BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಆದ್ಯ ಕರ್ತವ್ಯ: ಟಿ.ಎಸ್. ಅಶೋಕ್ ಕುಮಾರ್
  • ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮಿಸಿದ ಸಂತ ಕನಕದಾಸ
  • ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ
  • ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
  • ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ
  • ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ
  • ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ
  • ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾಡಿ ಇಡೀ ದಿನ ರೈತರೊಂದಿಗೆ ಸಂವಾದ ನಡೆಸಿ-ಕೃಷಿ ಸಚಿವ ಬಿ.ಸಿ.ಪಾಟೀಲ್
Trending

ಮಾಡಿ ಇಡೀ ದಿನ ರೈತರೊಂದಿಗೆ ಸಂವಾದ ನಡೆಸಿ-ಕೃಷಿ ಸಚಿವ ಬಿ.ಸಿ.ಪಾಟೀಲ್

By News Desk BenkiyabaleUpdated:February 13, 2021 7:10 pm

ಗುಬ್ಬಿ:

     ಹವಾಗುಣಕ್ಕೆ ತಕ್ಕ ಬೇಸಾಯ ಮಾಡುವ ಬಗ್ಗೆ ಪ್ರತಿ ಜಿಲ್ಲೆಯಲ್ಲಿ ಒಂದು ಗ್ರಾಮ ಆಯ್ಕೆ ಮಾಡಿ ಇಡೀ ದಿನ ರೈತರೊಂದಿಗೆ ಸಂವಾದ ನಡೆಸಿ ಕೃಷಿ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಪ್ರವಾಸ ಆರಂಭಿಸಿ ಮಂಡ್ಯ ಮತ್ತು ಕೋಲಾರ ಜಿಲ್ಲೆ ಪ್ರವಾಸ ಮುಗಿಸಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

      ತಾಲ್ಲೂಕಿನ ಸಿ.ಎಸ್.ಪುರ ಗ್ರಾಮದಲ್ಲಿ ಏರ್ಪಡಿಸಿದ್ದ ಕೃಷಿ ಸಂಪರ್ಕ ಕೇಂದ್ರ ನೂತನ ಕಟ್ಟಡ ಉದ್ಘಾಟನೆ ಮತ್ತು ಏಳು ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಅಧ್ಯಕ್ಷರು. ಉಪಾಧ್ಯಕ್ಷರು, ಸದಸ್ಯರಿಗೆ ಸನ್ಮಾನ ಹಾಗೂ ಬಿಜೆಪಿ ಕಾರ್ಯರ್ತರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಹಿರಿಯರ ಆಲೋಚನೆಗಳು ಇಂದಿಗೂ ಪ್ರಸ್ತುತವಾಗಿದೆ. ನೀರಿನ ಲಭ್ಯತೆ ಜತೆಗೆ ಮಣ್ಣಿನ ಗುಣ ಅರಿತು ಬೇಸಾಯ ಮಾಡುವ ಕಲೆ ನಮ್ಮ ಹಿಂದಿನ ಸಂಪ್ರದಾಯದಲ್ಲಿ ಅಡಗಿದೆ. ಇಂತಹ ಸಂದರ್ಭದಲ್ಲಿ ಇಸ್ರೇಲ್ ಮಾದರಿ ಕೃಷಿ ನಮಗೆ ಅವಶ್ಯವಿಲ್ಲ ಎಂದರು.

