BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
  • ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
  • ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
  • ಕ್ರೀಡೆ ಕೇವಲ ಆಟವಲ್ಲ, ಉದ್ಯೋಗಕ್ಕೂ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ಲೋಕಸಭಾ ಕ್ಷೇತ್ರ : 16 ಲಕ್ಷ ಮತದಾರರು!
Trending

ತುಮಕೂರು ಲೋಕಸಭಾ ಕ್ಷೇತ್ರ : 16 ಲಕ್ಷ ಮತದಾರರು!

By News Desk BenkiyabaleUpdated:April 15, 2019 7:26 pm

 ತುಮಕೂರು :

      ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1608000 ಮತದಾರರು ಇದ್ದು, ಏಪ್ರಿಲ್ 18ರಂದು ನಡೆಯುವ ಚುನಾವಣಾ ಮತದಾನವನ್ನು ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.

     ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 2209780 ಮತದಾರರಿದ್ದು, ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 803006 ಗಂಡಸರು, 804874 ಮಹಿಳೆಯರು, ಇತರೆ 120 ಒಟ್ಟು 1608000 ಮತದಾರರು ಇದ್ದಾರೆ.

      ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೂ ಸೇರುವ ಶಿರಾ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 410867 ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕುಣಿಗಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 190913 ಮತದಾರರು ಇದ್ದಾರೆ ಎಂದರು.

     ಈಗಾಗಲೇ ಮತದಾರರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ. ಮಾಡಿಫೈಡ್ ಓಟರ್‍ಸ್ಲಿಪ್‍ಗಳನ್ನು ಮನೆ ಮನೆಗೆ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 2684 ಮತಗಟ್ಟೆಗಳು ಇದ್ದು, ಈಗಾಗಲೇ ಒಟ್ಟು 12924 ಮತಗಟ್ಟೆ ಸಿಬ್ಬಂದಿಯನ್ನು ವಿಧಾನಸಭಾ ಕ್ಷೇತ್ರವಾರು ನೇಮಿಸಿದ್ದು, ಏಪ್ರಿಲ್ 17ರಂದು ಮತಗಟ್ಟೆ ಸಿಬ್ಬಂದಿಗಳು ಚುನಾವಣಾ ಕರ್ತವ್ಯಕ್ಕೆ ತೆರಳಲಿದ್ದಾರೆ ಎಂದು ಅವರು ತಿಳಿಸಿದರು.

      ಏಪ್ರಿಲ್ 16ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರ ಅಲ್ಲದವರು ತಂಗುವಂತಿಲ್ಲ. ಅಂತಹವರನ್ನು ಕ್ಷೇತ್ರದಿಂದ ಹೊರಗೆ ಕಳುಹಿಸಲು ಪೊಲೀಸ್, ಅಬಕಾರಿ, ಸಹಾಯಕ ಚುನಾವಣಾಧಿಕಾರಿ ಹಾಗೂ ತಾಲ್ಲೂಕು ತಹಶೀಲ್ದಾರ್‍ಗಳಿಗೆ ಸೂಚನೆ ನೀಡಲಾಗಿದೆ. ವಸತಿ ಗೃಹ, ಹೋಟೆಲ್, ಕಲ್ಯಾಣ ಮಂಟಪ, ಇವುಗಳ ಮೇಲೆ ನಿಗಾವಹಿಸಿ ಕ್ಷೇತ್ರದ ಮತದಾರ ಅಲ್ಲದವರನ್ನು ಪರಿಶೀಲಿಸಿ ಹೊರಗೆ ಕಳುಹಿಸುವಂತೆ ಸೆಕ್ಟರ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

      ಏಪ್ರಿಲ್ 18ರಂದು ನಡೆಯುವ ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ದೃಷ್ಟಿಯಿಂದ ಏಪ್ರಿಲ್ 16ರ ಸಂಜೆ 6 ಗಂಟೆಯಿಂದ ಏಪ್ರಿಲ್ 18ರ ಮಧ್ಯರಾತ್ರಿಯವರಗೆ ಜಿಲ್ಲೆಯಲ್ಲಿ ಸೆಕ್ಷನ್ 144ನ್ನು ಜಾರಿಗೊಳಿಸಿದ್ದು, ಮನೆ-ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಬಹುದು. ಜಿಲ್ಲೆಯಲ್ಲಿ ಚುನಾವಣಾ ಅಕ್ರಮ ತಡೆಗಟ್ಟಲು ಹಾಗೂ ಶಾಂತಿಯುತವಾಗಿ ಮತದಾನವನ್ನು ನಡೆಸಲು 35 ಚೆಕ್‍ಪೋಸ್ಟ್‍ಗಳು, 230 ಸೆಕ್ಟರ್ ಅಧಿಕಾರಿಗಳು, 165 ಸೆಕ್ಟರ್ ಮೊಬೈಲ್‍ಗಳು, 28 ಫ್ಲೈಯಿಂಗ್ ಸ್ವ್ಯಾಡ್‍ಗಳನ್ನು ರಚಿಸಲಾಗಿದ್ದು, ಇವು ಹದ್ದಿನ ಕಣ್ಣು ಇಡಲಿವೆ. ಇದರ ಜೊತೆಯಲ್ಲಿ ಜನರೇ ಚುನಾವಣಾ ಅಕ್ರಮವನ್ನು ಆಯೋಗಕ್ಕೆ ತಿಳಿಸಲು “ಸಿ-ವಿಜಿಲ್” ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಂಡು ವಿಡಿಯೋ/ಫೋಟೋವನ್ನು ಅಪ್‍ಲೋಡ್ ಮಾಡಬಹುದು. ಕೇವಲ 20 ನಿಮಿಷದಲ್ಲಿ ಕಾರ್ಯಾಚರಣೆಯಲ್ಲಿರುವ ತಂಡಗಳು ಅಕ್ರಮ ನಡೆಯುವ ಸ್ಥಳಕ್ಕೆ ಧಾವಿಸಲಿವೆ. ಇದನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಅಧಿಕಾರಿಗಳ ಮೇಲೆ ಕ್ರಮ :-

