BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಾವೆಲ್ಲರೂ ಹಿಂದು ನಾವೆಲ್ಲ ಒಂದು
  • ಸೌಹಾರ್ದ ಸಂಕ್ರಾ0ತಿ ಆಚರಣೆ
  • ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ
  • ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್
  • ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ
  • ಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ
  • ಶ್ರೀರಾಮ ದೇವಾಲಯಕ್ಕೆ ಸೋಲಾರ್ ದೀಪ ಕೊಡುಗೆ
  • ಡಾ. ಜಿ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಂಗ ಕಲೆ ನಶಿಸುವ ಹಾದಿಯತ್ತ ಮುಖ ಮಾಡಿದೆ – ಪ್ರೊ.ಕೆ.ಎನ್.ಗಂಗಾನಾಯಕ್
ತುಮಕೂರು ಜಿಲ್ಲಾ ಸುದ್ಧಿಗಳು

ರಂಗ ಕಲೆ ನಶಿಸುವ ಹಾದಿಯತ್ತ ಮುಖ ಮಾಡಿದೆ – ಪ್ರೊ.ಕೆ.ಎನ್.ಗಂಗಾನಾಯಕ್

By News Desk BenkiyabaleUpdated:March 27, 2019 5:31 pm

ತುಮಕೂರು:

      ರಂಗ ಕಲೆ ನಶಿಸುವ ಹಾದಿಯತ್ತ ಮುಖ ಮಾಡಿದ್ದು, ಪ್ರತಿಯೊಬ್ಬರು ರಂಗ ಕಲೆಯನ್ನು ಉಳಿಸಿ, ಬೆಳಸಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ.ಕೆ.ಎನ್.ಗಂಗಾನಾಯಕ್ ಹೇಳಿದರು

      ನಗರದ ಸಾಹಿತ್ಯ ಪರಿಷತ್ ಭವನದಲ್ಲಿ ನಾಟಕಮನೆ ತುಮಕೂರು ವತಿಯಿಂದ ಹೇಮಾದ್ರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಗುರುಶ್ರೀ ಕಾಲೇಜ್ ಆಫ್ ಕಾಮರ್ಸ್ ಅಂಡ್ ಸೋಷಿಯಲ್ ವರ್ಕ್, ರಾಜ್ಯ ಯುವ ಬರಹಗಾರರ ಒಕ್ಕೂಟ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರಂಗಭೂಮಿ ದಿನಾಚರಣೆಯನ್ನು ನಗಾರಿ ಭಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವಜನತೆ ಸಿನಿಮಾ ಗೀಳಿನಲ್ಲಿ ಸಿಲುಕಿ ಒದ್ದಾಡುತ್ತಿದ್ದು, ಇದರಿಂದ ಹೊರಬಂದು ಪಠ್ಯೇತರ ಚಟುವಟಿಕೆಗಳಾದ ನಾಟಕ, ರಂಗಕಲೆ, ಮತ್ತಿತರೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.
ಕಲೆಗೆ ಮೂಲ ಗ್ರೀಕ್ ದೇಶ, ಸಾಹಿತ್ಯ, ರಂಗಕಲೆ, ನಾಟಕ ಹೀಗೆ ಬೇರೆ ಬೇರೆ ಕಲೆಗಳೂ ಸಹ ಗ್ರೀಕ್‍ನಲ್ಲೇ ಮೊದಲು ಹುಟ್ಟಿದ್ದು, ಅಲ್ಲಿಂದಲೇ ಮೊದಲು ಪ್ರಾರಂಭವಾಗಿದ್ದು, ಆದ್ದರಿಂದ ಗ್ರೀಕ್ ದೇಶವನ್ನು ನಾವೆಂದೂ ಮರೆಯಲಾಗುವುದಿಲ್ಲ ಎಂದರು.

