BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭಾರತೀಯ ಸೇನೆ ವಿಜಯ ಸಾಧಿಸಲಿ ಎಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ
  • ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!
  • ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ
  • ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ
  • ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ
  • ಸಮೀಕ್ಷೆಯಲ್ಲಿ ಬಂಜಾರ(ಲ0ಬಾಣಿ) ಎಂದು ನಮೂದಿಸಿ
  • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ
  • ನೂತನ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಪುರುಷೋತ್ತಮ ಎಂ.ಎಲ್. ಅವರು ಅಧಿಕಾರ ಸ್ವಿಕಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ವಿಷಯ ಪರಿಣತಿ ಅತ್ಯಗತ್ಯ
ಕರ್ನಾಟಕ ಸುದ್ಧಿಗಳು

ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ವಿಷಯ ಪರಿಣತಿ ಅತ್ಯಗತ್ಯ

By News Desk BenkiyabaleUpdated:August 11, 2023 6:07 pm

ತುಮಕೂರು


ಖಾಸಗಿಯವರು ಅಕ್ರಮವಾಗಿ ಒತ್ತುವರಿ ಮಾಡದಂತೆ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಿ ನ್ಯಾಯಾಲಯದಲ್ಲಿ ವ್ಯಾಜ್ಯಗಳನ್ನು ನಿರ್ವಹಿಸಲು ಸರ್ಕಾರಿ ಅಧಿಕಾರಿ/ನೌಕರರು ಕಾನೂನು ವಿಷಯದಲ್ಲಿ ಪರಿಣತಿ ಹೊಂದಿರುವುದು ಅತ್ಯಗತ್ಯವೆಂದು ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಬೆಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಾಜಿ ಅಧ್ಯಕ್ಷರಾದ ವೆಂಕಟ ಸುದರ್ಶನ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿಂದು ಸರ್ಕಾರಿ ಅಧಿಕಾರಿ/ನೌಕರರಿಗಾಗಿ “ಸರ್ಕಾರದ ಹಾಗೂ ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ” ಕುರಿತು ಆಯೋಜಿಸಿದ್ದ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿ ಸಂರಕ್ಷಣೆಗಾಗಿ ಅಧಿಕಾರಿ/ನೌಕರರು ಕಾಲ-ಕಾಲಕ್ಕೆ ಹೊರಡಿಸಲಾಗುವ ಕಾನೂನು ತಿದ್ದುಪಡಿಗಳ ಬಗ್ಗೆ ತಿಳಿದುಕೊಂಡಿರಬೇಕು. ಸರ್ಕಾರದ ವಿರುದ್ಧ ಯಾವುದೇ ವ್ಯಕ್ತಿಗಳು ನ್ಯಾಯಾಲಯದಲ್ಲಿ ದಾವೆ ಹೂಡಿದಾಗ ಯಾವ ರೀತಿ ಕ್ರಮಗಳನ್ನು ಅನುಸರಿಸಬೇಕೆಂದು ಮಾಹಿತಿ ನೀಡಿದರು.
ವಿಷಯ ನಿರ್ವಾಹಕರಿಗೆ ಕಾನೂನಿನ ಬಗ್ಗೆಯಿರುವ ಅರಿವಿನ ಕೊರತೆಯಿಂದ ಹಾಗೂ ನ್ಯಾಯಾಲಯದಲ್ಲಿರುವ ಸರ್ಕಾರಿ ವ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದೆ ಇರುವುದರಿಂದ ಪ್ರಕರಣಗಳು ಬಗೆಹರಿಯದೆ ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ ಎಂದು ತಿಳಿಸಿದರಲ್ಲದೆ ನ್ಯಾಯಾಲಯ ನಿರ್ವಹಣಾ ವಿಧಾನ, ಸಿವಿಲ್ ವ್ಯಾಜ್ಯಗಳಿಗೆ ಸಂಬAಧಿಸಿದAತೆ ಸರ್ಕಾರದ ಪರವಾಗಿ ವಾದಿಸಲು ಕಲೆ ಹಾಕಬೇಕಾದ ದಾಖಲೆ ಮತ್ತು ಸಾಕ್ಷಿಗಳು, ಸರ್ಕಾರದ ವಿರುದ್ಧ ಬಂದ ನೋಟೀಸುಗಳಿಗೆ ಯಾವ ರೀತಿ ಉತ್ತರಿಸಬೇಕೆಂಬ ಬಗ್ಗೆ ಸರ್ಕಾರಿ ಅಧಿಕಾರಿ/ನೌಕರರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಅಧಿಕಾರಿ/ನೌಕರರು ಕಾರ್ಯಾಗಾರದಿಂದ ಕಾನೂನು ಅರಿವು ಪಡೆದು ಸರ್ಕಾರಿ/ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ.ಗೀತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಸ್ವಂತ ಆಸ್ತಿ ಹೇಗೆ ಕಾಪಾಡಿಕೊಳ್ಳುತ್ತೇವೆಯೋ ಅದೇ ರೀತಿ ಸರ್ಕಾರದ ಅನ್ನ ತಿನ್ನುತ್ತಿರುವ ನಾವೆಲ್ಲಾ ಸರ್ಕಾರಿ ಹಾಗೂ ಸಾರ್ವಜನಿಕರ ಆಸ್ತಿಯನ್ನು ಸಂರಕ್ಷಿಸುವಲ್ಲಿ ಆಸಕ್ತಿ ವಹಿಸಬೇಕು. ಸರ್ಕಾರದ ವ್ಯಾಜ್ಯಗಳ ಬಗ್ಗೆ ಕಾಳಜಿಯಿಂದ ಕ್ರಮಕೈಗೊಂಡಲ್ಲಿ ಮೌಲ್ಯಯುತವಾದ ಸರ್ಕಾರಿ ಸ್ಥಳಗಳನ್ನು ಉಳಿಸಿಕೊಳ್ಳಬಹುದಾಗಿದೆ. ಇಲ್ಲದಿದ್ದಲ್ಲಿ ಸರ್ಕಾರಿ ಆಸ್ತಿಯನ್ನು ಲಪಟಾಯಿಸುವವರ ಸಂಖ್ಯೆಯನ್ನು ನಿಯಂತ್ರಿಸಲು ಕಷ್ಟಸಾಧ್ಯವಾಗುತ್ತದೆ ಎಂದರಲ್ಲದೆ, ಇಂಥ ಕೃತ್ಯಗಳಿಗೆ ಒಂದು ರೀತಿಯಲ್ಲಿ ನಾವೂ ಸಹ ಪರೋಕ್ಷವಾಗಿ ಕಾರಣರಾಗುತ್ತೇವೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಮಾತನಾಡಿ, ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ವೆಂಕಟ್ ಸುದರ್ಶನ್ ಅವರು ಸಿವಿಲ್ ದಾವೆಗಳಲ್ಲಿನ ಹಂತಗಳು ಹಾಗೂ ಸರ್ಕಾರಿ ವ್ಯಾಜ್ಯಗಳಲ್ಲಿ ಸರ್ಕಾರಿ ನೌಕರರ ಪಾತ್ರದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರಲ್ಲದೆ ಸರ್ಕಾರಿ ಆಸ್ತಿ ಕಾಪಾಡುವಲ್ಲಿ ಉದಾಸೀನ ಬೇಡ. ಸರ್ಕಾರಿ ವ್ಯಾಜ್ಯಗಳು ಶೀಘ್ರ ವಿಲೇವಾರಿಯಾಗಲು ಅಧಿಕಾರಿಗಳು ಸಹಕರಿಸಬೇಕು. ಸರ್ಕಾರಿ ಸೇವೆಯಲ್ಲಿರುವವರೆಲ್ಲರೂ ಭಾಗ್ಯಶಾಲಿಗಳು. ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕೈಜೋಡಿಸುವ ಮೂಲಕ ಸರ್ಕಾರದ ಋಣವ ತೀರಿಸಿ ಋಣಮುಕ್ತರಾಗಬೇಕೆಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಸರ್ಕಾರಿ/ಸಾರ್ವಜನಿಕರ ಆಸ್ತಿಗೆ ಸರ್ಕಾರಿ ನೌಕರರು ಕಾವಲುಗಾರರಾಗಿರಬೇಕು. ಆಸ್ತಿ ಉಳಿಸುವಲ್ಲಿ ಕಾಳಜಿ ಹೊಂದಿರಬೇಕು. ಜಿಲ್ಲೆಯ ನ್ಯಾಯಾಲಗಳಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರ ಕೊರತೆ ನೀಗಿಸುವ ದೃಷ್ಟಿಯಿಂದ ಆಗಸ್ಟ್ ಮಾಹೆಯೊಳಗೆ ೧೬ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ನ್ಯಾಯಾಲಯದಲ್ಲಿ ಸರ್ಕಾರಿ ವ್ಯಾಜ್ಯಗಳನ್ನು ಪ್ರತಿನಿಧಿಸಲು ಈ ನೇಮಕಾತಿ ಅನುಕೂಲವಾಗಲಿದೆ. ಸರ್ಕಾರಿ ನೌಕರರು/ ಅಧಿಕಾರಿಗಳು ಕೋರ್ಟ್ ಆದೇಶಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳ ಬಗ್ಗೆ ೧೫ ದಿನಗಳಿಗೊಮ್ಮೆ ಪರಿಶೀಲಿಸಿ ವಿಲೇವಾರಿಗೆ ಕ್ರಮವಿಡಲಾಗಿದೆ ಎಂದು ತಿಳಿಸಿದರಲ್ಲದೆ, ಸಾರ್ವಜನಿಕರಿಗೆ ಬಳಕೆಯಾಗುವ ಆಸ್ತಿಯನ್ನು ಭೂಕಬಳಿಕೆದಾರರು ಅನುಭವಿಸದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಆಸ್ತಿ ಸಂರಕ್ಷಣೆಯಲ್ಲಿ ಕಾನೂನು ಜ್ಞಾನದ ಕೊರತೆ ಪ್ರಮುಖ ಸಮಸ್ಯೆಯಾಗಿರುವುದರಿಂದ ಆಸ್ತಿ ಹಕ್ಕುಗಳ ಬಗ್ಗೆ ಅಧಿಕಾರಿ/ನೌಕರರು ಹೆಚ್ಚಿನ ಜ್ಞಾನ ಹೊಂದಿರಬೇಕು. ಕಾನೂನು ಜ್ಞಾನದ ಕೊರತೆ ಇರುವುದರಿಂದ ಖಾಸಗಿ ವ್ಯಕ್ತಿಗಳು ಸರ್ಕಾರಿ ಜಮೀನುಗಳನ್ನು ಕಬಳಿಸುತ್ತಿದ್ದಾರೆ. ಸಮಯೋಚಿತವಾಗಿ ಉಪಕ್ರಮ ಕೈಗೊಳ್ಳುವುದರಲ್ಲಿ ವಿಳಂಬವಾಗುತ್ತಿರುವುದರಿAದ ಆಸ್ತಿ ಕಬಳಿಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅರಿವು ಮೂಡಿಸುವ ಸಲುವಾಗಿ ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ತಾಲ್ಲೂಕು, ಗ್ರಾಮ ಮಟ್ಟದ ಅಧಿಕಾರಿಗಳಿಗೂ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ತಹಶೀಲ್ದಾರ್ ಸಿದ್ಧೇಶ್, ಜಿಪಂ. ಉಪಕಾರ್ಯದರ್ಶಿಗಳಾದ ಹಾಲಸಿದ್ಧಪ್ಪ ಪೂಜೇರಿ ಹಾಗೂ ನರಸಿಂಹಮೂರ್ತಿ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಡಿಕೆಶಿ ನಾಯಕತ್ವವನ್ನು ಹೊಗಳಿದ ಶಾಸಕ ಬಿ. ಸುರೇಶ್ ಗೌಡ
Next Article ಪಾವಗಡ ಬಸ್ ನಿಲ್ದಾಣ ಇದ್ದರು ಇಲ್ಲವಾಗಿದೆ ಸಾರ್ವಜನಿಕರ ಆಗ್ರಹ : ಅಧಿಕಾರಿಗಳು ಜಾಣ ಕುರುಡು
News Desk Benkiyabale

