BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
  • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ
  • ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೊರೋನಾ ನಿಗ್ರಹದಲ್ಲಿ ಪಾಲಿಕೆ ಸದಸ್ಯರ ಜವಾಬ್ದಾರಿ ಇದೆ : ಜೆಸಿಎಂ
Trending

ಕೊರೋನಾ ನಿಗ್ರಹದಲ್ಲಿ ಪಾಲಿಕೆ ಸದಸ್ಯರ ಜವಾಬ್ದಾರಿ ಇದೆ : ಜೆಸಿಎಂ

By News Desk BenkiyabaleUpdated:May 15, 2021 6:55 pm

ತುಮಕೂರು:

     ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ನಿಗ್ರಹಕ್ಕೆ ಸದಸ್ಯರೆಲ್ಲರೂ ಹೆಚ್ಚಿನ ಜವಾಬ್ದಾರಿ ಹೊತ್ತು ಕಾರ್ಯ ನಿರ್ವಹಿಸುವ ಮುಖೇನ ನಗರವನ್ನು ಸೋಂಕಿನಿಂದ ಪಾರು ಮಾಡಲು ಸಹಕರಿಸಬೇಕು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.

     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ಪಾಲಿಕೆ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಟ್ಟುನಿಟ್ಟಿನ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಿದ ಪರಿಣಾಮ ಕೆಂಪು ವಲಯದಲ್ಲಿದ್ದ ತುಮಕೂರು ಪ್ರಸ್ತುತ ಪಿಂಕ್ ವಲಯಕ್ಕೆ ಬಂದಿದೆ. ಆದರೂ, ಜಿಲ್ಲೆ ಸಮಾಧಾನದ ಸ್ಥಿತಿಗೆ ತಲುಪಬೇಕೆಂದರೆ ಸಂಪೂರ್ಣ ಕೋವಿಡ್ ನಿಗ್ರಹಕ್ಕೆ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

      ಸೋಂಕಿತರ ಆರೈಕೆಗಾಗಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆದರೆ ಸೆಂಟರ್ ಗೆ ಸೋಂಕಿತರು ಬರಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಬಂದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸುವ ವ್ಯವಸ್ಥೆಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಹಾಗಾಗಿ ಹೊಸ ಪಾಸಿಟಿವ್ ಪ್ರಕರಣಗಳ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಗೆ ಸ್ಥಳಾಂತರಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಪಾಲಿಕೆ ಸದಸ್ಯರೆಲ್ಲರೂ ಮುಂದಾಗಬೇಕು ಎಂದು ತಿಳಿಸಿದರು.

ಆಕ್ಸಿಜನ್, ಐಸಿಯು, ವೆಂಟಿಲೇಟರ್, ಸೋಂಕಿತರಿಗೆ ನೀಡುವ ಚಿಕಿತ್ಸೆ, ಸೋಂಕಿತರ ಆರೈಕೆ, ಸೋಂಕು ಹರಡದಂತೆ ತಡೆಗಟ್ಟವುದು ಸೇರಿದಂತೆ ನಾನಾ ಸಮಸ್ಯೆಗಳ ನಿವಾರಣೆಗಾಗಿ ತೆಗೆದುಕೊಂಡು ಕ್ರಮಗಳಿಂದಾಗಿ ಸೋಂಕಿನ ನಿಯಂತ್ರಣದಲ್ಲಿ ಜಿಲ್ಲೆ ಸುಧಾರಣೆ ಕಂಡಿದೆ. ಮತ್ತಷ್ಟು ಸುಧಾರಣೆ ಆಗಲೇಬೇಕಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು ಎಂದರು.

      ತಮ್ಮ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ಶ್ರಮಿಸುವ ಮೂಲಕ ಸದಸ್ಯರು ಸಹಕರಿಸಬೇಕು. ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿ ಬಗೆಹರಿಸಿಕೊಳ್ಳಿ ಎಂದು ಹೇಳಿದರು.
ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ನಾವೆಲ್ಲರೂ ಕೋವಿಡ್ ಸಂಕಷ್ಟದಲ್ಲಿದ್ದೇವೆ. ಹೋಂ ಕ್ವಾರಂಟೈನ್ ಅನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿ, ಕುಟುಂಬದವರಿಗೆ ಸೋಂಕು ಹಬ್ಬುವುದನ್ನು ತಪ್ಪಿಸಬೇಕು. ಸೋಂಕಿತರನ್ನು ಕೋವಿಡ್ ಕೇರ್ ಗೆ ಸ್ಥಳಾಂತರಿಸುವ ಕೆಲಸ ಮಾಡಬೇಕು. ವಾರ್ಡ್ ಸಭೆ ಮಾಡಿ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