      ಕೃಷಿಕನ ದುಡಿಮೆಗೆ ಬೆಲೆ ಕಟ್ಟಲಾಗದು ಎಂಬ ಮಾತಿದೆ. ಆದರೆ ರೈತನ ಕೃಷಿ ಉತ್ಪನ್ನಗಳಿಗೆ ಬೆಲೆ ಕಟ್ಟುವ ಅರ್ಹತೆ ಕಳೆದುಕೊಳ್ಳುತ್ತಿದ್ದಾನೆ. ಈ ನಿಟ್ಟಿನಲ್ಲಿ ಕೃಷಿಕನೇ ಬೆಳೆಗೆ ಮಾರುಕಟ್ಟೆ ನಿರ್ಮಿಸಿಕೊಳ್ಳುವ ಕೆಲಸವನ್ನು ಸ್ಥಳೀಯವಾಗಿ ನಡೆಸಲು ಯೋಚಿಸಲಾಗಿದೆ. ಈ ಕೆಲಸವನ್ನು ವಿಎಸ್‍ಎಸ್‍ಎನ್ ಮೂಲಕ ಕೂಡ ನಡೆಸಬಹುದಾಗಿದೆ ಎಂದ ಅವರು ಜಿಲ್ಲೆಯಲ್ಲಿ ಈ ಬಾರಿ ಕೃಷಿ ನಡೆಸಲು ಅನುವು ಮಾಡಿಕೊಟ್ಟ ಕೀರ್ತಿ ಜಿಲ್ಲಾ ಸಚಿವರಾದ ಮಾಧುಸ್ವಾಮಿ ಅವರಿಗೆ ಸಲ್ಲಬೇಕಿದೆ. ಎಲ್ಲಾ ಕೆರೆಗಳಿಗೂ ಹೇಮೆ ಹರಿಸುವಲ್ಲಿ ಸಫಲರಾದ ಅವರು ಹಾಸನ ಜಿಲ್ಲೆಯಿಂದ ತುಮಕೂರಿಗೆ ನೀರು ಹರಿಸುವುದು ಸುಲಭದ ಮಾತಲ್ಲ ಎಂಬುದು ಎಲ್ಲರಿಗೂ ತಿಳಿದಿದೆ ಎಂದರು.

      ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ ತುರುವೇಕೆರೆ ಕ್ಷೇತ್ರಕ್ಕೆ ಸೇರಿದ ಗುಬ್ಬಿ ತಾಲ್ಲೂಕಿನ ಏಳು ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತರ ಆಡಳಿತ ತರುವ ಮಾತು ಉಳಿಸಿಕೊಂಡ ಶಾಸಕ ಜಯರಾಮ್ ಕೆರೆಗೆ ನೀರು ಹರಿಸುವಲ್ಲಿ ಬದ್ದತೆ ತೋರಿದ್ದಾರೆ. ಅವರ ಶ್ರಮಕ್ಕೆ ತಕ್ಕ ಫಲವಾಗಿ ಸ್ಥಳೀಯ ಆಡಳಿತ ಚುಕ್ಕಾಣಿ ಬಿಜೆಪಿಗೆ ಒಲಿದಿದೆ. ಆದರೆ ಅಧಿಕಾರಕ್ಕೆ ಬಂದ ಬೆಂಬಲಿಗರು ಶಾಸಕರು ಮತ್ತು ಪಕ್ಷದ ಘನತೆಗೆ ತಕ್ಕಂತೆ ನಡೆದು ಮುಂದಿನ ಅಭಿವೃದ್ದಿ ಕೆಲಸ ಮಾಡಬೇಕು. ಸಭೆಗಳಲ್ಲಿ ನಿರ್ಣಯವನ್ನು ಒಮ್ಮತದಲ್ಲಿ ಮಾಡಿ ಶಾಸಕರ ಮರ್ಯಾದೆ ಕಾಪಾಡಬೇಕು ಎಂದು ಪಾಠ ಹೇಳಿದ ಅವರು ಜಿಲ್ಲೆಯನ್ನೇ ಹಿಡಿತಕ್ಕೆ ಪಡೆಯುವ ಚಿತ್ರಣ ಬಿಂಬಿಸಿದ್ದ ನಾಯಕರ ಆಡಳಿತಕ್ಕೆ ಅಂತ್ಯ ಕಾಣಲಿದೆ ಎಂದು ಮಾರ್ಮಿಕವಾಗಿ ನುಡಿದರು.

