BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್
  • ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ
  • ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ
  • ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ
  • ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ
  • ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ
  • ವೃದ್ಧಿ ಕಾಮತ್ ರಂಗಪ್ರವೇಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 6938341 ಮಾನವ ದಿನಗಳ ಸೃಜನೆ
Trending

ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 6938341 ಮಾನವ ದಿನಗಳ ಸೃಜನೆ

By News Desk BenkiyabaleUpdated:February 23, 2021 6:29 pm

      ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ 10 ತಾಲ್ಲೂಕುಗಳಿಂದ 2020-21ನೇ ಸಾಲಿನ ಜನವರಿ ಅಂತ್ಯದ ವೇಳೆಗೆ 6938341 ಮಾನವ ದಿನಗಳು ಸೃಜನೆಯಾಗಿವೆ.

ವೈಯಕ್ತಿಕ ಫಲಾನುಭವಿಗಳಿಗೆ ಆದ್ಯತೆಃ

      ನರೇಗಾ ಯೋಜನೆಯಡಿ ವೈಯಕ್ತಿಕ ಪಲಾನಭವಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಈಗಾಗಲೇ ಚಾಲನೆಯಲ್ಲಿರುವ ಕೃಷಿ ಹೊಂಡ, ಕಂದಕಬದು, ಕೃಷಿ ಅರಣ್ಯ, ತೋಟಗಾರಿಕೆ ಬೆಳೆಗಳು, ರೇಷ್ಮೆ ಕೃಷಿ, ಏರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ, ಜಾನುವಾರು ಶೆಡ್ / ಕೋಳಿ ಶೆಡ್ / ಕುರಿ ಶೆಡ್/ ಹಂದಿ ಶೆಡ್ ನಿರ್ಮಾಣ ಕಾಮಗಾರಿಗಳು ಅನುಷ್ಟಾನದಲ್ಲಿವೆ.

ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಖಾತರಿಃ

      ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ ಅಕುಶಲ ಕಾರ್ಮಿಕರ ಉದ್ಯೋಗಕ್ಕಾಗಿ ಉದ್ಯೋಗ ಚೀಟಿ ಹೊಂದಿ, ಬೇಡಿಕೆ ಸಲ್ಲಿಸುವ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ (ಬರಪೀಡತ ಪ್ರದೇಶಗಳಲ್ಲಿ 150 ದಿನಗಳು) ಉದ್ಯೋಗ ಖಾತರಿ ನೀಡಲಾಗುವುದಲ್ಲದೆ ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ ಪಾವತಿ (ದಿನಕ್ಕೆ 275) ಮಾಡಲಾಗುವುದು. ಉದ್ಯೋಗ ಚೀಟಿ ಇಲ್ಲದವರು ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ನಮೂನೆ-1 ರಲ್ಲಿ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಚೀಟಿ ಪಡೆಯಬಹುದಾಗಿದೆ.

ಕಳೆದ ಸಾಲಿನಲ್ಲಿ 388213 ಉದ್ಯೋಗ ಚೀಟಿ ವಿತರಣೆಃ

      ಜಿಲ್ಲೆಯಲ್ಲಿ ಕಳೆದ 2019-20ನೇ ಸಾಲಿನ ಆರ್ಥಿಕ ವರ್ಷದಲ್ಲಿ ಒಟ್ಟು 388213 ಉದ್ಯೋಗ ಚೀಟಿಗಳನ್ನು ಗ್ರಾಮ ಪಂಚಾಯಿತಿವಾರು ವಿತರಣೆ ಮಾಡಲಾಗಿದ್ದು, ಇದರಲ್ಲಿ ಉದ್ಯೋಗ ಚೀಟಿ ಪಡೆದ ಪರಿಶಿಷ್ಟ ಜಾತಿಯ 61761, ಪರಿಶಿಷ್ಟ ವರ್ಗದ 28399 ಹಾಗೂ ಇತರೆ ವರ್ಗದ 298042 ಸೇರಿದಂತೆ ಒಟ್ಟು 388202 ಕುಟುಂಬಗಳು ನರೇಗಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗಿದ್ದಾರೆ. ಈ ಪೈಕಿ 203330 ಮಹಿಳಾ ಅಕುಶಲ ಕೂಲಿ ಕಾರ್ಮಿಕರು ನರೇಗಾ ಯೋಜನೆಯ ಅನುಕೂಲ ಪಡೆದುಕೊಂಡಿದ್ದಾರೆ.

