್ದಾರಿ, ರೈಲ್ವೆ, ಕೈಗಾರಿಕೆ, ವಿದ್ಯುತ್ ಲೈನ್ ಯೋಜನೆಗಳಿಗೆ ರೈತರ ಭೂಮಿಯನ್ನು ವಶಪಡಿಸಿಕೊಳ್ಳುವಾಗ ರೈತರ ಒಪ್ಪಿಗೆ ಆಧಾರಿತ ಭೂಪರಿಹಾರ ನೀಡಿ ಸಾಮಾಜಿಕ ಹಾಗೂ ಪರಿಸರದ ಮೇಲಾಗುವ ದೃಷ್ಪರಿಣಾಮಗಳ ತಡೆಗೆ ವರದಿ ಆಧಾರಿತ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ತೆಂಗು, ಅಡಕೆ ಸೇರಿದಂತೆ ತೋಟಗಾರಿಕಾ ಮತ್ತು ಕೃಷಿ ಬೆಳೆಗಳು ಒಣಗಿ ಹೋಗುತ್ತಿದ್ದು ಅಧಿಕ ಉತ್ಪಾದನಾ ವೆಚ್ಚದಿಂದ ತತ್ತರಿಸಿರುವ ರೈತರಿಗೆ ಉತ್ತಮವಾದ ನಷ್ಟ ಪರಿಹಾರವನ್ನು ತಕ್ಷಣ ನೀಡಬೇಕು ಎಂದು ಆಗ್ರಹಿಸಿದರು.

      ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ  ಕಾರ್ಯದರ್ಶಿ ಬಿ.ಉಮೇಶ್ ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯ ಹಣಬಲದಲ್ಲಿ ನಡೆಯುತ್ತಿದ್ದು ಜನಸಾಮಾನ್ಯರನ್ನು ಕಷ್ಟಗಳನ್ನು ಕೇಳುವ ಪರಿಸ್ಥಿತಿ ಇಲ್ಲವಾಗಿದೆ. ಇಂಥವರನ್ನು ಆಯ್ಕೆ ಮಾಡಿದ ನಮಗೆ ನಾಚಿಕೆಯಾಗುತ್ತಿದ್ದು ನಮ್ಮ ಮುಖಕ್ಕೆ ನಾವೇ ಹೊಡೆದುಕೊಳ್ಳುವ ಪರಿಸ್ಥಿತಿ ಸೃಷ್ಠಿಸಿದ್ದಾರೆ ಎಂದರು. ಸರ್ಕಾರ ಜವಾಬ್ದಾರಿಗಳನ್ನು ವಹಿಸಿಕೊಳ್ಳದೆ ಆಡಳಿತ ಪಕ್ಷದ ಶಾಸಕರು ಸಚಿವ ಸ್ಥಾನಕ್ಕೂ, ಪ್ರತಿಪಕ್ಷದ ಮುಖಂಡ ಮುಖ್ಯಮಂತ್ರಿ ಸ್ಥಾನಕ್ಕೂ ನಡೆಯುವ ಸ್ಪರ್ಧೆಯನ್ನು ಬಿಟ್ಟು ಚುನಾವಣೆಗೆ ಮುಂಚೆ ನೀಡಿದ ಪ್ರನಾಳಿಕೆಯ ಆಧಾರದಲ್ಲಿ ಜವಾಬ್ದಾರಿಯುತ ಕಾರ್ಯಗಳನ್ನು ನಿರ್ವಹಿಸಬೇಕು. ಆಗ ಮಾತ್ರವೇ ಜನಪ್ರತಿನಿಧಿಗಳಲ್ಲಿ ನಿಜವಾದ ಜವಾಬ್ದಾರಿ ಬರುತ್ತದೆ ಎಂದರು.

