BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹುಳಿಯಾರು: ಬಸ್ ನಿಲ್ದಾಣದ ಬಳಿ ನಿತ್ಯ ಕಸಕ್ಕೆ ಬೆಂಕಿ
  • ಪುರಾತನ ದೇವಸ್ಥಾನಗಳ ಸಂರಕ್ಷಣೆಯಾಗಲಿ: ಸಿದ್ಧಲಿಂಗ ಸ್ವಾಮೀಜಿ
  • ಹತ್ತಿ ಬಿತ್ತನೆಗೆ ಕಾನೂನುಬದ್ಧ ಒಪ್ಪಂದ ಕಡ್ಡಾಯ
  • ವಕ್ಫ್ ತಿದ್ದುಪಡಿ ಹಿಂಪಡೆಯುವ0ತೆ ಪ್ರತಿಭಟನೆ
  • ನಾಲಾ ಕಾಮಗಾರಿಯ ಚಾನಲ್‌ರಕ್ಷಣೆಗೆ ೧೫೦ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರಸಚಿವರಿಗೆ ಶಾಸಕ ಮನವಿ
  • ಎಸ್‌ಸಿ,ಎಸ್‌ಟಿ ಕುಂದುಕೊರತೆ ಸಭೆ ಕಡ್ಡಾಯ: ಡಿ.ಸಿ
  • ಲಿ0ಕ್ ಕೆನಾಲ್ ಯೋಜನೆ ಅವೈಜ್ಞಾನಿಕವಾಗಿದೆ
  • ಇನ್ನರ್ ವಿಲ್ ಸಂಸ್ಥೆ ಸಮಾಜದಲ್ಲಿ ಪರಸ್ಪರ ಸೇವಾ ಸಹಕಾರ ನೀಡುತ್ತಿದೆ: ಭವಾನಿ ಜಯರಾಮ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಕೋವಿಡ್ ನಿಯಂತ್ರಣಕ್ಕೆ ಸಕಲ ಸಿದ್ಧತೆ
ಇತರೆ ಸುದ್ಧಿಗಳು

ತುಮಕೂರು : ಕೋವಿಡ್ ನಿಯಂತ್ರಣಕ್ಕೆ ಸಕಲ ಸಿದ್ಧತೆ

By News Desk BenkiyabaleUpdated:April 17, 2021 7:00 pm

 ತುಮಕೂರು :

      ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿನ್ವಯ ಕ್ರಮ ಕೈಗೊಂಡಿದ್ದು, ಸಮರ್ಪಕ ಹಾಸಿಗೆ, ಐಸಿಯು ವ್ಯವಸ್ಥೆ ಮತ್ತು ಲಸಿಕಾ ವಿತರಣೆಯನ್ನು ಮಾಡಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ 2020-21ನೇ ಸಾಲಿನ 4ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಪೂರೈಕೆ ಸಮರ್ಪಕವಾಗಿದೆ. ಪ್ರಸ್ತುತ ಲಸಿಕೆ, ಹಾಸಿಗೆಗಳ ಕೊರತೆಯಿಲ್ಲ. ಕೋವಿಡ್ ತಡೆಗೆ ಮನೆ-ಮನೆ ಸರ್ವೆ ಕಾರ್ಯವನ್ನೂ ಮಾಡಲಾಗುತ್ತಿದ್ದು, ಲಕ್ಷಣ ಕಂಡುಬಂದಲ್ಲಿ ಅಂತಹವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ಕೋವಿಡ್ ಪಾಸಿಟಿವ್ ಬಂದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕು. ವೈದ್ಯರ ಸಲಹಾ ಚೀಟಿಯಿಲ್ಲದೆ ಮೆಡಿಕಲ್‍ಗಳಲ್ಲಿ ಔಷಧಗಳನ್ನು ನೀಡಬಾರದು. ವಯಸ್ಸಾದವರನ್ನು ಹೆಚ್ಚು ಪರೀಕ್ಷೆಗೆ ಒಳಪಡಿಸಬೇಕು. ವಿವಿಧ ರೋಗಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಬಳಿಕ ದಾಖಲು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನೇ ಪಾಲಿಸಬೇಕಾಗಿದೆ. ಹಾಗಾಗಿ ಬೆಂಗಳೂರಿಗೆ ಸಮೀಪವಿರುವ, ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ, ಆಂಧ್ರಪ್ರದೇಶ ಗಡಿಪ್ರದೇಶಕ್ಕೆ ಹೊಂದಿಕೊಂಡಿರುವ ತುಮಕೂರು ಜಿಲ್ಲೆಗೆ ಸೋಂಕು ಹೇಗೆ ಬರುತ್ತದೆ ಎಂಬುದನ್ನು ಪತ್ತೆ ಹಚ್ಚಲು ಕಷ್ಟವಾಗುತ್ತಿದೆ. ಈ ಬಗ್ಗೆ ಸ್ವಯಃ ನಿರ್ಧಾರ ಕೈಗೊಳ್ಳಲು ಜಿಲ್ಲೆಗೆ ಅನುಮತಿ ಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 200 ಹಾಸಿಗೆ, 21 ಐಸಿಯು ಹಾಗೂ ಎಲ್ಲಾ ತಾಲೂಕುಗಳಲ್ಲಿಯೂ ಆಮ್ಲಜನಕ ಸಹಿತ 50 ಹಾಸಿಗೆ ವ್ಯವಸ್ಥೆಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತುಮಕೂರಿನ ಎರಡು ಮೆಡಿಕಲ್ ಕಾಲೇಜುಗಳಲ್ಲಿ ಸರ್ಕಾರದ ನಿರ್ದೇಶನದಂತೆ ಕೋವಿಡ್‍ಗಾಗಿ ಶೇ.50ರಷ್ಟು ಹಾಸಿಗೆ ಮೀಸಲಿರಿಸಲು ಒಪ್ಪಿಗೆ ನೀಡಿದ್ದು, ಅದರಂತೆ ಕೋವಿಡ್ ಸೋಂಕಿತರು ಅಲ್ಲಿಯೂ ದಾಖಲು ಆಗಬಹುದು. ಉಳಿದಂತೆ ಭಾರತೀಯ ವೈದ್ಯಕೀಯ ಸಂಘದಡಿಯ ಖಾಸಗಿ ಆಸ್ಪತ್ರೆಗಳಲ್ಲಿಯೂ ಶೇ.50ರಷ್ಟು ಹಾಸಿಗೆ ಮೀಸಲಿಡಲು ಒಪ್ಪಿಗೆ ನೀಡಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಆಮ್ಲಜನಕದ ಸಮಸ್ಯೆಯಿಲ್ಲ. ಮೊದಲು ಸರ್ಕಾರಿ ಲ್ಯಾಬ್‍ಗಳಲ್ಲಿ ಮಾತ್ರ ಕೋವಿಡ್ ಪರೀಕ್ಷೆ ಮಾಡಲು ಅವಕಾಶವಿತ್ತು. ಆದರೆ, ಈಗ ಖಾಸಗಿ ಆಸ್ಪತ್ರೆಗಳ ಲ್ಯಾಬ್‍ನಲ್ಲಿಯೂ ಪರೀಕ್ಷೆ ಮಾಡಲು ಅವಕಾಶ ಕಲ್ಪಿಸಿರುವುದರಿಂದ ಹೆಚ್ಚು ಪರೀಕ್ಷೆ ಮಾಡಲು ಅನಕೂಲವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಮಾತನಾಡಿ, ತುಮಕೂರು ನಗರ, ಗ್ರಾಮಾಂತರ ಹಾಗೂ ಶಿರಾದಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಜಿಲ್ಲಾಸ್ಪತ್ರೆಯಲ್ಲಿ 151 ಸೋಂಕಿತರು ಉಳಿದಂತೆ ಜಿಲ್ಲೆಯ ತಾಲ್ಲೂಕುಗಳಲ್ಲಿ 95 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 239 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 2241 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಜಿಲ್ಲೆಯಲ್ಲಿ ರೆಮಿಡಿಸ್ವಿಯರ್ ಕೊರತೆಯಿಲ್ಲ. ಲಸಿಕೆ ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲವೂ ಸಮರ್ಪಕವಾಗಿವೆ ಎಂದು ಸಭೆಗೆ ತಿಳಿಸಿದರು.
