BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್
  • ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ
  • ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ
  • ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ
  • ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ
  • ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ
  • ವೃದ್ಧಿ ಕಾಮತ್ ರಂಗಪ್ರವೇಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೌಚಾಲಯ ರಹಿತ ಕುಟುಂಬಗಳಿಗೆ 6 ವಾರದೊಳಗಾಗಿ ಶೌಚಾಲಯವನ್ನು ನಿರ್ಮಿಸಿ
Trending

ಶೌಚಾಲಯ ರಹಿತ ಕುಟುಂಬಗಳಿಗೆ 6 ವಾರದೊಳಗಾಗಿ ಶೌಚಾಲಯವನ್ನು ನಿರ್ಮಿಸಿ

By News Desk BenkiyabaleUpdated:March 10, 2020 6:56 pm

ತುಮಕೂರು :

      ಕಳೆದ 2012ರಲ್ಲಿ ನಡೆಸಿದ ಬೇಸ್‍ಲೈನ್ ಸರ್ವೆ ಸಮೀಕ್ಷೆಯಲ್ಲಿ ಹೊರಗುಳಿದ ಎಲ್ಲ ಶೌಚಾಲಯ ರಹಿತ ಕುಟುಂಬಗಳಿಗೆ ಮುಂದಿನ 6 ವಾರದೊಳಗಾಗಿ ತಪ್ಪದೇ ಶೌಚಾಲಯವನ್ನು ನಿರ್ಮಿಸಿಕೊಡಬೇಕು ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯದರ್ಶಿ ಪರಮೇಶ್ವರನ್ ಅಯ್ಯರ್ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದರು.

      ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು 10 ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸ್ವಚ್ಛ ಭಾರತ್ ಮಿಷನ್(ಗ್ರಾ)ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಬಯಲು ಬಹಿರ್ದೆಸೆ ಮುಕ್ತ ರಾಷ್ಟ್ರವನ್ನಾಗಿ ನಿರ್ಮಿಸಲು ಕೇಂದ್ರವು ಮಹತ್ವಾಕಾಂಕ್ಷಿ ಸ್ವಚ್ಛಭಾರತ್ ಮಿಷನ್(ಗ್ರಾ) ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ಜಾರಿಗೆ ಬಂದು 5 ವರ್ಷ ಕಳೆದಿದ್ದು, ಮುಂದಿನ 5 ವರ್ಷಗಳಿಗಾಗಿ 2ನೇ ಹಂತದಲ್ಲಿ ಸ್ವಚ್ಛಭಾರತ್(ಮಿಷನ್) ಯೋಜನೆಯನ್ನು ಅನುಷ್ಠಾನಗೊಳಿಸಲು ಯೋಜಿಸಲಾಗಿದೆ. ಇದಕ್ಕಾಗಿ 1.4ಲಕ್ಷಕೋಟಿ ರೂ.ಗಳ ಅಂದಾಜು ವೆಚ್ಚದ ಅನುದಾನವನ್ನು ಬಿಡುಗಡೆ ಮಾಡಲಾಗುವುದೆಂದು ತಿಳಿಸಿದರು.

      ಕರ್ನಾಟಕ ರಾಜ್ಯದಲ್ಲಿ ಸ್ವಚ್ಛಭಾರತ್ ಯೋಜನೆಯಡಿ ವೈಯಕ್ತಿಕ/ಸಮುದಾಯ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಬಯಲು ಬಹಿರ್ದೆಸೆ ಮುಕ್ತ ರಾಜ್ಯವಾಗಿ ರೂಪುಗೊಳ್ಳುತ್ತಿದೆ. ಶೌಚಾಲಯ ನಿರ್ಮಾಣ ಪ್ರಗತಿಯಲ್ಲಿ ತುಮಕೂರು ಜಿಲ್ಲೆ ಮುಂದಿದ್ದು, ಜಿಲ್ಲೆಯನ್ನು ಈಗಾಗಲೇ ಬಯಲು ಶೌಚಮುಕ್ತವೆಂದು ಘೋಷಿಸಲಾಗಿದೆ. ಆದರೂ ಕೆಲವರು ಅರಿವಿನ ಕೊರತೆಯಿಂದ ಇನ್ನೂ ಬಯಲು ಶೌಚದಿಂದ ಮುಕ್ತರಾಗಿಲ್ಲ. ಈ ನಿಟ್ಟಿನಲ್ಲಿ ಕಡ್ಡಾಯವಾಗಿ ಶೌಚಾಲಯಗಳನ್ನು ಬಳಸುವಂತೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಮೂಲಕ ಅವರ ಮನಸ್ಸನ್ನು ಪರಿವರ್ತಿಸಬೇಕು. ಜನರ ಮನಸ್ಸನ್ನು ಬದಲಾಯಿಸಲು ಕನಿಷ್ಟ 3 ವರ್ಷಗಳಾದರೂ ಬೇಕಾಗುತ್ತದೆ. ಜನರ ಮನಸ್ಸನ್ನು ಬದಲಾಯಿಸುವುದು ಒಂದು ಸವಾಲಿನ ವಿಷಯವಾಗಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದ ನಂತರ ಆಯಾ ಜಿಲ್ಲೆಯಲ್ಲಿರುವ ಸಾಮೂಹಿಕ ಶೌಚಾಲಯ/ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿರುವ ಬಗ್ಗೆ ಹಾಜರಿದ್ದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಂದ ಮಾಹಿತಿ ಪಡೆದರು.

      ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರಾಜ್ಯ ಆಯುಕ್ತ ಡಾ: ಆರ್. ವಿಶಾಲ್ ಮಾತನಾಡಿ, ವೈಯಕ್ತಿಕ ಶೌಚಾಲಯ ನಿರ್ಮಾಣ ಕಾರ್ಯದ ನಿಗಧಿತ ಗುರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಪ್ರಸಕ್ತ ವರ್ಷ ಜನಗಣತಿ ನಡೆಯಲಿದ್ದು, ಗಣತಿದಾರರು ಗಣತಿ ಕಾರ್ಯಕ್ಕೆ ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶೌಚಾಲಯದ ಸೌಲಭ್ಯವಿರುವ, ಅದನ್ನು ಬಳಕೆ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಬೇಕು. ಮಾಹಿತಿಯನ್ನು ಕಡ್ಡಾಯವಾಗಿ ಸಂಗ್ರಹಿಸಿದಾಗ ಮಾತ್ರ ಶೇ. 100ರಷ್ಟು ಶೌಚಾಲಯ ನಿರ್ಮಾಣ ಮಾಡಲು ಸಾಧ್ಯ. ಪ್ರಸಕ್ತ ಜನಗಣತಿ ಕಾರ್ಯದಲ್ಲಿ ಸಂಗ್ರಹವಾಗುವ ಅಂಕಿ-ಅಂಶ ಹಾಗೂ ಬೇಸ್‍ಲೈನ್ ಸರ್ವೆ ಸಮೀಕ್ಷೆಯ ಅಂಕಿ-ಅಂಶಗಳಿಗೆ ತಾಳೆಯಾಗಬೇಕು. ತಪ್ಪಿದಲ್ಲಿ ಯೋಜನೆಯ ಯಶಸ್ವಿ ಅನುಷ್ಠಾನ ಕಷ್ಟಸಾಧ್ಯ ಎಂದು ತಿಳಿಸಿದರು. ಗ್ರಾಮೀಣ ನೀರು ಸರಬರಾಜಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾತನಾಡಿದ ಅಯ್ಯರ್ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಶೇ.40ರಷ್ಟು ಮಾತ್ರ ಕುಡಿಯುವ ನೀರು ಸರಬರಾಜು ಆಗುತ್ತಿದ್ದು, ಇದನ್ನು ಮುಂದಿನ 5 ವರ್ಷಗಳೊಳಗೆ ಶೇ.100ರಷ್ಟು ಪ್ರಮಾಣಕ್ಕೆ ತರುವ ಉದ್ದೇಶವಿದೆ. ಇದಕ್ಕಾಗಿ ಪ್ರಧಾನಮಂತ್ರಿ ಮೋದಿ ಅವರು ಕಳೆದ 2019ರಲ್ಲಿ ಜಲ್-ಜೀವನ್ ಮಿಷನ್ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಯಡಿ ನೀರಿನ ಮೂಲಗಳ ಮರುಪೂರಣ, ಮಳೆ ನೀರು ಮರುಬಳಕೆಗೆ ಆದ್ಯತೆ ನೀಡಲಾಗುವುದೆಂದರು.

      ಡಾ|| ವಿಶಾಲ್ ಮಾತನಾಡಿ, ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ನೀಡಲು “ಮನೆ-ಮನೆಗೆ ಗಂಗೆ” ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರಲು ಪ್ರಸಕ್ತ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ್ದಾರೆ. ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಎಲ್ಲಾ ಗ್ರಾಮ ಪಂಚಾಯತಿ ಅಧಿಕಾರಿಗಳು ಕ್ರಿಯಾ ಯೋಜನೆ ಸಿದ್ಧಪಡಿಸಬೇಕೆಂದು ಸೂಚನೆ ನೀಡಿದರಲ್ಲದೆ ಮನೆ-ಮನೆಗೆ ನೀರಿನ ಸಂಪರ್ಕ ಕಲ್ಪಿಸುವುದು ಮಾತ್ರವಲ್ಲ. ನೀರು ಸರಬರಾಜು ಮಾಡಲು ಶುಲ್ಕ ನಿಗಧಿಪಡಿಸಿ ವಸೂಲಿ ಮಾಡಬೇಕು. ವಸೂಲಾದ ಶುಲ್ಕವನ್ನು ಕುಡಿಯುವ ನೀರು ನಿರ್ವಹಣೆಗೆ ವಿನಿಯೋಗಿಸಬೇಕೆಂದು ಸಲಹೆ ನೀಡಿದರು.

