ತುಮಕೂರು :


ಶಿವಕುಮಾರ ಸ್ವಾಮೀಜಿಯವರ 115ನೇ ಜನ್ಮದಿನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಏ.1 ನಡೆಯುತ್ತಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದರೂ ತಪ್ಪಾಗಲಾರದು. ಈ ಜಯಂತಿ ಉತ್ಸವ ರೀತಿಯಲ್ಲಿ ನಡೆಯಬೇಕು. ಕಾರ್ಯಕ್ರಮಕ್ಕೆ ಸುಮಾರು ಒಂದೂವರೆ ಎರಡು ಲಕ್ಷ ಜನ ಬರುವ ನಿರೀಕ್ಷೆಯಿದೆ. ಆಗಾಗಿ ನಮ್ಮ ಎಲ್ಲ ಪೊಲೀಸ್ ಇಲಾಖೆ ಎಲ್ಲ ರೀತಿಯ ಭದ್ರತೆಯನ್ನು ಮಾಡಿಕೊಂಡಿದೆ. ಬರುವ ಎಲ್ಲ ಭಕ್ತಾದಿಗಳಿಗೆ ಪ್ರಸಾದ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಸಚಿವ ಅಮಿತ್ ಶಾ ಅವರು ಏ.1ರ 10.30ರ ಸಮಯಕ್ಕೆ ಶ್ರೀಮಠಕ್ಕೆ ಆಗಮಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.


ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಈ ಕ್ಷೇತ್ರದ ಮಹಿಮೆಯೇ ಅಂತದ್ದು, ರಾಜ್ಯದ ಎಲ್ಲ ಮಠದ ಮಠಾಧೀಶರು ಆಗಮಿಸಲಿದ್ದಾರೆ. ಈ ಮಠ ಎಲ್ಲ ಜಾತಿಮತಗಳನ್ನು ಮೀರಿದ್ದು ಎಂದರು. ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಆದಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಡಳಿತ ಪಕ್ಷದ ಎಲ್ಲ ರಾಜಕೀಯ ನಾಯಕರು ಹಾಗೂ ವಿರೋಧ ಪಕ್ಷದ ನಾಯಕರು, ಮುಖಂಡರು ಬರಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಹಾಗೂ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಪರಿಶೀಲನೆ ನಡೆಸಿದರು.
ಶ್ರೀಗಳ ಗದ್ದುಗೆ ಮಂದಿರದ ಸುತ್ತಮುತ್ತ ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು. ಎಸ್‍ಪಿಜೆ ಭದ್ರತಾ ಪಡೆಯಿಂದ ತಪಾಸಣೆ ನಡೆಸಲಾಯಿತು.

(Visited 9 times, 1 visits today)