      ಬೇಡಿಕೆ ಮತ್ತು ಅಗತ್ಯತೆ ಎಂಬ ಎರಡಂಶದಲ್ಲಿ ಅತ್ಯಗತ್ಯತೆ ಬಗ್ಗೆ ಮೊದಲು ಆದ್ಯತೆ ನೀಡಬೇಕು. ಬೇಡಿಕೆಗಳನ್ನು ಪರಿಶೀಲಿಸಿ ನಡೆಸಬೇಕು.  ಈಗಾಗಲೇ ರಾಜ್ಯದ 41 ತಾಲ್ಲೂಕಿನಲ್ಲಿ ಅಂತರ್ಜಲ ಕುಸಿತ ಕಂಡು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಈ ಪೈಕಿ ನಮ್ಮ ಜಿಲ್ಲೆಯ 6 ತಾಲ್ಲೂಕು ಸೇರಿರುವುದು ವಿಷಾದಕರ. ಈ ನಿಟ್ಟಿನಲ್ಲಿ ಹೇಮೆ ಹರಿಸುವಲ್ಲಿ ಕಟ್ಟುನಿಟ್ಟಿನ ನಿಯಮ ಪಾಲನೆ ಮಾಡುವ ಜತೆಗೆ ಹಂಚಿಕೆ ವಿಚಾರದಲ್ಲಿ ಎಲ್ಲಿಯೋ ವ್ಯತ್ಯಾಸ ಮಾಡದೆ ನೀರು ಹರಿಸಲಾಗಿದೆ. ಅದರ ಪರಿಣಾಮ ಈ ಬಾರಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದ ಅವರು ಗುಬ್ಬಿ ತಾಲ್ಲೂಕಿನ ಬಿಕ್ಕೇಗುಡ್ಡ ನೀರಾವರಿ ಯೋಜನೆ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳೊಟ್ಟಿಗೆ ಚರ್ಚಿಸಿ ಕೂಡಲೇ ಕಾಮಗಾರಿ ಆರಂಭಿಸುವ ಭರವಸೆ ನೀಡಿದರು.

      ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಮಾತನಾಡಿ ಮಾರ್ಕೋನಹಳ್ಳಿ ಡ್ಯಾಂನಿಂದ ಹರಿಯುವ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರಲಿದೆ. ವರ್ಷದ ಆರು ತಿಂಗಳು ನಿರಂತರವಾಗಿ ನಿತ್ಯ 600 ಕ್ಯೊಸೆಕ್ಸ್ ನೀರು ಹರಿಯುತ್ತಿದ್ದು ಈ ನೀರನ್ನು ಸದ್ಬಳಕೆ ಮಾಡಲು ಒಂದು ಯೋಜನೆ ರೂಪಿಸಿಕೊಡಲು ಮಾಧುಸ್ವಾಮಿ ಅವರಲ್ಲಿ ಮನವಿ ಮಾಡುವುದಾಗಿ ತಿಳಿಸಿದ ಅವರು 20 ಕೋಟಿ ರೂಗಳ ಏತ ನೀರಾವರಿ ಯೋಜನೆ ಈ ಭಾಗಕ್ಕೆ ಮಂಜೂರು ಮಾಡಿಕೊಟ್ಟಲ್ಲಿ ಜನರು ಬಿಜೆಪಿ ಸರ್ಕಾರವನ್ನು ಮರೆಯಲಾರರು ಎಂದು ಮನವಿ ಮಾಡಿದರು.

      ಈ ಕಾರ್ಯಕ್ರಮದಲ್ಲಿ ಸಿ.ಎಸ್.ಪುರ ಹೋಬಳಿಯ ಐದು ಗ್ರಾಮ ಪಂಚಾಯಿತಿ ಸೇರಿದಂತೆ ಕಲ್ಲೂರು, ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರಿಗೆ ಸನ್ಮಾನಿಸಿ ಅಭಿನಂದಿಸಿದರು. ಜತೆಗೆ ಪರಾಜಿತ ಅಭ್ಯರ್ಥಿಗಳಿಗೂ ಸನ್ಮಾನಿಸಲಾಯಿತು.