      ಸಭೆಯಲ್ಲಿ 8ನೇ ವಾರ್ಡಿನ ಪಾಲಿಕೆ ಸದಸ್ಯ ಸಯ್ಯಾದ್ ನಯಾಜ್ ಅಹಮದ್ ಮಾತನಾಡಿ, ಮೂರನೇ ಅಲೆ ಪ್ರಾರಂಭದ ವೇಳೆಗೆ ಕೋವಿಡ್ ಕಡಿವಾಣಕ್ಕೆ ಜಿಲ್ಲೆಯಲ್ಲಿ ಅತ್ಯಗತ್ಯ ಕ್ರಮ ಕೈಗೊಳ್ಳಬೇಕಿದೆ. ನಮ್ಮ ವ್ಯಾಪ್ತಿಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪೂರೈಕೆ ಮಾಡಲು ಪೈಪ್ ಲೈನ್ ಅಳವಡಿಕೆಗೆ ಒಪ್ಪಿಗೆ ಕೊಡಬೇಕು. ಅಗತ್ಯವಿರುವ ಆಕ್ಸಿಜನ್ ಅನ್ನಿ ನಾವೇ ಪೂರೈಕೆ ಮಾಡಿಕೊಳ್ಳುತ್ತೇವೆ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಪ್ರತಿಕ್ರಿಯಿಸಿ, ಆಮ್ಲಜನಕ ಪೂರೈಕೆ ಜಿಲ್ಲಾಡಳಿತದಿಂದಲೇ ಆಗಬೇಕು. ಯಾರೂ ಸ್ವಯಂ ಆಗಿ ಪೂರೈಕೆ ಮಾಡಿಕೊಳ್ಳುವಂತಿಲ್ಲ. ಜಿಲ್ಲಾಡಳಿತದ ಗಮನಕ್ಕೆ ಬಾರದೆ ಆಮ್ಲಜನಕ ರವಾನೆ ಹಾಗೂ ಬಳಕೆ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಹಾಗಾಗಿ ಜಿಲ್ಲಾಡಳಿತದ ಒಪ್ಪಿಗೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

      ಈ ವೇಳೆ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಆಮ್ಲಜನಕ ಪೂರೈಕೆ ಜಿಲ್ಲೆಯ ಬೇಡಿಕೆಗೆ ಅನುಗುಣವಾಗಿ ಲಭ್ಯ ವಿಲ್ಲ. ಆಮ್ಲಜನಕ ಪೂರೈಕೆಯಾದರೆ ಜಿಲ್ಲಾಸ್ಪತ್ರೆಯಲ್ಲೆ 200 ಹಾಸಿಗೆಗಳನ್ನು ಹೆಚ್ವಿಸಲಾಗುವುದು. ಆಮ್ಲಜನಕವನ್ನು ಜಿಲ್ಲಾಧಿಕಾರಿ ಒಪ್ಪಿಗೆ ಮೇರೆಗೆ ಪಡೆಯಬೇಕು. ಹಾಗಾಗಿ ಆಮ್ಲಜನಕ ಸಾಂದ್ರಕಗಳ ಮೂಲಕ ಬೆಡ್ ಗಳ ವ್ಯವಸ್ಥೆ ಮಾಡುಕೊಳ್ಳುವಂತೆ ತಿಳಿಸಿದರು. 3ನೇ ವಾರ್ಡ್ ಸದಸ್ಯ ಲಕ್ಷ್ಮಿನರಸಿಂಹರಾಜು ಹಾಗೂ 7ನೇ ವಾರ್ಡ್ ಕುಮಾರ್ ಮಾತನಾಡಿ, ನಗರದ ಬಹುತೇಕ ಪಿಎಚ್ ಸಿ ಗಳಲ್ಲಿ ಕೋವಿಡ್ ಔಷಧಗಳ ಕೊರತೆಯಿದೆ. ಅಲ್ಲದೆ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕೋವಿಡ್ ಸೋಂಕು ತಗುಲಿದ ಪರಿಣಾಮ ಸಿಬ್ಬಂದಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಮರ್ಪಕ ಸಿಬ್ಬಂದಿಗಳ ವ್ಯವಸ್ಥೆ ಇಲ್ಲದೆ ಸೋಂಕಿತರ ಆರೈಕೆ ಕಷ್ಟವಾಗುತ್ತಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ತೆಗೆದುಕೊಳ್ಳುವ ಮೂಲಕ ಸಿಬ್ಬಂದಿಗಳ ಕೊರತೆ ಸಮಸ್ಯೆ ಸರಿದೂಗಿಸಲಾಗುತ್ತಿದೆ. ಮಾರ್ಗಸೂಚಿ ಅನ್ವಯ ಪಿಎಚ್‍ಸಿಗಳಿಗೆ ಸಮರ್ಪಕ ಔಷಧ ವಿತರಣೆ ಮಾಡುವಂತೆ ಜಿಲ್ಲಾ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಅವರಿಗೆ ಸೂಚಿಸಿದರು.
20ನೇ ವಾರ್ಡಿನ ಸದಸ್ಯ ಶ್ರೀನಿವಾಸ್ ಮಾತನಾಡಿ, ಪಾಲಿಕೆಯಿಂದ ರೆಫರ್ ಆಗಿ ಹೋದರೂ ಸೋಂಕಿತನಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಯೊಂದು ಒಂದು ಲಕ್ಷ ರೂ. ಹಣ ಪಡೆದಿದೆ ಎಂದು ಸಭೆ ಗಮನಕ್ಕೆ ತಂದಾಗ, ದಾಖಲೆ ಸಮೇತ ದೂರು ಕೊಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