5409178 ಮಾನವ ದಿನಗಳ ಸೃಜನೆಃ

      ನರೇಗಾ ಯೋಜನೆಯಡಿ 2019-20ನೇ ಆರ್ಥಿಕ ವರ್ಷದಲ್ಲಿ ಚಿ.ನಾ.ಹಳ್ಳಿಯಲ್ಲಿ 309519, ಗುಬ್ಬಿ-293936, ಕೊರಟಗೆರೆ-344215, ಕುಣಿಗಲ್-941497, ಮಧುಗಿರಿ-1061844, ಪಾವಗಡ-645328, ಶಿರಾ-645328, ತಿಪಟೂರು-547789, ತುಮಕೂರು-206134 ಹಾಗೂ ತುರುವೇಕೆರೆ ತಾಲೂಕಿನಲ್ಲಿ 733553 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 5409178 ಮಾನವ ದಿನಗಳು ಸೃಜನೆಯಾಗಿದ್ದು, ಒಟ್ಟು 48012 ವೈಯಕ್ತಿಕ ಮತ್ತು ಸಮುದಾಯ ಆಧಾರಿತ ಕಾಮಗಾರಿಗಳು ಅನುಷ್ಠಾನಗೊಂಡಿವೆ.

ಪ್ರಸಕ್ತ ವರ್ಷ 411779 ಉದ್ಯೋಗ ಚೀಟಿ ವಿತರಣೆಃ

     ನರೇಗಾ ಯೋಜನೆಯಡಿ ಪ್ರಸಕ್ತ 2020-21ನೇ ಆರ್ಥಿಕ ವóರ್ಷದಲ್ಲಿ ಮನೆ-ಮನೆ ಭೇಟಿ ನೀಡಿ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ, ಉದ್ಯೋಗ ವಾಹಿನಿ ಜಾಗೃತಿ ರಥಯಾತ್ರೆ ಮೂಲಕ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪ್ರಚಾರ ನೀಡುವುದು, ಗೋಡೆ ಬರಹಗಳು, ಉದ್ಯೋಗ ಚೀಟಿ ಆಂದೋಲನ ಸೇರಿದಂತೆ ಇತರೆ ಆನೇಕ ಐ.ಇ.ಸಿ. ಚಟುವಟಿಕೆಗಳ ಮೂಲಕ ಅರಿವು ಮೂಡಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಕುಟುಂಬಗಳು ಉದ್ಯೋಗ ಚೀಟಿಗಳನ್ನು ಪಡೆದುಕೊಂಡಿದ್ದಾರೆ.

      ಜಿಲ್ಲೆಯ ಚಿ.ನಾ.ಹಳ್ಳಿ ತಾಲೂಕಿನಲ್ಲಿ 36446, ಗುಬ್ಬಿ-41784, ಕೊರಟಗೆರೆ-26990, ಕುಣಿಗಲ್-38015, ಮಧುಗಿರಿ-52032, ಪಾವಗಡ-55970, ಶಿರಾ-56571, ತಿಪಟೂರು-31777, ತುಮಕೂರು-37858, ತುರುವೇಕೆರೆ ತಾಲೂಕಿನಲ್ಲಿ 34336 ಅಕುಶಲ ಕೂಲಿ ಕಾರ್ಮಿಕರಿಗೆ ಉದ್ಯೋಗ ಚೀಟಿಗಳನ್ನು ವಿತರಿಸಲಾಗಿದ್ದು, ಇವರಲ್ಲಿ 488232 ಮಹಿಳಾ ಅಕುಶಲ ಕೂಲಿ ಕಾರ್ಮಿಕರು ಉದ್ಯೋಗ ಚೀಟಿಗಳನ್ನು ಪಡೆದುಕೊಂಡಿದ್ದಾರಲ್ಲದೆ ಪರಿಶಿಷ್ಟ ಜಾತಿಗೆ ಸೇರಿದ 65310, ಪರಿಶಿಷ್ಠ ಪಂಗಂಡದ 30680 ಹಾಗೂ ಇತರೆ ವರ್ಗದ 324324 ಕುಟುಂಬಗಳು ಉದ್ಯೋಗ ಚೀಟಿಗಳನ್ನು ಪಡೆದುಕೊಂಡಿದ್ದಾರೆ.

