ಕೊರಟಗೆರೆ


ದಕ್ಷಿಣ ಭಾರತದ ಐತಿಹಾಸಿಕ ಪವಿತ್ರ ಪುಣ್ಯಕ್ಷೇತ್ರ ಕ್ಯಾಮೇನಹಳ್ಳಿಯ ಶ್ರೀಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 25ಸಾವಿರಕ್ಕೂ ಅಧಿಕ ಆಂಜನೇಯ ಭಕ್ತರ ಸಮ್ಮುಖದಲ್ಲಿ ಶನಿವಾರ ಅದ್ದೂರಿಯಿಂದ ನಡೆಯಿತು.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಕ್ಯಾಮೇನಹಳ್ಳಿಯ ಶ್ರೀಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮವು ಕಳೆದ 4ವರ್ಷಗಳ ನಂತರ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಆಂಜನೇಯ ಸ್ವಾಮಿ ಜಾತ್ರೆಗೆ ಆಗಮಿಸಿದ್ದ ಭಕ್ತರಿಗೆ ದಾನಿಗಳಿಂದ ಪ್ರಸಾದ ಮತ್ತು ಸಕಲ ಸೌಲಭ್ಯವನ್ನು ಕಲ್ಪಿಸಿದ್ದರು.
ಆಂಜನೇಯ ದೇವಾಲಯದಲ್ಲಿ ಬ್ರಹ್ಮ
ರಥೋತ್ಸವದ ಪ್ರಯುಕ್ತ ಜ.27ರಿಂದ ವಿಶೇಷ ಕಾರ್ಯಕ್ರಮ ಪ್ರಾರಂಭವಾಗಿ ಅಂಕುರಾರ್ಪಣೆ, ಗಜೇಂದ್ರ ಮೋಕ್ಷ, ಕಲ್ಯಾಣೋತ್ಸವ, ಬ್ರಹ್ಮ ರಥೋತ್ಸವ, ಮೈಲಿಗೆ ರಥೋತ್ಸವ, ಮಂಟಪೋತ್ಸವ, ವಸಂತೋತ್ಸವ, ಪಲ್ಲಕ್ಕಿ ಉತ್ಸವ, ಗರುಡೋತ್ಸವ, ಗಜವಾಹನ ಮತ್ತು ಮಹಾಭಿಷೇಕವು ಫೆ.6ಕ್ಕೆ ಮುಕ್ತಾಯವಾಗಿ ಸತತ 12ದಿನಗಳ ಕಾಲ ವಿಶೇಷವಾಗಿ ನಡೆಯಲಿವೆ.
ಮಾಜಿ ಜಿಪಂ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಬ್ರಹ್ಮ ರಥೋತ್ಸವ-ದೇವಾಲಯಕ್ಕೆ ಹೂವಿನ ಅಲಂಕಾರ ಮತ್ತು ಪ್ರಸಾದ ವಿನಿಯೋಗ, ಭೀಮಸಂದ್ರ ಮಹೇಶ್ ಆಂಜನೇಯ ಸ್ವಾಮಿಯ ವಿಗ್ರಹ ಮತ್ತು ಗರ್ಭಗುಡಿಗೆ ವಿಶೇಷ ಹೂವಿನ ಅಲಂಕಾರ, ಹತ್ತಾರು ಭಕ್ತಾಧಿಗಳಿಂದ 20ಕ್ಕೂ ಅಧಿಕ ಕಡೆಗಳಲ್ಲಿ ವಿಶೇಷವಾಗಿ ಪ್ರಸಾದ ವಿನಿಯೋಗ ಮಾಡಿದ್ದರು. ಕೊರಟಗೆರೆ ಸಿಪಿಐ ಸುರೇಶ್ ಮತ್ತು ಪಿಎಸೈ ಚೇತನ್ ನೇತೃತ್ವದಲ್ಲಿ ವಿಶೇಷವಾಗಿ ಬಂದೋಬಸ್ತ್ ಮತ್ತು ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.
ಬ್ರಹ್ಮ ರಥೋತ್ಸವ ಕಾರ್ಯಕ್ರಮಕ್ಕೆ ಶಾಸಕ ಡಾ.ಜಿ.ಪರಮೇಶ್ವರ್, ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್, ನಿವೃತ್ತ ಐಎಎಸ್ ಅಧಿಕಾರಿ ಬಿ.ಹೆಚ್.ಅನಿಲ್‍ಕುಮಾರ್, ಅರ್ಚಕರಾದ ಕೃಷ್ಣಚಾರ್, ಗೋಕುಲ, ಮುಖಂಡರಾದ ಜಿ.ವಿ.ರಾಮಮೂರ್ತಿ, ಜಯರಾಂ, ಕವಿತಾ, ನಂಜುಂಡಯ್ಯ, ಶ್ರೀನಿವಾಸ್, ಪ್ರಕಾಶ್, ಶಶಿಕುಮಾರ್, ಉಮಶಂಕರ್, ರಂಗನಾಥ, ಮರುಡಪ್ಪ, ವೆಂಕಟೇಶ್ ಸೇರಿದಂತೆ ಸಾವಿರಾರು ಭಕ್ತಾಧಿಗಳು ಆಂಜನೇಯ ಸ್ವಾಮಿಯ ದರ್ಶನ ಪಡೆದರು.

(Visited 1 times, 1 visits today)