BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್
  • ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ
  • ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ
  • ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ
  • ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ
  • ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ ಸ್ಥಾಪನೆ ಕೈಬಿಡುವಂತೆ ಸಿಪಿಐ ಆಗ್ರಹ
  • ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ
  • ‘ಸ್ಥಳೀಯ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉಜ್ವಲ ಭವಿಷ್ಯ’
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಿರಾ ಉಪಚುನಾವಣೆ ಹಿನ್ನೆಲೆ : ಇಂದಿನಿಂದ ಪ್ರತಿಯೊಬ್ಬರ ಮನೆಬಾಗಿಲಿಗೆ ಮತಗಟ್ಟೆ!!
Trending

ಶಿರಾ ಉಪಚುನಾವಣೆ ಹಿನ್ನೆಲೆ : ಇಂದಿನಿಂದ ಪ್ರತಿಯೊಬ್ಬರ ಮನೆಬಾಗಿಲಿಗೆ ಮತಗಟ್ಟೆ!!

By News Desk BenkiyabaleUpdated:October 24, 2020 6:24 pm

ತುಮಕೂರು : 

      ಶಿರಾ ಕ್ಷೇತ್ರದ ಐದು ಸಾವಿರ ಮತದಾರರಿಗೆ ಮನೆ ಬಾಗಿಲಿಗೆ ಬರುವ ಮತಗಟ್ಟೆಯಲ್ಲಿ ಮತದಾನ ಮಾಡುವ ಅವಕಾಶ ಸಿಗಲಿದೆ. ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಸಲ ಇವರ ಮನೆ ಬಾಗಿಲಿಗೆ ಮತಗಟ್ಟೆ ಹೋಗುತ್ತಿದೆ, ಅದೂ ಚುನಾವಣೆ ಮತದಾನ ದಿನಾಂಕ ಇನ್ನೂ ವಾರ ಇರುವ ಮೊದಲೇ ಇವರೆಲ್ಲ ಅವರಿಗೆ ಬೇಕಾದವರಿಗೆ ಮತ ಹಾಕಲಿದ್ದಾರೆ. ಇದು ಅಂಚೆ ಮತದಾನಕ್ಕಿಂತಲು ಭಿನ್ನವಾಗಿದೆ ಎಂಬುದು ಕುತೂಹಲಕಾರಿ ವಿಷಯ.

      ಪ್ರತಿ ಮನೆಗೂ ಮತಗಟ್ಟೆಯೊಂದಿಗೆ ಚುನಾವಣಾ ಸಿಬ್ಬಂದಿ ತೆರಳಿ ಮತ ಹಾಕಿಸಿಕೊಂಡು ಬರಲಿದ್ದಾರೆ. ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗ ಈ ನಿರ್ಧಾರಕ್ಕೆ ಬಂದಿದೆ.

      ಕೋವಿಡ್-19 ಸಂಕಷ್ಟದಲ್ಲಿ ಮೊದಲಬಾರಿಗೆ ರಾಜ್ಯದಲ್ಲಿ ಎದುರಾಗಿರುವ ಉಪಚುನಾವಣೆಯಲ್ಲಿ ಕೋವಿಡ್ ಪಾವಿಟಿವ್ ವ್ಯಕ್ತಿ, 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಸುಗಮವಾಗಿ ಮತ ಚಲಾಯಿಸಲು ಚುನಾವಣಾ ಆಯೋಗ ಇಂತಹ ಅವಕಾಶ ನೀಡಿರುವುದು ಮತದಾರರ ಮೆಚ್ಚುಗೆಗೆ ಪಾತ್ರವಾಗಿದೆ.

      ಸಿರಾ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 3ರಂದು ನಡೆಯುತ್ತಿರುವ ಮತದಾನಕ್ಕೆ ಮೊದಲೇ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸಂಪೂರ್ಣ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ.

      ಈ ಬಗ್ಗೆ ಎರಡೂ ವಿಧಾನಸಭಾ ಕ್ಷೇತ್ರದಲ್ಲಿ ಸಿಬ್ಬಂದಿಗಳಿಗೆ ತರಬೇತಿ ನೀಡಿದ್ದು, ಇದಕ್ಕೂ 15 ದಿನಗಳ ಮೊದಲೇ ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಂಡುಬರುವ ಕೋವಿಡ್ ಪಾಸಿಟಿವ್, 80ವರ್ಷ ಮೇಲ್ಪಟ್ಟ ಹಾಗೂವಿಕಲಚೇತನರ ಮಾಹಿತಿಯನ್ನು ಚುನಾವಣಾಧಿಕಾರಿಗಳಿಗೆ ನೀಡಿ, ಅವರಲ್ಲಿ ಸ್ವ-ಇಚ್ಛೆಯಿಂದ ಮತಗಟ್ಟೆ ಕೇಂದ್ರಕ್ಕೆ ಖುದ್ದಾಗಿ ಬಂದು ಮತದಾನದಂದೇ ಮತ ಚಲಾಯಿಸಲು ಒಪ್ಪಿರುವ ಹಾಗೂ ತಿರಸ್ಕರಿಸಿರುವ ಮತದಾರರ ಪಟ್ಟಿಯನ್ನು ನೀಡಿ, ಅಂತಿಮವಾಗಿ ಪಟ್ಟಿ ತಯಾರಿಸಲಾಗಿದೆ.

