ಚಿಕ್ಕನಾಯಕನಹಳ್ಳಿ


ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನವದಂಪತಿಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹುಳಿಯಾರುಗೇಟ್ ಬಳಿ ಶನಿವಾರ ನಡೆದಿದೆ.
ಪಟ್ಟಣದ ಅಂಬೇಡ್ಕರ್ ನಗರದಬಳಿಯ ಹೆದ್ದಾರಿಯಲ್ಲಿ ಹುಳಿಯಾರು ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿ ಮುಂದೆ ಹೋಗುತ್ತಿದ್ದ ಸರ್ಕಾರಿ ಬಸ್‍ನ್ನು ಹಿಂದಿಕ್ಕುವ ಧಾವಂತದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿಗಳು ಸ್ಥಳದಲ್ಲಿಯೇ ಮೃತಪಟ್ಟರು, ಕಾರಿನ ಚಾಲಕನಿಗೆ ತೀವ್ರ ಗಾಯಗಳಾಗಿದ್ದು ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮೃತಪಟ್ಟ ದಂಪತಿಗಳಾದ ಮಧು ಹಾಗೂ ಅನುಷ ತಿಪಟೂರು ಬಳಿಯ ಮಾದಿಹಳ್ಳಿ ಗ್ರಾಮದವರಾಗಿದ್ದು, ಕೆಲ ತಿಂಗಳ ಹಿಂದೆ ವಿವಾಹವಾಗಿದ್ದರೆನ್ನಲಾಗಿದೆ. ಮದುವೆ ಕಾರ್ಯಕ್ರಮಕ್ಕಾಗಿ ಬಳ್ಳಾರಿಗೆ ತರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಲಾರಿ ಚಾಲಕ ತಪ್ಪಿಸಿಕೊಂಡಿದ್ದು, ಪ್ರಕರಣ ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ದಾಖಲಾಗಿದೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದ್ದು, ಮೃತ ದೇಹಗಳನ್ನು ಕಾರಿನಿಂದ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕರಿಸಿದರು.
ಚಿತ್ರ; 11ಸಿಎನ್‍ಎಚ್1ಇಪಿ. ಶೀರ್ಷಿಕೆ: ಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಮಧು ಹಾಗೂ ಅನುಷ ನೂತನ ದಂಪತಿಗಳು. 11ಸಿಎನ್‍ಎಚ್1.ಇಪಿ. ಅಪಘಾತದಿಂದ ನುಜ್ಜುಗುಜ್ಜಾದ ಕಾರಿನಲ್ಲಿ ಮೃತಪಟ್ಟ ದಂಪತಿಗಳು.

(Visited 1 times, 1 visits today)