BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ
  • ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ
  • ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ
  • ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ
  • ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ
  • ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ
  • ಜಿಲ್ಲಾಧಿಕಾರಿಗಳಿಂದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನವಾಗುವ ಸ್ಥಳ ಪರಿಶೀಲನೆ
  • ಸಮಸ್ಯೆ ಈಡೇರಿಸಲು ಒತ್ತಾಯಿಸಿ ಸ್ಲಂ ಬೋರ್ಡ್ ಮುತ್ತಿಗೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಹಂಕಾರವನ್ನು ನಿರಾಕರಿಸುವವನೇ ನಿಜಶರಣ – ಶಾಸಕ ಜಿ.ಬಿ ಜ್ಯೋತಿಗಣೇಶ್
Trending

ಅಹಂಕಾರವನ್ನು ನಿರಾಕರಿಸುವವನೇ ನಿಜಶರಣ – ಶಾಸಕ ಜಿ.ಬಿ ಜ್ಯೋತಿಗಣೇಶ್

By News Desk BenkiyabaleUpdated:February 01, 2019 3:57 pm

ತುಮಕೂರು:

      ಯಾರು ಅಹಂಕಾರವನ್ನು ನಿರಾಕರಿಸುತ್ತಾನೋ ಅವನೇ ನಿಜವಾದ ಶರಣ ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು.

       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಮತ್ತು ತಾಲೂಕು ಮಡಿವಾಳ ಜನಸಂಘಗಳ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

      ಮಾಚಿದೇವರು 12ನೇ ಶತಮಾನದಲ್ಲಿ ನಡೆದ ವಚನ ಕ್ರಾಂತಿಯಲ್ಲಿ ಮುಂಚೂಣಿಯಲ್ಲಿದ್ದವರು. ಸಮಾಜವನ್ನು ಸರಿದಾರಿಗೆ ತಂದ ಮಹಾ ದಾರ್ಶನಿಕರು. ಶಿಕ್ಷಣ ಪಡೆದವರು ಮಾತ್ರ ಸಬಲರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಮಡಿವಾಳ ಜನಾಂಗದವರು ವಿದ್ಯಾವಂತರಾಗಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡುವಂತೆ ತಿಳಿಸಿದರು. ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ಸೌಲಭ್ಯ ದೊರೆಯು ವಂತೆ ಮಾಡಲು ಪ್ರಯತ್ನಿಸುತ್ತನೆ ಎಂದರು.

Displaying DSC_1927.JPG

      ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಮಾತನಾಡಿದ ಹಿರೇಮಠದ ಶ್ರೀ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಅವರು ಮಡಿವಾಳ ಮಾಚಿದೇವ ಮಹಾನಾಯಕ. 12ನೇ ಶತಮಾನದಲ್ಲಿ ಸುದ್ದಿ-ಸದ್ದು ಮಾಡಿದ ಏಕೈಕ ಶರಣ. ಅವರ ವಚನಗಳು ಇಂದಿಗೂ ಸಹ ಬಡಿದೆಬ್ಬಿಸುವ ರೀತಿಯಲ್ಲಿ ಸಾತ್ವಿಕತೆಯನ್ನು ಹೊಂದಿದೆ. ನಾಲಿಗೆಯನ್ನೇ ಕತ್ತಿಯನ್ನಾಗಿಸುವ ಶಕ್ತಿಯನ್ನು ಮಾಚಿದೇವ ಹೊಂದಿದ್ದು, ಜನರ ಮನಸ್ಸಿನ ಕೊಳಕನ್ನು ತೊಳೆಯುವ ಧ್ಯೇಯವನ್ನು ಹೊಂದಿದ್ದನು. ಸಾಧಿಸುವ ಛಲವಿದ್ದರೆ ಸಾಕು ಸಮಾಜದಲ್ಲಿ ಏನಾದರೂ ಸಾಧಿಸಬಹುದು ಎಂದು ಕಿವಿಮಾತು ಹೇಳಿದರು.

      ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಮಾಚಿದೇವನ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕತೆಯನ್ನು ಕಂಡುಕೊಳ್ಳಬೇಕು. ಯಾವುದೇ ಕೆಲಸವನ್ನು ಪ್ರಾಮಾಣಿಕತೆಯಿಂದ ಪರಿಶುದ್ಧ ಮನಸ್ಸಿನಿಂದ ಮಾಡಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದರಲ್ಲದೆ ಸರ್ಕಾರದಿಂದ ಮಡಿವಾಳ ಜನಾಂಗಕ್ಕೆ ಸೌಲಭ್ಯ ದೊರೆಯುವಂತೆ ಮನವಿ ಮಾಡುವುದರ ಜೊತೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು.

Displaying DSC_1936.JPG

       ತುಮಕೂರಿನ ಸಾಹಿತಿ ಮತ್ತು ವಿಮರ್ಶಕ ಡಾ|| ರವಿಕುಮಾರ್ ನೀ.ಹ ಅವರು ಉಪನ್ಯಾಸ ನೀಡುತ್ತಾ ಮಾಚಿದೇವರ 354 ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪ್ರಚಾರ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಬಿ.ವೆಂಕಟರಾಮಯ್ಯ, ವೈದ್ಯಕೀಯ ಸೇವೆಗಾಗಿ ವಿನುತ, ಸಮಾಜದ ಹಿರಿಯ ಕುಲ ಕಸುಬದಾರರಾದ ಬಾಲಮ್ಮ ಹಾಗೂ ವೆಂಕಟರಾಂ, ಉತ್ತಮ ಸಮಾಜ ಸೇವೆಗಾಗಿ ಲಕ್ಷೀನರಸಿಂಹಯ್ಯ ಹಾಗೂ ಚಿಕ್ಕಣ್ಣ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

      ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಆಪಿನಕಟ್ಟೆ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ವಿಷ್ಣುವರ್ಧನ್, ಉಪಾಧ್ಯಕ್ಷ ಬಿ.ಚಿಕ್ಕಣ್ಣ, ಪಾಲಿಕೆಯ ನಾಗೇಶ್ ಕುಮಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 28 times, 1 visits today)
Previous Articleಸಮಷ್ಟಿ ಶಿಕ್ಷಣಕ್ಕೆ ಸಾಮಾಜಿಕ ಜಾಲತಾಣಗಳು ಹೊಸ ಭರವಸೆಯಂತೆ ಒದಗಿ ಬಂದಿವೆ
Next Article ದೆಹಲಿಯ ಗಣರಾಜ್ಯೋತ್ಸವ : ಎನ್.ಸಿ.ಸಿ.ಕೆಡೆಟ್ ಆಗಿ ತುಮಕೂರಿನ ಕು.ಕವನ
News Desk Benkiyabale

Related Posts

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ

October 18, 2025 1:54 pm
ತುಮಕೂರು

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm
ಇತರೆ ಸುದ್ಧಿಗಳು

ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ

October 18, 2025 1:51 pm
ಇತರೆ ಸುದ್ಧಿಗಳು

ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ

October 17, 2025 12:05 pm
ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm
ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm
Our Youtube Channel
Our Picks

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ

October 18, 2025 1:54 pm

ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ

October 18, 2025 1:51 pm

ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ

October 17, 2025 12:05 pm

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

October 15, 2025 12:03 pm

ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ

October 15, 2025 12:00 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ

By News Desk BenkiyabaleOctober 18, 2025 1:54 pm

ತುಮಕೂರು: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತಿನ ಮನೋಭಾವ, ಸಹಕಾರ ಮತ್ತು ನಾಯಕತ್ವದ ಗುಣವನ್ನು ಬೆಳೆಸುತ್ತದೆ. ಕ್ರೀಡಾಂಗಣವು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪಾಠಶಾಲೆಯಾಗಿದೆ…

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm

ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ

October 18, 2025 1:51 pm

ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ

October 17, 2025 12:05 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.