ತುಮಕೂರು
ಇಲ್ಲಿನ ಅಶೋಕ ನಗರದ 4ನೇ ಕ್ರಾಸ್‍ನಲ್ಲಿರುವ ಚಂದ್ರಶೇಖರ್ ಆಜಾದ್ ಪಾರ್ಕ್‍ನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅ. 2 ರಂದು ಬೆಳಿಗ್ಗೆ 10ಕ್ಕೆ ಏರ್ಪಡಿಸಲಾಗಿದೆ.
ಅಶೋಕ ನಗರ ನಾಗರಿಕ ಹಿತರಕ್ಷಣಾ ಸಮಿತಿ, ರೋಟರಿ ತುಮಕೂರು ಸೆಂಟ್ರಲ್, ಇನ್ನರ್ ವ್ಹೀಲ್ ಕ್ಲಬ್ ಆಫ್ ತುಮಕೂರು ಸೆಂಟ್ರಲ್, ಸಿದ್ದಗಂಗಾ ವೈದ್ಯಕೀಯ ವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ, ವಿನಾಯಕ ದಂತ ಚಿಕಿತ್ಸಾಲಯ, ಚರಕ ಆಯುರ್ವೇದ ಪಂಚಕರ್ಮ ಚಿಕಿತ್ಸಾಲಯ, ಸಮೃದ್ಧಿ ನೇತ್ರಾಲಯ ಮತ್ತು ಚರ್ಮಾಲಯದ ಸಂಯುಕ್ತಾಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಏರ್ಪಡಿಸಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಜ್ಯೋತಿಗಣೇಶ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಅಶೋಕ ನಗರ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಎಂ.ಕೆ. ವೆಂಕಟಸ್ವಾಮಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಕಾನೂನು ಸೇವೆಗಳ ಪ್ರಾಧಿಕಾರದ ಗೌರವ ಕಾರ್ಯದರ್ಶಿ ನೂರುನ್ನಿಸ್ಸಾ, ಸಿದ್ದಗಂಗಾ ಆಸ್ಪತ್ರೆಯ ಡಾ. ಎಸ್. ಪರಮೇಶ್, ಪಾಲಿಕೆ ಸದಸ್ಯ ಮಲ್ಲಿಕಾರ್ಜುನಯ್ಯ, ರೋಟರಿ ತುಮಕೂರು ಸೆಂಟ್ರಲ್ ಅಧ್ಯಕ್ಷೆ ಪ್ರಮೀಳ ಶಿವಕುಮಾರ್, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಮಂಜುಳ ಜಯಪ್ರಕಾಶ್ ಪಾಲ್ಗೊಳ್ಳುವರು ಎಂದು ಡಾ. ಸಂಜಯ್‍ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 2 times, 1 visits today)