BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವೈಭವದಿಂದ ನಡೆದ ಕಳಸೋತ್ಸವ
  • ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ
  • ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್
  • ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ
  • ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಕ್ಕಿಪಿಕ್ಕಿ ಜನಾಂಗದ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್!
Trending

ಹಕ್ಕಿಪಿಕ್ಕಿ ಜನಾಂಗದ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್!

By News Desk BenkiyabaleUpdated:August 12, 2020 6:50 pm

ತುಮಕೂರು:

        ಕೊರೊನದಿಂದ ತೀವ್ರ ಸಂಕಷ್ಟಕ್ಕೊಳಗಾಗಿ ವೃತ್ತಿ ಜೀವನ ನಡೆಸಲು ಸಾಧ್ಯವಾಗದ ಅಮಲಾಪುರ ಕೇಂದ್ರೀಯ ವಿದ್ಯಾಲಯದ ಸಮೀಪವಿರುವ ಹಕ್ಕಿಪಿಕ್ಕಿ ಜನಾಂಗದ ಸುಮಾರು 35 ಕುಟುಂಬಗಳಿಗೆ ಬುಧವಾರ ದಿನಸಿ ಪದಾರ್ಥಗಳ ಆಹಾರ ಕಿಟ್ ವಿತರಿಸುವ ಮೂಲಕ ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ರಂಗೇಗೌಡ ಮತ್ತು ಸ್ನೇಹಿತರು ಕೊರೋನ ಸಂಕಷ್ಟದಲ್ಲಿ ಮಾನವೀಯತೆ ಮೆರೆದಿದ್ದಾರೆ.

        ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಹಾಗೂ ಜಿಲ್ಲಾ ಅಲೆಮಾರಿ ಅಭಿವೃದ್ಧಿ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿಯಾದ ರಂಗೇಗೌಡ, ಕೋವಿಡ್-19 ಲಾಕ್‍ಡೌನ್ ನಂತರ ಅಲೆಮಾರಿ ಜಾತಿ ಜನರ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿದ್ದು, ಪ್ರತಿನಿತ್ಯದ ಊಟಕ್ಕೂ ಪರದಾಡುತ್ತಿದ್ದಾರೆ. ಊರೂರು ಸುತ್ತಿ ವ್ಯಾಪಾರ ಮಾಡಿ ಜೀವನ ಮಾಡುವ ಇವರು ಕೋರೊನಾದಿಂದಾಗಿ ಜನ ಗ್ರಾಮಕ್ಕೆ ಇವರನ್ನು ಸೇರಿಸುತ್ತಿಲ್ಲ. ವ್ಯಾಪಾರವಿಲ್ಲದೆ ಜೀವನ ದುಸ್ಥರವಾಗಿರುವಂತಹ ಸಂದರ್ಭದಲ್ಲಿ ಕಷ್ಟಕ್ಕೆ ಸ್ಪಂಧಿಸುವಂತೆ ಅಲೆಮಾರಿ ಸಮುದಾಯ ಮನವಿ ಮಾಡಿದ ಹಿನ್ನಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ವಿತರಿಸುತ್ತಿದ್ದೇವೆ ಎಂದರು.

      ಅಲೆಮಾರಿ ಜನಾಂಗ ಬಳೆ, ಪಾತ್ರೆ, ಲೋಲಾಕ ಮುಂತಾದ ಕೆಲವು ಅಲಂಕಾರಿಕ ವಸ್ತುಗಳನ್ನು ವ್ಯಾಪಾರ ಮಾಡಲು ಗ್ರಾಮಗಳಿಗೆ ಹೋಗುತ್ತಾರೆ. ಅದೇ ರೀತಿ ಹಕ್ಕಿಪಿಕ್ಕಿ ಜನರೂ ಕೂಡ ಹೇರ್ ಪಿನ್, ಬಳೆ, ಹರಿಶಿನ ಕುಂಕುಮ, ಜೀರಿಗೆ ಇತ್ಯಾದಿ ವಸ್ತುಗಳನ್ನು ಮಾರುತ್ತಾರೆ, ಹಾಗೂ ಹೆಳವ ಸಮುದಾಯದ ಜನ ತಲೆಕೂದಲು ಸಂಗ್ರಹಿಸಿ ಮಾರುತ್ತಾರೆ. ಕೊರೋನ ಸಂದರ್ಭದಲ್ಲಿ ಇವರಿಗೆ ಊರಿನ ಒಳಗೆ ಪ್ರವೇಶ ನೀಡದಿರುವುದರಿಂದ ಇವರಿಗೆ ಬರುತ್ತಿದ್ದ ಅಲ್ಪಸ್ವಲ್ಪ ಆದಾಯಕ್ಕೂ ಕಂಟಕವಾಗಿದೆ ಎಂದು ಹೇಳಿದರು.

