BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
  • ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್
  • ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ
  • ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ
  • ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಕೋವಿಡ್ ನಿಯಂತ್ರಣಕ್ಕೆ ಸಕಲ ಸಿದ್ಧತೆ
ಇತರೆ ಸುದ್ಧಿಗಳು

ತುಮಕೂರು : ಕೋವಿಡ್ ನಿಯಂತ್ರಣಕ್ಕೆ ಸಕಲ ಸಿದ್ಧತೆ

By News Desk BenkiyabaleUpdated:April 17, 2021 7:00 pm

 ತುಮಕೂರು :

      ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿನ್ವಯ ಕ್ರಮ ಕೈಗೊಂಡಿದ್ದು, ಸಮರ್ಪಕ ಹಾಸಿಗೆ, ಐಸಿಯು ವ್ಯವಸ್ಥೆ ಮತ್ತು ಲಸಿಕಾ ವಿತರಣೆಯನ್ನು ಮಾಡಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ 2020-21ನೇ ಸಾಲಿನ 4ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಪೂರೈಕೆ ಸಮರ್ಪಕವಾಗಿದೆ. ಪ್ರಸ್ತುತ ಲಸಿಕೆ, ಹಾಸಿಗೆಗಳ ಕೊರತೆಯಿಲ್ಲ. ಕೋವಿಡ್ ತಡೆಗೆ ಮನೆ-ಮನೆ ಸರ್ವೆ ಕಾರ್ಯವನ್ನೂ ಮಾಡಲಾಗುತ್ತಿದ್ದು, ಲಕ್ಷಣ ಕಂಡುಬಂದಲ್ಲಿ ಅಂತಹವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ಕೋವಿಡ್ ಪಾಸಿಟಿವ್ ಬಂದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕು. ವೈದ್ಯರ ಸಲಹಾ ಚೀಟಿಯಿಲ್ಲದೆ ಮೆಡಿಕಲ್‍ಗಳಲ್ಲಿ ಔಷಧಗಳನ್ನು ನೀಡಬಾರದು. ವಯಸ್ಸಾದವರನ್ನು ಹೆಚ್ಚು ಪರೀಕ್ಷೆಗೆ ಒಳಪಡಿಸಬೇಕು. ವಿವಿಧ ರೋಗಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಬಳಿಕ ದಾಖಲು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನೇ ಪಾಲಿಸಬೇಕಾಗಿದೆ. ಹಾಗಾಗಿ ಬೆಂಗಳೂರಿಗೆ ಸಮೀಪವಿರುವ, ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ, ಆಂಧ್ರಪ್ರದೇಶ ಗಡಿಪ್ರದೇಶಕ್ಕೆ ಹೊಂದಿಕೊಂಡಿರುವ ತುಮಕೂರು ಜಿಲ್ಲೆಗೆ ಸೋಂಕು ಹೇಗೆ ಬರುತ್ತದೆ ಎಂಬುದನ್ನು ಪತ್ತೆ ಹಚ್ಚಲು ಕಷ್ಟವಾಗುತ್ತಿದೆ. ಈ ಬಗ್ಗೆ ಸ್ವಯಃ ನಿರ್ಧಾರ ಕೈಗೊಳ್ಳಲು ಜಿಲ್ಲೆಗೆ ಅನುಮತಿ ಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 200 ಹಾಸಿಗೆ, 21 ಐಸಿಯು ಹಾಗೂ ಎಲ್ಲಾ ತಾಲೂಕುಗಳಲ್ಲಿಯೂ ಆಮ್ಲಜನಕ ಸಹಿತ 50 ಹಾಸಿಗೆ ವ್ಯವಸ್ಥೆಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತುಮಕೂರಿನ ಎರಡು ಮೆಡಿಕಲ್ ಕಾಲೇಜುಗಳಲ್ಲಿ ಸರ್ಕಾರದ ನಿರ್ದೇಶನದಂತೆ ಕೋವಿಡ್‍ಗಾಗಿ ಶೇ.50ರಷ್ಟು ಹಾಸಿಗೆ ಮೀಸಲಿರಿಸಲು ಒಪ್ಪಿಗೆ ನೀಡಿದ್ದು, ಅದರಂತೆ ಕೋವಿಡ್ ಸೋಂಕಿತರು ಅಲ್ಲಿಯೂ ದಾಖಲು ಆಗಬಹುದು. ಉಳಿದಂತೆ ಭಾರತೀಯ ವೈದ್ಯಕೀಯ ಸಂಘದಡಿಯ ಖಾಸಗಿ ಆಸ್ಪತ್ರೆಗಳಲ್ಲಿಯೂ ಶೇ.50ರಷ್ಟು ಹಾಸಿಗೆ ಮೀಸಲಿಡಲು ಒಪ್ಪಿಗೆ ನೀಡಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಆಮ್ಲಜನಕದ ಸಮಸ್ಯೆಯಿಲ್ಲ. ಮೊದಲು ಸರ್ಕಾರಿ ಲ್ಯಾಬ್‍ಗಳಲ್ಲಿ ಮಾತ್ರ ಕೋವಿಡ್ ಪರೀಕ್ಷೆ ಮಾಡಲು ಅವಕಾಶವಿತ್ತು. ಆದರೆ, ಈಗ ಖಾಸಗಿ ಆಸ್ಪತ್ರೆಗಳ ಲ್ಯಾಬ್‍ನಲ್ಲಿಯೂ ಪರೀಕ್ಷೆ ಮಾಡಲು ಅವಕಾಶ ಕಲ್ಪಿಸಿರುವುದರಿಂದ ಹೆಚ್ಚು ಪರೀಕ್ಷೆ ಮಾಡಲು ಅನಕೂಲವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಮಾತನಾಡಿ, ತುಮಕೂರು ನಗರ, ಗ್ರಾಮಾಂತರ ಹಾಗೂ ಶಿರಾದಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಜಿಲ್ಲಾಸ್ಪತ್ರೆಯಲ್ಲಿ 151 ಸೋಂಕಿತರು ಉಳಿದಂತೆ ಜಿಲ್ಲೆಯ ತಾಲ್ಲೂಕುಗಳಲ್ಲಿ 95 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 239 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 2241 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಜಿಲ್ಲೆಯಲ್ಲಿ ರೆಮಿಡಿಸ್ವಿಯರ್ ಕೊರತೆಯಿಲ್ಲ. ಲಸಿಕೆ ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲವೂ ಸಮರ್ಪಕವಾಗಿವೆ ಎಂದು ಸಭೆಗೆ ತಿಳಿಸಿದರು.
ಶಾಸಕರಾದ ಬಿ.ಸಿ.ನಾಗೇಶ್, ಡಾ.ಎಂ. ರಾಜೇಶ್‍ಗೌಡ, ರಂಗನಾಥ್, ಡಿ.ಸಿ. ಗೌರಿಶಂಕರ್, ತಿಪ್ಪೇಸ್ವಾಮಿ ಅವರು ಕೋವಿಡ್ ನಿಯಂತ್ರಣ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲೆಯಾದ್ಯಂತ 2016-17ನೇ ಸಾಲಿನಿಂದಲೂ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯ ಭವನಗಳ ನಿರ್ಮಾಣವನ್ನು ತ್ವರಿತಗೊಳಿಸಬೇಕು. ಭವನ ನಿರ್ಮಾಣ ಸಂಬಂಧ ಸಮಸ್ಯೆಗಳಿದ್ದರೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಂಡು ಭವನಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಉಳಿದಂತೆ ಹಾಸ್ಟೆಲ್‍ಗಳ ಕಟ್ಟಡಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೊರೊನಾ ನೆಪದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಕುಂಠಿತವಾಗದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಶಾಲೆಗಳಿಗೆ ಹಾಜರಾಗದ ವಿದ್ಯಾರ್ಥಿಗಳಿಗೂ ವಿವಿಧ ಕಾರ್ಯಕ್ರಮಗಳ ಮೂಲಕ ಶಿಕ್ಷಣ ಕೊಟ್ಟು 10 ನೇ ತರಗತಿ ಉತ್ತಮ ಫಲಿತಾಂಶಕ್ಕೆ ಹೆಚ್ಚು ಅದ್ಯತೆ ಕೊಡಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಶಾಸಕ ಬಿ.ಸಿ. ನಾಗೇಶ್ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಧಿಕಾರಿಗಳು ಕೆಲಸ ಮಾಡುವಲ್ಲಿ ವಿಳಂಬ ಧೋರಣೆ ಮಾಡುತ್ತಿದ್ದಾರೆ ಎಂದಾಗ, ಇದಕ್ಕೆ ಪ್ರತಿಕ್ರಿಯಿಸಿ ಸಚಿವರು, ಶಾಸಕರ ಅನುದಾನ ಕನ್ವರ್ಜೆನ್ಸ್‍ಗೆ ಕೊಟ್ಟಿದ್ದಂತಹ ಕಾಮಗಾರಿಗಳು ಯಾವ ಹಂತದಲ್ಲಿವೆ ಎಂಬುದರ ಮಾಹಿತಿಯನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಎಂಎಲ್‍ಸಿ ತಿಪ್ಪೇಸ್ವಾಮಿ ಮಾತನಾಡಿ, ಫಸಲ್ ಭೀಮಾ ಯೋಜನೆಯಡಿ ಸಿಗುವ ಸೌಲಭ್ಯಕ್ಕೆ ರೈತರ ನೋಂದಣಿ ಕಡಿಮೆಯಾಗುತ್ತಿದೆ. ರೈತರು ಈ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಸಲ್ ಭೀಮಾ ಯೋಜನೆ ಬಗ್ಗೆ ರೈತರಿಗೆ ಹೆಚ್ಚು ಮಾಹಿತಿ ನೀಡುವಂತೆ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ನಿರ್ದೇಶಿಸಿದರು.
ಜಾನುವಾರುಗಳಿಗೆ ವಿವಿಧ ಸಾಂಕ್ರಾಮಿಕ ರೋಗಗಳ ವಿರುದ್ಧ ಲಸಿಕೆ ಹಾಕುವ ಗುರಿ ನೂರರಷ್ಟು ಸಾಧನೆಯಾಗಿಲ್ಲ. ಕುರಿಗಳನ್ನು ಒಳಪಡಿಸಿಕೊಂಡು ಲಸಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸಿ. ಲಸಿಕೆ ಹಾಕಿಸುವ ಬಗ್ಗೆ ಹೆಚ್ಚು ಅರಿವು ಮೂಡಿಸಿ ಎಂದು ಪಶುಪಾಲನಾ ಇಲಾಖೆ ಅಧಿಕಾರಿಗೆ ಸಚಿವರು ಸೂಚಿಸಿದರು.
