BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ
  • ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ
  • ದರೋಡೆಕೋರನ ಬಂಧನ
  • ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ
  • ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿ: ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅಭಿಪ್ರಾಯ
  • ದರೋಡೆ-ಸುಲಿಗೆ ಪ್ರಕರಣ ತಡೆಗೆ ಪೊಲೀಸರಿಂದ ಮಾಸ್ಟರ್ ಪ್ಲಾನ್
  • ಪೋಷಕಾಂಶಗಳ ಸಂಪತ್ತು ಸಿರಿಧಾನ್ಯ
  • ಮೊಬೈಲ್ ಬಿಡಿ ಪುಸ್ತಕ ಹಿಡಿ: ಶಾಸಕ ಕೆಎನ್‌ಆರ್ ಕಿವಿಮಾತು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೋವಿಡ್ 2ನೇ ಅಲೆ ವ್ಯಾಪಿಸದಂತೆ ಮುಂಜಾಗ್ರತೆ ವಹಿಸಿ
Trending

ಕೋವಿಡ್ 2ನೇ ಅಲೆ ವ್ಯಾಪಿಸದಂತೆ ಮುಂಜಾಗ್ರತೆ ವಹಿಸಿ

By News Desk BenkiyabaleUpdated:February 24, 2021 6:03 pm

 ತುಮಕೂರು  :

      ಕೋವಿಡ್ ಎರಡನೇ ಅಲೆ ಜಿಲ್ಲೆಗೆ ವ್ಯಾಪಿಸದಂತೆ ತಡೆಯಲು ಮುಂಜಾಗ್ರತಾ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.

      ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ಎರಡನೇ ಅಲೆ ನಿಯಂತ್ರಣ ಕುರಿತು ಹಮ್ಮಿಕೊಂಡಿದ್ದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮೊದಲನೇ ಹಂತದ ಕೋವಿಡ್-19 ನಿಯಂತ್ರಿಸಲು ಕೈಗೊಂಡ ಕ್ರಮಗಳಂತೆಯೇ ಕೋವಿಡ್-19 ಎರಡನೇ ಅಲೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಅವರು ನಿರ್ದೇಶಿಸಿದರು.

      ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಹರಡಿದ್ದ ಕೋವಿಡ್ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ. ಮೊದಲ ಹಂತದ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮಗಳು ಮತ್ತು ಸರಕಾರ ನೀಡಿದ ನಿರ್ದೇಶನಗಳನ್ನು ಪಾಲಿಸಿದ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಿಸಲು ಸಾಧ್ಯವಾಯಿತು. ಅದೇ ರೀತಿಯಲ್ಲಿಯೇ ಕೋವಿಡ್ ಎರಡನೇ ಅಲೆ ಜಿಲ್ಲೆಗೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

      ಆಶಾ-ಅಂಗನವಾಡಿ ಕಾರ್ಯಕರ್ತರ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ-ಮನೆ ಸಮೀಕ್ಷೆ ನಡೆಸಿ ಜ್ವರ, ಕೆಮ್ಮು, ತಲೆನೋವು, ಶೀತಾ ಇವುಗಳ ಬಗ್ಗೆ ನಿಗಾವಹಿಸಬೇಕು. ಸೋಂಕಿನ ಲಕ್ಷಣಗಳು ಕಂಡುಬಂದರೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿ ಅವರನ್ನು ಆರ್‍ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್ ಪಾಸಿಟೀವ್ ಬಂದರೆ ಅಂತಹವರನ್ನು 14 ದಿನಗಳ ಹೋಂ ಕ್ಯಾರಂಟೈನ್ ಮಾಡಬೇಕು. ಕೇರಳ, ಮಹಾರಾಷ್ಟ್ರ ಸೇರಿದಂತೆ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡಿರುವ ಮತ್ತಿತರ ಪ್ರದೇಶಗಳಿಂದ ಕಳೆದ 15 ದಿನಗಳಿಂದ ಜಿಲ್ಲೆಗೆ ಆಗಮಿಸಿರುವವರ ಮೇಲೆ ನಿಗಾವಹಿಸಬೇಕು ಎಂದು ನಿರ್ದೇಶಿಸಿದರು.