ವೈಯಕ್ತಿಕ ಕಾಮಗಾರಿಗಳಡಿ ಹೆಚ್ಚು ಅವಕಾಶಃ

       ಪ್ರಸಕ್ತ 2020-21ರ ಆರ್ಥಿಕ ವರ್ಷದಲ್ಲಿ ಈವರೆಗೆ ಕೊರೋನಾ(ಕೋವಿಡ್-19) ಕಾರಣದಿಂದಾಗಿ ನಗರದ ಪ್ರದೇಶದ ಕಡೆ ವಲಸೆ ಹೋಗಿದ್ದ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು ಗ್ರಾಮಗಳ ಕಡೆ ಮರಳಿ ಬಂದ ಕಾರಣ ಹಾಗೂ ಗ್ರಾಮೀಣ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಡಿ ಹೆಚ್ಚಿನ ಅವಕಾಶ ಕಲ್ಪಿಸಿಕೊಡುವ ಸದುದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಕಾರದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಮೇ-19 ರಿಂದ 1 ತಿಂಗಳು ಬದು ನಿರ್ಮಾಣ ಮಾಸಾಚಾರಣೆ ಹಮ್ಮಿಕೊಳ್ಳಲಾಗಿತ್ತು.

2020-21ನೇ ಸಾಲಿನಲ್ಲಿ 6938341 ಮಾನವ ದಿನಗಳ ಸೃಜನೆಃ

      ಜಿಲ್ಲೆಯಾದ್ಯಂತ ಈ ಆರ್ಥಿಕ ವರ್ಷದಲ್ಲಿ 6938341 ಮಾನವ ದಿನಗಳು ಸೃಜನೆಯಾಗಿ ನರೇಗಾ ಅನುಷ್ಟಾನದಲ್ಲಿ ತುಮಕೂರು ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದೆ. ಬದು ನಿರ್ಮಾಣ ಮಾಸಾಚರಣೆ, ಬದು ಬೇಸಾಯ, ರೈತರ ಕ್ರಿಯಾ ಯೋಜನೆ, ತಾಂಡಾಗಳ ಸಮೀಕ್ಷೆ, ಮಹಿಳಾ ಕಾಯಕೋತ್ಸವ ಅಭಿಯಾನ ಕಾರ್ಯಗಳನ್ನು ಹಮ್ಮಿಕೊಂಡಿದ್ದರಿಂದ ನರೇಗಾ ಯೋಜನೆಯಡಿ ಅಕುಶಲ ಕೂಲಿ ಕಾರ್ಮಿಕರು ಪ್ರಯೋಜನ ಪಡೆದುಕೊಂಡಿದ್ದಾರೆ.