ಶಾಸಕರಾದ ಬಿ.ಸಿ.ನಾಗೇಶ್, ಡಾ.ಎಂ. ರಾಜೇಶ್‍ಗೌಡ, ರಂಗನಾಥ್, ಡಿ.ಸಿ. ಗೌರಿಶಂಕರ್, ತಿಪ್ಪೇಸ್ವಾಮಿ ಅವರು ಕೋವಿಡ್ ನಿಯಂತ್ರಣ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲೆಯಾದ್ಯಂತ 2016-17ನೇ ಸಾಲಿನಿಂದಲೂ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯ ಭವನಗಳ ನಿರ್ಮಾಣವನ್ನು ತ್ವರಿತಗೊಳಿಸಬೇಕು. ಭವನ ನಿರ್ಮಾಣ ಸಂಬಂಧ ಸಮಸ್ಯೆಗಳಿದ್ದರೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಂಡು ಭವನಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಉಳಿದಂತೆ ಹಾಸ್ಟೆಲ್‍ಗಳ ಕಟ್ಟಡಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೊರೊನಾ ನೆಪದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಕುಂಠಿತವಾಗದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಶಾಲೆಗಳಿಗೆ ಹಾಜರಾಗದ ವಿದ್ಯಾರ್ಥಿಗಳಿಗೂ ವಿವಿಧ ಕಾರ್ಯಕ್ರಮಗಳ ಮೂಲಕ ಶಿಕ್ಷಣ ಕೊಟ್ಟು 10 ನೇ ತರಗತಿ ಉತ್ತಮ ಫಲಿತಾಂಶಕ್ಕೆ ಹೆಚ್ಚು ಅದ್ಯತೆ ಕೊಡಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಶಾಸಕ ಬಿ.ಸಿ. ನಾಗೇಶ್ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಧಿಕಾರಿಗಳು ಕೆಲಸ ಮಾಡುವಲ್ಲಿ ವಿಳಂಬ ಧೋರಣೆ ಮಾಡುತ್ತಿದ್ದಾರೆ ಎಂದಾಗ, ಇದಕ್ಕೆ ಪ್ರತಿಕ್ರಿಯಿಸಿ ಸಚಿವರು, ಶಾಸಕರ ಅನುದಾನ ಕನ್ವರ್ಜೆನ್ಸ್‍ಗೆ ಕೊಟ್ಟಿದ್ದಂತಹ ಕಾಮಗಾರಿಗಳು ಯಾವ ಹಂತದಲ್ಲಿವೆ ಎಂಬುದರ ಮಾಹಿತಿಯನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಎಂಎಲ್‍ಸಿ ತಿಪ್ಪೇಸ್ವಾಮಿ ಮಾತನಾಡಿ, ಫಸಲ್ ಭೀಮಾ ಯೋಜನೆಯಡಿ ಸಿಗುವ ಸೌಲಭ್ಯಕ್ಕೆ ರೈತರ ನೋಂದಣಿ ಕಡಿಮೆಯಾಗುತ್ತಿದೆ. ರೈತರು ಈ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಸಲ್ ಭೀಮಾ ಯೋಜನೆ ಬಗ್ಗೆ ರೈತರಿಗೆ ಹೆಚ್ಚು ಮಾಹಿತಿ ನೀಡುವಂತೆ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ನಿರ್ದೇಶಿಸಿದರು.
ಜಾನುವಾರುಗಳಿಗೆ ವಿವಿಧ ಸಾಂಕ್ರಾಮಿಕ ರೋಗಗಳ ವಿರುದ್ಧ ಲಸಿಕೆ ಹಾಕುವ ಗುರಿ ನೂರರಷ್ಟು ಸಾಧನೆಯಾಗಿಲ್ಲ. ಕುರಿಗಳನ್ನು ಒಳಪಡಿಸಿಕೊಂಡು ಲಸಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸಿ. ಲಸಿಕೆ ಹಾಕಿಸುವ ಬಗ್ಗೆ ಹೆಚ್ಚು ಅರಿವು ಮೂಡಿಸಿ ಎಂದು ಪಶುಪಾಲನಾ ಇಲಾಖೆ ಅಧಿಕಾರಿಗೆ ಸಚಿವರು ಸೂಚಿಸಿದರು.
ಕೋವಿಡ್ ಅಲೆ ಮುಗಿಯುವವರೆಗೂ ವಯಸ್ಕರ ಶಿಕ್ಷಣ ತರಗತಿಗಳನ್ನು ನಿಲ್ಲಿಸುವಂತೆ ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಬಡ ರೈತರಿಗೆ ಸೌಲಭ್ಯ ಕಲ್ಪಿಸುತ್ತಿರುವ ವಿವಿಧ ಇಲಾಖೆಗಳ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಆದರೆ, ಅವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಹಾಗೂ ಕೊಳವೆ ಬಾವಿ ಕೊರೆಯುವ ಕಾರ್ಯ ವಿಳಂಬವಾಗುತ್ತಿದೆ. ಅಧಿಕಾರಿಗಳು, ಇಲಾಖೆಗಳ ಸಮನ್ವಯದೊಂದಿಗೆ ಕೊಳವೆ ಬಾವಿ ಕೊರೆದ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿಕೊಡುತ್ತೇವೆಂದು 80 ರಿಂದ 1ಲಕ್ಷದವರೆಗೂ ಹಣ ಪಡೆಯುವವರ ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿದೆ. ಈಗಾಗಲೇ ಮಾಯಸಂದ್ರದಲ್ಲಿ ಒಬ್ಬರನ್ನು ಬಂಧಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚಿಸಿದರು.
ತಿಪಟೂರಿನಲ್ಲಿ ತೆಂಗು ಉತ್ಪನ್ನ ಕಾರ್ಯಕ್ರಮ ಮತ್ತು ತುಮಕೂರಿನಲ್ಲಿ ತೆಂಗು ಉತ್ಪನ್ನ ಕಾರ್ಖಾನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಸಭೆಗೂ ಮುನ್ನ ದೇವರ ದಾಸಿಮಯ್ಯ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಪುಷ್ಟಾರ್ಚನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಚಿವರು, ದೇವರ ದಾಸಿಮಯ್ಯನವರ ವಚನಗಳು ಸಮಾಜಕ್ಕೆ ಪ್ರಸ್ತುತವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು ಎಂದು ತಿಳಿಸಿದರು.
ಬಳಿಕ ವಿಶ್ವ ಪಾರಂಪರಿಕ ದಿನದ ಅಂಗವಾಗಿ ಜಿಲ್ಲೆಯ ಪ್ರಮುಖ 12 ಪ್ರವಾಸಿತಾಣಗಳ ತಲಾ ಒಂದು ನಿಮಿಷದ ದೃಶ್ಯ ತುಣುಕನ್ನು ಪ್ರದರ್ಶಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಚೌಡಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ಕೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

