ತುಮಕೂರು


ವಿಧಾನಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ದುರ್ಬಲ ವರ್ಗಗಳ ಜನರು ವಾಸಿಸುವ ಪ್ರದೇಶದ ನಕ್ಷೆ ತಯಾರಿಕೆಗೆ ಸಂಬಂಧಿಸಿದಂತೆ ಹೊಸದಾಗಿ ನೇಮಕ ಮಾಡಲಾದ ಸೆಕ್ಟರ್ ಅಧಿಕಾರಿ ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ಸಂಜೆ ತರಬೇತಿ ನೀಡಲಾಯಿತು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್‍ವಾಡ್ ಅವರು ಜಂಟಿಯಾಗಿ ಅಧಿಕಾರಿಗಳಿಗೆ ತರಬೇತಿ ನೀಡಿದರು.
ನೇಮಕವಾದ ಸೆಕ್ಟರ್ ಅಧಿಕಾರಿಗಳು ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳು ತಮ್ಮ ಮತಗಟ್ಟೆ ವ್ಯಾಪ್ತಿಯ ವಲ್ನರೆಬಲ್/ಕ್ರಿಟಿಕಲ್ ಪ್ರದೇಶಗಳಿದ್ದಲ್ಲಿ ಅವುಗಳನ್ನು ಗುರುತಿಸಿ ಸೋಮವಾರದೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ತರಬೇತಿಯಲ್ಲಿ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಯೋಗಾನಂದ, ತಹಶೀಲ್ದಾರ್ ಸಿದ್ದೇಶ್, ಡಿವೈಎಸ್‍ಪಿ, ಪಿಎಸ್‍ಐಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 2 times, 1 visits today)