ತುಮಕೂರು


ತುಮಕೂರು ನಗರ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗದಿಂದ ನಗರದ 35 ವಾರ್ಡ್‍ಗಳ ಅಧ್ಯಕ್ಷರನ್ನು ನೇಮಕ ಮಾಡಲಾಯಿತು. ಮಾಜಿ ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಫೀಕ್ ಅಹ್ಮದ್ ಈ ನೇಮಕಾತಿ ಪತ್ರವನ್ನು ನೀಡಿ ಪಕ್ಷ ಸಂಘಟನೆ ಮಾಡುವಂತೆ ಸಲಹೆ ಸೂಚನೆ ನೀಡಿದರು. ಹಾಗೂ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವಂತೆ ಪ್ರೇರೇಪಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಡಾ. ಇಮ್ತಿಯಾಜ್, ಜಿಲ್ಲಾ ಅಸಂಘಟಿತ ಕಾರ್ಮಿಕರ ಅಧ್ಯಕ್ಷರಾದ ನಿಶಾತ್, ತಾಲ್ಲೂಕು ವಿಭಾಗದ ಅಧ್ಯಕ್ಷರಾದ ಬಷೀರ್ ಅಹಮದ್ ಹಾಜರಿದ್ದರು.

(Visited 1 times, 1 visits today)