ತುಮಕೂರು : ಸಿದ್ದಾರ್ಥ ಹಾರ್ಟ್ ಕೇರ್ ಸೆಂಟರ್ ನಲ್ಲಿ ಅಪರೂಪದ ಕೀಹೋಲ್ ಹಾರ್ಟ್ ಸರ್ಜರಿಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.

ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಹಾರ್ಟ್ ಕೇರ್ ಸೆಂಟರ್ ಮುಖ್ಯಸ್ಥ ಡಾ. ತಮೀಮ್ ಅಹಮದ್ ಅವರು ಆಸ್ಪತ್ರೆ ಮುಖ್ಯಸ್ಥ ಡಾ. ಜಿ. ಪರಮೇಶ್ವರ ಅವರ ಸಹಕಾರ ಪ್ರೋತ್ಸಾಹ ದೊಂದಿಗೆ ಜಿಲ್ಲೆಯ ಬೆಳ್ಳಾವಿಯ ಸಾಮಾನ್ಯ ರೈತರಿಗೆ ಈ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ್ದು ಹಾರ್ಟ್ ಬೀಟ್ಸ್ ಮೂಲಕ ಒಂದು ಉಸಿರಾಟದೊಂದಿಗೆ ಬೈಪಾಸ್ ಸರ್ಜರಿ ಮಾಡಲಾಗಿದೆ ಎಂದು ತಿಳಿಸಿದರು.

ರೈತ ಶಿವಕುಮಾರ್ ಮಾತನಾಡಿ, ಆಸ್ಪತ್ರೆ ವೈದ್ಯರ ತಂಡ ಧೈರ್ಯ ತುಂಬಿ ನಂತರ ಶಸ್ತ್ರಚಿಕಿತ್ಸೆ ಮಾಡಲಾಯಿತು. ಮೊದಲಿನಂತೆ ಆರೋಗ್ಯ ಸುಧಾರಿಸುತ್ತಿದೆ. ವೈದ್ಯರ ತಂಡಕ್ಕೆ ನಾನು ಅಭಾರಿಯಾಗಿದ್ದೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ಡಾ. ಪ್ರಭಾಕರ್, ಡಾ. ಮಹಾಪಾತ್ರ, ಡಾ. ಪಿ. ಕೆ. ದೇವದಾಸ್ ಇದ್ದರು.

(Visited 156 times, 1 visits today)