BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ
  • ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ
  • ಗೂಳೂರು ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ
  • ವಾಣಿಜ್ಯ ಮಳಿಗೆಗಳೆ ಈ ಕಳ್ಳರ ಟಾರ್ಗೆಟ್
  • ಪ್ರಶಸ್ತಿ ಮುಖ್ಯವಲ್ಲ ಪಾಲ್ಗೊಳ್ಳುವಿಕೆಯೇ ಭಾಗ್ಯ: ಬಿ.ಆರ್ ಮಂಜುನಾಥ್
  • ಕಲ್ಪತರು ಉತ್ಸವ-ಪ್ರಗತಿಪರ ರೈತರಿಗೆ ಗೌರವಾರ್ಪಣೆ
  • ಭೂಮಿಯು ವ್ಯಾಪಾರದ ವಸ್ತುವಲ್ಲ: ಪ್ರೊ. ರಾಜೇಂದ್ರ ಚೆನ್ನಿ
  • ನಾನು ಎನ್ನುವ ಸ್ವಾರ್ಥ ಬಿಟ್ಟು ನಾವು ಎನ್ನುವ ನಿಸ್ವಾರ್ಥತೆ ಬೆಳಸಿಕೊಳ್ಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ
Trending

ತುಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ

By News Desk BenkiyabaleUpdated:May 31, 2022 5:40 pm

ತುಮಕೂರು:


ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ತಂಬಾಕು ಪರಿಸರಕ್ಕೆ ಮಾರಕ ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆ ಉದ್ದೇಶದಿಂದ ನಗರದ ಜಿಲ್ಲಾಸ್ಪತ್ರೆ ಆವರಣದಿಂದ ಹಮ್ಮಿಕೊಂಡಿದ್ದ ಜಾಥಾಗೆ ಕಾನೂನು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಗಳೂ ಆದ ನ್ಯಾಯಮೂರ್ತಿ ರಾಘವೇಂದ್ರ ಶೆಟ್ಟಿಗಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ನ್ಯಾಯಾಧೀಶರು, ಲಕ್ಷಾಂತರ ಮಂದಿ ತಂಬಾಕು ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶಗಳ ಸಮಸ್ಯೆಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಪ್ರತಿಯೊಬ್ಬರೂ ತಂಬಾಕು ಸೇವಿಸುವುದನ್ನು ನಿಲ್ಲಿಸಬೇಕು. ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಮೂರ್ತಿ ಮಾತನಾಡಿ, ಕೆಟ್ಟ ಚಟಗಳಿಗೆ ಯಾರು ಹೇಳದೇ ಇದ್ದರೂ ದಿನನಿತ್ಯ ದಾಸರಾಗುತ್ತಿದ್ದೇವೆ. ತಂಬಾಕು ರಹಿತ ದಿನವನ್ನು ಆಚರಣೆ ಮಾಡಿ ಈ ದಿನ ಎಲ್ಲರಿಗೂ ಅರಿವು ಮೂಡಿಸುವ ಕಾರ್ಯ ಒಳ್ಳೆಯ ಕೆಲಸವಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆ ಕುರಿತು ಮಕ್ಕಳು, ಯುವಕರಲ್ಲಿ ಅರಿವು ಮೂಡಿಸುವುದು ಉತ್ತಮ ಕಾರ್ಯವಾಗಿದೆ. ಪ್ರತಿಯೊಬ್ಬರೂ ಸಹ ತಂಬಾಕಿನಿಂದ ದೂರವಿರುವ ಮೂಲಕ ಮಾರಕ ರೋಗಗಳನ್ನು ತಡೆಗಟ್ಟಬೇಕು ಎಂದರು. ಜಿಲ್ಲಾ ಸರ್ವಲೆನ್ಸ್ ಮತ್ತು ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ಮೋಹನ್‍ದಾಸ್ ಮಾತನಾಡಿ, ಪ್ರತಿ ವರ್ಷ ಮೇ 31ಕ್ಕೆ ಒಂದೊಂದು ಘೋಷವಾಕ್ಯದೊಂದಿಗೆ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ. ತಂಬಾಕು ಪರಿಸರಕ್ಕೆ ಮಾರಕ ಎಂಬ ಧ್ಯೇಯವಾಕ್ಯದಡಿ ಈ ಬಾರಿ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ತಂಬಾಕು ಸೇವನೆಯಿಂದ ದೇಹದ ಮೇಲೆ ಯಾವ ರೀತಿ ದುಷ್ಪರಿಣಾಮ ಆಗುತ್ತದೆ. ಯಾವ ರೀತಿಯ ಮಾರಕ ರೋಗಗಳಿಗೆ ತುತ್ತಾಗುತ್ತೇವೆ ಎಂಬುದನ್ನು ಈ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು. ಈ ವರ್ಷ ತಂಬಾಕು ಪರಿಸರಕ್ಕೆ ಮಾರಕ ಎಂಬ ಘೋಷವಾಕ್ಯ ಬಹಳ ಪ್ರಮುಖವಾಗಿದೆ. ತಂಬಾಕು ಬೆಳೆಯುವುದರಿಂದ ನೆಲ ಜಲ, ನೀರು ಗಾಳಿ, ಪರಿಸರಕ್ಕೆ ಹಾನಿಯಾಗುತ್ತಿದೆ. ತಂಬಾಕು ಬೆಳೆದ ನಂತರ ಅದರ ಎಲೆಗಳನ್ನು ಕಾರ್ಖಾನೆಗಳಿಗೆ ಸಾಗಿಸುವುದರಿಂದ ಹಿಡಿದು ಕಾರ್ಖಾನೆಯಲ್ಲಿ ತಯಾರಾಗುವ ತಂಬಾಕು ಉತ್ಪನ್ನದಿಂದಾಗಿ ಜಲ, ವಾಯು ಮಾಲಿನ್ಯ ಉಂಟಾಗುತ್ತದೆ. ಹೀಗಾಗಿ ಇದರಿಂದ ಸಂಪೂರ್ಣ ಪರಿಸರ ಮಾಲಿನ್ಯವಾಗುತ್ತಿದೆ ಎಂದರು.
ತಂಬಾಕು ಸೇವನೆ ಮಾಡಿದ ಸಂದರ್ಭದಲ್ಲಿ ವಾಯು ಮಾಲಿನ್ಯ, ಪರಿಸರಕ್ಕೆ ಹಾನಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಂಬಾಕು ತ್ಯಜಿಸುವಂತಹ ಕಾರ್ಯ ಮಾಡಬೇಕು. ಈ ಮೂಲಕ ಪರಿಸರ ಉಳಿಸಿ ಬೆಳೆಸಬೇಕು ಎಂದು ಅವರು ಹೇಳಿದರು. ಹದಿಹರೆಯದವರು ದುಶ್ಚಟಗಳಿಗೆ ಬಲಿಯಾಗುವುದು ಸರ್ವೆ ಸಾಮಾನ್ಯವಾಗಿದೆ. ಆದ್ದರಿಂದ ಪೆÇೀಷಕರು ಮಕ್ಕಳಿಗೆ ತಂಬಾಕು ಸಿಗದಂತೆ ನೋಡಿಕೊಳ್ಳುವ ಜತೆಗೆ ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ಮಾಡಿದರು.
ಜಿಲ್ಲಾಸ್ಪತ್ರೆ ಆವರಣದಿಂದ ಹೊರಟ ಜಾಥಾವು ಟೌನ್‍ಹಾಲ್ ಮುಖೇನ ಅಶೋಕ ರಸ್ತೆಯಲ್ಲಿ ಸಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ತಲುಪಿತು.
ಜಾಥಾದಲ್ಲಿ ಡಿಹೆಚ್‍ಓ ಡಾ. ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸೆ ಡಾ. ವೀರಭದ್ರಯ್ಯ, ಡಾ. ಕೇಶವರಾಜ್, ಐಎಂಎ ಅಧ್ಯಕ್ಷ ಡಾ. ಸಂಜಯ್, ಕಾರ್ಯದರ್ಶಿ ಸನತ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

