BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ
  • ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ
  • ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ
  • ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ
  • ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ
  • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ
  • ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
  • ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದಗಂಗೆಗೆ ಬಂದರೆ ಜನ್ಮ ಜನ್ಮಾಂತರದ ಪುಣ್ಯ ಜಾಗೃತ: ಅಮಿತ್ ಶಾ!
Trending

ಸಿದ್ದಗಂಗೆಗೆ ಬಂದರೆ ಜನ್ಮ ಜನ್ಮಾಂತರದ ಪುಣ್ಯ ಜಾಗೃತ: ಅಮಿತ್ ಶಾ!

By News Desk BenkiyabaleUpdated:April 01, 2022 5:52 pm

ತುಮಕೂರು

ನಗರಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜ್ಯ ಬಿಜೆಪಿ ನಾಯಕರು ಅದ್ಧೂರಿ ಸ್ವಾಗತ ಕೋರಿದರು. ತುಮಕೂರು ವಿವಿ ಆವರಣದ ಹೆಲಿಪ್ಯಾಡ್‍ಗೆ ಅಮಿತ್ ಶಾ ಬಂದಿಳಿಯುತ್ತಿದ್ದಂತೆ ಹೆಲಿಪ್ಯಾಡ್‍ನಿಂದ ಮಠದವರೆಗೂ ಅಮಿತ್ ಶಾ ಅವರ ಕಾರಿನ ಮೇಲೆ ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದ ಸಾರ್ವಜನಿಕರು ಪುಷ್ಪಾರ್ಚನೆ ಮಾಡಿದರು. . ಅಮಿತ್ ಶಾ ಅವರೊಂದಿಗೆ ಪ್ರಹ್ಲಾದ್ ಜೋಶಿ ಕೂಡ ಆಗಮಿಸಿದ್ದರು.
ಅಮಿತ್ ಶಾ ಅವರ ಸ್ವಾಗತಕ್ಕೆ ವಿವಿಧ ಕಲಾ ತಂಡಗಳು ಮೆರುಗು ನೀಡಿದವು. ವಿಶ್ವವಿದ್ಯಾಲಯದ ಮುಂಭಾಗ ಕಹಳೆ, ವೀರಗಾಸೆ, ಡೊಳ್ಳುಕುಣಿತ, ಡ್ರಮ್ ಸೆಟ್ ಕಲಾವಿದರು ಸಾಂಸ್ಕøತಿಕ ವೈಭವದ ಮೂಲಕ ಅಮಿತ್ ಶಾ ಅವರನ್ನು ಅದ್ದೂರಿ ಯಾಗಿ ಬರಮಾಡಿಕೊಂಡರು. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಂತರ ತ್ರಿವಿಧ ದಾಸೋಹಿ, ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸುರುವ `ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮವನ್ನು ಅಮಿತ್ ಶಾ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಜೀವನದಲ್ಲಿ ಮೂರು ಬಾರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದೇನೆ, ಇಲ್ಲಿಂದ ಒಳ್ಳೆಯ ಸಂಸ್ಕಾರಯುತ ವಿಚಾರ ಗಳನ್ನೆ ಕೊಂಡೊಯ್ದಿದ್ದೇನೆ. ಇಲ್ಲಿಗೆ ಬಂದಾಗಲೆಲ್ಲ ಉತ್ಸಾಹ ಹೆಚ್ಚಿಸಿಕೊಂಡು ಹೋಗುತ್ತೇನೆ ಎಂದು ಹೇಳಿದರು. ದೇಶ ಸಂಸ್ಕೃತಿಯ ತವರೂರು, ಜ್ಯೋತಿರ್ಲಿಂಗಗಳು, ಪುರಾಣಗಳು ಇವೆ, ಪುಣ್ಯ ಸ್ಥಳಗಳು ಇವೆ ಆದರೆ ಶಿವಕುಮಾರ ಸ್ವಾಮೀಜಿಗಳು ತಮ್ಮ ಸೇವೆಯಿಂದ ಪುಣ್ಯಕ್ಷೇತ್ರವನ್ನು ಮಾಡಿದರು ಎಂದು ಹೇಳಿದರು.
ಅಟಲ್ ಜೀ ಇಲ್ಲಿಗೆ ಬಂದಾಗ ಉತ್ತರದಲ್ಲಿ ಗಂಗಾ ದಕ್ಷಿಣದಲ್ಲಿ ಸಿದ್ದಗಂಗಾ ಎಂದಿದ್ದರು. ಗಂಗಾದಲ್ಲಿ ಮುಳುಗಿದರೆ ಪಾಪ ಹೋಗುತ್ತದೆ, ಸಿದ್ಧಗಂಗೆಗೆ ಬಂದರೆ ಜನ್ಮಜನ್ಮಾಂತರದ ಪುಣ್ಯ ಜಾಗೃತವಾಗುತ್ತದೆ ಅದಕ್ಕಾಗಿಯೇ ಅಟಲ್ ಜೀ ಸಿದ್ದಗಂಗೆಗೆ ಪ್ರಾಶಸ್ತ್ಯ ನೀಡಿದ್ದರು. ಇಲ್ಲಿ ಅಂತಹ ಶಕ್ತಿ ಇದೆ, ಶಿವಕುಮಾರ ಸ್ವಾಮೀಜಿ ಅವರ ಕರ್ಮಸ್ಥಳ ಇದು ಎಂದರು. ಆಧುನಿಕ ಭಾರತದ ಬಸವಣ್ಣ. ಸಿದ್ದಗಂಗೆಯ ಡಾ. ಶಿವಕುಮಾರ ಸ್ವಾಮೀಜಿ ಅವರು ಹಾಕಿಕೊಟ್ಟ ಅನ್ನ, ಶಿಕ್ಷಣ, ಆಶ್ರಯದ ಮೂರು ತತ್ವಗಳಡಿಯಲ್ಲೇ ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದ್ದು, ಡಾ.ಶಿವಕುಮಾರ ಸ್ವಾಮೀಜಿಗಳ ಚೈತನ್ಯದ ಆತ್ಮ ಎಲ್ಲಿರುತ್ತದೆಯೋ ಅಲ್ಲಿ ಅಭಿವೃದ್ಧಿಯಾಗುತ್ತದೆ. 80 ವರ್ಷಗಳ ಕಾಲ ಮಠಾಧೀಶರಾಗಿ ಸಮಾಜಕ್ಕೆ ನೀಡಿರುವ ತತ್ವಗಳನ್ನು ನಾವೆಲ್ಲರೂ ಪಾಲಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಕರೆ ನೀಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಯುಗಾದಿ ಶುಭ ಕೋರಿ ಭಾಷಣ ಆರಂಭಿಸಿದರು. ಶ್ರೀಗಳ ಗುರುವಂದನೆಗೆ ಅಮಿತ್ ಶಾ ಉಪಸ್ಥಿತಿ ಅರ್ಥಪೂರ್ಣವೆನ್ನುಸಿದ್ದು, ಡಾ. ಶಿವಕುಮಾರ ಸ್ವಾಮೀಜಿ ಅವರು ಭಕ್ತಿ ವಿರಕ್ತಿಯ ಪ್ರತಿರೂಪ ದಾನ್ಯವನ್ನು ಭಕ್ತರ ಮನೆಯಿಂದ ಬೇಡಿ ತಂದು ಮಕ್ಕಳನ್ನು ಪೆÇರೆಯುತ್ತಿದ್ದರು. ಅವರನ್ನು ಕಂಡಿರುವುದೇ ನಮ್ಮ ಪುಣ್ಯ. ದೇಶದ ಒಳಿತಿಗಾಗಿ ಮೋದಿ, ಅಮಿತ್ ಶಾ ನಡೆಯನ್ನು ನಾವೆಲ್ಲ ಬೆಂಬಲಿಸಬೇಕಿದೆ. ಕೃಷಿಕರಿಗೆ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದ್ದಾರೆ. ಶ್ರೀಗಳ ಜೀವನ ಚರಿತ್ರೆಯನ್ನು ಪಠ್ಯಕ್ರಮಗಳಲ್ಲಿ ಅಳವಡಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಸಂಸದ ಜಿ.ಎಸ್ ಬಸವರಾಜು, ಸಚಿವ ಮಾಧುಸ್ವಾಮಿ, ಶಾಸಕ ಜ್ಯೋತಿಗಣೇಶ್, ರಾಜೇಶ್ ಗೌಡ, ಮಸಾಲಾ ಜಯರಾಂ, ಮಾಜಿ ಶಾಸಕ ಸುರೇಶಗೌಡ, ಪರಮೇಶ್ವರ ಇದ್ದರು.

