ಕೊರಟಗೆರೆ


15ವರ್ಷಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಅವಕಾಶ ನೀಡಿದ್ದೀರಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಈ ಬಾರಿ ಬಿಜೆಪಿ ಬೆಂಬಲಿಸಿ ಕ್ಷೇತ್ರದಲ್ಲಿನ ಕುಂದುಕೊರತೆಗಳನ್ನು ಸರಿಪಡಿಸಲು ಸಹಕರಿಸಿ ಎಂದು ಬಿಜೆಪಿ ಅಭ್ಯರ್ಥಿ ಬಿ.ಎಚ್ ಅನಿಲ್ ಕುಮಾರ್
ಕೋರ ಹೋಬಳಿಯ ಗೊಲ್ಲಹಳ್ಳಿ ಸುಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದು ಮತಯಾಚನೆ ಪ್ರಾರಂಭಿಸಿದ ಬಿ.ಹೆಚ್ ಅನಿಲ್ ಕುಮಾರ್ ಮತದಾರರನ್ನು ಉದ್ದೇಶಿ ಮಾತನಾಡಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಮನೆ ಮನೆಗೆ ತೆರಳಿ ಬಿಜೆಪಿ ಯೋಜನೆಗಳನ್ನು ಜನರಿಗೆ ತಿಳಿಸಿ ಈ ಬಾರಿ ಬಿಜೆಪಿ ಪಕ್ಷಕ್ಕೆ ಮತನೀಡುವಂತೆ ಅಭ್ಯರ್ಥಿ ಬಿ.ಎಚ್ ಅನಿಲ್ ಕುಮಾರ್ ಮನವಿ ಮಾಡಿದರು.
ಕೋರಾ ಹೋಬಳಿ ಸುಮಾರು 80 ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಕಮಲ ಗುರುತಿಗೆ ಮತನೀಡಿ ಎಂದು ಮನವಿ ಮಾಡಿದರು. ಎಲ್ಲಾ ಗ್ರಾಮಗಳಲ್ಲಿಯೂ ಅಭೂತಪೂರ್ವ ಬೆಂಬಲ ದೊರೆಯುತ್ತಿದ್ದು, ಈ ಬಾರಿ ಸುಮಾರು
25ಸಾವಿರ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಕ್ಷೇತ್ರದ ಜನತೆ ಅತೀ ಹೆಚ್ಚಿನ ಸಹಕರಿಸಿ ಎಂದರು.
ಬಿಬಿಎಂಪಿ ಮಾಜಿ ಕಾಪೆರ್Çೀರೆಟರ್ ಲೋಕೇಶ್ ಗೌಡ ಮಾತನಾಡಿದರು.
ಈ ಮತಯಾಚನೆ ಕಾರ್ಯಕ್ರಮದಲ್ಲಿ ಮಾಜಿ ಬಿಬಿಎಂಪಿ ಕಾಪೆರ್Çರೇಟರ್ ಲೋಕೇಶ್ ಗೌಡ, ಗುರುದತ್ತ್, ರೈತ ಮೋರ್ಚ ಅಧ್ಯಕ್ಷ
ವಿಶ್ವನಾಥ್ ಅಪ್ಪಾಜಪ್ಪ, ಯುವಮೋರ್ಚ ಅಧ್ಯಕ್ಷ ಅರುಣ್ ಕೆ.ಎಸ್ ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಇದ್ದರು.

(Visited 1 times, 1 visits today)