(Visited 7 times, 1 visits today)
Previous Articleಯಡಿಯೂರು ಸಿದ್ದಲಿಂಗೇಶ್ವರ ಜಾತ್ರೆ ರದ್ದು
Next Article ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಡಿಸಿ,ಎಸ್ಪಿ ಪರಿಶೀಲನೆ
News Desk Benkiyabale

Related Posts

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm ಇತರೆ ಸುದ್ಧಿಗಳು

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm ಇತರೆ ಸುದ್ಧಿಗಳು

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು

ಹುಳಿಯಾರು: ಬಸ್ ನಿಲ್ದಾಣದ ಬಳಿ ನಿತ್ಯ ಕಸಕ್ಕೆ ಬೆಂಕಿ

July 05, 2025 3:34 pm
ತುಮಕೂರು

ಪುರಾತನ ದೇವಸ್ಥಾನಗಳ ಸಂರಕ್ಷಣೆಯಾಗಲಿ: ಸಿದ್ಧಲಿಂಗ ಸ್ವಾಮೀಜಿ

July 05, 2025 3:31 pm
ತುಮಕೂರು

ಹತ್ತಿ ಬಿತ್ತನೆಗೆ ಕಾನೂನುಬದ್ಧ ಒಪ್ಪಂದ ಕಡ್ಡಾಯ

July 05, 2025 3:30 pm
ತುಮಕೂರು

ವಕ್ಫ್ ತಿದ್ದುಪಡಿ ಹಿಂಪಡೆಯುವ0ತೆ ಪ್ರತಿಭಟನೆ

July 05, 2025 3:28 pm
ತುಮಕೂರು

ನಾಲಾ ಕಾಮಗಾರಿಯ ಚಾನಲ್‌ರಕ್ಷಣೆಗೆ ೧೫೦ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರಸಚಿವರಿಗೆ ಶಾಸಕ ಮನವಿ

July 05, 2025 3:27 pm
ತುಮಕೂರು

ಎಸ್‌ಸಿ,ಎಸ್‌ಟಿ ಕುಂದುಕೊರತೆ ಸಭೆ ಕಡ್ಡಾಯ: ಡಿ.ಸಿ

July 05, 2025 3:26 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಹುಳಿಯಾರು: ಬಸ್ ನಿಲ್ದಾಣದ ಬಳಿ ನಿತ್ಯ ಕಸಕ್ಕೆ ಬೆಂಕಿ

By News Desk BenkiyabaleJuly 05, 2025 3:34 pm

ಹುಳಿಯಾರು: ಹುಳಿಯಾರು ಬಸ್ ನಿಲ್ದಾಣಕ್ಕೆ ಬರುವವರು ಪ್ರಕೃತಿಯ ಕರೆಗಳನ್ನು ಮನೆಯಲ್ಲೇ ಮುಗಿಸಿಕೊಂಡು ಬನ್ನಿ ಎಂದು ಸುದ್ದಿ ಮಾಡಿದಾಯ್ತು. ಹುಳಿಯಾರು ಬಸ್…

ಪುರಾತನ ದೇವಸ್ಥಾನಗಳ ಸಂರಕ್ಷಣೆಯಾಗಲಿ: ಸಿದ್ಧಲಿಂಗ ಸ್ವಾಮೀಜಿ

July 05, 2025 3:31 pm

ಹತ್ತಿ ಬಿತ್ತನೆಗೆ ಕಾನೂನುಬದ್ಧ ಒಪ್ಪಂದ ಕಡ್ಡಾಯ

July 05, 2025 3:30 pm

ವಕ್ಫ್ ತಿದ್ದುಪಡಿ ಹಿಂಪಡೆಯುವ0ತೆ ಪ್ರತಿಭಟನೆ

July 05, 2025 3:28 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.