BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ವಾತಾವರಣವಿದೆ : ಡಿಸಿಎಂ
Trending

ತುಮಕೂರು : ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ವಾತಾವರಣವಿದೆ : ಡಿಸಿಎಂ

By News Desk BenkiyabaleUpdated:August 12, 2020 6:45 pm

ತುಮಕೂರು:

      ಜಿಲ್ಲೆಯಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಗ್ರಾಮೀಣಾಭಿವೃದ್ಧಿ ಕೇಂದ್ರದ ಅಡಿಯಲ್ಲಿ ಸ್ಥಾಪಿಸಲಾಗಿರುವ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಜೈವಿಕವನವನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಉಧ್ಘಾಟನೆ ನೆರವೇರಿಸಿದರು.

      ಪಂಡಿತನಹಳ್ಳಿಯ ಬಸದಿ ಬೆಟ್ಟದ ಹತ್ತಿರ ಉಧ್ಘಾಟನೆ ಮಾಡಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಶ್ರೀಮಂತವಾಗಿರುವ ತುಮಕೂರು ಜಿಲ್ಲೆಯಲ್ಲಿ ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ವಾತಾವರಣವಿದೆ. ಇದೀಗ ಲೋಕಾರ್ಪಣೆ ಆಗಿರುವ ಜೈವಿಕವನವೂ ಉತ್ತಮ ಪ್ರಯತ್ನವಾಗಿದೆ ಎಂದರು.

       ತುಮಕೂರು ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ವದ ನಗರವಾಗಿದೆ. ಆದರೆ, ನಗರದ ಸುತ್ತಮುತ್ತಲಿನ ಪ್ರದೇಶಗಳು ಹಿಂದುಳಿದಿವೆ. ಲಭ್ಯವಿರುವ ತಂತ್ರಜ್ಞಾನವನ್ನು ಬಳಸಿಕೊಂಡು ಈ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುವುದು. ಅದಕ್ಕೆ ಬೇಕಾದ ಎಲ್ಲ ಪ್ರಯತ್ನಗಳನ್ನು ಸರಕಾರ ಮಾಡಲಿದೆ. ಅಭಿವೃದ್ಧಿಯಲ್ಲಿ ಸುಸ್ಥಿರತೆ ಮತ್ತು ಕಮರ್ಷಿಯಲ್ ವಯಬಲಿಟಿ ಇಲ್ಲವಾದರೆ ಆ ಪ್ರಗತಿಗೆ ಯಾವುದೇ ಅರ್ಥವಿರುವುದಿಲ್ಲ ಎಂದು ಅವರು ಹೇಳಿದರು.

      ಶೈಕ್ಷಣಿಕವಾಗಿ ಬಹಳಷ್ಟು ಮುಂದುವೆರದಿರುವ ತುಮಕೂರಿನಲ್ಲಿ ಅತ್ಯುತ್ತಮ ಮಾನವ ಸಂಪನ್ಮೂಲಕ್ಕೇನೂ ಕೊರತೆ ಇಲ್ಲ. ಹೀಗಾಗಿ ಜಿಲ್ಲೆಯ ಅಭಿವೃದ್ಧಿಗೆ ಸಮಸ್ಯೆಯಾಗುವುದಿಲ್ಲ. ಉತ್ತಮ ಹಾಗೂ ರಚನಾತ್ಮಕ ಯೋಜನೆಯನ್ನು ರೂಪಿಸಿ ಅದನ್ನು ಸಮರ್ಥವಾಗಿ ಜಾರಿ ಮಾಡುವ ಇಚ್ಚಾಶಕ್ತಿ ಬೇಕು. ಅಂತಹ ಇಚ್ಛಾಶಕ್ತಿ ಸರಕಾರಕ್ಕಿದೆ. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

      ಕೋವಿಡ್-19 ನಮ್ಮೆಲ್ಲರ ಜೀವನಕ್ರಮವನ್ನೇ ಬದಲಿಸಿದೆ. ಜಗತ್ತೇ ಒಂದು ಹಳ್ಳಿಯಂತೆ ಆಗಿದೆ. ಟೆಕ್ನಾಲಜಿ ನಮ್ಮೆಲ್ಲರನ್ನು ಹತ್ತಿರ ಮಾಡಿದೆ. ಈಗ ಯಾವುದೂ ಹತ್ತಿರವೂ ಅಲ್ಲ, ದೂರವೂ ಅಲ್ಲ. ಜರ್ಮನಿಯಂಥ ದೇಶದಲ್ಲಿ ಕುಗ್ರಾಮದಂಥ ಪ್ರದೇಶದಲ್ಲೂ ಅದ್ಭುತವಾದ ಪ್ರಗತಿಯನ್ನು ನೋಡಬಹುದು. ಅಂತಹ ಸ್ಥಿತಿಯನ್ನು ನಮ್ಮ ದೇಶದಲ್ಲೂ ನೋಡಬೇಕಾಗಿದೆ ಎಂದು ಅವರು ತಿಳಿಸಿದರು.

      ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಮಾತನಾಡಿ, ತುಮಕೂರು ಜಿಲ್ಲೆಯು ಬೆಂಗಳೂರು ನಗರಕ್ಕೆ ಸಮೀಪವಿರುವುದರಿಂದ ಜಿಲ್ಲೆಗೆ ಸೈನ್ಸ್ ಲ್ಯಾಬ್, ಟೆಕ್ನಿಕಲ್ ಪಾರ್ಕ್, ಕಯರ್ ಪಾರ್ಕ್‍ಗಳನ್ನು ನಿರ್ಮಾಣ ಮಾಡಿಕೊಡಲು ಮನವಿ ಸಲ್ಲಿಸಿದರಲ್ಲದೇ ಜಿಲ್ಲೆಯಲ್ಲಿ ಹೆಚ್ಚಾಗಿ ತೆಂಗು ಬೆಳೆಯುತ್ತಿದ್ದು, ತೋಟಗಾರಿಕಾ ಮತ್ತು ಕೃಷಿ ಇಲಾಖೆ ವತಿಯಿಂದ ಕಡಿಮೆ ವೆಚ್ಚದಲ್ಲಿ ಸಣ್ಣ ಉದ್ಯಮಗಳನ್ನು ಪ್ರಾರಂಭಿಸಿ ಕೊಬ್ಬರಿ ಎಣ್ಣೆ ತಯಾರಿಸಿದರೆ ಅದಕ್ಕೆ ಒಂದು ಬ್ರಾಂಡ್ ನೀಡಿ ಒಂದೆಡೆ ಮಾರಾಟ ಮಾಡಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು. ಜೈವಿಕ ಪಾರ್ಕ್‍ನಲ್ಲಿ ಹಣ್ಣು-ಹಂಪಲು ಬಿಡುವ ಮರಗಳನ್ನು ಬೆಳೆಸಬೇಕು. ಗುಂಡಿಗಳನ್ನು ತೆಗೆದು ನೀರು ಶೇಖರಣೆ ಮಾಡುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು.

      ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಂಸದ ಜಿ.ಎಸ್. ಬಸವರಾಜು, ಶಾಸಕರಾದ ಜ್ಯೋತಿ ಗಣೇಶ್, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಎಂ.ಆರ್. ದಿನೇಶ್, ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ ಸೇರಿದಂತೆ ಮತ್ತಿತರು ಹಾಜರಿದ್ದರು.

      ಬೆಂಗಳೂರು ಗಲಭೆ ಶಾಂತಿ ಕಾಪಾಡಲು ಡಿಸಿಎಂ ಅಶ್ವತ್ಥನಾರಾಯಣ ಮನವಿ: ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ ಕಾವಲ್’ಭೈರಸಂದ್ರದಲ್ಲಿ ಉಂಟಾಗಿರುವ ಗಲಭೆ ಅತ್ಯಂತ ದುರದೃಷ್ಟಕರ ಎಂದಿರುವ ಅವರು ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದರು.

       ತುಮಕೂರು ತಾಲೂಕಿನ ಡಾ|| ಶ್ರೀ ಶ್ರೀ ಶಿವಕುಮಾರಸ್ವಾಮೀಜಿ ಅವರ ಜೈವಿಕವನ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವುದೇ ಧರ್ಮ ಅಥವಾ ಧರ್ಮಗುರುವಿನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವುದು ಸರಿಯಲ್ಲ. ಜಾಲತಾಣಗಳಲ್ಲಿ ಏನಾದರೂ ಬರೆಯುವ ಮುನ್ನ ಸಾಕಷ್ಟು ಸಂಯಮ ಮತ್ತು ಮುನ್ನೆಚ್ಚರಿಕೆ ವಹಿಸಬೇಕು ಎಂದರು.

      ಪೋಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇಡೀ ಘಟನೆಯ ತನಿಖೆ ಮಾಡುತ್ತಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಜನರು ತಾಳ್ಮೆ, ಸಹನೆಯಿಂದ ವರ್ತಿಸಬೇಕು. ಸೌಹಾರ್ದತೆಯನ್ನು ಕಾಪಾಡಬೇಕು. ದೊಂಭಿ, ಗಲಭೆಯಲ್ಲಿ ತೊಡಗುವುದು ಸರಿಯಲ್ಲ ಎಂದು ಅವರು ತಿಳಿಸಿದರು.

(Visited 9 times, 1 visits today)
Previous Article3 ಸಾವಿರ ಬಡಜನರ ಪಿಂಚಣಿ ಹಣ 6 ತಿಂಗಳಿಂದ ಸ್ಥಗಿತ!!
Next Article ಹಕ್ಕಿಪಿಕ್ಕಿ ಜನಾಂಗದ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್!
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.