      ಕೆಲವೊಂದು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ವಿಚಾರಣೆಗೆ ಆದೇಶಿಸಿದ್ದು, ಅಧಿಕಾರಿಗಳ ಲೋಪವಿದ್ದರೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದರು.

      ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೆ. ವಂಶಿಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಸುಮಾರು 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ. 4100 ಪೊಲೀಸ್ ಸಿಬ್ಬಂದಿ, ನಾಲ್ಕು ಕಂಪನಿಗಳ ಆರ್ಮ್‍ಡ್ ಪೊಲೀಸ್, 13 ಕೆಎಸ್‍ಆರ್‍ಪಿ ತುಕಡಿಗಳು ಸೇರಿದಂತೆ 5ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಚುನಾವಣಾ ಮತದಾನಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಈಗಾಗಲೇ ಎಲ್ಲಾಕಡೆ ರೂಟ್‍ಮಾರ್ಕ್ ಮಾಡಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಇಂದಿನಿಂದಲೇ ನಿಷೇಧಾಜ್ಞೆ ಜಾರಿ:-

      ಲೋಕಸಭಾ ಚುನಾವಣೆಯನ್ನು ಮುಕ್ತ, ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 16ರ ಸಂಜೆ 6 ಗಂಟೆಯಿಂದ 18ರ ಮಧ್ಯ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯ ಸಂಹಿತೆ ಕಲಂ 144ರಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ನಿಷೇಧಾದೇಶವು ಏಪ್ರಿಲ್ 18ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿರುವ ಮತದಾನ ಕೇಂದ್ರಗಳ ಸ್ಥಳಕ್ಕೆ ಅನ್ವಯಿಸುವುದಿಲ್ಲ. ನಿಷೇಧಾವಧಿಯಲ್ಲಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದು ಹಾಗೂ ಮತ್ತಿತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಯಾವುದೇ ಸ್ಪೋಟಕ ವಸ್ತುಗಳು/ ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದು ಅಥವಾ ಹಿಡಿದುಕೊಂಡು ಓಡಾಡುವಂತಿಲ್ಲ. ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಾಕಾರಿ ಹೇಳಿಕೆಯನ್ನು ನೀಡುವುದು/ ಘೋಷಣೆ ಕೂಗುವುದು/ ಭಿತ್ತಿಪತ್ರವನ್ನು ಪ್ರಕಟಿಸುವಂತಿಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವನ್ನುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸುವಂತಿಲ್ಲ. ಸಾರ್ವಜನಿಕ ಪ್ರಾಣ ಮತ್ತು ಆಸ್ತಿ-ಪಾಸ್ತಿಗಳಿಗೆ ಹಾನಿಯುಂಟಾಗುವ ರೀತಿಯಲ್ಲಿ ವರ್ತಿಸುವಂತಿಲ್ಲ. ಶವ ಸಂಸ್ಕಾರ/ ಮದುವೆ/ ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ/ ಸಮಾರಂಭ, ಮೆರವಣಿಗೆ ಮಾಡುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದರು.  ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಮತ್ತಿತರರು ಹಾಜರಿದ್ದರು.

(Visited 22 times, 1 visits today)
Previous Articleಜಿಲ್ಲಾಧಿಕಾರಿಗಳಿಂದ ಚುನಾವಣಾ ಕೈಪಿಡಿ ಬಿಡುಗಡೆ
Next Article ಲೋಕಸಭಾ ಚುನಾವಣೆ : ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಸಕಲ ಸಿದ್ದತೆ
News Desk Benkiyabale

Related Posts

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm news

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm news

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm news
ತಾಜಾ ಸುದ್ಧಿಗಳು

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

July 03, 2026 5:50 pm
Our Youtube Channel
Our Picks

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

By News Desk BenkiyabaleJuly 04, 2026 5:05 pm

ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.…

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.