BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
  • ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
  • “ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
  • ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ
  • ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮಗಳಿಗೆ ಕೋವಿಡ್-19 ವ್ಯಾಪಿಸದಂತೆ ಕ್ರಮಕೈಗೊಳ್ಳಿ; ಡಿಸಿ
Trending

ಗ್ರಾಮಗಳಿಗೆ ಕೋವಿಡ್-19 ವ್ಯಾಪಿಸದಂತೆ ಕ್ರಮಕೈಗೊಳ್ಳಿ; ಡಿಸಿ

By News Desk BenkiyabaleUpdated:April 20, 2021 6:54 pm

ತುಮಕೂರು  :

      ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ನಗರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕು ಗ್ರಾಮಗಳಿಗೆ ವ್ಯಾಪಿಸದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.

       ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯ್ತಿಗಳ ಅಧ್ಯಕ್ಷರು, ಸದಸ್ಯರು, ಪಿಡಿಒಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿ ಮಾತನಾಡಿದ ಅವರು, ಗ್ರಾಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿನ ಕಾರ್ಯಪಡೆಯು ಗ್ರಾಪಂ ವ್ಯಾಪ್ತಿಯ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಬಿಲ್‍ಕಲೆಕ್ಟರ್, ವಾಟರ್‍ಮೆನ್ ಸೇರಿದಂತೆ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬಳಸಿಕೊಂಡು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಗ್ರಾಮಗಳಿಗೆ ಕೊರೊನಾ ಸುಳಿಯದಂತೆ ತಡೆಗಟ್ಟಬೇಕು ಎಂದು ನಿರ್ದೇಶಿದರು.

      ಅಧಿಕಾರಿಗಳು ಎಲ್ಲಾ ಕೆಲಸಗಳನ್ನು ಬದಿಗೊತ್ತಿ ಕೋವಿಡ್-19 ಹರಡದಂತೆ ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ನಿಯಂತ್ರಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರಲ್ಲದೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಕೋವಿಡ್ ಲಕ್ಷಣಗಳು ಕಂಡುಬಂದವರ ಸ್ವ್ಯಾಬ್ ಸಂಗ್ರಹ ಮಾಡುವುದರೊಂದಿಗೆ, 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದರು.

      ಬೆಂಗಳೂರಿನಿಂದ ಗ್ರಾಮಕ್ಕೆ ಬರುವವರಿಗೆ ಕಡ್ಡಾಯವಾಗಿ ರ್ಯಾಟ್ (ಖಂಖಿ-ಖಚಿಠಿiಜ ಂಟಿಣigeಟಿಣ ಖಿesಣ) ಟೆಸ್ಟ್‍ಗೊಳಪಡಿಸಬೇಕು. ನಿತ್ಯ ಬೆಂಗಳೂರಿಗೆ ಹೋಗಿ ಬರುವವರಿಗೆ ಬೆಂಗಳೂರಿನಲ್ಲಿಯೇ ಉಳಿದುಕೊಳ್ಳುವಂತೆ ತಿಳಿ ಹೇಳಬೇಕು ಎಂದು ನಿರ್ದೇಶಿದರು.

      ಗ್ರಾಮಗಳಲ್ಲಿ ಜರುಗುವ ಕುರಿ/ದನಗಳ ಸೇರಿದಂತೆ ವಿಶೇಷ ಸಂತೆಗಳಿಗೆ ಅವಕಾಶವಿಲ್ಲ. ಮದುವೆ, ಸಭೆ-ಸಮಾರಂಭಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳುವ ಜವಾಬ್ದಾರಿ ಕಾರ್ಯಪಡೆಯದ್ದೇ ಆಗಿದ್ದು, ಕೋವಿಡ್ ಹರಡದಂತೆ ಜಾಗೃತಿ ವಹಿಸಬೇಕು ಎಂದರು.

       ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಅಧಿಕಾರವನ್ನು ಕಾರ್ಯಪಡೆಗೆ ನೀಡಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ತರಕಾರಿ, ಹೂ, ಹಣ್ಣು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಕೋವಿಡ್ ನಿಯಮಾವಳಿ ಪಾಲಿಸಿಕೊಂಡೇ ವ್ಯಾಪಾರ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

       ಕೋವಿಡ್ ಪಾಸಿಟಿವ್ ದೃಢಪಟ್ಟು ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರು ಹೊರಗಡೆ ತಿರುಗಾಡದಂತೆ ಅವರ ಮನೆಯವರಿಗೆ ಅರಿವು ಮೂಡಿಸಿ, ಸೋಂಕಿತರು ತಿರುಗಾಡದಂತೆ ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

       ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಕೋವಿಡ್ ನಿಯಾಮವಳಿಯನ್ನು ಗ್ರಾಪಂ ಮಟ್ಟದ ಕಾರ್ಯಪಡೆ ಕಟ್ಟುನಿಟ್ಟಾಗಿ ಪಾಲಿಸಿದರೆ ಗ್ರಾಮಕ್ಕೆ ಕೋವಿಡ್ ಹರಡದಂತೆ ತಡೆಯಬಹುದು. ಈ ನಿಟ್ಟಿನಲ್ಲಿ ಗ್ರಾಪಂ ಮಟ್ಟದಲ್ಲಿನ ವ್ಯಾಪಾರಸ್ಥರಿಗೆ ಕಡ್ಡಾಯವಾಗಿ ರ್ಯಾಟ್ ಟೆಸ್ಟ್‍ಗೆ ಒಳಪಡಿಸಬೇಕು ಎಂದು ಸೂಚನೆ ನೀಡಿದರು.
ಆಶಾ ಕಾರ್ಯಕರ್ತೆಯರು ಮನೆ ಮನೆ ಸಮೀಕ್ಷೆ ಕೈಗೊಂಡು ಸೋಂಕಿನ ಲಕ್ಷಣಗಳಿರುವವರು ಕಂಡುಬಂದವರನ್ನು ರ್ಯಾಟ್ ಟೆಸ್ಟ್‍ಗೆ ಒಳಪಡಿಸಬೇಕು ಎಂದರಲ್ಲದೆ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

      ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ಮಾತನಾಡಿ, ನಗರಗಳಿಗೆ ಅನಾವಶ್ಯಕವಾಗಿ ಓಡಾಡುವವರಿಗೆ ಕಡಿವಾಣ ಹಾಕಬೇಕು. ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಒಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಕೋವಿಡ್ ಹರಡದಂತೆ ಕ್ರಮ ಕೈಗೊಳ್ಳಬೇಕು. ಎಲ್ಲರೂ ಶುಚಿತ್ವ ಕಾಪಾಡಿಕೊಳ್ಳುವಲ್ಲಿ ಅರಿವು ಮೂಡಿಸಬೇಕು. ಸೋಂಕಿನ ಲಕ್ಷಣಗಳು ಕಂಡುಬಂದರೆ ಅಂತವರಿಗೆ ಮತ್ತು ಅವರ ಸಂಪರ್ಕಿತರಿಗೆ ಸ್ವ್ಯಾಬ್ ಸಂಗ್ರಹಿಸಲು ಒತ್ತು ಕೊಡಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೆಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮದಲ್ಲಿರುವ 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆಯಲು ಸೂಚಿಸಬೇಕು. ಮೊದಲ ಹಂತದ ಲಸಿಕೆ ಪಡೆದವರು ಆರು ವಾರಗಳ ನಂತರ ಎರಡನೇ ಹಂತದ ಲಸಿಕೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು. ಕೊರೊನಾ ನಿಯಾಮಳಿ ಅನುಸರಿಸಿಕೊಂಡು ಕಡಿಮೆ ಸಂಖ್ಯೆಯಲ್ಲಿ ಗ್ರಾಮ ಸಭೆ ನಡೆಸಿ ಕಾರ್ಯತಂತ್ರಗಳನ್ನು ರೂಪಿಸಿಕೊಂಡು ಕೊರೊನಾ ಮುಕ್ತ ಗ್ರಾಮಕ್ಕೆ ಶ್ರಮಿಸಬೇಕು ಎಂದು ನಿರ್ದೇಶಿಸಿದರು.

(Visited 9 times, 1 visits today)
Previous Articleಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಡಿಸಿ,ಎಸ್ಪಿ ಪರಿಶೀಲನೆ
Next Article ರೈತರ ಪರವಾಗಿ ಕೆಲಸ ಮಾಡಿ, ಇಲ್ಲವಾದರೇ ಜೋಕೆ : ಶಾಸಕರ ಎಚ್ಚರಿಕೆ
News Desk Benkiyabale

Related Posts

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm news
ತಾಜಾ ಸುದ್ಧಿಗಳು
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm
news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm
news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
Our Youtube Channel
Our Picks

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

By News Desk BenkiyabaleSeptember 05, 2026 3:54 pm

ಹುಳಿಯಾರು: ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲ್ಪಟ್ಟಿತÀÄ. ಆಧ್ಯಾತ್ಮಿಕ ವಾತಾವರಣದೊಂದಿಗೆ…

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.