(Visited 7 times, 1 visits today)
tambaku tumkur
Previous Articleರೋಹಿತ್ ಚರ್ಕತೀರ್ಥರನ್ನು ಬಂಧಿಸಿ ಗಡಿಪಾರಿಗೆ ಕರವೇ ಆಗ್ರಹ
Next Article “ಸಾಂದರ್ಭಿಕ ರಾಜಕಾರಣ ಮಾಡುವುದಿಲ್ಲ!”: ಕೆ.ಎನ್ ರಾಜಣ್ಣ ವಿರುದ್ಧ ಮಾಜಿ ಶಾಸಕ ಸುರೇಶ್‍ಬಾಬು ವಾಗ್ದಾಳಿ
News Desk Benkiyabale

Related Posts

ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ

November 21, 2025 3:27 pm ಇತರೆ ಸುದ್ಧಿಗಳು

ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ

November 21, 2025 3:10 pm ಇತರೆ ಸುದ್ಧಿಗಳು

ಗೂಳೂರು ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ

November 21, 2025 3:08 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ

November 21, 2025 3:27 pm
ಇತರೆ ಸುದ್ಧಿಗಳು

ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ

November 21, 2025 3:10 pm
ಇತರೆ ಸುದ್ಧಿಗಳು

ಗೂಳೂರು ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ

November 21, 2025 3:08 pm
ಇತರೆ ಸುದ್ಧಿಗಳು

ವಾಣಿಜ್ಯ ಮಳಿಗೆಗಳೆ ಈ ಕಳ್ಳರ ಟಾರ್ಗೆಟ್

November 21, 2025 2:40 pm
ಇತರೆ ಸುದ್ಧಿಗಳು

ಪ್ರಶಸ್ತಿ ಮುಖ್ಯವಲ್ಲ ಪಾಲ್ಗೊಳ್ಳುವಿಕೆಯೇ ಭಾಗ್ಯ: ಬಿ.ಆರ್ ಮಂಜುನಾಥ್

November 20, 2025 3:09 pm
ಇತರೆ ಸುದ್ಧಿಗಳು

ಕಲ್ಪತರು ಉತ್ಸವ-ಪ್ರಗತಿಪರ ರೈತರಿಗೆ ಗೌರವಾರ್ಪಣೆ

November 20, 2025 3:08 pm
Our Youtube Channel
Our Picks

ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ

November 21, 2025 3:27 pm

ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ

November 21, 2025 3:10 pm

ಗೂಳೂರು ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ

November 21, 2025 3:08 pm

ವಾಣಿಜ್ಯ ಮಳಿಗೆಗಳೆ ಈ ಕಳ್ಳರ ಟಾರ್ಗೆಟ್

November 21, 2025 2:40 pm

ಪ್ರಶಸ್ತಿ ಮುಖ್ಯವಲ್ಲ ಪಾಲ್ಗೊಳ್ಳುವಿಕೆಯೇ ಭಾಗ್ಯ: ಬಿ.ಆರ್ ಮಂಜುನಾಥ್

November 20, 2025 3:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ

By News Desk BenkiyabaleNovember 21, 2025 3:27 pm

ತುಮಕೂರು: ಗುಬ್ಬಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಅನುಮೋದನೆ…

ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ

November 21, 2025 3:10 pm

ಗೂಳೂರು ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ

November 21, 2025 3:08 pm

ವಾಣಿಜ್ಯ ಮಳಿಗೆಗಳೆ ಈ ಕಳ್ಳರ ಟಾರ್ಗೆಟ್

November 21, 2025 2:40 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.