ತುಮಕೂರು

     ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ವಾರಂತ್ಯದ ಕಫ್ರ್ಯೂ ಜಾರಿಗೊಳಿಸಲಾಗಿದ್ದು, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಅವರು ನಗರದಲ್ಲಿಂದು ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ ವಿಕೇಂಡ್ ಕಫ್ರ್ಯೂ ಪರಿಶೀಲನೆ ನಡೆಸಿದರು.
ನಗರದ ಟೌನ್‍ಹಾಲ್, ಅಶೋಕ ರಸ್ತೆ, ಬಿಹೆಚ್ ರಸ್ತೆ, ಶಿವಕುಮಾರ ಸ್ವಾಮೀಜಿ ಸರ್ಕಲ್ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಕಫ್ರ್ಯೂ ಅನುಷ್ಠಾನದ ಪರಿಶೀಲಿಸಿ,ಅನಂತರ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ಸರ್ಕಾರದ ಆದೇಶದಂತೆ ವಿಕೇಂಡ್ ಕಫ್ರ್ಯೂ ಜಾರಿಮಾಡಲಾಗಿದೆ. ಸಾರ್ವಜನಿಕರು ಸಹಕರಿಸಿ ಇದರ ಸದೋಪಯೋಗ ಪಡಿಸಿಕೊಂಡು ಸೋಂಕು ಹರಡದಂತೆ ಎಚ್ಚರ ವಹಿಸಬೇಕು. ಅನಗತ್ಯವಾಗಿ ಹೊರಗಡೆ ಓಡಾಡದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದರು.

      ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿಯವರು ಎಲ್ಲಾ ತಾಲ್ಲೂಕುಗಳ ತಹಸೀಲ್ದಾರ್‍ಗಳೊಂದಿಗೆ ಇಂದು ವಿಡೀಯೋ ಕಾನ್ಪರೇನ್ಸ್ ಮೂಲಕ ಕೋವಿಡ್ ನಿಯಂತ್ರಣ ಸಭೆ ನಡೆಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಶೀಘ್ರ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿ, ಹೋಂ ಐಸೋಲೇಷನ್‍ನಲ್ಲಿರುವವರನ್ನು ಮತ್ತು ಆಮ್ಲಜನಕ ಅವಶ್ಯಕವಿಲ್ಲದ, ಸೋಂಕಿನ ಲಕ್ಷಣಗಳಿಲ್ಲದಿರುವವರನ್ನು ಸ್ಥಳಾಂತರಗೊಳಿಸಲು ತಿಳಿಸಿದ್ದಾರೆ ಎಂದು ಹೇಳಿದರು.
ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ, ರೆಮಿಡಿಸಿಯರ್ ಪೂರೈಕೆ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ. ಅಕ್ರಮವಾಗಿ ರೆಮಿಡಿಸಿಯರ್ ಅನ್ನು ದಾಸ್ತಾನು ಮತ್ತು ಮಾರಾಟ ಮಾಡುವಂತಿಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

       ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ವಾರಾಂತ್ಯದ ಕಫ್ರ್ಯೂ ಮತ್ತು ಸರ್ಕಾರದ ಆದೇಶ ಪಾಲನೆ ಮಾಡಲು ಚೆಕ್ ಪೆÇೀಸ್ಟ್‍ಗಳನ್ನು ಸ್ಥಾಪಿಸಲಾಗಿದೆ. ಒಳ ಬರುವ ಮತ್ತು ಹೊರ ಹೋಗುವ ಜನರನ್ನು ತಪಾಸಣೆ ಮಾಡಲಾಗುತ್ತಿದೆ. ತುಮಕೂರು ನಗರದಲ್ಲಿ 18 ಚೆಕ್ ಪೆÇೀಸ್ಟ್‍ಗಳನ್ನು ಹಾಕಲಾಗಿದೆ. ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಅನಗತ್ಯವಾಗಿ ಓಡಾಡುವವರ ವಾಹಗಳನ್ನು ಸೀಜ್ ಮಾಡಲಾಗುತ್ತಿದೆ. ದೂರ ಪ್ರಯಾಣ ಬೆಳೆಸುವವರು ಟಿಕೇಟ್ ಅಥವಾ ಅಗತ್ಯ ದಾಖಲೆಗಳನ್ನು ತೋರಿಸಬೇಕಾಗುತ್ತದೆ. ಅಗತ್ಯ ಸೇವೆಗಳ ಕೆಲಸಗಾರರು ತಮ್ಮ ಕಚೇರಿಯ ಗುರುತಿನ ಚೀಟಿಯನ್ನು ತೋರಿಸಬೇಕು. ವಿಕೇಂಡ್ ದಿನಗಳಲ್ಲಿ ಬೆಳಿಗ್ಗೆ 6 ರಿಂದ 10 ರವರೆಗೆ ದಿನಸಿ, ಹಾಲು, ತರಕಾರಿ, ಸೇರಿದಂತೆ ಆಹಾರ ಉತ್ಪನ್ನಗಳ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಸಾರ್ವಜನಿಕರು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು. ಧಿಕಾರಿ ಕೆ.ಚನ್ನಬಸಪ್ಪ, ಉಪ ವಿಭಾಗಾಧಿಕಾರಿ ಅಜಯ್ ಸೇರಿದಂತೆ ಇತರರಿದ್ದರು.

(Visited 12 times, 1 visits today)