     ಕೊರೊನಾ ಸಂದಿಗ್ಧತೆಯ ಇಂತಹ ಸಮಯದಲ್ಲಿ ನಾನು ಮತ್ತು ನನ್ನ ಸ್ನೇಹಿತರು ಸೇರಿ ಇಂತಹ ಅಲೆಮಾರಿ ಮತ್ತು ಹಕ್ಕಿಪಿಕ್ಕಿ ಸಮುದಾಯಗಳಿಗೆ ಊಟ, ಬಟ್ಟೆ, ಔಷಧಗಳಿಗೆ ಸಹಾಯ ಮಾಡುವ ನಿರ್ಧಾರ ಕೈಗೊಂಡೆವು. ಮೊದಲ ಹಂತವಾಗಿ ಸುಮಾರು 130 ಕುಟುಂಬಗಳಿಗೆ ದಿನಸಿ ವಿತರಿಸಲು ಕಾರ್ಯಪ್ರವೃತ್ತರಾಗಿದ್ದು, ಇಂದು 35 ಕುಟುಂಬಗಳಿಗೆ ಆಹಾರ ಪದಾರ್ಥಗಳ ದಿನಸಿಕಿಟ್‍ಗಳನ್ನು ವಿತರಿಸುತ್ತಿದ್ದೇವೆ ಎಂದು ತಿಳಿಸಿದರು.

      ಲಾಕ್ಡೌನ್ ಸಮಯದಲ್ಲಿ ಸಣ್ಣ ಸಣ್ಣ ಸಮುದಾಯಗಳಿಗೆ ಸಹಾಯ ಮಾಡಿದ ನಮ್ಮ ಸ್ನೇಹಿತರ ತಂಡ ಕೋವಿಡ್-19 ಸಂದಿಗ್ಧ ಪರಿಸ್ಥಿತಿ ಮುಗಿಯುವವರೆಗೂ ಬಟ್ಟೆ, ಔಷಧ, ಮನೆಕಟ್ಟಿಕೊಳ್ಳಲು ಬೇಕಾದ ಅವಶ್ಯಕ ವಸ್ತುಗಳನ್ನು ವಿತರಿಸಲು ನಿರ್ಧಾರ ಮಾಡಿದ್ದಾರೆ. ಈ ರೀತಿ ಒಂದಾದ ಸಮಾನ ಮನಸ್ಕ ಸ್ನೇಹಿತರು ಸ್ವಲ್ಪ ಹಣ ಸಂಗ್ರಹಿಸಿ ಮುಂದೆ ಅದನ್ನು ಅವಶ್ಯಕತೆ ಇರುವವರಿಗೆ ವಿತರಿಸಲು ನಿರ್ಧರಿಸಿ, ಇಂತಹ ಸಮುದಾಯಗಳಿಗೆ ಸಹಾಯವಾಗುವಂತೆ ದಾನಿಗಳ ಸಹಾಯದಿಂದ ಮುಂದಿನ ದಿನಗಳಲ್ಲಿ ಒಂದು ಅವಶ್ಯಕ ವಸ್ತುಗಳ ಬ್ಯಾಂಕ್  ಸ್ಥಾಪಿಸಲು ಕೂಡ ಚಿಂತನೆ ನಡೆಸಿರುವುದಾಗಿ ತಿಳಿಸಿದರು. ಈಗಾಗಲೇ ಈ ಸಮುದಾಯಗಳಿಗೆ ನಿವೇಶನ ನೀಡಲು 6 ತಾಲ್ಲೂಕುಗಳಲ್ಲಿ ಜಮೀನು ಗುರ್ತಿಸಿ ನಿವೇಶನ ವಿಂಗಡಣೆಯ ಕೆಲಸಕ್ಕೆ ಉಸ್ತುವಾರಿ ಸಚಿವರು ಹಾಗೂ ಆಯಾ ಶಾಸಕರ ಅಧ್ಯಕ್ಷತೆಯಲ್ಲಿ ಚಾಲನೆ ನೀಡಲಾಗಿದೆ. ಸದ್ಯದಲ್ಲೇ ನಿವೇಶನವನ್ನು ಸಚಿವರು ಹಾಗೂ ಶಾಸಕರು ವಿತರಿಸಲಿದ್ದಾರೆ. ಇದಕ್ಕೆ ಜಿಲ್ಲಾಧಿಕಾರಿಗಳು ಸಹ ಮುತುವರ್ಜಿ ವಹಿಸಿ ಎಲ್ಲಾ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.