      ಜನರ ಮನರಂಜನೆಗಾಗಿ ನಮ್ಮಲ್ಲಿ ಹಲವಾರು ಕಲಾಪ್ರಕಾರಗಳಿವೆ. ಒಂದಕ್ಕಿಂತ ಒಂದು ವಿಶೇಷವಾಗಿರುವ ಈ ಕಲೆಗಳು ಜನರಿಗೆ ಮನರಂಜನೆ ನೀಡುವ ಜೊತೆಗೆ ಅವರಲ್ಲಿರುವ ಸೃಜನಶೀಲತೆಯನ್ನು ಅರಳಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಇಂತಹ ಕಲೆಗಳಲ್ಲಿ ನಾಟಕ ಅಥವಾ ರಂಗಭೂಮಿಯೂ ಒಂದು ಎಂದರು.

      ಒಂದು ನಾಟಕ ಅಥವಾ ರಂಗ ಕಲೆಯು ಉತ್ತಮವಾದ ಸಾಮಾಜಿಕ ಸಂದೇಶಗಳನ್ನು ನೀಡುವುದರ ಜೊತೆಗೆ ಜನರನ್ನು ಒಂದು ಅದೃಶ್ಯವಾದ ಲೋಕಕ್ಕೆ ಕರೆದೊಯ್ಯುತ್ತದೆ. ಇಲ್ಲಿ ಬರುವ ಒಂದೊಂದು ಪಾತ್ರಗಳನ್ನು ಜನರು ತಮ್ಮ ಬದುಕಿಗೆ ಹೋಲಿಸಿ ನೋಡುತ್ತಾರೆ. ಕೆಲವು ಪಾತ್ರಗಳನ್ನು ತಮ್ಮ ಬದುಕಿಗೆ ಅನ್ವಯಿಸಿಕೊಂಡು ಬಿಡುತ್ತಾರೆ. ಜನರ ಯೋಚನಾ ಶಕ್ತಿಯನ್ನು ಬದಲಿಸುವ ಸಾಮರ್ಥ್ಯ ನಾಟಕಗಳಿಗಿವೆ. ಆದ್ದರಿಂದ ಇದು ಕಲೆಯ ಒಂದು ಸಮರ್ಥ ಮಾಧ್ಯವಾಗಿದೆ. ನಮ್ಮ ಜಗತ್ತಿನಲ್ಲಿ ರಂಗಭೂಮಿ ಅಥವಾ ನಾಟಕಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇದು ಹಳೆಯ ಕಲಾ ಪ್ರಕಾರವಾಗಿದ್ದರೂ ಈಗಿನ ಆಧುನಿಕ ಪ್ರಪಂಚದಲ್ಲೂ ಒಂದು ಸಮರ್ಥವಾದ ಕಲಾ ಮಾಧ್ಯಮವಾಗಿ ಬೆಳೆದಿದೆ ಎಂದು ಹೇಳಿದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಲಾಶ್ರೀ ಡಾ.ಲಕ್ಷ್ಮಣದಾಸ್ ಮಾತನಾಡಿ ರಂಗ ಕಲೆಗೆ ಯಾವುದೇ ರೀತಿಯ ಭೇದ ಭಾವವಿಲ್ಲ, ಕಲೆಯ ಮುಂದೆ ಯಾರು ಮೇಲು ಕೀಳು ಅಲ್ಲ. ರಂಗ ಕಲೆಯೂ ಸಂಕೀರ್ಣವಾದುದು ಎಂದರು.

      ಹಿಂದಿನ ನಾಟಕ ಕಲೆಗಳು ಪ್ರೇಕ್ಷಕನ ಕಲ್ಪನೆಯ ಶಕ್ತಿಯನ್ನು ವೃದ್ಧಿಗೊಳಿಸುತ್ತಿತ್ತು, ಪ್ರತಿಯೊಂದು ದೃಶ್ಯದ ತನ್ನ ಕಲ್ಪನೆಯ ಮೂಲಕ ತನ್ನ ಮನಸಿನಲ್ಲಿ ಬಿಂಬಿಸಿಕೊಳ್ಳುತ್ತಿದ್ದ. ಆದರೆ ಇಂದಿನ ನಾಟಕಗಳಲ್ಲಿ ನೈಜತೆಯನ್ನು ತರುವ ನಿಟ್ಟಿನಲ್ಲಿ ಪ್ರೇಕ್ಷಕನ ಕಲ್ಪನ ಶಕ್ತಿಗೆ ಬಹುದೊಡ್ಡ ಹೊಡೆತ ಬಿದ್ದಿದೆ ಎಂದು ಆತಂಕ ವ್ಯಕ್ತಪಡಿಸಿದರು.

      ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ ಮಾತನಾಡಿ, ರಂಗಭೂಮಿಯಲ್ಲಿ ಅಭಿನಯಿಸುವ ನಾಟಕಗಳು ಜನರಿಗೆ ಮನರಂಜನೆ ನೀಡುವುದರ ಜತೆಗೆ ನೈತಿಕ ಮೌಲ್ಯಗಳನ್ನು ತುಂಬುತ್ತದೆ ಎಂದರು.

      ಪ್ರಾಸ್ತಾವಿಕವಾಗಿ ಮಾತನಾಡಿದ ರಂಗಸಂಘಟಕ ನಾಟಕಮನೆ ಮಹಾಲಿಂಗು ಮಾತನಾಡಿ, ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಪ್ರದೇಶದ ಜನರಲ್ಲಿ ರಂಗಕಲೆಯನ್ನು ಪುನಶ್ಚೇತನಗೊಳಿಸುವ ಕಾರ್ಯದಲ್ಲಿ ನಾಟಕಮನೆ ತೊಡಗಿದೆ. ಯುವಕರಿಗಾಗಿ ರಂಗಶಿಬಿರಗಳನ್ನು ಆಯೋಜಿಸಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ. ಯುವಕರಲ್ಲಿ ರಂಗಕಲೆಯ ಬಗ್ಗೆ ಆಸಕ್ತಿ ಬೆಳೆಸಲು ಪೂರಕವಾದ ಅಂಶಗಳನ್ನು ಪಠ್ಯಕ್ರಮದಲ್ಲೂ ಅಳವಡಿಸುವುದು ಹೆಚ್ಚು ಸೂಕ್ತ ಎಂದರು.

      ತುಮಕೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ವೆಂಕಟರೆಡ್ಡಿ ರಾಮರೆಡ್ಡಿ ಮಾತನಾಡಿ, ಸಮಾಜದ ಅನೇಕ ಸ್ಥಿತ್ಯಂತರಗಳಿಗೆ ರಂಗಭೂಮಿ ಕಾರಣವಾಗಿದೆ. ಉತ್ತಮ ಸಮಾಜ ನಿರ್ಮಾಣಗೊಳ್ಳಲು ಆಳುವ ವ್ಯವಸ್ಥೆಯ ಲೋಪದೋಷಗಳನ್ನು ಜನರಿಗೆ ತಲುಪಿಸುವಾಗ, ಸಮಾಜದ ದುಷ್ಟ ವ್ಯಕ್ತಿಗಳ ದಬ್ಬಾಳಿಕೆಯನ್ನು ಎಚ್ಚರಿಸುವಾಗ, ವೈಜ್ಞಾನಿಕ ಸತ್ಯಗಳನ್ನು ತಿಳಿಸುವಾಗ, ಮೌಢ್ಯತೆಗಳನ್ನು ಧಿಕ್ಕರಿಸುವಾಗ, ಶಿಕ್ಷಣ ಪದ್ಧತಿಯನ್ನು ಸಾರ್ವತ್ರೀಕರಿಸುವಾಗ, ಜಾತಿ ಪದ್ಧತಿ-ಧರ್ಮಾಂಧತೆಯ ದುಷ್ಪರಿಣಾಮ ತಿಳಿಸುವಾಗ, ಯುದ್ಧದ ಭೀಕರತೆಯ ಬಗ್ಗೆ ಎಚ್ಚರಿಸುವಾಗ ಪಾತ್ರಗಳ ಮೂಲಕ ಸಮಾಜವನ್ನು ಕಟ್ಟಿಕೊಡುವ ರಂಗಭೂಮಿಯ ಕೊಡುಗೆ ಅಪಾರವಾಗಿದೆ ಎಂದರು.