      ಪ್ರಾಂತ ರೈತ ಸಂಘ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ ಮಾತನಾಡಿ ಬಗರ್‍ಹುಕುಂ ಸಾಗುವಳಿದಾರರು ಹಾಲಿ ನಮೂನೆ 57ರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಸಲ್ಲಿಸುವಾಗ ಷರತ್ತು ಮತ್ತು ಕುಂಟು ನೆಪ ನೀಡಿ ಅರ್ಜಿ ಹಾಕುವುದನ್ನು ತಪ್ಪಿಸದೆ ಸಾಗುವಳಿದಾರರು ನೀಡುವ ಅರ್ಜಿಗಳನ್ನು ಸ್ವೀಕರಿಸಿ ಸ್ವೀಕೃತಿ ನೀಡಬೇಕು ಎಂದು ಆಗ್ರಹಿಸಿದರು.

      ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ,1982ರಲ್ಲಿ ಇದೇ ಜನವರಿ 19ರಂದು ನಡೆದ ಮೊದಲ ಕಾರ್ಮಿಕ ರೈತ ಕೃಷಿ ಕೂಲಿಕಾರ ಐಕ್ಯ ಹೋರಾಟದಲ್ಲಿ ಐದು ಜನ ಸಂಗಾತಿಗಳು ಪೊಲೀಸ್ ದೌರ್ಜನ್ಯಕ್ಕೆ ಬಲಿಯಾಗಿದ್ದರು. ಇಂಥ ಹಿನ್ನೆಲೆಯಿರುವ ಹೋರಾಟದ ಭಾಗವಾಗಿ ಪ್ರತಿವರ್ಷ ಇಂದು ರೈತ-ಕಾರ್ಮಿಕ ಸೌಹಾರ್ದ ದಿನವನ್ನಾಗಿ ಆಚರಿಸಿ ರೈತರ ಹೋರಾಟಗಳಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ರೈತ-ಕಾರ್ಮಿಕರ ಸಖ್ಯತೆಗಳು ಬಲಿಷ್ಠಗೊಂಡರೆ ಮಾತ್ರವೇ ದೇಶದ ಅಭಿವೃದ್ಧಿ ಮತ್ತು ನಮ್ಮ ಉಳಿವು ಎಂದರು.

      ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರೊ.ಕೆ.ದೊರೈರಾಜ್ ಮಾತನಾಡಿದರು. ಸಿಐಟಿಯು ಮುಖಂಡರಾದ ನೌಷಾದ್ ಸೆಹಗನ್, ಎನ್.ಕೆ.ಸುಬ್ರಮಣ್ಯ, ಖಲೀಲ್, ಶಂಕರಪ್ಪ, ಟಿ.ಎಂ.ಗೋವಿಂದರಾಜು ಹಾಜರಿದ್ದರು.

(Visited 18 times, 1 visits today)
Previous Articleಫೆ.2, 3ರಂದು ತುಮಕೂರಿನಲ್ಲಿ ಬೃಹತ್ ಉದ್ಯೋಗ ಮೇಳ
Next Article ಶ್ರೀಗಳ ಆರೋಗ್ಯದಲ್ಲಿ ಗಣನೀಯ ಬದಲಾವಣೆ : ಎಸ್.ಪಿ.ಮುದ್ದ ಹನುಮೇಗೌಡ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm
ಇತರೆ ಸುದ್ಧಿಗಳು

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm
ಇತರೆ ಸುದ್ಧಿಗಳು

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm
ಇತರೆ ಸುದ್ಧಿಗಳು

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm
ಇತರೆ ಸುದ್ಧಿಗಳು

ಉತ್ತಮ ಆಡಳಿತ ವಾರ ಕಾರ್ಯಕ್ರಮ

January 02, 2026 2:19 pm
ಇತರೆ ಸುದ್ಧಿಗಳು

ರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಉದ್ಘಾಟನೆ

January 02, 2026 1:53 pm
Our Youtube Channel
Our Picks

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm

ಉತ್ತಮ ಆಡಳಿತ ವಾರ ಕಾರ್ಯಕ್ರಮ

January 02, 2026 2:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

By News Desk BenkiyabaleJanuary 02, 2026 3:50 pm

ತುಮಕೂರು: ದೇಶಕ್ಕೆ ಸ್ವಾತಂತ್ರ ಬಂದು ೭೮ ವರ್ಷ ಕಳೆದರು ಸಂವಿಧಾನದ ಅರ್ಟಿಕಲ್ ೨೧(ಎ)ಅಡಿಯಲ್ಲಿ ದೇಶದ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣ…

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.