ಕೋವಿಡ್ ಅಲೆ ಮುಗಿಯುವವರೆಗೂ ವಯಸ್ಕರ ಶಿಕ್ಷಣ ತರಗತಿಗಳನ್ನು ನಿಲ್ಲಿಸುವಂತೆ ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಬಡ ರೈತರಿಗೆ ಸೌಲಭ್ಯ ಕಲ್ಪಿಸುತ್ತಿರುವ ವಿವಿಧ ಇಲಾಖೆಗಳ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಆದರೆ, ಅವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಹಾಗೂ ಕೊಳವೆ ಬಾವಿ ಕೊರೆಯುವ ಕಾರ್ಯ ವಿಳಂಬವಾಗುತ್ತಿದೆ. ಅಧಿಕಾರಿಗಳು, ಇಲಾಖೆಗಳ ಸಮನ್ವಯದೊಂದಿಗೆ ಕೊಳವೆ ಬಾವಿ ಕೊರೆದ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿಕೊಡುತ್ತೇವೆಂದು 80 ರಿಂದ 1ಲಕ್ಷದವರೆಗೂ ಹಣ ಪಡೆಯುವವರ ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿದೆ. ಈಗಾಗಲೇ ಮಾಯಸಂದ್ರದಲ್ಲಿ ಒಬ್ಬರನ್ನು ಬಂಧಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚಿಸಿದರು.
ತಿಪಟೂರಿನಲ್ಲಿ ತೆಂಗು ಉತ್ಪನ್ನ ಕಾರ್ಯಕ್ರಮ ಮತ್ತು ತುಮಕೂರಿನಲ್ಲಿ ತೆಂಗು ಉತ್ಪನ್ನ ಕಾರ್ಖಾನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಸಭೆಗೂ ಮುನ್ನ ದೇವರ ದಾಸಿಮಯ್ಯ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಪುಷ್ಟಾರ್ಚನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಚಿವರು, ದೇವರ ದಾಸಿಮಯ್ಯನವರ ವಚನಗಳು ಸಮಾಜಕ್ಕೆ ಪ್ರಸ್ತುತವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು ಎಂದು ತಿಳಿಸಿದರು.
ಬಳಿಕ ವಿಶ್ವ ಪಾರಂಪರಿಕ ದಿನದ ಅಂಗವಾಗಿ ಜಿಲ್ಲೆಯ ಪ್ರಮುಖ 12 ಪ್ರವಾಸಿತಾಣಗಳ ತಲಾ ಒಂದು ನಿಮಿಷದ ದೃಶ್ಯ ತುಣುಕನ್ನು ಪ್ರದರ್ಶಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಚೌಡಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ಕೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

(Visited 7 times, 1 visits today)
Previous Articleಯಡಿಯೂರು ಸಿದ್ದಲಿಂಗೇಶ್ವರ ಜಾತ್ರೆ ರದ್ದು
Next Article ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಡಿಸಿ,ಎಸ್ಪಿ ಪರಿಶೀಲನೆ
News Desk Benkiyabale

Related Posts

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm news
ತಾಜಾ ಸುದ್ಧಿಗಳು
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
news

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
news

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm
news

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm
Our Youtube Channel
Our Picks

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

By News Desk BenkiyabaleAugust 01, 2026 2:41 pm

ತುಮಕೂರು: ತಮಿಳುನಾಡಿಗೆ ಪ್ರತಿದಿನ ೩,೫೦೦ ಕ್ಯೂಸೆಕ್ಸ್ ನೀರು ಬಿಡಬೇಕೆಂದುಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸ್ಸಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ…

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.