ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಗೆಲುವು ಸಾಧಿಸಿದ್ದೇನೆಂಬ ಸಂತಸದಲ್ಲಿ ಇದು ಬಸವರಾಜುರವರ ಅಭೂತಪೂರ್ವ ಗೆಲುವು ಎಂದೆಲ್ಲಾ ಮಾತನಾಡಿಕೊಳ್ಳುತ್ತಿರುವ ಬಿಜೆಪಿಗರು ಒಮ್ಮೆ ಆಲೋಚಿಸಬೇಕಿದೆ. ಈ ಗೆಲುವಿನ ಹಿಂದೆ ದೇವೇಗೌಡರ ವಿರೋಧಿ ಅಲೆ ಬಹುಮುಖ್ಯವಾಗಿ ಕಂಡುಬರುತ್ತಿದ್ದು, ಅದರೊಟ್ಟಿಗೆ ಮೋದಿಯ ಅಲೆ, ಭಕ್ತರ ಮುಗ್ಧತೆ ಗೆಲುವಿಗೆ ಸೋಪಾನವಾಗಿದೆ ಎಂದರೂ ತಪ್ಪಾಗಲಾರದು. 4 ಬಾರಿ ಸಂಸದರಾಗಿದ್ದ ಜಿ.ಎಸ್.ಬಸವರಾಜು ಜಿಲ್ಲೆಯ ಶಾಶ್ವತ ಅಭಿವೃದ್ಧಿಗಳೆಡೆ ಗಮನಹರಿಸಿಲ್ಲವೆಂಬ ಆಪಾದನೆಯಿಂದ ಹೊರತಾಗಲಿಲ್ಲವಾದರೂ ದೇವೇಗೌಡರನ್ನ ಸೋಲಿಸಿಯೇ ತೀರಬೇಕೆಂಬ ಮನೋಭಾವವುಳ್ಳ ಗೌಡರ ವಿರೋಧಿ ಬಣಗಳು ಬಿಜೆಪಿಯ ಬಸವರಾಜುಗೆ ಆಸರೆಯಾಗಿ ಬೆಂಬಲಿಸಿದರು. ಗೌಡರ ವಿರೋಧದ ಅಲೆಯಲ್ಲಿ ತೇಲಿ ಬಂದಿರುವ ಬಸವರಾಜು, ಮಾಜಿ ಪ್ರಧಾನಿಯ ವಿರುದ್ಧ ಆಯ್ಕೆಯಾಗಿ ಬಂದ ಅಭ್ಯರ್ಥಿ ಎಂಬ ಬೃಹತ್ ಹಣೆಪಟ್ಟಿಯನ್ನ ಕಟ್ಟಿಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಮಾಜಿ ಪ್ರಧಾನಿಯನ್ನ ಸೋಲಿಸಿದ್ದ ಸಂಸದರೆಂಬ ಅಭಿಮಾನ…
ಮುಂದೆ ಓದಿ...