      ಮೊದಲ ಹಂತದ ಕೋವಿಡ್ ಸಮಯದಲ್ಲಿ ಜಿಲ್ಲಾಡಳಿತ ಉತ್ತಮವಾಗಿ ನಿಯಂತ್ರಣ ಕ್ರಮಗಳನ್ನು ಗ್ರಾಮೀಣ ಭಾಗಗಳಲ್ಲಿ ಕೈಗೊಂಡು, ಗ್ರಾಮೀಣ ಭಾಗಕ್ಕೆ ಕೋವಿಡ್ ವ್ಯಾಪಿಸದಂತೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದೆ. ಅದೇ ಮಾದರಿಯಲ್ಲಿಯೇ ಕೋವಿಡ್ ಎರಡನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮೀಣ ಪ್ರದೇಶಗಳಿಗೆ ಕೇರಳ, ಮಹಾರಾಷ್ಟ್ರ ಮತ್ತಿತರ ಸೋಂಕು ಕಂಡುಬಂದ ಪ್ರದೇಶಗಳಿಂದ ಬರುವವರ ಮೇಲೆ ನಿಗಾವಹಿಸುವಂತೆ ಪಿಡಿಒ ಮತ್ತು ತಾಲೂಕು ಪಂಚಾಯಿತಿ ಇಒಗಳಿಗೆ ನಿರ್ದೇಶಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರಿಗೆ ಸೂಚಿಸಿದರು.

      ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು. ವೆಂಟಿಲೇಟರ್ ಸೇರಿದಂತೆ ಆರೋಗ್ಯ ಸೌಲಭ್ಯಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ತುಮಕೂರು ಹಾಗೂ ತಿಪಟೂರಿನಲ್ಲಿ ವೈರಲ್ ಲ್ಯಾಬ್‍ಗಳನ್ನು ಸ್ಥಾಪಿಸಿದೆ. ಪ್ರತಿನಿತ್ಯ 1,500ಕ್ಕೂ ಹೆಚ್ಚು ಆರ್‍ಟಿಪಿಸಿಆರ್ ಪರೀಕ್ಷೆ ನಡೆಸುವ ಸಾಮಥ್ರ್ಯ ಹೊಂದಲಾಗಿದ್ದು, ಅದಲ್ಲದೆ ಲ್ಯಾಬ್ ಆನ್ ಮೊಬೈಲ್ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

     ಎಲ್ಲಾ ತಾಲೂಕು ಆಸ್ಪತ್ರೆಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುವ ಸ್ಥಿತಿಯಲ್ಲಿರಬೇಕು. ಗಂಭೀರ ಪ್ರಕರಣಗಳನ್ನು ಮಾತ್ರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಅವರಿಗೆ ಸೂಚಿಸಿದರು.

      ಮೊದಲ ಹಂತದಲ್ಲಿನ ಕೋವಿಡ್ ನಿಯಂತ್ರಣಕ್ಕೆ ತಹಸೀಲ್ದಾರ್ ನೇತೃತ್ವದ ತಾಲೂಕು ಆಡಳಿತಗಳು ಮಹತ್ತರ ಪಾತ್ರ ವಹಿಸಿದ್ದವು. ಎರಡನೇ ಅಲೆ ನಿಯಂತ್ರಣಕ್ಕೂ ಅದೇ ರೀತಿ ಕಾರ್ಯನಿರ್ವಹಿಸಲು ಸೂಚನೆ ನೀಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ನಿರ್ದೇಶಿಸಿದರು.

      ತುಮಕೂರು ನಗರದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರಿರುವ ವಾರ್ಡ್‍ಗಳ ಕಡೆಯೂ ಹೆಚ್ಚು ನಿಗಾ ವಹಿಸಬೇಕು. ಕೋವಿಡ್ ನಿಯಂತ್ರಣದ ಜೊತೆಗೆ ಇತರೆ ಖಾಯಿಲೆಗಳ ನಿಯಂತ್ರಣಗಳಿಗೂ ಒತ್ತು ಕೊಡಬೇಕು. ಜನರಲ್ಲಿ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ತಾಲೂಕು ಕೇಂದ್ರಗಳಲ್ಲಿ ಆರೋಗ್ಯ ಶಿಬಿರ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಹಾಗೂ ಜಿಲ್ಲಾ ಸರ್ಜನ್ ಡಾ. ವೀರಭದ್ರಯ್ಯ ಅವರಿಗೆ ಸೂಚಿಸಿದರು.

