ತುಮಕೂರು

ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳದ ಬಗ್ಗೆ ಚಿಂತನೆ ಆಗುತ್ತಿದೆ. ವಯೋಮಿತಿ ಹೆಚ್ಚಳದ ಬಗ್ಗೆ ಬಹಳ ಒತ್ತಡಗಳು ಇದ್ದಾವೆ. ಈ ಹಿನ್ನೆಲೆಯಲ್ಲಿ ಯೋಚನೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಎಂದು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿರಿಯ ವಯಸ್ಸಲ್ಲಿ ಪೊಲೀಸ್‌ ಇಲಾಖೆಗೆ ಬಂದರೆ ಒಳ್ಳೆಯದಾಗುತ್ತದೆ ಎಂಬ ಭಾವನೆ ಮೊದಲಿನಿಂದಲೂ ಇದೆ. ಕಾನೂನು ತಜ್ಞರ ಜತೆ ಚರ್ಚೆ ಮಾಡಿ ಯೋಚನೆ ಮಾಡುತ್ತೇವೆ ಎಂದು ಹೇಳಿದರು.

ಇದೇವೇಳೆ ಸರಕಾರಿ ಕನ್ನಡ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಕಟಿಬದ್ಧವಾಗಿದೆ. ಒಂದೇ ವರ್ಷದಲ್ಲಿ8 ಸಾವಿರ ಕೊಠಡಿಗಳು ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು. ಜೊತೆಗೆ ಪಂಚಾಯಿತಿಗೊಂದು ಪಬ್ಲಿಕ್‌ ಶಾಲೆಗಳನ್ನು ಮಾಡಲು ಸರಕಾರ ಮುಂದಾಗಿದೆ. ಸಮಗ್ರವಾಗಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.

(Visited 1 times, 1 visits today)