ತುಮಕೂರು
ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿ ಹಾಗೂ ಜಾಗೃತಿ ಮಾಡಿಸುವ ದೃಷ್ಠಿಯಿಂದ ಹಿಂದುಳಿದ ವರ್ಗಗಳ ಜಾಗೃತಿ ಸಂಯೋಜಕ ಸಮಾವೇಶ ಕಲ್ಬುರ್ಗಿಯಲ್ಲಿ ಅಕ್ಟೋಬರ್ 30 ರಂಉ ಬಿಜೆಪಿ ಹಿಂದುಳಿದ ವರ್ಗದವರ ಬೃಹತ್ ಸಮಾವೇಶವನ್ನು ಆಯೋಜಿಸಿದೆ.
ಈ ರಾಜ್ಯ ಜಾಗೃತಿ ಸಮಾವೇಶದ ಸಂಬಂಧ ಪೂರ್ವಭಾವಿ ಸಭೆ ಅಕ್ಟೋಬರ್ 3ರ ಸೋಮವಾರ ಬೆಳಿಗ್ಗೆ 8.30ಕ್ಕೆ ಘಂಟೆಗೆ ತುಮಕೂರಿನ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲ್ಲಿ ಒಬಿಸಿ ಜಿಲ್ಲಾಧ್ಯಕ್ಷ ಆಯರಹಳ್ಳಿ ಶಂಕರಪ್ಪನವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಒಬಿಸಿ ಪ್ರಧಾನ ಕಾರ್ಯದರ್ಶಿಗಳಾ ಗೋಕುಲ್ ಮಂಜುನಾಥ್ ಮತ್ತು ಕೆ.ವೇದಮೂರ್ತಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಬಿಸಿ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶಾಸಕರಾದ ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ ಹಾಗೂ ಗಣೇಶ್ ಹುಳ್ವೇಕರ್, ರಾಜ್ಯ ಒಬಿಸಿ ಪ್ರಧಾನ ಕಾರ್ಯದರ್ಶಿ ಸುರೇಶ್‍ಬಾಬು, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷೀನಾರಾಯಣ ಮತ್ತು ಡಾ||ಎಂ.ಆರ್.ಹುಲಿನಾಯ್ಕರ್, ರಾಜ್ಯ ನಿಗಮ ಮಂಡಳಿ ಅಧ್ಯಕ್ಷ ನರೇಶ್ ಕುಮಾರ್ ಮುಂತಾದ ಪ್ರಮುಖರು ಭಾಗವಹಿಸಲಿದ್ದಾರೆ.

(Visited 1 times, 1 visits today)