ಪಾವಗಡ

ಮುಂಬರುವ 2023ರ ವಿಧಾನಸಭಾ ಚುನಾವಣೆಯ ಕಾವು ಪಾವಗಡದಲ್ಲಿ ದಿನದಿಂದ ದಿನಕ್ಕೆ ತೆರೆಮರೆಯಲ್ಲಿ ಹಲವು ಕಸರತ್ತುಗಳಿಗೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ನಡುವೆ ನೇರ ಫೈಟ್‌ ಇದೆಯಾದರೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಲ್ಲಿ ಎ. ನಾರಾಯಣಸ್ವಾಮಿ ಸಚಿವರಾಗಿರುವ ಹಿನ್ನೆಲೆಯಲ್ಲಿ, ಕಮಲ ಪಕ್ಷ ಕೂಡ ಈ ಬಾರಿ ಉತ್ತಮ ಸ್ಪರ್ಧೆಯೊಡ್ಡುವ ಆಶಾಭಾವನೆಯಲ್ಲಿದೆ. ಹಾಗಾಗಿ, ಗಡಿನಾಡೀಗ ತ್ರಿಕೋನ ಸ್ಪರ್ಧೆಗೆ ಸಿದ್ಧವಾಗುತ್ತಿದೆ ಎಂದೇ ಹೇಳಬಹುದು.

ಪ್ರಸ್ತುತ ಪಾವಗಡಲ್ಲಿ ಕಾಂಗ್ರೆಸ್‌ನ ಶಾಸಕರು, ಮಾಜಿ ಸಚಿವರಾಗಿರುವ ವೆಂಕಟರಮಣಪ್ಪ ಹಾಗೂ ಪುತ್ರ ಹೆಚ್‌.ವಿ.ವೆಂಕಟೇಶ್‌ ಸೇರಿ ಚುನಾವಣೆ ದಿನಾಂಕ ಘೋಷಣೆಯಾಗುವುದಕ್ಕಿಂತ ಮುಂಚೆಯೇ ಪ್ರಚಾರ ಜೋರಾಗಿಯೇ ಆರಂಭಿಸಿದ್ದಾರೆ. ತಾಲೂಕಿನಾದ್ಯಂತ ಪಕ್ಷ ಸಂಘಟನೆಗಾಗಿ ಪಕ್ಷಾತೀತವಾಗಿ ಹಲವು ಮುಖಂಡರನ್ನು ಭೇಟಿ ಮಾಡುವ ಮೂಲಕ ಮತ ಬೇಟೆ ನಡೆಸಿದ್ದಾರೆ.

(Visited 1 times, 1 visits today)