ತುಮಕೂರು:

      ಹ್ಯಾಟ್ರಿಕ್ ಹೀರೋ ನಟ ಶಿವರಾಜ್‍ಕುಮಾರ್ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶಿವೈಕ್ಯರಾದ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ.

      ಶಿವರಾಜ್‍ಕುಮಾರ್ ಅವರು ಗದ್ದುಗೆ ದ್ವಾರದ ಮುಂದೆ ಕೆಲಕಾಲ ಕೂತು ನಮಸ್ಕರಿಸಿದರು. ಬಳಿಕ ಹೊಸ ಮಠಕ್ಕೆ ಬಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. 

       ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಶಿವಣ್ಣ, “ಶಿವಕುಮಾರ ಶ್ರೀಗಳು ದೂರವಾದಾಗ ನಾನು ವಿದೇಶದಲ್ಲಿ ಇದ್ದೆ. ಹಾಗಾಗಿ ಬರಲು ಆಗಲಿಲ್ಲ. ಶ್ರೀಗಳ ಮೇಲೆ ಪ್ರೀತಿ ಹಾಗೂ ನಂಟು ಇತ್ತು. ಹಾಗಾಗಿ ಇಂದು ಬಂದು ಗದ್ದುಗೆ ದರ್ಶನ ಪಡೆದಿದ್ದೇನೆ” ಎಂದರು. ಅಲ್ಲದೇ ನಾನು ಇನ್ನು ಮುಂದೆ ಬರುತ್ತಿರುತ್ತೇನೆ. ಶಿವಕುಮಾರ ಶ್ರೀಗಳು ಇನ್ನೂ ನಮ್ಮ ಜೊತೆಯೇ ಇದ್ದಾರೆ ಎನ್ನುವ ಫೀಲ್ ಆಗುತ್ತಿದೆ ಎಂದು ಪ್ರತಿಕ್ರಿಯಿಸಿದರು. ಈ ನಡುವೆ ಎಂದಿನಂತೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು.

(Visited 34 times, 1 visits today)