Related Posts

ಭಾರತೀಯ ಸೇನೆ ವಿಜಯ ಸಾಧಿಸಲಿ ಎಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ

May 09, 2025 3:58 pm ತುಮಕೂರು

ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!

May 09, 2025 3:18 pm ತುಮಕೂರು

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

May 09, 2025 3:17 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಭಾರತೀಯ ಸೇನೆ ವಿಜಯ ಸಾಧಿಸಲಿ ಎಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ

May 09, 2025 3:58 pm
ತುಮಕೂರು

ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!

May 09, 2025 3:18 pm
ತುಮಕೂರು

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

May 09, 2025 3:17 pm
ಇತರೆ ಸುದ್ಧಿಗಳು

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm
ತುಮಕೂರು

ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ

May 09, 2025 2:44 pm
ತುಮಕೂರು

ಸಮೀಕ್ಷೆಯಲ್ಲಿ ಬಂಜಾರ(ಲ0ಬಾಣಿ) ಎಂದು ನಮೂದಿಸಿ

May 09, 2025 2:43 pm
Our Youtube Channel
Our Picks

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm

ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

May 08, 2025 2:08 pm

ಎಸ್‌ಎಸ್‌ಎಲ್‌ಸಿಯ ಫಲಿತಾಂಶ: ಹರಿಪ್ರಿಯಾಳ ಉತ್ತಮ ಸಾಧನೆ

May 02, 2025 2:34 pm

ಮಾತು ಕೃತಿಗೆ ಬಂದಾಗ ವ್ಯಕ್ತಿಗೆ ಗೌರವ

April 30, 2025 4:11 pm

ಕಾಯಕವೇ ಕೈಲಾಸ ಎಂದು ಸಾರಿದವರು ಬಸವಣ್ಣ

April 30, 2025 4:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police police naveen Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಭಾರತೀಯ ಸೇನೆ ವಿಜಯ ಸಾಧಿಸಲಿ ಎಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ

By News Desk BenkiyabaleMay 09, 2025 3:58 pm

ತುಮಕೂರು: ಪೆಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಜನರ ಆತ್ಮಕ್ಕೆ ಶಾಂತಿ ಕೋರಿ, ಹಾಗೆಯೇ ಉಗ್ರರ ವಿರುದ್ದ…

ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!

May 09, 2025 3:18 pm

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

May 09, 2025 3:17 pm

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.