      ರಾಜ್ಯದಲ್ಲಿ ಬೇಸ್‍ಲೈನ್ ಸರ್ವೆ ಸಮೀಕ್ಷೆ(LOB = Left out basic line survey)ಯಿಂದ ಹೊರಗುಳಿದ ಕುಟುಂಬಗಳಿಗೆ 268341 ಹಾಗೂ ಬೇಸ್‍ಲೈನ್ ಸರ್ವೇಯಿಂದ ಯಾರೂ ತಪ್ಪಿಸಿಕೊಳ್ಳದಂತೆ (NOLB= No one Left out behind) ಉದ್ದೇಶಿತ ಕುಟುಂಬಗಳಿಗೆ 174990 ಸೇರಿದಂತೆ ಒಟ್ಟು 443331 ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದ್ದು, ಈ ಪೈಕಿ ಈಗಾಗಲೇ 347670 ಶೌಚಾಲಯಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಅದೇ ರೀತಿ ತುಮಕೂರು ಜಿಲ್ಲೆಗೆ ಸಂಬಂಧಿಸಿದಂತೆ LOB Cr ಅಡಿ ನಿಗಧಿಪಡಿಸಲಾಗಿದ್ದ 10566 ಶೌಚಾಲಯ ನಿರ್ಮಿಸುವ ಗುರಿಯ ಪೈಕಿ ಶೇ. 98ರಷ್ಟು ಪ್ರಗತಿ ಸಾಧಿಸಲಾಗಿದೆ. ಓಔಐಃ ಅಡಿ ಶೇ. 9.42 ಮಾತ್ರ ಗುರಿ ಸಾಧಿಸಿದ್ದು, ಮುಂದಿನ 6 ವಾರಗಳೊಳಗೆ ಪೂರ್ಣ ಪ್ರಮಾಣದ ಪ್ರಗತಿ ಸಾಧಿಸಲು ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ ಜಿಲ್ಲೆಯಲ್ಲಿ ಪ್ರತಿ ತಾಲ್ಲೂಕಿಗೆ ತಲಾ 10ರಂತೆ 100 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು, ಇದಕ್ಕಾಗಿ ಮೊದಲ ಹಂತದಲ್ಲಿ (ಪ್ರತಿ ಘಟಕಕ್ಕೆ 1.80ಲಕ್ಷ ರೂ.ಗಳಂತೆ ಅಂದಾಜು ವೆಚ್ಚದಂತೆ) 90ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಉಳಿದಂತೆ ಅಗತ್ಯವಿರುವ 90 ಲಕ್ಷ ರೂ.ಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದೇ ರೀತಿ ಘನತ್ಯಾಜ್ಯ ಘಟಕ ನಿರ್ವಹಣೆಗಾಗಿ ಜಿಲ್ಲೆಗೆ 50 ಘಟಕಗಳನ್ನು ನಿರ್ಮಿಸುವ ಗುರಿಯಿದ್ದು, 44 ಘಟಕಗಳ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರೆತಿದೆ. ಘನತ್ಯಾಜ್ಯ ಘಟಕ ನಿರ್ಮಾಣಕ್ಕಾಗಿ ಸರ್ಕಾರದಿಂದ 4.35ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ 25 ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿ ಕಸ ಸಂಗ್ರಹಣೆ ಮಾಡಲಾಗುತ್ತಿದೆ ಎಂದು ಶುಭಾ ಕಲ್ಯಾಣ್ ಸಭೆಗೆ ಮಾಹಿತಿ ನೀಡಿದರು.

      ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ ಸೇರಿದಂತೆ 10 ಜಿಲ್ಲೆಗಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಗ್ರಾಮ ಪಂಚಾಯತಿಗಳ ಪಿಡಿಓಗಳು, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 9 times, 1 visits today)
Previous Articleಬೆಂಗಳೂರಿನಲ್ಲಿ ಕೊರೋನಾ ವೈರಸ್ ಪತ್ತೆ : ಜಿಲ್ಲೆಯಲ್ಲಿ ಮುಂಜಾಗ್ರ ಡಿ.ಸಿ. ಸೂಚನೆ
Next Article ಮಾ.15ರಂದು ಸಪ್ತಪದಿ ಸಾಮೂಹಿಕ ವಿವಾಹ ವಿಚಾರ ಸಂಕಿರಣ
News Desk Benkiyabale

Related Posts

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm
ಇತರೆ ಸುದ್ಧಿಗಳು

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

October 24, 2025 1:29 pm
ಇತರೆ ಸುದ್ಧಿಗಳು

ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ

October 24, 2025 1:28 pm
ಇತರೆ ಸುದ್ಧಿಗಳು

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm
ಇತರೆ ಸುದ್ಧಿಗಳು

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm
ಇತರೆ ಸುದ್ಧಿಗಳು

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm
Our Youtube Channel
Our Picks

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

October 24, 2025 1:29 pm

ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ

October 24, 2025 1:28 pm

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

By News Desk BenkiyabaleOctober 24, 2025 1:30 pm

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕ ಬಿ.ಸುರೇಶ್‌ಗೌಡರು ಕೋಟ್ಯಾಂತರ ರೂ.ಗಳ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ…

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

October 24, 2025 1:29 pm

ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ

October 24, 2025 1:28 pm

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.