      ಜಿಲ್ಲಾಧಿಕಾರಿಗಳ ಮನವಿ: ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡಿರುವ ಪ್ರದೇಶಗಳಿಂದ ಜಿಲ್ಲೆಗೆ ಆಗಮಿಸುವವರ ಬಗ್ಗೆ ನಿಗಾವಹಿಸಿ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ವೈ,ಎಸ್. ಪಾಟೀಲ ಅವರು ಮನವಿ ಮಾಡಿದರು.

     ಸೋಂಕು ಕಾಣಿಸಿಕೊಂಡಿರುವ ರಾಜ್ಯಗಳಿಂದ ಹಳ್ಳಿಗಳಿಗೆ ಆಗಮಿಸುವವರ ಮಾಹಿತಿಯನ್ನು ಜನರು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದರೆ ಸೋಂಕು ನಿಯಂತ್ರಿಸಲು ಸಹಕಾರಿಯಾಗಲಿದೆ. ಜಿಲ್ಲೆಗೆ ಸೋಂಕು ವ್ಯಾಪಿಸದಂತೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮಾಹಿತಿ ನೀಡಿದರೆ ಸೂಕ್ತ. ಹಾಗಾಗಿ ಹಳ್ಳಿಗಳಲ್ಲಿ ಟಾಂಟಾಂ ಹೊಡೆಸಿ ಈ ಬಗ್ಗೆ ಜಾಗೃತಿ ಮೂಡಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಡಾ. ಚೇತನ್, ಡಾ. ಮಹಿಮಾ, ಡಾ.ಮೋಹನ್‍ದಾಸ್, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಬಾಲರಾಜ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

(Visited 5 times, 1 visits today)
Previous Articleಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ಹರಿಸುವುದು ನನ್ನ ಉದ್ದೇಶ – ಜೆ.ಸಿ. ಮಾಧುಸ್ವಾಮಿ
Next Article ಇಂಧನ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಪ್ರತಿಭಟನೆ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ

December 31, 2025 4:09 pm
ಇತರೆ ಸುದ್ಧಿಗಳು

ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ

December 31, 2025 4:07 pm

ದರೋಡೆಕೋರನ ಬಂಧನ

December 31, 2025 4:05 pm
ಇತರೆ ಸುದ್ಧಿಗಳು

ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ

December 31, 2025 4:04 pm
ಇತರೆ ಸುದ್ಧಿಗಳು

ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿ: ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅಭಿಪ್ರಾಯ

December 31, 2025 4:03 pm
ಇತರೆ ಸುದ್ಧಿಗಳು

ದರೋಡೆ-ಸುಲಿಗೆ ಪ್ರಕರಣ ತಡೆಗೆ ಪೊಲೀಸರಿಂದ ಮಾಸ್ಟರ್ ಪ್ಲಾನ್

December 31, 2025 4:02 pm
Our Youtube Channel
Our Picks

ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ

December 31, 2025 4:09 pm

ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ

December 31, 2025 4:07 pm

ದರೋಡೆಕೋರನ ಬಂಧನ

December 31, 2025 4:05 pm

ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ

December 31, 2025 4:04 pm

ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿ: ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅಭಿಪ್ರಾಯ

December 31, 2025 4:03 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ

By News Desk BenkiyabaleDecember 31, 2025 4:09 pm

ಮಧುಗಿರಿ: ಸ್ನೇಹ ಸಮ್ಮಿಲನ ಸಮಾರಂಭಗಳು ನಮಗೆ ಶಾಲೆಯ ಬಗ್ಗೆ ಗೌರವ ಹೆಚ್ಚುವಂತೆ ಮಾಡುತ್ತದೆ. ಕಲಿತ ಶಾಲೆ ಕಲಿಸಿದ ಗುರುಗಳನ್ನು…

ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ

December 31, 2025 4:07 pm

ದರೋಡೆಕೋರನ ಬಂಧನ

December 31, 2025 4:05 pm

ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ

December 31, 2025 4:04 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.