      ಜಿಪಂ ಸದಸ್ಯರಾದ ಗಾಯತ್ರಿದೇವಿ, ಮಂಜುಳಾ, ತಾಪಂ ಸದಸ್ಯರಾದ ಸಿದ್ದರಾಮಯ್ಯ, ದೀಪಿಕಾ, ಭಾನುಪ್ರಕಾಶ್, ವಿಎಸ್‍ಎಸ್‍ಎನ್ ಅಧ್ಯಕ್ಷ ಬಿ.ಎಸ್.ನಾಗರಾಜು, ಸಿ.ಎಸ್.ಪುರ ಗ್ರಾಪಂ ಅಧ್ಯಕ್ಷ ಕೆಂಪರಾಜು, ಉಪಾಧ್ಯಕ್ಷೆ ಟಿ.ಜಿ.ಮಂಜುಳಾ, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಮಹೇಶ್, ಎಪಿಎಂಸಿ ಸದಸ್ಯ ತಿಮ್ಮರಾಜು, ಸದಾಶಿವ, ಸುರೇಶ್, ರಘು, ಶಾಸಕರ ಪುತ್ರ ತೇಜು, ಕಲ್ಲೂರು ಸುರೇಶ್ ಇತರರು ಇದ್ದರು.

(Visited 15 times, 1 visits today)
Previous Articleಮಧುಗಿರಿ : ನೆಪಮಾತ್ರಕ್ಕೆ ಅಳವಡಿಸಿದಂತಿದೆ ಹೈಮಾಸ್ಟ್ ದೀಪ
Next Article ತುಮಕೂರು: ನಗರದಲ್ಲಿ 4.50 ಕೋಟಿ ರೂ.ವೆಚ್ಚದಲ್ಲಿ ಎಸ್ಸಿಪಿ/ಟಿಎಸ್ಸ್‍ಪಿ ಕಾಮಗಾರಿ
News Desk Benkiyabale

Related Posts

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಆದ್ಯ ಕರ್ತವ್ಯ: ಟಿ.ಎಸ್. ಅಶೋಕ್ ಕುಮಾರ್

November 10, 2025 3:07 pm
ಇತರೆ ಸುದ್ಧಿಗಳು

ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮಿಸಿದ ಸಂತ ಕನಕದಾಸ

November 10, 2025 2:50 pm
ಇತರೆ ಸುದ್ಧಿಗಳು

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

November 10, 2025 2:39 pm
ಇತರೆ ಸುದ್ಧಿಗಳು

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm
ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm
ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm
Our Youtube Channel
Our Picks

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಆದ್ಯ ಕರ್ತವ್ಯ: ಟಿ.ಎಸ್. ಅಶೋಕ್ ಕುಮಾರ್

November 10, 2025 3:07 pm

ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮಿಸಿದ ಸಂತ ಕನಕದಾಸ

November 10, 2025 2:50 pm

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

November 10, 2025 2:39 pm

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಆದ್ಯ ಕರ್ತವ್ಯ: ಟಿ.ಎಸ್. ಅಶೋಕ್ ಕುಮಾರ್

By News Desk BenkiyabaleNovember 10, 2025 3:07 pm

ತುಮಕೂರು: ನಗರದ ವಾಸವಿ ಪದವಿ ಪೂರ್ವ ಕಾಲೇಜು ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮದ ಅಂಗವಾಗಿ ಪ್ರತಿಭಾವಂತ…

ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮಿಸಿದ ಸಂತ ಕನಕದಾಸ

November 10, 2025 2:50 pm

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

November 10, 2025 2:39 pm

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.