ಕೃಷಿ ಆಧಾರಿತ ಕಾಮಗಾರಿಗಳಿಗೂ ಅವಕಾಶಃ

      ಸಣ್ಣ ಮತ್ತು ಅತೀ ಸಣ್ಣ ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ, ಬೋರ್‍ವೆಲ್ ಮರುಪೂರಣ, ಕೃಷಿ ಹೊಂಡ, ಅಜೋಲಾ ತೊಟ್ಟಿ, ಎರೆಹುಳು ತೊಟ್ಟಿ, ಸಾವಯವ ಗೊಬ್ಬರದ ತೊಟ್ಟಿ, ದನದ ಕೊಟ್ಟಿಗೆ, ಹಂದಿ ಶೆಡ್, ಕೋಳಿ ಶೆಡ್ ಹಾಗೂ ರೇಷ್ಮೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಗಳಿಂದ ಹಲವಾರು ಕೃಷಿ ಆಧಾರಿತ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲಾ ಕಾಮಗಾರಿಗಳನ್ನು ಕೆಲಸ ಮಾಡುವ ಕುಟುಂಬ ಸದಸ್ಯರ ಖಾತೆಗೆ ಗರಿಷ್ಠ 100 ದಿನಗಳವರೆಗೆ ಹಣವನ್ನು ಪಾವತಿ ಮಾಡಲಾಗುವುದು. ಗೃಹ ನಿರ್ಮಾಣ ಕಾಮಗಾರಿಗಳಿಗೆ 90 ದಿನಗಳ ಕೂಲಿ ಹಣ ಪಡೆಯುವ ಅವಕಾಶವಿದೆ.

ಜಿಲ್ಲೆಯಲ್ಲಿ 48012 ಕಾಮಗಾರಿಗಳ ಅನುಷ್ಠಾನಃ

      ಇದರ ಜೊತೆಗೆ ಸಮುದಾಯ ಆಧಾರಿತ ಕಾಮಗಾರಿಗಳಾದ ಕೆರೆ/ ಗೋ-ಕಟ್ಟೆ, ಹೂಳೆತ್ತುವುದು, ಆಟದ ಮೈದಾನ, ರೈತರ ಕಣ, ಮಲ್ಟಿ ಆರ್ಚ್ ಚೆಕ್ ಡ್ಯಾಂ, ಅಂಗನವಾಡಿ ಕಟ್ಟಡಗಳ ನಿರ್ಮಾಣ, ಗ್ರಾಮೀಣ ಉದ್ಯಾನವನ, ಗ್ರಾಮೀಣ ಗೋದಾಮುಗಳಂತಹ ಸಮುದಾಯ ಆಧಾರಿತ ಕಾಮಗಾರಿಗಳು ಅನುಷ್ಟಾನದಲ್ಲಿದ್ದು, ಜಿಲ್ಲೆಯಾದ್ಯಂತ ಈ ಆರ್ಥಿಕ ವರ್ಷದಲ್ಲಿ ನರೇಗಾ ಯೋಜನೆಯಡಿ ಒಟ್ಟು 48012 ಕಾಮಗಾರಿಗಳು ಅನುಷ್ಟಾನಗೊಂಡಿವೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದ್ದಾರೆ.
  

 

 

(Visited 283 times, 1 visits today)
Previous Articleಮಾರ್ಚ್ 27ರಂದು ಬೃಹತ್ ಲೋಕ್ ಅದಾಲತ್
Next Article ರೋಗಿಗಳನ್ನ ದೇವರಂತೆ ಕಾಣಬೇಕು : ಸಚಿವ ಮಾಧುಸ್ವಾಮಿ
News Desk Benkiyabale

Related Posts

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm
ಇತರೆ ಸುದ್ಧಿಗಳು

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

October 24, 2025 1:29 pm
ಇತರೆ ಸುದ್ಧಿಗಳು

ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ

October 24, 2025 1:28 pm
ಇತರೆ ಸುದ್ಧಿಗಳು

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm
ಇತರೆ ಸುದ್ಧಿಗಳು

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm
ಇತರೆ ಸುದ್ಧಿಗಳು

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm
Our Youtube Channel
Our Picks

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

October 24, 2025 1:29 pm

ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ

October 24, 2025 1:28 pm

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

By News Desk BenkiyabaleOctober 24, 2025 1:30 pm

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕ ಬಿ.ಸುರೇಶ್‌ಗೌಡರು ಕೋಟ್ಯಾಂತರ ರೂ.ಗಳ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ…

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

October 24, 2025 1:29 pm

ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ

October 24, 2025 1:28 pm

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.