      ಇದೇ ತಿಂಗಳ 25 ರಿಂದ 27ರವರೆಗೆ ಮೊದಲನೇ ಸುತ್ತಿನ ಮತದಾನ ನಡೆಯಲಿದ್ದು, ದಿ:29 ರಿಂದ 31ರವೆರೆಗೆ ಎರಡನೇ ಸುತ್ತಿನಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

       ಪ್ರತಿ ಪತಗಟ್ಟೆಯಲ್ಲೂ ಮತಗಟ್ಟೆ ಹಂತದ ಅಧಿಕಾರಿಗಳು ಸಂಬಂಧಿಸಿದ ಮತದಾರರಿಗೆ ಮೊದಲೇ ತಿಳುವಳಿಕೆ ಪತ್ರ ತಲುಪಿಸಿದ್ದು, ಅದರಲ್ಲಿ ಮತದಾನ ಅಧಿಕಾರಿಗಳು ಮನೆಗೆ ಬರುವ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಲಾಗಿದೆ. ಅದರಂತೆ ಮತದಾರರು ಮನೆಯಲ್ಲಿ ಹಾಜರಿದ್ದು ನಿಯಮಗಳ ಅನುಸಾರ ಘೋಷಣಾ ಪತ್ರಕ್ಕೆ ಸಹಿ ಹಾಕಿ, ವಯಸ್ಸಿನ ದಾಖಲೆ ಹಾಗೂ ಸೂಕ್ತ ಗುರುತಿನ ದಾಖಲೆ ಸಲ್ಲಿಸಿ, ಮತದಾನ ಮಾಡಬಹುದಾಗಿದೆ.ಪ್ರತಿ ಮತದಾರನಿಗೂ 10-12 ನಿಮಿಷ ಸಮಯ ನಿಗದಿ ಮಾಡಿದ್ದು, ಮತದಾನದ ಎಲ್ಲಾ ಹಂತದ ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ.

      ತಂಡದಲ್ಲಿ ಇಬ್ಬರು ಮತದಾನ ಅಧಿಕಾರಿಗಳು, ಬಿಎಲ್‍ಓ, ಒಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ವಿಡಿಯೋಗ್ರಾಫರ್ ಸೇರಿದಂತೆ 5 ಜನ ಸಿಬ್ಬಂದಿ ಇರುವರು. ಈ ಸಂದರ್ಭದಲ್ಲಿ ಕೋವಿಡ್ ಸಂಬಂಧಿಸಿದಂತೆ ಸರ್ಕಾರ ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಕಡ್ಡಾಯ.ಒಂದು ತಂಡಕ್ಕೆ 150 ಮತದಾರರ ಪಟ್ಟಿ ನೀಡಲಿದ್ದು, ಪ್ರತಿದಿನ 50 ಮತದಾರರಿಂದ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

      ಅಂದಿನ ಮತದಾನದ ಬಗ್ಗೆ ಅಂದು ಸಂಜೆಯೇ ಮಾಹಿತಿ ನೀಡುವುದು. ಒಂದು ವೇಳೆ ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಮತದಾರ ಹಾಜರಿರಲಿಲ್ಲವಾದರೆ, ಮತ್ತೊಂದು ಸುತ್ತಿನಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಿದ್ದು, ಅಂದೂ ಸಹ ಮತದಾನ ಮಾಡದಿದ್ದರೆ ನವೆಂಬರ್ 3 ರಂದು ನಡೆಯುವ ಮತದಾನ ಸಂದರ್ಭದಲ್ಲಿ ಮತದಾನ ಮಾಡಲು ಅರ್ಹತೆಯನ್ನು ಕಳೆದುಕೊಳ್ಳುವರು.

      ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಿರುವ ಚುನಾವಣಾ ಆಯೋಗ, ಇಂತಹ ಮತದಾರರಿಗೆ ನೀಡುವ ಮತಪತ್ರಗಳನ್ನು ಪೆÇೀಸ್ಟಲ್ ಬ್ಯಾಲೆಟ್ (ಅಂಚೆ ಮತಪತ್ರ) ಎಂದು ಪರಿಗಣಿಸಿ, ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ PB PWD, PB 80+ ಎಂಬ SEAL ಹಾಕಲಾಗುತ್ತದೆ.