(Visited 15 times, 1 visits today)
Amith shaw Shivakumarswamiji Siddagangamath tumkur
Previous Articleಮುದ್ದಹನುಮೇಗೌಡರ ಮುನಿಸು ; ರಾಹುಲ್ ಗಾಂಧಿಗೆ ಇರಿಸು – ಮುರಿಸು…!?
Next Article ಬಿಸಿಯೂಟ ಯೋಜನೆಗೆ ಸಿದ್ದಗಂಗಾಶ್ರೀ ಹೆಸರು: ಸಿ.ಎಂ ಬೊಮ್ಮಾಯಿ ಮಹತ್ವದ ಘೋಷಣೆ
News Desk Benkiyabale

Related Posts

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm news

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm news

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm news
ತಾಜಾ ಸುದ್ಧಿಗಳು
news

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm
news

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm
news

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm
news

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ

July 23, 2026 4:53 pm
news

ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ

July 23, 2026 4:51 pm
news

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm
Our Youtube Channel
Our Picks

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ

July 23, 2026 4:53 pm

ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ

July 23, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

By News Desk BenkiyabaleJuly 23, 2026 4:58 pm

ಹುಳಿಯಾರು: ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆದೇಶದಂತೆ ಹಾಗೂ ಸಂಪುಟ ಸಭೆಯ ನಿರ್ಣಯದನ್ವಯ, ಹುಳಿಯಾರು ಪಟ್ಟಣ…

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ

July 23, 2026 4:53 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.