ಕೊರಟಗೆರೆ


ರೈತರ ಬೆಳೆಯ ರಕ್ಷಣೆಗೆ ಬೆಳೆವಿಮೆ ಮತ್ತು ಕೃಷಿಬೆಳೆ ವಹಿವಾಟಿಗೆ ರಾಗಿ ಖರೀದಿಕೇಂದ್ರ ಅವಶ್ಯಕತೆ ಇದೆ. ಕೊರಟಗೆರೆ ಕ್ಷೇತ್ರದ ರೈತರ ಮನವಿಗೆ ಮಾಜಿ ಸಿಎಂ ಕುಮಾರಣ್ಣ ಉತ್ತರ ನೀಡಿದ್ದಾರೆ. ಕೊರಟಗೆರೆಯಲ್ಲಿ ರೈತಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು.
ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ರೈತನಾಯಕ ಕುಮಾರಣ್ಣನ ಜೊತೆ ರೈತಚೈತನ್ಯ ಮತ್ತು ರೈತ ಸಂಕ್ರಾಂತಿಯ ವಿಡೀಯೊ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕದ 224ಕ್ಷೇತ್ರದ ರೈತರ ಸಂಕಷ್ಟವನ್ನು ತಿಳಿಯುವ ಉದ್ದೇಶದಿಂದ ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮ ನಡೆದಿದೆ. ರೈತನ ಪರವಾಗಿ ಸದಾ ಚಿಂತಿಸುವ ರೈತನಾಯಕ ಕುಮಾರಣ್ಣ ಮುಖ್ಯಮಂತ್ರಿ ಆದರೇ ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಆಗಲಿದೆ. ಕೊರಟಗೆರೆಯ ರೈತರು ಮುಸುಕಿನ ಜೋಳ ಮತ್ತು ರಾಗಿಬೆಳೆಯ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ ಎಂದು ಹೇಳಿದರು.
ತೋವಿನಕೆರೆ ರೈತ ಭೀಮರಾಜು ಮಾತನಾಡಿ ಕೊರಟಗೆರೆ ಕ್ಷೇತ್ರದಲ್ಲಿ ಮಳೆಯಿಂದ ರಾಗಿಬೆಳೆಯು ಕೊಚ್ಚಿಹೋಗಿದೆ. ರಾಗಿಬೆಳೆಗೆ ಸರಕಾರ ಬೆಂಬಲ ಬೆಲೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಗಿ ಮಾರಾಟಕ್ಕೆ ಕೊರಟಗೆರೆ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕೊರಟಗೆರೆ ಕ್ಷೇತ್ರಕ್ಕೆ ರಾಗಿ ಖರೀದಿ ಕೇಂದ್ರದ ಅವಶ್ಯಕತೆಯು ಇದೆ. ಸರಕಾರ ರಾಗಿಬೆಳೆಗೆ ಬೆಂಬಲ ಬೆಲೆಯ ಜೊತೆ ಆರ್ಥಿಕವಾಗಿ ಅನುಕೂಲ ಕಲ್ಪಿಸಬೇಕಿದೆ ಎಂದು ಮನವಿ ಮಾಡಿದರು.
ಪುರವಾರ ರೈತ ಗೋವರ್ಧನ್ ಮಾತನಾಡಿ ಕೃಷಿಬೆಳೆಗೆ ಸರಕಾರ ಬೆಳೆವಿಮೆ ಕಟ್ಟಿಸಿಕೊಂಡಿದೆ. ಮಳೆರಾಯನ ಆರ್ಭಟಕ್ಕೆ ಕೃಷಿಬೆಳೆಯು ಸಂಪೂರ್ಣ ನಷ್ಟವಾಗಿದೆ. ಬೆಳೆವಿಮೆ ಯೋಜನೆಯಿಂದ ರೈತರಿಗೆ ಅನುಕೂಲ ಆಗುತ್ತೀಲ್ಲ. ಕೊರಟಗೆರೆಯ ರೈತರಿಗೆ ಲಕ್ಷಾಂತರ ರೂ ಬೆಳೆನಷ್ಟವಾದ್ರು ಬೆಳೆವಿಮೆಯ ಹಣವೇ ಬರುತ್ತೀಲ್ಲ. ರೈತರು ಯಾವ ಇಲಾಖೆಗೆ ಕೇಳಬೇಕು ಎಂಬುದೇ ಗೋತ್ತಿಲ್ಲ ಎಂದು ತಿಳಿಸಿದರು.
ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ, ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಜಿಪಂ ಸದಸ್ಯ ಶಿವರಾಮಯ್ಯ, ಮುಖಂಡರಾದ ಸಿದ್ದಮಲ್ಲಪ್ಪ, ಕಾಮರಾಜು, ವೀರಕ್ಯಾತರಾಯ, ಲಕ್ಷ್ಮೀಕಾಂತ, ರವಿವರ್ಮ, ಸಾಕಣ್ಣ, ನಾಗರಾಜು, ರಮೇಶ್, ಸತೀಶ್, ಲಕ್ಷ್ಮೀನರಸಪ್ಪ ಇದ್ದರು.

(Visited 4 times, 1 visits today)