      ನಾಟಕಗಳ ರಚನೆ, ಪ್ರದರ್ಶನಗಳಲ್ಲಿ ದೇಶದಲ್ಲಿಯೇ ರಾಜ್ಯವು ವಿಶಿಷ್ಟವಾದ ಸ್ಥಾನ ಹೊಂದಿದ್ದು, ಪರಂಪರೆಯನ್ನು ಉಳಿಸಿ, ಬೆಳೆಸಬೇಕಾದ್ದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇದರಿಂದ ನಾಡಿನ ಕಲೆ, ಸಂಸ್ಕೃತಿಯೊಂದಿಗೆ ಕಲಾವಿದರಿಗೂ ಸಹ ನೈತಿಕ ಬೆಂಬಲ ದೊರಕಲು ಸಾಧ್ಯವಾಗಲಿದೆ ತಿಳಿಸಿದರು.

      ಕಾರ್ಯಕ್ರಮದ ನಂತರ ಯುವಜನತೆ ಮತ್ತು ರಂಗಭೂಮಿ ಕುರಿತು ವಿಚಾರ ಸಂಕಿರಣ, ನಂತರ ರಂಗಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.

(Visited 34 times, 1 visits today)
Previous Articleಬಿಜೆಪಿ ಅಭ್ಯರ್ಥಿ ಜಿಎಸ್‍ಬಿ ನಾಮಪತ್ರ ಸಲ್ಲಿಕೆ!
Next Article ಹುಬ್ಬಳ್ಳಿ : ಕಟ್ಟಡ ಕುಸಿತ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ನಾವೆಲ್ಲರೂ ಹಿಂದು ನಾವೆಲ್ಲ ಒಂದು

January 16, 2026 4:11 pm
ಇತರೆ ಸುದ್ಧಿಗಳು

ಸೌಹಾರ್ದ ಸಂಕ್ರಾ0ತಿ ಆಚರಣೆ

January 16, 2026 3:57 pm
ಇತರೆ ಸುದ್ಧಿಗಳು

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm
ಇತರೆ ಸುದ್ಧಿಗಳು

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm
ಇತರೆ ಸುದ್ಧಿಗಳು

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ

January 16, 2026 3:52 pm
ಇತರೆ ಸುದ್ಧಿಗಳು

ಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ

January 16, 2026 3:50 pm
Our Youtube Channel
Our Picks

ನಾವೆಲ್ಲರೂ ಹಿಂದು ನಾವೆಲ್ಲ ಒಂದು

January 16, 2026 4:11 pm

ಸೌಹಾರ್ದ ಸಂಕ್ರಾ0ತಿ ಆಚರಣೆ

January 16, 2026 3:57 pm

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ

January 16, 2026 3:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ನಾವೆಲ್ಲರೂ ಹಿಂದು ನಾವೆಲ್ಲ ಒಂದು

By News Desk BenkiyabaleJanuary 16, 2026 4:11 pm

ಗುಬ್ಬಿ: ಪ್ರತಿ ಮನೆಗಳಲ್ಲಿ ಮನಗಳಲ್ಲಿ ಪ್ರತಿ ಗ್ರಾಮ, ರಾಜ್ಯ ದೇಶದಲ್ಲೇಡೆ ನಾವೆಲ್ಲರೂ ಹಿಂದು ನಾವೆಲ್ಲ ಒಂದು ಎಂದು ಅರ್ಥ ಮಾಡಿಕೊಂಡು…

ಸೌಹಾರ್ದ ಸಂಕ್ರಾ0ತಿ ಆಚರಣೆ

January 16, 2026 3:57 pm

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.