BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
  • ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
  • ೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಇಂಧನ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಪ್ರತಿಭಟನೆ
Trending

ಇಂಧನ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಪ್ರತಿಭಟನೆ

By News Desk BenkiyabaleUpdated:February 25, 2021 7:02 pm

ತುಮಕೂರು :  

      ಇಂಧನ ಬೆಲೆಗಳ ನಿರಂತರ ಹೆಚ್ಚಳ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿಗಳ ವಿಳಂಬದಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಖಂಡಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದವತಿಯಿಂದ ಎತ್ತಿನಗಾಡಿ,ಜಟಕಾಗಾಡಿ, ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

       ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಹಮ್ಮಿಕೊಳ್ಳಲಾಗಿದ್ದ ಎತ್ತಿನ ಗಾಡಿ,ಜಟಕಾಗಾಡಿ ಮತ್ತು ಸೈಕಲ್ ಜಾಥಾವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಸೈಯಿದ್ ಅಹಮದ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು,ಅಂತರರಾಷ್ಟ್ರಿಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ, ಭಾರತದಲ್ಲಿ ನಿರಂತರ ವಾಗಿ ಇಂಧನ ಬೆಲೆಗಳನ್ನು ಹೆಚ್ಚಳ ಮಾಡುವ ಮೂಲಕ, ಕೋರೋನ ಸಂಕಷ್ಟದಲ್ಲಿರುವ ರೈತರನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಲಿಗೆ ಮಾಡುತ್ತಿವೆ.ಇಂಧನ ಬೆಲೆಗಳ ಹೆಚ್ಚಳದ ಪರಿಣಾಮ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಿ, ಜನಸಾಮಾನ್ಯರು, ಅದರಲ್ಲಿ ಬಡವರು ಮತ್ತು ಮಧ್ಯಮವರ್ಗದ ಜನರು ಬದುಕುವುದೇ ಕಷ್ಟವಾಗಿದೆ.ಕೇಂದ್ರ ಸರಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ.ಇದರ ವಿರುದ್ದ ಕಾಂಗ್ರೆಸ್ ನಿರಂತರ ಹೋರಾಟ ರೂಪಿಸಿದ್ದು, ಬೀದಿಗಿಳಿದು ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ದ ಪ್ರತಿಭಟನೆ ನಡೆಸಲಿದೆ ಎಂದರು.

      ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸದೆ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿರುವ ಸರಕಾರ, ಸರಕಾರಿ ಸಾಮ್ಯದ ಸಾರಿಗೆ, ಟೆಲಿಕಾಂ,ಹೆಚ್.ಎ.ಎಲ್.ನಂತಹ ಕಂಪನಿಗಳನ್ನು ಮಾರಾಟ ಮಾಡಿ,ಅದಾನಿ,ಅಂಬಾನಿಯಂತಹ ದೊಡ್ಡ ಬಂಡವಾಳ ಗಾರರನ್ನು ಪೋಷಿಸುತ್ತಿದ್ದಾರೆ.ಗುಜರಾತ್ ನಲ್ಲಿ ಸರ್‍ದಾರ್ ವಲ್ಲಭಾಯಿ ಪಟೇಲ್ ಹೆಸರಿನಲ್ಲಿ ನಿರ್ಮಿಸಿದ್ದ ಕ್ರೀಡಾಂಗಣವನ್ನು ತನ್ನ ಹೆಸರಿಗೆ ಬದಲಾಯಿಸಿಕೊಂಡು,ಕ್ರಿಕೆಟ್ ಅಂಕಣದಲ್ಲಿ ಅದಾನಿ,ಅಂಬಾನಿ ಎಂಡ್‍ಗಳನ್ನು ಗುರುತಿಸಿ,ದೇಶದ ಜನರ ಜೊತೆ, ಕ್ರೀಡೆಯನ್ನು ಅಪಮಾನಿಸುತ್ತಿದ್ದಾರೆ.ಇದರ ವಿರುದ್ದ ಕಾಂಗ್ರೆಸ್ ಶಾಂತಿಯುತ ಹೋರಾಟ ರೂಪಿಸಲಿದೆ ಎಂದು ಸೈಯಿದ್ ಅಹಮದ್ ತಿಳಿಸಿದರು.

     ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್ ಮಾತನಾಡಿ,ಕೇಂದ್ರ ಮತ್ತು ರಾಜ್ಯ ಸರಕಾರಗಳ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ತತ್ತರಿಸಿದ್ದು,ದಿನನಿತ್ಯ ಬಳಕೆ ವಸ್ತುಗಳಾದ ಗೋಧಿ, ಬೆಳೆ, ಬೆಲ್ಲ, ಅಕ್ಕಿ, ಕಾಳುಗಳು ಬೆಲೆಗಳು ಗಗನ ಮುಖಿಯಾಗಿದ್ದು, ಜನಸಾಮಾನ್ಯರು ಬದುಕುವುದೇ ಕಷ್ಟವಾಗಿದೆ. ಇದರ ವಿರುದ್ದ ನಾವು ನಿರಂತರ ಪ್ರತಿಭಟನೆ ನಡೆಸಲಿದ್ದೇವೆ.ಯುಪಿಎ ಸರಕಾರವಿದ್ದಾಗ ಒಂದು ರೂ ಇಂಧನ ಬೆಲೆ ಹೆಚ್ಚಾದರೂ ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿ ಸಂಸದರು, ಶಾಸಕರು, ಮುಖಂಡರು, ಒಂದೇ ಸಮನೆ ಇಂಧನ ಬೆಲೆ ಹೆಚ್ಚಾಗುತ್ತಿದ್ದರೂ ತುಟ್ಟಿ ಬಿಚ್ಚುತ್ತಿಲ್ಲ.ಇದು ಬಿಜೆಪಿಯ ಇಬ್ಬಗೆಯ ನೀತಿ.ಅಲ್ಲದೆ ತುಮಕೂರು ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯ ಕಾಮಗಾರಿಗಳು ತೀರ ವಿಳಂಬದಿಂದ ಕೂಡಿದ್ದು, ಇದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ.ಈ ಬಗ್ಗೆ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

      ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಕೆ.ಪಿ.ಸಿಸಿ.ವಕ್ತಾರರಾದ ಮುರುಳೀಧರ ಹಾಲಪ್ಪ,ಹೆಚ್.ಸಿ. ಹನುಮಂತಯ್ಯ ಮಾತನಾಡಿದರು.ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಅಲ್ಪಸಂಖ್ಯಾತರ ಘಟಕಕದ ಸಂಜೀವ್ ಕುಮಾರ್,ಶಿವಾಜಿ, ಥಾಮ್‍ಸನ್,ನಿಶಾ, ದಾದಾಪೀರ್,ಅಲ್ಲಾಉದ್ದಿನ್,ಮುಲ್ಲಾ ಇತರರು ಇದ್ದರು.

(Visited 14 times, 1 visits today)
Previous Articleಕೋವಿಡ್ 2ನೇ ಅಲೆ ವ್ಯಾಪಿಸದಂತೆ ಮುಂಜಾಗ್ರತೆ ವಹಿಸಿ
Next Article ಖಾಸಗಿ ಶಾಲೆ ಶುಲ್ಕ ಗೊಂದಲ ಬಗೆಹರಿಸಿ : ಆರೋಗ್ಯ – ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಚೌಡಪ್ಪ
News Desk Benkiyabale

Related Posts

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm news

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm news

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm news
ತಾಜಾ ಸುದ್ಧಿಗಳು

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm
Our Youtube Channel
Our Picks

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

By News Desk BenkiyabaleJuly 14, 2026 5:01 pm

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ…

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.