      ಕೋವಿಡ್ ಪರೀಕ್ಷೆ ಮತ್ತು ಲಸಿಕೆ ಹಾಕುವ ವ್ಯವಸ್ಥೆ ಒಂದೇ ಕಡೆ ನಡೆಯುತ್ತಿದೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗುತ್ತಿದೆ. ಹಾಗಾಗಿ, ಈ ವ್ಯವಸ್ಥೆ ಪ್ರತ್ಯೇಕವಾಗಿ ಆಗಬೇಕು. ಸೋಂಕಿತರ ಮನೆಗೆ ಸ್ಯಾನಿಟೈಸ್ ಮಾಡುವ ಸಿಬ್ಬಂದಿಗಳಿಗೆ ಅಗತ್ಯವಿರುವಷ್ಟು ಪಿಪಿಇ ಕಿಟ್ ನೀಡಬೇಕು ಎಂದು ಸದಸ್ಯರು ಸಭೆ ಗಮನಕ್ಕೆ ತಂದರು.
ಸದಸ್ಯರ ಮನವಿ ಮೇರೆಗೆ ಸದಸ್ಯರು ನಿರ್ಣಯಿಸಿದ ಜಾಗದಲ್ಲಿ ಲಸಿಕೆ ನೀಡುವ ವ್ಯವಸ್ಥೆ ಕಲ್ಪಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ ಸಚಿವರು, ಅಗತ್ಯಕ್ಕೆ ಅನುಗುಣವಾಗಿ ಪಿಪಿಇ ಕಿಟ್ ನೀಡುವಂತೆ ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ನಿರ್ದೇಶಿಸಿದರು. ಕೊಳಚೆ ಪ್ರದೇಶಗಳಲ್ಲಿ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಸಂಸಾರ ಹಾಳುಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಸದಸ್ಯರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಡಾ.ಕೆ.ವಂಶಿಕೃಷ್ಣ ದಾಖಲೆ ಸಮೇತ ಮಾಹಿತಿ ಕೊಟ್ಟರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

      ಮೇಯರ್ ಕೃಷ್ಣಪ್ಪ ಮಾತನಾಡಿ, ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್, ಆಮ್ಲಜನಕ ಹಾಸಿಗೆಗಳಿವೆ ಎಂಬ ಮಾಹಿತಿ ಸಿಗುವ ವ್ಯವಸ್ಥೆ ಮಾಡಿದರೆ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು. ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗುವುದೆಂದು ಸಚಿವರು ತಿಳಿಸಿದರು.

(Visited 14 times, 1 visits today)
Previous Articleಕುಟುಂಬವಿಲ್ಲದೇ ಕೊರೊನಾ ಸೋಂಕಿತೆಯ ಅಂತ್ಯಕ್ರಿಯೆ
Next Article ತುಮಕೂರು : ಸೋಂಕಿತರಿಗೆ ಆತ್ಮ ಸ್ಥೈರ್ಯ ತುಂಬಿದ ಡಿಸಿ
News Desk Benkiyabale

Related Posts

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm news

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm news

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm news
ತಾಜಾ ಸುದ್ಧಿಗಳು

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm
Our Youtube Channel
Our Picks

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

By News Desk BenkiyabaleJune 29, 2026 5:35 pm

ಶಿರಾ: ರೈತರು ಭೂಮಿಯನ್ನು ಹೊಂದಿರುವುದಷ್ಟೇ ಅಲ್ಲ, ತಮ್ಮ ಜಮೀನುಗಳ ಬಗ್ಗೆ ಕಾನೂನು ಅರಿವು ಅವಶ್ಯಕವಾಗಿದೆ. ಹಕ್ಕುಗಳು ಮತ್ತು ದಾಖಲಾತಿಗಳ ಬಗ್ಗೆ…

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.