      ಕೋವಿಡ್ ಪಾಸಿಟಿವ್ ಬಂದಿರುವ ವ್ಯಕ್ತಿಗೂ ಮತದಾನಕ್ಕೆ ಅವಕಾಶ ಕಲ್ಪಿಸಿದ್ದು, ಒಬ್ಬರು ಆರೋಗ್ಯ ಸಿಬ್ಬಂದಿಯ, ಪಿಪಿಇ ಕಿಟ್ ಧರಿಸಿ, ಸುರಕ್ಷತಾ ಕ್ರಮಗಳೊಂದಿಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಈ ರೀತಿಯ ಮತದಾನ ವೇಳೆ ಎಲ್ಲಾ ಮತದಾರರು ಮತ್ತು ಚುನಾವಣಾ ಸಿಬ್ಬಂದಿ ಎಸ್.ಓ.ಪಿ. (ಪ್ರಮಾಣಿತ ಕಾರ್ಯಾಚರಣಾ ವಿಧಾನ) ಅನುಸರಿಸಬೇಕು.ಒಂದು ವೇಳೆ ಮತದಾನದ ಸಂದರ್ಭದಲ್ಲಿ ಮಳೆ ಸುರಿಯುತ್ತಿದ್ದರೆ, ಅದನ್ನು ವಿಡಿಯೋ ಚಿತ್ರೀಕರಣ ಮಾಡಿ, ಮನೆಯ ಒಳಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

      ಸಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 330 ಮತಗಟ್ಟೆಗಳಲ್ಲಿ 4941 ಮತದಾರರು ಹಿರಿಯ ನಾಗರಿಕರು, 3566 ವಿಕಲಚೇತನರು ಹಾಗೂ 200 ಮಂದಿ ಮತದಾರರು ಕೋವಿಡ್-19 ಪಾಸಿಟಿವ್ ವ್ಯಕ್ತಿಗಳನ್ನು ಗುರುತಿಸಿದ್ದು, ಅವರಲ್ಲಿ 2790 ಹಿರಿಯ ನಾಗರಿಕರು, 2093 ಮಂದಿ ವಿಕಲಚೇತನರು, 136 ಮಂದಿ ಕೋವಿಡ್ ಬಾಧಿತ ಮತದಾರರು ಸೇರಿದಂತೆ ಒಟ್ಟು 5019 ಮಂದಿ ತಾವಿರುವಲ್ಲಿಯೇ ಮತದಾನ ಮಾಡುತ್ತಿದ್ದು, ಈ ಬಾರಿಯ ಉಪಚುನಾವಣೆಯ ವಿಶೇಷವಾಗಿದೆ.

(Visited 6 times, 1 visits today)
Previous Articleಚಿ.ನಾ.ಹಳ್ಳಿ : ಘನತ್ಯಾಜ್ಯ ವಸ್ತು ನಿರ್ವಹಣೆ ವಿಧಿ ಪಾಲಿಸದವರಿಗೆ ದಂಡ!!
Next Article ಹುಳಿಯಾರಿನಲ್ಲಿ ಹಬ್ಬದ ಖರೀದಿ ಭರಾಟೆ : ಅಂತರ ಮರೆತ ಜನ
News Desk Benkiyabale

Related Posts

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು

‘ಸ್ಥಳೀಯ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉಜ್ವಲ ಭವಿಷ್ಯ’

November 06, 2025 2:49 pm ತುಮಕೂರು

ತುಮಕೂರು ವಿ.ವಿ.ಗೆ ಡಾ. ಶಿವಕುಮಾರ ಸ್ವಾಮಿಗಳ ಹೆಸರಿಡುವಂತೆ ಡಾ. ಡಿ.ಎನ್.ಯೋಗೀಶ್ವರಪ್ಪ ಆಗ್ರಹ

November 06, 2025 2:47 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm
ಇತರೆ ಸುದ್ಧಿಗಳು

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm
ಇತರೆ ಸುದ್ಧಿಗಳು

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm
ಇತರೆ ಸುದ್ಧಿಗಳು

ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ

November 07, 2025 4:08 pm
ಇತರೆ ಸುದ್ಧಿಗಳು

ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ

November 07, 2025 4:07 pm
ಇತರೆ ಸುದ್ಧಿಗಳು

ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ ಸ್ಥಾಪನೆ ಕೈಬಿಡುವಂತೆ ಸಿಪಿಐ ಆಗ್ರಹ

November 06, 2025 3:21 pm
Our Youtube Channel
Our Picks

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm

ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ

November 07, 2025 4:08 pm

ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ

November 07, 2025 4:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

By News Desk BenkiyabaleNovember 07, 2025 4:52 pm

ತುಮಕೂರು: ತುಮಕೂರು ವಿಶ್ವ ವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನ ಪ್ರವಾಹದ ಸಂಕೇತವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬಣ್ಣಿಸಿದ್ದಾರೆ. ತುಮಕೂರು…

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm

ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ

November 07, 2025 4:08 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.