      ದಾನಿಗಳಿಂದ ಸಂಗ್ರಹವಾಗುವ ಹಣವನ್ನು ಒಂದು ಕಡೆ ಇಟ್ಟು ಮುಂದೆ ತುರ್ತು ಇದ್ದಾಗ ಅದನ್ನು ಉಪಯೋಗಿಸುವ ಒಂದು ಅಭಿಯಾನಕ್ಕೆ ಈಗ ಚಾಲನೆ ನೀಡಲಾಗಿದೆ. ಈ ಬಡಜನತೆಗೆ ಸಹಾಯ ಮಾಡಲು ಮನಸ್ಸಿರುವ ದಾನಿಗಳಿಂದ ಹಣ ಸಂಗ್ರಹಿಸುವುದು ಹಾಗೂ ಮುಂದೆ ಈ ಸಮುದಾಯಗಳಿಗೆ ಇನ್ನೂ ಹೆಚ್ಚೆಚ್ಚು ಅನುದಾನವನ್ನು ಸರ್ಕಾರದ ಕಡೆಯಿಂದ ನೀಡುವಂತೆ ಕೋರಿ ಉಸ್ತುವಾರಿ ಸಚಿವರ ಮೂಲಕ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿರುವುದಾಗಿ ತಿಳಿಸಿದರು. ನಿಮ್ಮ ಮಕ್ಕಳನ್ನು ನಿಮ್ಮ ವೃತ್ತಿಗೆ ಬಳಸಿಕೊಳ್ಳದೆ ತಪ್ಪದೇ ಶಾಲೆಗೆ ಕಳುಹಿಸಿ, ನಿಮಗೆ ಮತು ನಿಮ್ಮ ಮಕ್ಕಳಿಗೆ ಬಟ್ಟೆ, ಔಷಧಿ ಮತಿತರೆ ಅಗತ್ಯವಾದವುಗಳು ಬೇಕಿದ್ದಲ್ಲಿ ಪೂರೈಕೆ ಮಾಡುವುದಾಗಿ ಭರವಸೆ ನೀಡಿದರು.

       ಈ ಸಂದರ್ಭದಲ್ಲಿ ನಾಗಭೂಷಣ್ ಬಗ್ಗನಡು ಮಾತನಾಡಿ, ಉತ್ತಮ ಆಲೋಚನೆಯುಳ್ಳ ರಂಗೇಗೌಡರು, ಅಧಿಕಾರಿಗಳು ಎಂದರೆ ಕೇವಲ ಕಚೇರಿ ಮತ್ತು ಫೈಲ್‍ಗಳಿಗೆ ಸೀಮಿತರಾಗಿರುತ್ತಾರೆ ಎಂದು ಕೊಂಡಿರುತ್ತಾರೆ ಆದರೆ ಮನಸ್ಸುಗಳ ಮೂಲಕ ಮಾತನಾಡುವಂತಹ ವ್ಯಕ್ತಿ ಎಂಬುದನ್ನು ತೋರಿಸಿದ್ದಾರೆ. ಇದು ಕೇವಲ ಪ್ರಚಾರಕ್ಕೆ ಮಾಡುತ್ತಿಲ್ಲ, ಇದರ ಹಿಂದೆ ದೊಡ್ಡ ಚರಿತ್ರೆಯೇ ಇದೆ. ಆ ಚರಿತ್ರೆಯೇ ಬಹಳ ಮುಖ್ಯವಾದುದು ಇದಕ್ಕೆ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

