ತುಮಕೂರು


ನಗರದ ಡಿ.ಎ.ಆರ್. ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ತುಮಕೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಇಂದು ವಿದ್ಯುಕ್ತ ಚಾಲನೆ ನೀಡಲಾಯಿತು.
ಮೈಸೂರು ಜಿಲ್ಲೆ ಸಾಲಿಗ್ರಾಮ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷರಾದ ದೇವಿಕ ಅವರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಮತ್ತು ಬಲೂನ್‍ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.
ನಂತರ ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಣದ ಅರ್ಹತೆ ಹೊಂದಿರುವ ಮಂಗಳಮುಖಿಯರಿಗೆ ಪೆÇಲೀಸ್ ಇಲಾಖೆ ಸೇರಿದಂತೆ ಇತರೆ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಮಂಗಳಮುಖಿಯರಲ್ಲಿ ಓದಿದವರು ಇದ್ದಾರೆ. ಅಂತಹವರಿಗೆ ಸರ್ಕಾರಿ ಉದ್ಯೋಗ ನೀಡಿದರೆ ಬದುಕಿಗೆ ತುಂಬಾ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಮಂಗಳಮುಖಿಯರಿಗೆ ಪೊಲೀಸ್ ಇಲಾಖೆಯಲ್ಲಿ ಹೆಚ್ಚು ಉದ್ಯೋಗ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಕೋರಿದರು.
ಮಂಗಳಮುಖಿಯರು ಇರಲು ಸೂರು ಇಲ್ಲದೆ ಬದುಕು ದೂಡುವಂತಾಗಿದೆ. ಸರ್ಕಾರ ಮಂಗಳಮುಖಿಯರಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಸಿಕೊಡುವ ಮೂಲಕ ಇತರರಂತೆ ಸಮಾಜದಲ್ಲಿ ಬದುಕು ನಡೆಸಲು ಅನುಕೂಲ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು.
ಮಂಗಳಮುಖಿಯರು ಎಲ್ಲೇ ಇರಲಿ, ಹೇಗೆ ಇರಲಿ ಪೊಲೀಸ್ ಅಧಿಕಾರಿಗಳು ತುಂಬಾ ಸಹಾಯ ಮಾಡುತ್ತಾರೆ. ನಮಗೆ ಸದಾ ಪೊಲೀಸ್ರ ಸಹಕಾರ ಅತ್ಯವಶ್ಯವಾಗಿದೆ ಎಂದರು.
ಮಂಗಳಮುಖಿಯರು ಸಾಧನೆ ಮಾಡಲು ಕುಟುಂಬದವರೇ ಸಹಕರಿಸುವುದಿಲ್ಲ. ಎಷ್ಟೋ ತಾಯಿ ತಂದೆ, ಅಣ್ಣ ತಮ್ಮಂದಿರುವ ಮಂಗಳಮುಖಿಯರು ಎಂದಾಕ್ಷಣ ಮನೆಯಿಂದ ಹೊರಗೆ ಹಾಕುತ್ತಾರೆ. ಹೀಗಾಗಿ ಮಂಗಳಮುಖಿಯರಾದ ನಾವು ಭಿಕ್ಷಾಟನೆ ಮಾಡುತ್ತಾ ಜೀವನ ನಡೆಸಬೇಕಾಗಿದೆ ಎಂದರು.
ಜನಸಾಮಾನ್ಯರು ನೀಡುವ ಕಾಣಿಕೆ ಹಣದಲ್ಲಿ ಮಂಗಳಮುಖಿಯರು ಅನಾಥ ಮಕ್ಕಳನ್ನು ಸಾಕುತ್ತಿದ್ದಾರೆ. ಜತೆಗೆ ಬಡವರಿಗೂ ದಾನ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್‍ವಾಡ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸಾಮಾನ್ಯವಾಗಿ ವಿಶೇಷ ಕಾರ್ಯಕ್ರಮಗಳನ್ನು ಉನ್ನತ ಅಧಿಕಾರಿಗಳು ಚಾಲನೆ ನೀಡುವುದು ಮೊದಲಿನಿಂದಲು ನಡೆದು ಬಂದ ಪ್ರತೀತಿ. ಆದರೆ ತುಮಕೂರಿನಲ್ಲಿ ಸೋಮವಾರ ನಡೆದ ಪೋಲಿಸ್ ಕ್ರೀಡಾಕೂಟವನ್ನು ಮಂಗಳಮುಖಿ ಉದ್ಘಾಟಿಸಿರುವುದು ವಿಶೇಷವಾಗಿದ್ದು, ಸಾಮಾನ್ಯ ತೃತೀಯ ಲಿಂಗಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವರಿಂದ ಚಾಲನೆ ಮಾಡಿಸಿರುವ ಎಸ್‍ಪಿ ರಾಹುಲ್‍ಕುಮಾರ್ ಶಹಪೂರ್‍ವಾಡ್ ಅವರಿಗೆ ಪೊಲೀಸ್ ಇಲಾಖೆಯಿಂದ ಅಲ್ಲದೆ ರಾಜ್ಯಾದ್ಯಂತ ಸಾರ್ವಜನಿಕವಾಗಿ ಪ್ರಶಂಸೆ ಮೂಡಿದೆ.ಎಲ್ಲಾರು ಸಮಾನರು ಈ ಸಮಾಜದಲ್ಲಿ ಪ್ರತಿ ಪ್ರಜೆಗೂ ವಿಶೇಷ ಸ್ಥಾನ ಮಾನ ದೊರಕಿಸಿ ಕೊಡಬೇಕೆಂಬ ವಿಶಾಲ ಮನೋಭಾವದಿಂದ ರಾಹುಲ್‍ಕುಮಾರ್ ಶಹಪೂರ್‍ವಾಡ್ ನಡೆ ಮುಂದಿನ ದಿನಮಾನಗಳಲ್ಲಿ ಪೊಲೀಸ್ ಇಲಾಖೆಯಲ್ಲದೆ ಅನ್ಯ ಇಲಾಖೆಗಳಿಗೂ ಪ್ರೇರೆಪಣೆ ನೀಡಿದಂತಾಗಿದೆ ಇವರ ಮನವೀಯತೆಯ ನಡೆಯ ಬಗ್ಗೆ ಪ್ರಶಂಸೆಯ ಮಹಾಪೂರವೆ ಹರಿದುಬಂದಿದೆ.
ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಉಪವಿಭಾಗದ ಪೊಲೀಸ್  ಕ್ರೀಡಾಪಟುಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ಅಡಿಷನಲ್ ಎಸ್ಪಿ ಟಿ.ಜೆ. ಉದೇಶ್, ತಿಪಟೂರು ಉಪವಿಭಾಗದ ಎಎಸ್ಪಿ ಸಿದ್ದಾರ್ಥ ಸೇರಿದಂತೆ ಜಿಲ್ಲೆಯ ಎಲ್ಲ ಉಪವಿಭಾಗಾಗಳ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

 

(Visited 3 times, 1 visits today)