ತುಮಕೂರು


ಎಐಸಿಸಿ ನಾಯಕರಾದ ಶ್ರೀ ರಾಹುಲ್ ಗಾಂಧಿಯವರು ಹಮ್ಮಿಕೊಂಡಿರುವ ಭಾರತ್ ಜೋಡೋ ಪಾದಯಾತ್ರೆಯು ಅಕ್ಟೋಬರ್-08 ರಂದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರಕ್ಕೆ ಆಗಮಿಸಲಿದ್ದು, ಈ ನಿಮಿತ್ತ ಅಕ್ಟೋಬರ್-08 ರಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಮುಖಂಡರು ಕಾರ್ಯಕರ್ತರು ಈ ಯಾತ್ರೆಯಲ್ಲಿ ಪಾಲ್ಗೊಂಡು ಶ್ರೀ ರಾಹುಲ್ ಗಾಂಧಿಯವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ಈ ಹಿನ್ನೆಲೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಫೀಕ್ ಅಹ್ಮದ್ ರವರು ಮಹಾನಗರ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.
ತುಮಕೂರು ನಗರದಿಂದ ಈ ಯಾತ್ರೆಗೆ ತೆರಳುವ ಎಲ್ಲಾ ಕಾರ್ಯಕರ್ತರಿಗೆ ವಾಹನ ಮತ್ತು ಊಟೋಪಚಾರದ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿ, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಡಾ.ರಫೀಕ್ ಅಹ್ಮದ್ ಮನವಿ ಮಾಡಿದರು.
ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಪ್ರಭಾವತಿ, ಸದಸ್ಯರಾದ ಸೈಯದ್ ನಯಾಜ್, ಕುಮಾರ್.ಜೆ, ಶ್ರೀಮತಿ ರೂಪಶ್ರೀ ಶೆಟ್ಟಳಯ್ಯ, ಮುಜೀದಾ ಖಾನಂ, ನೂರುನ್ನಿಸಾ ಬಾನು, ನಾಸಿರಾ ಬಾನು, ಷಕೀಲ್ ಅಹ್ಮದ್, ಇನಾಯತ್ ಉಲ್ಲಾ ಖಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಮಹಬೂಬ್ ಪಾಷ, ಜಿ.ರಾಜು, ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)