BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ
  • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ
  • ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ
  • ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ
  • ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ
  • ಕನ್ನಡದ ಸಾಹಿತಿ, ಕವಿಗಳಿಗೆ ಪ್ರೋತ್ಸಾಹ ಅಗತ್ಯ
  • ಪ್ರಾಣ ಹಾನಿ ತಪ್ಪಿಸಲು ಕಾರ್ಯಕರ್ತರಿಂದ ಒತ್ತಾಯ
  • ಮೊಬೈಲ್ ಡಿಜಿಟಲ್ ವಾಹನಕ್ಕೆ ಚಾಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮಗಳಿಗೆ ಕೋವಿಡ್-19 ವ್ಯಾಪಿಸದಂತೆ ಕ್ರಮಕೈಗೊಳ್ಳಿ; ಡಿಸಿ
Trending

ಗ್ರಾಮಗಳಿಗೆ ಕೋವಿಡ್-19 ವ್ಯಾಪಿಸದಂತೆ ಕ್ರಮಕೈಗೊಳ್ಳಿ; ಡಿಸಿ

By News Desk BenkiyabaleUpdated:April 20, 2021 6:54 pm

ತುಮಕೂರು  :

      ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ನಗರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕು ಗ್ರಾಮಗಳಿಗೆ ವ್ಯಾಪಿಸದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.

       ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯ್ತಿಗಳ ಅಧ್ಯಕ್ಷರು, ಸದಸ್ಯರು, ಪಿಡಿಒಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿ ಮಾತನಾಡಿದ ಅವರು, ಗ್ರಾಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿನ ಕಾರ್ಯಪಡೆಯು ಗ್ರಾಪಂ ವ್ಯಾಪ್ತಿಯ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಬಿಲ್‍ಕಲೆಕ್ಟರ್, ವಾಟರ್‍ಮೆನ್ ಸೇರಿದಂತೆ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬಳಸಿಕೊಂಡು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಗ್ರಾಮಗಳಿಗೆ ಕೊರೊನಾ ಸುಳಿಯದಂತೆ ತಡೆಗಟ್ಟಬೇಕು ಎಂದು ನಿರ್ದೇಶಿದರು.

      ಅಧಿಕಾರಿಗಳು ಎಲ್ಲಾ ಕೆಲಸಗಳನ್ನು ಬದಿಗೊತ್ತಿ ಕೋವಿಡ್-19 ಹರಡದಂತೆ ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ನಿಯಂತ್ರಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರಲ್ಲದೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಕೋವಿಡ್ ಲಕ್ಷಣಗಳು ಕಂಡುಬಂದವರ ಸ್ವ್ಯಾಬ್ ಸಂಗ್ರಹ ಮಾಡುವುದರೊಂದಿಗೆ, 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದರು.

      ಬೆಂಗಳೂರಿನಿಂದ ಗ್ರಾಮಕ್ಕೆ ಬರುವವರಿಗೆ ಕಡ್ಡಾಯವಾಗಿ ರ್ಯಾಟ್ (ಖಂಖಿ-ಖಚಿಠಿiಜ ಂಟಿಣigeಟಿಣ ಖಿesಣ) ಟೆಸ್ಟ್‍ಗೊಳಪಡಿಸಬೇಕು. ನಿತ್ಯ ಬೆಂಗಳೂರಿಗೆ ಹೋಗಿ ಬರುವವರಿಗೆ ಬೆಂಗಳೂರಿನಲ್ಲಿಯೇ ಉಳಿದುಕೊಳ್ಳುವಂತೆ ತಿಳಿ ಹೇಳಬೇಕು ಎಂದು ನಿರ್ದೇಶಿದರು.

      ಗ್ರಾಮಗಳಲ್ಲಿ ಜರುಗುವ ಕುರಿ/ದನಗಳ ಸೇರಿದಂತೆ ವಿಶೇಷ ಸಂತೆಗಳಿಗೆ ಅವಕಾಶವಿಲ್ಲ. ಮದುವೆ, ಸಭೆ-ಸಮಾರಂಭಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳುವ ಜವಾಬ್ದಾರಿ ಕಾರ್ಯಪಡೆಯದ್ದೇ ಆಗಿದ್ದು, ಕೋವಿಡ್ ಹರಡದಂತೆ ಜಾಗೃತಿ ವಹಿಸಬೇಕು ಎಂದರು.

       ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಅಧಿಕಾರವನ್ನು ಕಾರ್ಯಪಡೆಗೆ ನೀಡಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ತರಕಾರಿ, ಹೂ, ಹಣ್ಣು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಕೋವಿಡ್ ನಿಯಮಾವಳಿ ಪಾಲಿಸಿಕೊಂಡೇ ವ್ಯಾಪಾರ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

       ಕೋವಿಡ್ ಪಾಸಿಟಿವ್ ದೃಢಪಟ್ಟು ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರು ಹೊರಗಡೆ ತಿರುಗಾಡದಂತೆ ಅವರ ಮನೆಯವರಿಗೆ ಅರಿವು ಮೂಡಿಸಿ, ಸೋಂಕಿತರು ತಿರುಗಾಡದಂತೆ ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

       ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಕೋವಿಡ್ ನಿಯಾಮವಳಿಯನ್ನು ಗ್ರಾಪಂ ಮಟ್ಟದ ಕಾರ್ಯಪಡೆ ಕಟ್ಟುನಿಟ್ಟಾಗಿ ಪಾಲಿಸಿದರೆ ಗ್ರಾಮಕ್ಕೆ ಕೋವಿಡ್ ಹರಡದಂತೆ ತಡೆಯಬಹುದು. ಈ ನಿಟ್ಟಿನಲ್ಲಿ ಗ್ರಾಪಂ ಮಟ್ಟದಲ್ಲಿನ ವ್ಯಾಪಾರಸ್ಥರಿಗೆ ಕಡ್ಡಾಯವಾಗಿ ರ್ಯಾಟ್ ಟೆಸ್ಟ್‍ಗೆ ಒಳಪಡಿಸಬೇಕು ಎಂದು ಸೂಚನೆ ನೀಡಿದರು.
ಆಶಾ ಕಾರ್ಯಕರ್ತೆಯರು ಮನೆ ಮನೆ ಸಮೀಕ್ಷೆ ಕೈಗೊಂಡು ಸೋಂಕಿನ ಲಕ್ಷಣಗಳಿರುವವರು ಕಂಡುಬಂದವರನ್ನು ರ್ಯಾಟ್ ಟೆಸ್ಟ್‍ಗೆ ಒಳಪಡಿಸಬೇಕು ಎಂದರಲ್ಲದೆ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

      ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ಮಾತನಾಡಿ, ನಗರಗಳಿಗೆ ಅನಾವಶ್ಯಕವಾಗಿ ಓಡಾಡುವವರಿಗೆ ಕಡಿವಾಣ ಹಾಕಬೇಕು. ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಒಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಕೋವಿಡ್ ಹರಡದಂತೆ ಕ್ರಮ ಕೈಗೊಳ್ಳಬೇಕು. ಎಲ್ಲರೂ ಶುಚಿತ್ವ ಕಾಪಾಡಿಕೊಳ್ಳುವಲ್ಲಿ ಅರಿವು ಮೂಡಿಸಬೇಕು. ಸೋಂಕಿನ ಲಕ್ಷಣಗಳು ಕಂಡುಬಂದರೆ ಅಂತವರಿಗೆ ಮತ್ತು ಅವರ ಸಂಪರ್ಕಿತರಿಗೆ ಸ್ವ್ಯಾಬ್ ಸಂಗ್ರಹಿಸಲು ಒತ್ತು ಕೊಡಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೆಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮದಲ್ಲಿರುವ 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆಯಲು ಸೂಚಿಸಬೇಕು. ಮೊದಲ ಹಂತದ ಲಸಿಕೆ ಪಡೆದವರು ಆರು ವಾರಗಳ ನಂತರ ಎರಡನೇ ಹಂತದ ಲಸಿಕೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು. ಕೊರೊನಾ ನಿಯಾಮಳಿ ಅನುಸರಿಸಿಕೊಂಡು ಕಡಿಮೆ ಸಂಖ್ಯೆಯಲ್ಲಿ ಗ್ರಾಮ ಸಭೆ ನಡೆಸಿ ಕಾರ್ಯತಂತ್ರಗಳನ್ನು ರೂಪಿಸಿಕೊಂಡು ಕೊರೊನಾ ಮುಕ್ತ ಗ್ರಾಮಕ್ಕೆ ಶ್ರಮಿಸಬೇಕು ಎಂದು ನಿರ್ದೇಶಿಸಿದರು.

(Visited 9 times, 1 visits today)
Previous Articleಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಡಿಸಿ,ಎಸ್ಪಿ ಪರಿಶೀಲನೆ
Next Article ರೈತರ ಪರವಾಗಿ ಕೆಲಸ ಮಾಡಿ, ಇಲ್ಲವಾದರೇ ಜೋಕೆ : ಶಾಸಕರ ಎಚ್ಚರಿಕೆ
News Desk Benkiyabale

Related Posts

ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ

July 01, 2025 3:01 pm ತುಮಕೂರು

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ

July 01, 2025 3:00 pm ತುಮಕೂರು

ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ

July 01, 2025 2:58 pm ತುಮಕೂರು
ತಾಜಾ ಸುದ್ಧಿಗಳು

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm
ತುಮಕೂರು

ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ

July 01, 2025 3:01 pm
ತುಮಕೂರು

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ

July 01, 2025 3:00 pm
ತುಮಕೂರು

ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ

July 01, 2025 2:58 pm
ತುಮಕೂರು

ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ

July 01, 2025 2:57 pm
ತುಮಕೂರು

ಕನ್ನಡದ ಸಾಹಿತಿ, ಕವಿಗಳಿಗೆ ಪ್ರೋತ್ಸಾಹ ಅಗತ್ಯ

July 01, 2025 2:55 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

By News Desk BenkiyabaleJuly 01, 2025 3:52 pm

ತುಮಕೂರು : ಜುಲೈ ೧ ಎಂದಕೂಡಲೇ ಕನ್ನಡ ಪತ್ರಿಕಾ ದಿನ ನೆನಪಾಗುತ್ತದೆ. ಅದನ್ನು ಆಚರಿಸುವುದು, ಸ್ಮರಿಸುವುದು ಎಲ್ಲ ಪತ್ರರ‍್ತ ರ‍್ತವ್ಯ.…

ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ

July 01, 2025 3:01 pm

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ

July 01, 2025 3:00 pm

ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ

July 01, 2025 2:58 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.