BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ
  • ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ
  • ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ
  • ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ
  • ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ
  • ವೃಕ್ಷಮಾತೆ ಅಜಾರಾಮರ
  • ಕನ್ನಡ ಜೀವಂತ ಭಾಷೆ: ಡಾ. ಕರಿಗೌಡ
  • ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಶ್ವ ಪರಿಸರ ದಿನ: ರೈತರ ಜಮೀನಿನಲ್ಲಿ ಗಿಡ ನೆಡಲು ಸಿಇಓ ಸೂಚನೆ
Trending

ವಿಶ್ವ ಪರಿಸರ ದಿನ: ರೈತರ ಜಮೀನಿನಲ್ಲಿ ಗಿಡ ನೆಡಲು ಸಿಇಓ ಸೂಚನೆ

By News Desk BenkiyabaleUpdated:June 03, 2021 5:57 pm

ತುಮಕೂರು:

      ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ರೈತರ ಜಮೀನಿನಲ್ಲಿ ಸಸಿ ನೆಟ್ಟು ಗಿಡಕ್ಕೆ ನೀರು ಹಾಕುವ ಮೂಲಕ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದ್ದಾರೆ.

       ಕೃಷಿ, ಅರಣ್ಯ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಸಸಿಗಳನ್ನು ನೆಡುವುದಕ್ಕೆ ಗುಂಡಿಗಳನ್ನು ಅಗೆದು ಸಿದ್ದಪಡಿಸಿಕೊಳ್ಳಲಾಗಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿರುವ ಕಾರಣ ಯಾವುದೇ ಸಭೆ, ಸಮಾರಂಭಗಳನ್ನು ಆಯೋಜಿಸದೆ, ಸಾರ್ವಜನಿಕರನ್ನು ಒಗ್ಗೂಡಿಸದೆ ಸರಳ ರೀತಿಯಲ್ಲಿ ಕೋವಿಡ್ ಮುಂಜಾಗೃತಾ ಕ್ರಮಗಳನ್ನು ಅನುಸರಿಸುವ ಮೂಲಕ ವ್ಯವಸ್ಥಿತವಾಗಿ ವಿಶ್ವ ಪರಿಸರ ದಿನವನ್ನು ಆಚರಿಸುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

      ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಶೇ. 65ರಷ್ಟು ಆರ್ಥಿಕ ವೆಚ್ಚವನ್ನು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಮೀಸಲಿಡಲಾಗಿದೆ. ಬದು ಬೇಸಾಯ ಹಾಗೂ ಅರಣ್ಯೀಕರಣಕ್ಕಾಗಿ ಈ ಸಾಲಿನಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗಳಲ್ಲಿ ಸಾವಿರಾರು ಸಸಿಗಳನ್ನು ಬೆಳೆಸಲಾಗಿದೆ. ಸಾಮಾಜಿಕ ಅರಣ್ಯ/ಪ್ರಾದೇಶಿಕ ಅರಣ್ಯ ಇಲಾಖೆಗಳು ಅರಣ್ಯ ಪ್ರದೇಶ ಹಾಗೂ ರಸ್ತೆ ಬದಿ, ನೆಡು ತೋಪು, ಕಾಲುವೆ ದಂಡೆಗಳು, ಕೆರೆ ಅಂಚು, ಶಾಲೆ, ಅಂಗನವಾಡಿ ಮತ್ತು ಸ್ಮಶಾನಗಳಲ್ಲಿ ಸಸಿ ನಾಟಿಗೆ ಗುಂಡಿಗಳನ್ನು ತೆಗೆದು ಅವುಗಳನ್ನು ಸರಳವಾಗಿ ನಾಟಿ ಮಾಡಲು ಕ್ರಮ ವಹಿಸುವಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕು ಹರಡಿರುವುದರಿಂದ ವಿಶ್ವ ಪರಿಸರ ದಿನಾಚರಣೆಯಂದು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಸೇರಿದಂತೆ ಎಲ್ಲಾ ಅಗತ್ಯ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು. ವೈಯಕ್ತಿಕ ಫಲಾನುಭವಿಗಳು ತಮ್ಮ ಸ್ವಂತ ಜಮೀನುಗಳಲ್ಲಿ ಸಸಿಗಳನ್ನು ನೆಡಲು ಹೆಚ್ಚಿನ ಆದ್ಯತೆ ನೀಡಬೇಕು. ಅಲ್ಲದೆ ಈಗಾಗಲೇ ಅರಣ್ಯ ಇಲಾಖೆಯ ನರ್ಸರಿಗಳಲ್ಲಿ ಲಭ್ಯವಿರುವ ಸಸಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ಸಾಗಣೆ ಮಾಡಲು ಎಲ್ಲ ರೀತಿಯ ಕ್ರಮ ವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಲ, ಹತ್ತಿ, ಹೊಂಗೆ, ಬೇವು, ಮತ್ತಿ, ಮಾವು, ಹಲಸು ಹಾಗೂ ಇನ್ನಿತರೆ ಹಣ್ಣಿನ ಗಿಡಗಳನ್ನು ಮತ್ತು ಶಾಲೆ, ಅಂಗನವಾಡಿ , ಮನೆ ಅಂಗಳದಲ್ಲಿ ಕೈತೋಟ ಮಾಡಲು ನಿಂಬೆ, ದಾಳಿಂಬೆ, ತೆಂಗು, ನುಗ್ಗೆ ಇನ್ನಿತರ ಸಸಿಗಳನ್ನು ಬೆಳೆಸಲು ಜಿಲ್ಲೆಯಲ್ಲಿ ಎರಡು ನೂರು ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು, ಈ ಸಸಿಗಳನ್ನು ಬೆಳೆಸಲು ಕ್ರಮಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೋಬಳಿ/ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರ್ಸರಿ ಬೆಳೆಸುವ ಮುಖಾಂತರ ಸ್ಥಳೀಯರಿಗೆ ಸಲಿಸಾಗಿ ಸಸಿಗಳು ದೊರೆಯುವಂತೆ ಕ್ರಮವಹಿಸಲಾಗುವುದು.

      ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಮಹಾತ್ಮಗಾಂಧಿ ನರೇಗಾ ಯೋಜನೆ ಗ್ರಾಮೀಣ ಭಾಗದ ಜನರ ಪಾಲಿಗೆ ಉದ್ಯೋಗವನ್ನು ಒದಗಿಸುವ ಪ್ರಮುಖ ಯೋಜನೆಯಾಗಿದೆ. ದುಡಿಯೋಣ ಬಾ ಅಭಿಯಾನ, ಬದು ಬೇಸಾಯ ಮಾಸಾಚರಣೆ ಮೂಲಕ ಗ್ರಾಮೀಣ ಭಾಗದ ಜನರಿಂದ ವೈಯಕ್ತಿಕ/ಸಮುದಾಯ ಕಾಮಗಾರಿಗಳಿಗೆ ಕೆಲಸದ ಬೇಡಿಕೆಯನ್ನು ಪಡೆದು, ಕೆಲಸ ನೀಡುವ ಕಾರ್ಯವನ್ನು ಗ್ರಾಮ ಪಂಚಾಯಿತಿಗಳು ಮಾಡುತ್ತಿವೆ.

      ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಲು ಆಸಕ್ತಿ ಇರುವ ಕೂಲಿ ಕಾರ್ಮಿಕರು ಹತ್ತಿರದ ಗ್ರಾಮ ಪಂಚಾಯಿತಿಯಲ್ಲಿ ಕೆಲಸಕ್ಕೆ ಅರ್ಜಿ ಸಲ್ಲಿಸಿ, ಕೂಲಿ ಕೆಲಸವನ್ನು ಪಡೆಯಬಹುದಾಗಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ಜನತೆ ಅನಗತ್ಯವಾಗಿ ಮನೆಯಿಂದ ಹೊರಬಾರದಂತೆ ನರೇಗಾ ಯೋಜನೆಯಡಿ ದೊರೆಯುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ನರೇಗಾ ಯೋಜನೆಯಡಿ 2021-22ನೇ ಸಾಲಿನಲ್ಲಿ 62 ಲಕ್ಷ ಮಾನವ ದಿನಗಳ ಸೃಜನೆ ಮಾಡುವ ಗುರಿ ಹೊಂದಲಾಗಿದ್ದು, ಕಳೆದ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ 7.75 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಜೂನ್ ಹಾಗೂ ಜುಲೈನಲ್ಲಿ ಪ್ರಗತಿಯ ವೇಗವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನರೇಗಾ ಯೋಜನೆಯಡಿ ಕೆಲಸ ಮಾಡುವಾಗ ಕೂಲಿ ಕಾರ್ಮಿಕರು ಆಕಸ್ಮಿಕವಾಗಿ ಮರಣ ಹೊಂದಿದರೆ ಅಥವಾ ಶಾಶ್ವತ ಅಂಗವಿಕಲರಾದಲ್ಲಿ ಅಮ್ ಆದ್ಮಿ ವಿಮಾ ಯೋಜನೆಯಲ್ಲಿರುವಂತೆ 2 ಲಕ್ಷ ರೂ.ವರೆಗೆ ಪರಿಹಾರ ಪಡೆಯಲು ಅವಕಾಶವಿರುತ್ತದೆ. 60 ವರ್ಷ ಮೀರಿದ ಹಿರಿಯ ನಾಗರೀಕರು ಹಾಗೂ ವಿಕಲಚೇತನರಿಗೆ ಕಾಮಗಾರಿ ಕೆಲಸದಲ್ಲಿ ಅವಕಾಶವಿದ್ದು ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ಇರುತ್ತದೆ. ಈ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 5 times, 1 visits today)
Previous Articleತುಮಕೂರು : 83 ಗ್ರಾಮಗಳ ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲು ನಿರ್ಣಯ
Next Article ತುಮಕೂರು : ಜಿಲ್ಲೆಯಲ್ಲಿ ರೆಡ್‍ಜೋನ್ ಸಂಖ್ಯೆ ಇಳಿಕೆ!!
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm
ಇತರೆ ಸುದ್ಧಿಗಳು

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm
ಇತರೆ ಸುದ್ಧಿಗಳು

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
ಇತರೆ ಸುದ್ಧಿಗಳು

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ

November 15, 2025 4:27 pm

ವೃಕ್ಷಮಾತೆ ಅಜಾರಾಮರ

November 15, 2025 4:23 pm
Our Youtube Channel
Our Picks

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ

November 15, 2025 4:27 pm

ವೃಕ್ಷಮಾತೆ ಅಜಾರಾಮರ

November 15, 2025 4:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

By News Desk BenkiyabaleNovember 15, 2025 4:33 pm

ತುಮಕೂರು: ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದಲ್ಲಿ ಇರುವುದನ್ನು ಯಥಾವತ್ತಾಗಿ ತಿಳಿಸುವುದಷ್ಟೇ ಅಲ್ಲ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು…

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.