        ಅಲೆಮಾರಿ ಸಮುದಾಯ ಎಂದರೆ ಭಾರತದಲ್ಲಿ ದೊಡ್ಡ ಸಮಸ್ಯೆಯಾಗಿರತಕ್ಕಂತಹದ್ದು, ಸುಮಾರು 14 ಕೋಟಿ ಜನ ಈ ಸಮುದಾಯದವರಿದ್ದಾರೆ. ಈ ಸಮುದಾದವರು ಅನ್ನವಿಲ್ಲದೆ, ಸೂರಿಲ್ಲದೆ, ಬದುಕು ಕಟ್ಟಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಇಂದು ಮಂಗಳ ಗ್ರಹಕ್ಕೆ, ಚಂದ್ರಲೋಕಕ್ಕೆ ಹೋಗುತ್ತಿದ್ದೇವೆ.ಇಂತಹ ಸಂದರ್ಭದಲ್ಲಿ ಇಂತಹ ಸಮುದಾಯಗಳನ್ನು ಕೈಹಿಡಿಯಲು ಸಾಧ್ಯವಾಗದಂತಹ ಸ್ಥಿತಿಯಲ್ಲಿ ಉತ್ತಮ ಮನಸ್ಸಿರುವಂತಹ ರಂಗೇಗೌಡರು ಈ ಸಮುದಾಯಗಳಿಗೆ ನೆರವಾಗುವ ಮೂಲಕ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ ಎಂದು ಹೇಳಿದರು. ಈ ಸಮುದಾಯಗಳಿಗೆ ಸಹಾಯ ಮಾಡಲಿಚ್ಚಿಸುವ ದಾನಿಗಳು ಪೋ.9964331318 ಇವರನ್ನು ಸಂಪರ್ಕಿಸಬಹುದು.

    ಈ ಅಭಿಯಾನದ ಪ್ರಾರಂಭದಲ್ಲಿ ರಂಗೇಗೌಡರು ಮೊದಲು 40 ಸಾವಿರ ರೂಗಳಲ್ಲಿ 15 ವಸ್ತುಗಳಿರುವ 50 ದಿನಸಿ ಕಿಟ್‍ಗಳನ್ನು ವ್ಯಾಪಾರವಿಲ್ಲದೆ ಸಂಕಷ್ಟದಲ್ಲಿರುವ ತುಮಕೂರಿನ ಅಮಲಾಪುರದ ಹಾಗೂ ಗುಬ್ಬಿ ಬಳಿಯ ಹಕ್ಕಿಪಿಕ್ಕಿ, ಹೆಳವ ಜನರಿಗೆ ವಿತರಿಸಿ, ನಂತರ ಸಂಗ್ರಹವಾಗುವ ಹಣದಲ್ಲಿ ಚಿಕ್ಕನಾಯಕನಹಳ್ಳಿ, ತಿಪಟೂರು ಮುಂತಾದ ಕಡೆ ಅವಶ್ಯಕತೆ ಇರುವವರಿಗೆ ವಿತರಿಸಲು ನಿರ್ಧರಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಅಲೆಮಾರಿ ಮುಖಂಡರಾದ ಹುಳಿಯಾರ್ ರಾಜಪ್ಪ, ವೆಂಕಟೇಶ್ ಇದ್ದರು.

(Visited 26 times, 1 visits today)
Previous Articleತುಮಕೂರು : ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ವಾತಾವರಣವಿದೆ : ಡಿಸಿಎಂ
Next Article ಕೊರೊನಾ ಸಂಕಷ್ಟದಲ್ಲೂ SSLC ಫಲಿತಾಂಶದಲ್ಲಿ ಮಧುಗಿರಿಗೆ ಮೂರನೇ ಸ್ಥಾನ!!
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm
ಇತರೆ ಸುದ್ಧಿಗಳು

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm
ಇತರೆ ಸುದ್ಧಿಗಳು

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm
ಇತರೆ ಸುದ್ಧಿಗಳು

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
ಇತರೆ ಸುದ್ಧಿಗಳು

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
Our Youtube Channel
Our Picks

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

By News Desk BenkiyabaleFebruary 06, 2026 3:45 pm

ಹುಳಿಯಾರು: ಹುಳಿಯಾರಿನ ಗ್ರಾಮದೇವತೆ ಶ್ರೀ ಹುಳಿಯಾರಮ್ಮ ದೇವಿಯವರ ೧೩ ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮುಂಜಾನೆ ಏರ್ಪಡಿಸಿದ್ದ…

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.